Homeಮುಖಪುಟಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

- Advertisement -
- Advertisement -

ಉತ್ತರಪ್ರದೇಶದಲ್ಲಿ ಶಿಕ್ಷಕಿಯೋರ್ವಳ ಸಾಹಸ, ಪರಿಶ್ರಮ 40 ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕನ್ನು ಚೆಲ್ಲಿದೆ. ಸರ್ಕಾರಿ ಶಾಲೆಯ ಶಿಕ್ಷಕಿ ಸೀತಾ ತ್ರಿವೇದಿ  40 ಅಲೆಮಾರಿ ಬುಡಕಟ್ಟು ಮಕ್ಕಳನ್ನು ಭಿಕ್ಷಾಟನೆಯಿಂದ ರಕ್ಷಿಸಿ ಶಾಲೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದು, ಶಿಕ್ಷಕಿಯ ಕಾರ್ಯಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದೆ.

ಉತ್ತರಪ್ರದೇಶದ ಬಜೇರಾ ಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕಿ ಸೀತಾ ತ್ರಿವೇದಿ ಅವರು ಶಿಕ್ಷಣ ವಂಚಿತ ಕಲಬಾಜ್ ಸಮುದಾಯಕ್ಕೆ ಸೇರಿದ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಅವರ ಪೋಷಕರಿಗೆ ಮನವರಿಕೆ ಮಾಡಿ ಅವರ ವಾರ್ಡ್‌ಗಳಲ್ಲಿನ ಶಾಲೆಗೆ ಮಕ್ಕಳನ್ನು ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಜೇರಾ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ತ್ರಿವೇದಿ ಅವರಿಗೆ ಕೆಲವು ವರ್ಷಗಳ ಹಿಂದೆ ಮಕ್ಕಳ ಗಣತಿಯನ್ನು ನಡೆಸುವ ಕೆಲಸವನ್ನು ನೀಡಲಾಗಿತ್ತು. ಸಮೀಕ್ಷೆಗಾಗಿ ಸಮೀಪದ ಗ್ರಾಮಕ್ಕೆ ಭೇಟಿ ನೀಡಿದಾಗ ಸ್ಥಳೀಯರು ಶಿಕ್ಷಕಿಯನ್ನು ಕಲಬಾಜ್ ಸಮುದಾಯದವರ ಮನೆಗಳಿಗೆ ಹೋಗದಂತೆ ತಡೆದಿದ್ದಾರೆ. ಆದರೆ ಅವರು ತನ್ನ ಕಾರ್ಯವನ್ನು ಮುಂದುವರಿಸಿದ್ದರು. ಈ ವೇಳೆ ಅವರು ಕಲಬಾಜ್‌ ಸಮುದಾಯಕ್ಕೆ ಸೇರಿದ ಯಾವುದೇ ಮಕ್ಕಳು ಶಾಲೆಗೆ ಹೋಗುವುದಿಲ್ಲ ಮತ್ತು ಅವರು ಕಟುಂಬದ ಜೀವನೋಪಾಯಕ್ಕಾಗಿ ಭಿಕ್ಷೆ ಬೇಡುವ  ಕೆಲಸವನ್ನು ಮಾಡುತ್ತಾರೆ ಎಂದು ಕಂಡುಕೊಂಡಿದ್ದಾರೆ ಮತ್ತು ಮಕ್ಕಳನ್ನು ಶಾಲೆಗೆ ಸೇರಿಸುವ ಸಾಹಸಕ್ಕೆ ಮುಂದಾಗಿದ್ದಾರೆ. ತ್ರಿವೇದಿ ಮಕ್ಕಳನ್ನು ಶಾಲೆಗೆ ಸೇರಿಸಲು ಪ್ರಯತ್ನಿಸುತ್ತಿದ್ದಂತೆ ಕಲಬಾಜ್ ಸಮುದಾಯ ಹಿರಿಯರು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಶಿಕ್ಷಕಿ ಸೀತಾ ತ್ರಿವೇದಿ, ನಾನು ಪ್ರತಿ ಮನೆಗೆ ಭೇಟಿ ನೀಡಿ ಹಿರಿಯರಿಗೆ ಶಿಕ್ಷಣದ ಮಹತ್ವದ ಬಗ್ಗೆ ಹೇಳಿದ್ದೇನೆ. ಬುಡಕಟ್ಟು ಸಮುದಾಯದ ಮಕ್ಕಳು ಶಿಕ್ಷಣ ಪಡೆದ ನಂತರ ಅಧಿಕಾರಿಗಳು ಮತ್ತು ಯಶಸ್ವಿ ಉದ್ಯಮಿಗಳಾಗಿರುವ ಕಥೆಗಳನ್ನು ನಾನು ಅವರಿಗೆ ಹೇಳಿದ್ದೇನೆ. ಇದು ಅವರ ಮೇಲೆ ಪರಿಣಾಮ ಬೀರಿತು ಮತ್ತು ಅವರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಪ್ರಾರಂಭಿಸಿದರು ಎಂದು ನೆನಪಿಸಿಕೊಂಡಿದ್ದಾರೆ.

ಶಾಲೆಗೆ ಮಕ್ಕಳನ್ನು ಸೇರಿಸಿದಾಗ ಎದುರಾಗಿದ್ದ ಸಮಸ್ಯೆ!

ಕಲಬಾಜ್ ಸಮುದಾಯದ 40 ಮಕ್ಕಳನ್ನು ಮನವೊಲಿಕೆ ಮಾಡಿ ಸೀತಾ ತ್ರಿವೇದಿ ಶಾಲೆಗೆ ದಾಖಲು ಮಾಡಿದ್ದಾರೆ. ಮಕ್ಕಳನ್ನು ದಾಖಲಿಸಿಕೊಂಡರೂ, ಇತರ ಸಮುದಾಯದ ವಿದ್ಯಾರ್ಥಿಗಳು ಅವರನ್ನು ಸ್ವೀಕರಿಸಲು ಸಿದ್ಧರಿಲ್ಲದ ಕಾರಣ ತ್ರಿವೇದಿಗೆ ಮತ್ತೊಂದು ಸವಾಲು ಎದುರಾಗಿತ್ತು. ಕಲಾಬಾಜ್ ಸಮುದಾಯದ ಮಕ್ಕಳೊಂದಿಗೆ ಇತರ ಸಮುದಾಯದ ಮಕ್ಕಳು ಮಧ್ಯಾಹ್ನದ ಊಟಕ್ಕೆ ಕುಳಿತುಕೊಳ್ಳದಿರುವುದನ್ನು ನಾನು ಗಮನಿಸಿದ್ದೇನೆ. ನಾನು ಇತರ ಮಕ್ಕಳ ಪೋಷಕರನ್ನು ಕರೆದು ಕಲಬಾಜ್ ಸಮುದಾಯದ ಮಕ್ಕಳ ಬಗ್ಗೆ ತಾರತಮ್ಯ ಮಾಡದಂತೆ ಕೇಳಿಕೊಂಡಿದ್ದೇನೆ.  ಪೋಷಕರ ಸಹಕಾರದಿಂದ ಈ ಸಮಸ್ಯೆಗೆ ಪರಿಹಾರವಾಗಿತ್ತು. ಪೋಷಕರ ಬಳಿ ಸಾಕಷ್ಟು ಹಣವಿಲ್ಲದ ಕಾರಣ ಈ ಮಕ್ಕಳಿಗೆ ಬಟ್ಟೆ ಮತ್ತು ಪುಸ್ತಕಗಳನ್ನು ಆಗಾಗ್ಗೆ ಖರೀದಿಸಿ ನಾನು ಕೊಡುತ್ತಿದ್ದೇನೆ ಎಂದು ತ್ರಿವೇದಿ ಹೇಳಿದ್ದಾರೆ.

ಸೀತಾ ತ್ರಿವೇದಿ ಅವರ ಈ ಕೆಲಸಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದ್ದು, ತ್ರಿವೇದಿಯವರ ಪ್ರಯತ್ನ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಉಮೇಶ್ ಪ್ರತಾಪ್ ಸಿಂಗ್ ಶ್ಲಾಘಿಸಿದ್ದಾರೆ. ಈ ಮಕ್ಕಳು ಸಮಾಜದ ಹಿತದೃಷ್ಟಿಯಿಂದ ಮುಂದೆ ಸಾಗುತ್ತಾರೆ ಮತ್ತು ಶಿಕ್ಷಣ ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ. ಈ ರೀತಿಯ ಪ್ರಯತ್ನಗಳ ಮೂಲಕ ಜಾತಿ ಆಧಾರಿತ ತಾರತಮ್ಯ ಕೂಡ ಕೊನೆಗೊಳ್ಳುತ್ತವೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ  ಶಿಕ್ಷಾ ಅಧಿಕಾರಿ ರಣವೀರ್ ಸಿಂಗ್ ಅವರು, ಶಿಕ್ಷಕಿಯೋರ್ವರು ಮಾಡಿದ ಪ್ರಯತ್ನಗಳನ್ನು ಗಮನಿಸಿದ್ದೇವೆ. ಶಿಕ್ಷಕರ ಪ್ರಯತ್ನ ಶ್ಲಾಘನೀಯವಾಗಿದ್ದು, ಜಿಲ್ಲೆಯ ಒಂದೇ ಒಂದು ಮಗು ಶಾಲೆಯಿಂದ ದೂರ ಉಳಿಯದಂತೆ ಇತರೆ ಶಾಲೆಗಳಲ್ಲೂ ಇಂತಹ ಪ್ರಯತ್ನ ನಡೆಯಲಿ ಎಂದು ಆಶಿಸುತ್ತೇವೆ ಎಂದು ಹೇಳಿದ್ದಾರೆ.

ಕಲಬಾಜ್ ಸಮುದಾಯ

16ನೇ ಶತಮಾನದಲ್ಲಿ ಮೊಘಲ್ ಸಾಮ್ರಾಜ್ಯದ ಅಡಳಿತದ ಸಮಯದಲ್ಲಿ ಉತ್ತರ ಪ್ರದೇಶಕ್ಕೆ ವಲಸೆ ಬಂದವರು ಕಲಾಬಾಜ್ ಜನರು. ಇವರು ಮೂಲತಃ ರಜಪೂತರು ಎಂದು ಹೇಳುತ್ತಾರೆ. ಈ ಸಮುದಾಯದ ಹೆಚ್ಚಿನ ಉತ್ತರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅವರು ಅಲೆಮಾರಿ ಸಮುದಾಯವಾಗಿದ್ದರು,  ಹಿಂದಿ ಮಾತನಾಡುತ್ತಾರೆ ಆದರೆ ತಮ್ಮದೇ ಆದ ನಿರ್ದಿಷ್ಟ ಉಪಭಾಷೆಯನ್ನು ಹೊಂದಿದ್ದಾರೆ.

ಇವರಲ್ಲಿ ಹೆಚ್ಚಿನವರು ಭೂರಹಿತರಾಗಿದ್ದಾರೆ. ಅದ್ಭುತವಾದ ಜಿಮ್ನಾಸ್ಟಿಕ್ ಸಾಹಸ, ಜಾನುವಾರುಗಳನ್ನು ನೋಡಿಕೊಳ್ಳುವುದು ಅಥವಾ ಬೈಸಿಕಲ್‌ಗಳನ್ನು ದುರಸ್ತಿ ಮಾಡುವುದು. ಕೆಲವರು ದಿನಗೂಲಿಗಳಾಗಿ ಕೂಡ ಕೆಲಸ ಮಾಡುತ್ತಾರೆ. ಹೆಚ್ಚಿನವರು ಬಿಕ್ಷಾಟನೆಯಲ್ಲಿ ತೊಡಗಿಕೊಂಡಿದ್ದಾರೆ.  2011ರ ಜನಗಣತಿಯು ಉತ್ತರಪ್ರದೇಶದಲ್ಲಿ ಕಲಾಬಾಜ್ ಸಮುದಾಯದ 11,199 ಜನರಿದ್ದಾರೆ ಎಂದು ಹೇಳಿದೆ. ಈ ಸಮುದಾಯವು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದೆ.

ಇದನ್ನು ಓದಿ:ಎಐಸಿಸಿ ಸೆಂಟ್ರಲ್‌ ವಾರ್‌ರೂಂ ಅಧ್ಯಕ್ಷರಾಗಿ ಶಶಿಕಾಂತ್‌ ಸೆಂಥಿಲ್‌ ನೇಮಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...