Homeಮುಖಪುಟಶಿಕ್ಷಕರ ಹಗರಣ | ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ಸರ್ಕಾರಿ ಶಾಲೆಯ ಶಿಕ್ಷಕರು

ಶಿಕ್ಷಕರ ಹಗರಣ | ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ಸರ್ಕಾರಿ ಶಾಲೆಯ ಶಿಕ್ಷಕರು

- Advertisement -
- Advertisement -

ಸರ್ಕಾರಿ ಶಾಲೆಗಳ ಶಿಕ್ಷಕರು ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ದೊಡ್ಡ ಹಗರಣವೊಂದು ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ.

ದಾಖಲೆಗಳ ಪ್ರಕಾರ, ದಂತಾ ತಾಲೂಕಿನ ಪಂಛಾ ಗ್ರಾಮದ ನಿವಾಸಿಯಾಗಿರುವ ಭಾವನಾ ಪಟೇಲ್ ಬನಸ್ಕಾಂತ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ವಾಸ್ತವವಾಗಿ ಅವರು ಅಮೆರಿಕದಲ್ಲಿ ವಾಸವಾಗಿದ್ದಾರೆ. ಪ್ರತಿ ತಿಂಗಳ ವೇತನ ಅವರ ಖಾತೆಗೆ ಜಮೆ ಆಗುತ್ತಿದೆ. ಅವರು ವರ್ಷಕ್ಕೊಮ್ಮೆ ದೀಪಾವಳಿಗೆ ಮಾತ್ರ ಗ್ರಾಮಕ್ಕೆ ಆಗಮಿಸುತ್ತಾರೆ ಎಂದು newindianexpress.com ವರದಿ ಮಾಡಿದೆ.

ಶಾಲೆಯ ಪ್ರಾಂಶುಪಾಲರು, ಜಿಲ್ಲಾ ಪ್ರಾಥಮಿಕ ಶಿಕ್ಷಣಾಧಿಕಾರಿ, ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದು ಎಚ್ಚರಿಸಿದ ಬಳಿಕ ಭಾವನಾ ಪಟೇಲ್ ಅವರ ಕಳ್ಳಾಟ ಬೆಳಕಿಗೆ ಬಂದಿದೆ. ಬಳಿಕ ಶಿಕ್ಷಣ ಇಲಾಖೆ ತನಿಖೆಗೆ ಆದೇಶಿಸಿದೆ ಎಂದು ವರದಿ ಹೇಳಿದೆ.

ಕಪಡ್‌ವಂಜ್ ಮತ್ತು ವಾವ್ ತಾಲೂಕುಗಳಲ್ಲಿ ಇದೇ ರೀತಿಯ ಮತ್ತೆರಡು ಪ್ರಕರಣಗಳು ಬೆಳಕಿಗೆ ಬಂದಿವೆ. ಕಪಡ್‌ವಂಜ್‌ನ ವಾಟಾ ಶಿವಪುರ ಪ್ರಾಥಮಿಕ ಶಾಲೆಯ ಶಿಕ್ಷಕ ಆಶಿಶ್ ಪಟೇಲ್ ಹಾಗೂ ವಾವ್‌ನ ಉಚ್ಚಾ ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಪಟೇಲ್ ಕಳೆದ ಕೆಲ ತಿಂಗಳಿನಿಂದ ನಿರಂತರ ಕೆಲಸಕ್ಕೆ ಗೈರಾಗುತ್ತಿರುವುದು ಪತ್ತೆಯಾಗಿದೆ. ಆದರೆ, ಇಬ್ಬರೂ ತಿಂಗಳ ವೇತನ ಪಡೆಯುತ್ತಿದ್ದಾರೆ. ಆಶಿಶ್ ಪಟೇಲ್ ಅವರ ಬದಲಿಗೆ ವಿಜಯ್ ಎಂಬ ಹೆಸರಿನ ನಕಲಿ ಶಿಕ್ಷಕನೋರ್ವ ವಿದ್ಯಾರ್ಥಿಗಳಿಗೆ ಬೋಧಿಸುತ್ತಿರುವುದು ಗೊತ್ತಾಗಿದೆ.

ಮಾಧ್ಯಮದವರು ಶಾಲೆಗೆ ಭೇಟಿ ನೀಡಿದಾಗ ವಿಜಯ್ ಅಲ್ಲಿಂದ ಪರಾರಿಯಾದ್ದಾನೆ. ಶಾಲೆಯ ಪ್ರಾಂಶುಪಾಲ ಅರ್ಜನ್ ರಾಥೋಡ್ ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ವಿಷಯ ತಿಳಿದ ಬಳಿಕ ಕಪಡ್‌ವಂಜ್ ತಾಲೂಕು ಅಭಿವೃದ್ದಿ ಅಧಿಕಾರಿ ಮಹಿಪತ್ ಚೌಹಾನ್ ತನಿಖೆಗೆ ಆದೇಶಿಸಿದ್ದಾರೆ ಎಂದು newindianexpress.com ವರದಿ ತಿಳಿಸಿದೆ.

ವಾವ್ ತಾಲೂಕಿನ ಉಚ್ಚಾ ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಪಟೇಲ್ ಕಳೆದ ಎರಡು ವರ್ಷಗಳಿಂದ ಕೆನಡಾದಲ್ಲಿ ವಾಸಿಸುತ್ತಿದ್ದಾರೆ. ಆದರೆ, ವೇತನ ಪಟ್ಟಿಯಲ್ಲಿ ಅವರ ಹೆಸರು ಈಗಲೂ ಇದೆ. ಶಿಕ್ಷಣ ಇಲಾಖೆಯಲ್ಲಿರುವ ಅಧಿಕಾರಿಗಳು ಅವರಿಗೆ ಬೆಂಬಲ ನೀಡುತ್ತಿರುವುದರಿಂದ ದರ್ಶನ್ ವಿರುದ್ದ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಧಿಕೃತ ರಜೆ ಇಲ್ಲದಿದ್ದರೂ, ಪುನರಾವರ್ತಿತ ಸೂಚನೆ ನೀಡಿದ ಹೊರತಾಗಿಯೂ ಪಟೇಲ್ 2022ರ ನವೆಂಬರ್ 10ರಿಂದ ಗೈರು ಹಾಜರಾಗಿದ್ದಾರೆ ಎಂದು ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರಾಂಶುಪಾಲ ಬಿಬಿ ಬರೋಟ್ ಹೇಳಿದ್ದಾರೆ.

ಇನ್ನು ಮೆಹ್ಸಾನ ಜಿಲ್ಲೆಯ ಕಾಡಿ ತಾಲೂಕಿನ ರಾಂಚೋಡ್ಪುರ ಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕ ಕವಿತಾ ದಾಸ್ ಕಳೆದ 9 ತಿಂಗಳಿನಿಂದ ಶಾಲೆಗೆ ಬಂದಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಹ್ಸಾನ ಜಿಲ್ಲೆಯ ಪ್ರಾಥಮಿಕ ಶಿಕ್ಷಣ ಅಧಿಕಾರಿ ಡಾ. ಶರದ್ ತ್ರಿವೇದಿ “ರಾಂಚೋಡ್ಪುರ ಪ್ರಾಥಮಿಕ ಶಾಲೆಯ ಶಿಕ್ಷಕಿ ಕವಿತಾ ದಾಸ್ ಅವರು ಶಿಕ್ಷಣ ಇಲಾಖೆಯ ಅನುಮತಿ ಪಡೆದುಕೊಂಡು ವಿದೇಶಕ್ಕೆ ತೆರಳಿದ್ದಾರೆ. ಅವರಿಗೆ ಎರಡು ಬಾರಿ ನೋಟಿಸ್ ನೀಡಲಾಗಿದೆ. ಅವರು ಈ ನೋಟಿಸ್‌ಗೆ ಪ್ರತಿಕ್ರಿಯೆ ನೀಡದಿದ್ದರೆ, ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾಗಿ ವರದಿ ಹೇಳಿದೆ.

ಈ ಕುರಿತು ಮಾತನಾಡುವಾಗ ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಪ್ರಫುಲ್ಲ ಪನ್ಸೇರಿಯಾ ಅವರು ರಕ್ಷಣಾತ್ಮಕ ಮಾತುಗಳನ್ನಾಡಿದ್ದಾರೆ. “ವಿದೇಶದಲ್ಲಿ ನೆಲೆಸಿರುವ ಶಿಕ್ಷಕರಿಗೆ 2024ರ ಜನವರಿ 1ರಿಂದ ವೇತನ ಪಾವತಿಯಾಗಿಲ್ಲ. ಶಿಕ್ಷಕರು ಮಧ್ಯಂತರ ರಜೆಯಲ್ಲಿದ್ದಾರೆ. ಪರಿಸ್ಥಿತಿ ಅವಲೋಕಿಸಿ ಸೂಕ್ತ ಕ್ರಮಕೈಗೊಳ್ಳಲು ವಿಚಾರಣೆ ನಡೆಸಲಾಗುವುದು” ಎಂದಿದ್ದಾರೆ.

ರಾಜ್ಯ ಸರ್ಕಾರದ ವಕ್ತಾರ ಸಚಿವ ರಿಷಿಕೇಶ್ ಪಟೇಲ್ ಮಾತನಾಡಿ “ಈ ಬಗ್ಗೆ ನಾವು ಸಂಪೂರ್ಣ ತನಿಖೆ ನಡೆಸುತ್ತೇವೆ. ಪಾಸ್‌ಪೋರ್ಟ್ ಕಚೇರಿ ದಾಖಲೆಗಳಿಂದ ಹಿಡಿದು ಹಾಜರಾತಿ ಶೀಟ್‌ಗಳವರೆಗೆ ಎಲ್ಲವನ್ನೂ ಪರಿಶೀಲಿಸುತ್ತೇವೆ. ಈ ವಿಷಯವು ಸಂಪೂರ್ಣ ಪಾರದರ್ಶಕವಾಗಿರುತ್ತದೆ ಮತ್ತು ಸಮಗ್ರ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ : ಕಾಂಗ್ರೆಸ್ ಕಿಡಿ

”ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ದೊಡ್ಡ ಹಗರಣದ ಬಗ್ಗೆ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ವಿದೇಶದಲ್ಲಿ ನೆಲೆಸಿರುವ (ಯುಎಸ್ ಮತ್ತು ಕೆನಡಾ) ಶಾಲಾ ಶಿಕ್ಷಕರು ವೇತನ ಪಡೆಯುತ್ತಲೇ ಇದ್ದಾರೆ” ಎಂದು ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ ಹೇಳಿದ್ದಾರೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾದ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...