Homeಮುಖಪುಟಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

- Advertisement -
- Advertisement -

ಉತ್ತರಪ್ರದೇಶದಲ್ಲಿ ಶಿಕ್ಷಕಿಯೋರ್ವಳ ಸಾಹಸ, ಪರಿಶ್ರಮ 40 ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕನ್ನು ಚೆಲ್ಲಿದೆ. ಸರ್ಕಾರಿ ಶಾಲೆಯ ಶಿಕ್ಷಕಿ ಸೀತಾ ತ್ರಿವೇದಿ  40 ಅಲೆಮಾರಿ ಬುಡಕಟ್ಟು ಮಕ್ಕಳನ್ನು ಭಿಕ್ಷಾಟನೆಯಿಂದ ರಕ್ಷಿಸಿ ಶಾಲೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದು, ಶಿಕ್ಷಕಿಯ ಕಾರ್ಯಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದೆ.

ಉತ್ತರಪ್ರದೇಶದ ಬಜೇರಾ ಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕಿ ಸೀತಾ ತ್ರಿವೇದಿ ಅವರು ಶಿಕ್ಷಣ ವಂಚಿತ ಕಲಬಾಜ್ ಸಮುದಾಯಕ್ಕೆ ಸೇರಿದ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಅವರ ಪೋಷಕರಿಗೆ ಮನವರಿಕೆ ಮಾಡಿ ಅವರ ವಾರ್ಡ್‌ಗಳಲ್ಲಿನ ಶಾಲೆಗೆ ಮಕ್ಕಳನ್ನು ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಜೇರಾ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ತ್ರಿವೇದಿ ಅವರಿಗೆ ಕೆಲವು ವರ್ಷಗಳ ಹಿಂದೆ ಮಕ್ಕಳ ಗಣತಿಯನ್ನು ನಡೆಸುವ ಕೆಲಸವನ್ನು ನೀಡಲಾಗಿತ್ತು. ಸಮೀಕ್ಷೆಗಾಗಿ ಸಮೀಪದ ಗ್ರಾಮಕ್ಕೆ ಭೇಟಿ ನೀಡಿದಾಗ ಸ್ಥಳೀಯರು ಶಿಕ್ಷಕಿಯನ್ನು ಕಲಬಾಜ್ ಸಮುದಾಯದವರ ಮನೆಗಳಿಗೆ ಹೋಗದಂತೆ ತಡೆದಿದ್ದಾರೆ. ಆದರೆ ಅವರು ತನ್ನ ಕಾರ್ಯವನ್ನು ಮುಂದುವರಿಸಿದ್ದರು. ಈ ವೇಳೆ ಅವರು ಕಲಬಾಜ್‌ ಸಮುದಾಯಕ್ಕೆ ಸೇರಿದ ಯಾವುದೇ ಮಕ್ಕಳು ಶಾಲೆಗೆ ಹೋಗುವುದಿಲ್ಲ ಮತ್ತು ಅವರು ಕಟುಂಬದ ಜೀವನೋಪಾಯಕ್ಕಾಗಿ ಭಿಕ್ಷೆ ಬೇಡುವ  ಕೆಲಸವನ್ನು ಮಾಡುತ್ತಾರೆ ಎಂದು ಕಂಡುಕೊಂಡಿದ್ದಾರೆ ಮತ್ತು ಮಕ್ಕಳನ್ನು ಶಾಲೆಗೆ ಸೇರಿಸುವ ಸಾಹಸಕ್ಕೆ ಮುಂದಾಗಿದ್ದಾರೆ. ತ್ರಿವೇದಿ ಮಕ್ಕಳನ್ನು ಶಾಲೆಗೆ ಸೇರಿಸಲು ಪ್ರಯತ್ನಿಸುತ್ತಿದ್ದಂತೆ ಕಲಬಾಜ್ ಸಮುದಾಯ ಹಿರಿಯರು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಶಿಕ್ಷಕಿ ಸೀತಾ ತ್ರಿವೇದಿ, ನಾನು ಪ್ರತಿ ಮನೆಗೆ ಭೇಟಿ ನೀಡಿ ಹಿರಿಯರಿಗೆ ಶಿಕ್ಷಣದ ಮಹತ್ವದ ಬಗ್ಗೆ ಹೇಳಿದ್ದೇನೆ. ಬುಡಕಟ್ಟು ಸಮುದಾಯದ ಮಕ್ಕಳು ಶಿಕ್ಷಣ ಪಡೆದ ನಂತರ ಅಧಿಕಾರಿಗಳು ಮತ್ತು ಯಶಸ್ವಿ ಉದ್ಯಮಿಗಳಾಗಿರುವ ಕಥೆಗಳನ್ನು ನಾನು ಅವರಿಗೆ ಹೇಳಿದ್ದೇನೆ. ಇದು ಅವರ ಮೇಲೆ ಪರಿಣಾಮ ಬೀರಿತು ಮತ್ತು ಅವರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಪ್ರಾರಂಭಿಸಿದರು ಎಂದು ನೆನಪಿಸಿಕೊಂಡಿದ್ದಾರೆ.

ಶಾಲೆಗೆ ಮಕ್ಕಳನ್ನು ಸೇರಿಸಿದಾಗ ಎದುರಾಗಿದ್ದ ಸಮಸ್ಯೆ!

ಕಲಬಾಜ್ ಸಮುದಾಯದ 40 ಮಕ್ಕಳನ್ನು ಮನವೊಲಿಕೆ ಮಾಡಿ ಸೀತಾ ತ್ರಿವೇದಿ ಶಾಲೆಗೆ ದಾಖಲು ಮಾಡಿದ್ದಾರೆ. ಮಕ್ಕಳನ್ನು ದಾಖಲಿಸಿಕೊಂಡರೂ, ಇತರ ಸಮುದಾಯದ ವಿದ್ಯಾರ್ಥಿಗಳು ಅವರನ್ನು ಸ್ವೀಕರಿಸಲು ಸಿದ್ಧರಿಲ್ಲದ ಕಾರಣ ತ್ರಿವೇದಿಗೆ ಮತ್ತೊಂದು ಸವಾಲು ಎದುರಾಗಿತ್ತು. ಕಲಾಬಾಜ್ ಸಮುದಾಯದ ಮಕ್ಕಳೊಂದಿಗೆ ಇತರ ಸಮುದಾಯದ ಮಕ್ಕಳು ಮಧ್ಯಾಹ್ನದ ಊಟಕ್ಕೆ ಕುಳಿತುಕೊಳ್ಳದಿರುವುದನ್ನು ನಾನು ಗಮನಿಸಿದ್ದೇನೆ. ನಾನು ಇತರ ಮಕ್ಕಳ ಪೋಷಕರನ್ನು ಕರೆದು ಕಲಬಾಜ್ ಸಮುದಾಯದ ಮಕ್ಕಳ ಬಗ್ಗೆ ತಾರತಮ್ಯ ಮಾಡದಂತೆ ಕೇಳಿಕೊಂಡಿದ್ದೇನೆ.  ಪೋಷಕರ ಸಹಕಾರದಿಂದ ಈ ಸಮಸ್ಯೆಗೆ ಪರಿಹಾರವಾಗಿತ್ತು. ಪೋಷಕರ ಬಳಿ ಸಾಕಷ್ಟು ಹಣವಿಲ್ಲದ ಕಾರಣ ಈ ಮಕ್ಕಳಿಗೆ ಬಟ್ಟೆ ಮತ್ತು ಪುಸ್ತಕಗಳನ್ನು ಆಗಾಗ್ಗೆ ಖರೀದಿಸಿ ನಾನು ಕೊಡುತ್ತಿದ್ದೇನೆ ಎಂದು ತ್ರಿವೇದಿ ಹೇಳಿದ್ದಾರೆ.

ಸೀತಾ ತ್ರಿವೇದಿ ಅವರ ಈ ಕೆಲಸಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದ್ದು, ತ್ರಿವೇದಿಯವರ ಪ್ರಯತ್ನ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಉಮೇಶ್ ಪ್ರತಾಪ್ ಸಿಂಗ್ ಶ್ಲಾಘಿಸಿದ್ದಾರೆ. ಈ ಮಕ್ಕಳು ಸಮಾಜದ ಹಿತದೃಷ್ಟಿಯಿಂದ ಮುಂದೆ ಸಾಗುತ್ತಾರೆ ಮತ್ತು ಶಿಕ್ಷಣ ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ. ಈ ರೀತಿಯ ಪ್ರಯತ್ನಗಳ ಮೂಲಕ ಜಾತಿ ಆಧಾರಿತ ತಾರತಮ್ಯ ಕೂಡ ಕೊನೆಗೊಳ್ಳುತ್ತವೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ  ಶಿಕ್ಷಾ ಅಧಿಕಾರಿ ರಣವೀರ್ ಸಿಂಗ್ ಅವರು, ಶಿಕ್ಷಕಿಯೋರ್ವರು ಮಾಡಿದ ಪ್ರಯತ್ನಗಳನ್ನು ಗಮನಿಸಿದ್ದೇವೆ. ಶಿಕ್ಷಕರ ಪ್ರಯತ್ನ ಶ್ಲಾಘನೀಯವಾಗಿದ್ದು, ಜಿಲ್ಲೆಯ ಒಂದೇ ಒಂದು ಮಗು ಶಾಲೆಯಿಂದ ದೂರ ಉಳಿಯದಂತೆ ಇತರೆ ಶಾಲೆಗಳಲ್ಲೂ ಇಂತಹ ಪ್ರಯತ್ನ ನಡೆಯಲಿ ಎಂದು ಆಶಿಸುತ್ತೇವೆ ಎಂದು ಹೇಳಿದ್ದಾರೆ.

ಕಲಬಾಜ್ ಸಮುದಾಯ

16ನೇ ಶತಮಾನದಲ್ಲಿ ಮೊಘಲ್ ಸಾಮ್ರಾಜ್ಯದ ಅಡಳಿತದ ಸಮಯದಲ್ಲಿ ಉತ್ತರ ಪ್ರದೇಶಕ್ಕೆ ವಲಸೆ ಬಂದವರು ಕಲಾಬಾಜ್ ಜನರು. ಇವರು ಮೂಲತಃ ರಜಪೂತರು ಎಂದು ಹೇಳುತ್ತಾರೆ. ಈ ಸಮುದಾಯದ ಹೆಚ್ಚಿನ ಉತ್ತರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅವರು ಅಲೆಮಾರಿ ಸಮುದಾಯವಾಗಿದ್ದರು,  ಹಿಂದಿ ಮಾತನಾಡುತ್ತಾರೆ ಆದರೆ ತಮ್ಮದೇ ಆದ ನಿರ್ದಿಷ್ಟ ಉಪಭಾಷೆಯನ್ನು ಹೊಂದಿದ್ದಾರೆ.

ಇವರಲ್ಲಿ ಹೆಚ್ಚಿನವರು ಭೂರಹಿತರಾಗಿದ್ದಾರೆ. ಅದ್ಭುತವಾದ ಜಿಮ್ನಾಸ್ಟಿಕ್ ಸಾಹಸ, ಜಾನುವಾರುಗಳನ್ನು ನೋಡಿಕೊಳ್ಳುವುದು ಅಥವಾ ಬೈಸಿಕಲ್‌ಗಳನ್ನು ದುರಸ್ತಿ ಮಾಡುವುದು. ಕೆಲವರು ದಿನಗೂಲಿಗಳಾಗಿ ಕೂಡ ಕೆಲಸ ಮಾಡುತ್ತಾರೆ. ಹೆಚ್ಚಿನವರು ಬಿಕ್ಷಾಟನೆಯಲ್ಲಿ ತೊಡಗಿಕೊಂಡಿದ್ದಾರೆ.  2011ರ ಜನಗಣತಿಯು ಉತ್ತರಪ್ರದೇಶದಲ್ಲಿ ಕಲಾಬಾಜ್ ಸಮುದಾಯದ 11,199 ಜನರಿದ್ದಾರೆ ಎಂದು ಹೇಳಿದೆ. ಈ ಸಮುದಾಯವು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದೆ.

ಇದನ್ನು ಓದಿ:ಎಐಸಿಸಿ ಸೆಂಟ್ರಲ್‌ ವಾರ್‌ರೂಂ ಅಧ್ಯಕ್ಷರಾಗಿ ಶಶಿಕಾಂತ್‌ ಸೆಂಥಿಲ್‌ ನೇಮಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...