Homeಮುಖಪುಟಶಿಕ್ಷಕರ ಹಗರಣ | ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ಸರ್ಕಾರಿ ಶಾಲೆಯ ಶಿಕ್ಷಕರು

ಶಿಕ್ಷಕರ ಹಗರಣ | ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ಸರ್ಕಾರಿ ಶಾಲೆಯ ಶಿಕ್ಷಕರು

- Advertisement -
- Advertisement -

ಸರ್ಕಾರಿ ಶಾಲೆಗಳ ಶಿಕ್ಷಕರು ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ದೊಡ್ಡ ಹಗರಣವೊಂದು ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ.

ದಾಖಲೆಗಳ ಪ್ರಕಾರ, ದಂತಾ ತಾಲೂಕಿನ ಪಂಛಾ ಗ್ರಾಮದ ನಿವಾಸಿಯಾಗಿರುವ ಭಾವನಾ ಪಟೇಲ್ ಬನಸ್ಕಾಂತ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ವಾಸ್ತವವಾಗಿ ಅವರು ಅಮೆರಿಕದಲ್ಲಿ ವಾಸವಾಗಿದ್ದಾರೆ. ಪ್ರತಿ ತಿಂಗಳ ವೇತನ ಅವರ ಖಾತೆಗೆ ಜಮೆ ಆಗುತ್ತಿದೆ. ಅವರು ವರ್ಷಕ್ಕೊಮ್ಮೆ ದೀಪಾವಳಿಗೆ ಮಾತ್ರ ಗ್ರಾಮಕ್ಕೆ ಆಗಮಿಸುತ್ತಾರೆ ಎಂದು newindianexpress.com ವರದಿ ಮಾಡಿದೆ.

ಶಾಲೆಯ ಪ್ರಾಂಶುಪಾಲರು, ಜಿಲ್ಲಾ ಪ್ರಾಥಮಿಕ ಶಿಕ್ಷಣಾಧಿಕಾರಿ, ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದು ಎಚ್ಚರಿಸಿದ ಬಳಿಕ ಭಾವನಾ ಪಟೇಲ್ ಅವರ ಕಳ್ಳಾಟ ಬೆಳಕಿಗೆ ಬಂದಿದೆ. ಬಳಿಕ ಶಿಕ್ಷಣ ಇಲಾಖೆ ತನಿಖೆಗೆ ಆದೇಶಿಸಿದೆ ಎಂದು ವರದಿ ಹೇಳಿದೆ.

ಕಪಡ್‌ವಂಜ್ ಮತ್ತು ವಾವ್ ತಾಲೂಕುಗಳಲ್ಲಿ ಇದೇ ರೀತಿಯ ಮತ್ತೆರಡು ಪ್ರಕರಣಗಳು ಬೆಳಕಿಗೆ ಬಂದಿವೆ. ಕಪಡ್‌ವಂಜ್‌ನ ವಾಟಾ ಶಿವಪುರ ಪ್ರಾಥಮಿಕ ಶಾಲೆಯ ಶಿಕ್ಷಕ ಆಶಿಶ್ ಪಟೇಲ್ ಹಾಗೂ ವಾವ್‌ನ ಉಚ್ಚಾ ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಪಟೇಲ್ ಕಳೆದ ಕೆಲ ತಿಂಗಳಿನಿಂದ ನಿರಂತರ ಕೆಲಸಕ್ಕೆ ಗೈರಾಗುತ್ತಿರುವುದು ಪತ್ತೆಯಾಗಿದೆ. ಆದರೆ, ಇಬ್ಬರೂ ತಿಂಗಳ ವೇತನ ಪಡೆಯುತ್ತಿದ್ದಾರೆ. ಆಶಿಶ್ ಪಟೇಲ್ ಅವರ ಬದಲಿಗೆ ವಿಜಯ್ ಎಂಬ ಹೆಸರಿನ ನಕಲಿ ಶಿಕ್ಷಕನೋರ್ವ ವಿದ್ಯಾರ್ಥಿಗಳಿಗೆ ಬೋಧಿಸುತ್ತಿರುವುದು ಗೊತ್ತಾಗಿದೆ.

ಮಾಧ್ಯಮದವರು ಶಾಲೆಗೆ ಭೇಟಿ ನೀಡಿದಾಗ ವಿಜಯ್ ಅಲ್ಲಿಂದ ಪರಾರಿಯಾದ್ದಾನೆ. ಶಾಲೆಯ ಪ್ರಾಂಶುಪಾಲ ಅರ್ಜನ್ ರಾಥೋಡ್ ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ವಿಷಯ ತಿಳಿದ ಬಳಿಕ ಕಪಡ್‌ವಂಜ್ ತಾಲೂಕು ಅಭಿವೃದ್ದಿ ಅಧಿಕಾರಿ ಮಹಿಪತ್ ಚೌಹಾನ್ ತನಿಖೆಗೆ ಆದೇಶಿಸಿದ್ದಾರೆ ಎಂದು newindianexpress.com ವರದಿ ತಿಳಿಸಿದೆ.

ವಾವ್ ತಾಲೂಕಿನ ಉಚ್ಚಾ ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಪಟೇಲ್ ಕಳೆದ ಎರಡು ವರ್ಷಗಳಿಂದ ಕೆನಡಾದಲ್ಲಿ ವಾಸಿಸುತ್ತಿದ್ದಾರೆ. ಆದರೆ, ವೇತನ ಪಟ್ಟಿಯಲ್ಲಿ ಅವರ ಹೆಸರು ಈಗಲೂ ಇದೆ. ಶಿಕ್ಷಣ ಇಲಾಖೆಯಲ್ಲಿರುವ ಅಧಿಕಾರಿಗಳು ಅವರಿಗೆ ಬೆಂಬಲ ನೀಡುತ್ತಿರುವುದರಿಂದ ದರ್ಶನ್ ವಿರುದ್ದ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಧಿಕೃತ ರಜೆ ಇಲ್ಲದಿದ್ದರೂ, ಪುನರಾವರ್ತಿತ ಸೂಚನೆ ನೀಡಿದ ಹೊರತಾಗಿಯೂ ಪಟೇಲ್ 2022ರ ನವೆಂಬರ್ 10ರಿಂದ ಗೈರು ಹಾಜರಾಗಿದ್ದಾರೆ ಎಂದು ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರಾಂಶುಪಾಲ ಬಿಬಿ ಬರೋಟ್ ಹೇಳಿದ್ದಾರೆ.

ಇನ್ನು ಮೆಹ್ಸಾನ ಜಿಲ್ಲೆಯ ಕಾಡಿ ತಾಲೂಕಿನ ರಾಂಚೋಡ್ಪುರ ಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕ ಕವಿತಾ ದಾಸ್ ಕಳೆದ 9 ತಿಂಗಳಿನಿಂದ ಶಾಲೆಗೆ ಬಂದಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಹ್ಸಾನ ಜಿಲ್ಲೆಯ ಪ್ರಾಥಮಿಕ ಶಿಕ್ಷಣ ಅಧಿಕಾರಿ ಡಾ. ಶರದ್ ತ್ರಿವೇದಿ “ರಾಂಚೋಡ್ಪುರ ಪ್ರಾಥಮಿಕ ಶಾಲೆಯ ಶಿಕ್ಷಕಿ ಕವಿತಾ ದಾಸ್ ಅವರು ಶಿಕ್ಷಣ ಇಲಾಖೆಯ ಅನುಮತಿ ಪಡೆದುಕೊಂಡು ವಿದೇಶಕ್ಕೆ ತೆರಳಿದ್ದಾರೆ. ಅವರಿಗೆ ಎರಡು ಬಾರಿ ನೋಟಿಸ್ ನೀಡಲಾಗಿದೆ. ಅವರು ಈ ನೋಟಿಸ್‌ಗೆ ಪ್ರತಿಕ್ರಿಯೆ ನೀಡದಿದ್ದರೆ, ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾಗಿ ವರದಿ ಹೇಳಿದೆ.

ಈ ಕುರಿತು ಮಾತನಾಡುವಾಗ ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಪ್ರಫುಲ್ಲ ಪನ್ಸೇರಿಯಾ ಅವರು ರಕ್ಷಣಾತ್ಮಕ ಮಾತುಗಳನ್ನಾಡಿದ್ದಾರೆ. “ವಿದೇಶದಲ್ಲಿ ನೆಲೆಸಿರುವ ಶಿಕ್ಷಕರಿಗೆ 2024ರ ಜನವರಿ 1ರಿಂದ ವೇತನ ಪಾವತಿಯಾಗಿಲ್ಲ. ಶಿಕ್ಷಕರು ಮಧ್ಯಂತರ ರಜೆಯಲ್ಲಿದ್ದಾರೆ. ಪರಿಸ್ಥಿತಿ ಅವಲೋಕಿಸಿ ಸೂಕ್ತ ಕ್ರಮಕೈಗೊಳ್ಳಲು ವಿಚಾರಣೆ ನಡೆಸಲಾಗುವುದು” ಎಂದಿದ್ದಾರೆ.

ರಾಜ್ಯ ಸರ್ಕಾರದ ವಕ್ತಾರ ಸಚಿವ ರಿಷಿಕೇಶ್ ಪಟೇಲ್ ಮಾತನಾಡಿ “ಈ ಬಗ್ಗೆ ನಾವು ಸಂಪೂರ್ಣ ತನಿಖೆ ನಡೆಸುತ್ತೇವೆ. ಪಾಸ್‌ಪೋರ್ಟ್ ಕಚೇರಿ ದಾಖಲೆಗಳಿಂದ ಹಿಡಿದು ಹಾಜರಾತಿ ಶೀಟ್‌ಗಳವರೆಗೆ ಎಲ್ಲವನ್ನೂ ಪರಿಶೀಲಿಸುತ್ತೇವೆ. ಈ ವಿಷಯವು ಸಂಪೂರ್ಣ ಪಾರದರ್ಶಕವಾಗಿರುತ್ತದೆ ಮತ್ತು ಸಮಗ್ರ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ : ಕಾಂಗ್ರೆಸ್ ಕಿಡಿ

”ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ದೊಡ್ಡ ಹಗರಣದ ಬಗ್ಗೆ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ವಿದೇಶದಲ್ಲಿ ನೆಲೆಸಿರುವ (ಯುಎಸ್ ಮತ್ತು ಕೆನಡಾ) ಶಾಲಾ ಶಿಕ್ಷಕರು ವೇತನ ಪಡೆಯುತ್ತಲೇ ಇದ್ದಾರೆ” ಎಂದು ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ ಹೇಳಿದ್ದಾರೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾದ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...