Homeಮುಖಪುಟಶಿಕ್ಷಕರ ಹಗರಣ | ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ಸರ್ಕಾರಿ ಶಾಲೆಯ ಶಿಕ್ಷಕರು

ಶಿಕ್ಷಕರ ಹಗರಣ | ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ಸರ್ಕಾರಿ ಶಾಲೆಯ ಶಿಕ್ಷಕರು

- Advertisement -
- Advertisement -

ಸರ್ಕಾರಿ ಶಾಲೆಗಳ ಶಿಕ್ಷಕರು ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ದೊಡ್ಡ ಹಗರಣವೊಂದು ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ.

ದಾಖಲೆಗಳ ಪ್ರಕಾರ, ದಂತಾ ತಾಲೂಕಿನ ಪಂಛಾ ಗ್ರಾಮದ ನಿವಾಸಿಯಾಗಿರುವ ಭಾವನಾ ಪಟೇಲ್ ಬನಸ್ಕಾಂತ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ವಾಸ್ತವವಾಗಿ ಅವರು ಅಮೆರಿಕದಲ್ಲಿ ವಾಸವಾಗಿದ್ದಾರೆ. ಪ್ರತಿ ತಿಂಗಳ ವೇತನ ಅವರ ಖಾತೆಗೆ ಜಮೆ ಆಗುತ್ತಿದೆ. ಅವರು ವರ್ಷಕ್ಕೊಮ್ಮೆ ದೀಪಾವಳಿಗೆ ಮಾತ್ರ ಗ್ರಾಮಕ್ಕೆ ಆಗಮಿಸುತ್ತಾರೆ ಎಂದು newindianexpress.com ವರದಿ ಮಾಡಿದೆ.

ಶಾಲೆಯ ಪ್ರಾಂಶುಪಾಲರು, ಜಿಲ್ಲಾ ಪ್ರಾಥಮಿಕ ಶಿಕ್ಷಣಾಧಿಕಾರಿ, ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದು ಎಚ್ಚರಿಸಿದ ಬಳಿಕ ಭಾವನಾ ಪಟೇಲ್ ಅವರ ಕಳ್ಳಾಟ ಬೆಳಕಿಗೆ ಬಂದಿದೆ. ಬಳಿಕ ಶಿಕ್ಷಣ ಇಲಾಖೆ ತನಿಖೆಗೆ ಆದೇಶಿಸಿದೆ ಎಂದು ವರದಿ ಹೇಳಿದೆ.

ಕಪಡ್‌ವಂಜ್ ಮತ್ತು ವಾವ್ ತಾಲೂಕುಗಳಲ್ಲಿ ಇದೇ ರೀತಿಯ ಮತ್ತೆರಡು ಪ್ರಕರಣಗಳು ಬೆಳಕಿಗೆ ಬಂದಿವೆ. ಕಪಡ್‌ವಂಜ್‌ನ ವಾಟಾ ಶಿವಪುರ ಪ್ರಾಥಮಿಕ ಶಾಲೆಯ ಶಿಕ್ಷಕ ಆಶಿಶ್ ಪಟೇಲ್ ಹಾಗೂ ವಾವ್‌ನ ಉಚ್ಚಾ ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಪಟೇಲ್ ಕಳೆದ ಕೆಲ ತಿಂಗಳಿನಿಂದ ನಿರಂತರ ಕೆಲಸಕ್ಕೆ ಗೈರಾಗುತ್ತಿರುವುದು ಪತ್ತೆಯಾಗಿದೆ. ಆದರೆ, ಇಬ್ಬರೂ ತಿಂಗಳ ವೇತನ ಪಡೆಯುತ್ತಿದ್ದಾರೆ. ಆಶಿಶ್ ಪಟೇಲ್ ಅವರ ಬದಲಿಗೆ ವಿಜಯ್ ಎಂಬ ಹೆಸರಿನ ನಕಲಿ ಶಿಕ್ಷಕನೋರ್ವ ವಿದ್ಯಾರ್ಥಿಗಳಿಗೆ ಬೋಧಿಸುತ್ತಿರುವುದು ಗೊತ್ತಾಗಿದೆ.

ಮಾಧ್ಯಮದವರು ಶಾಲೆಗೆ ಭೇಟಿ ನೀಡಿದಾಗ ವಿಜಯ್ ಅಲ್ಲಿಂದ ಪರಾರಿಯಾದ್ದಾನೆ. ಶಾಲೆಯ ಪ್ರಾಂಶುಪಾಲ ಅರ್ಜನ್ ರಾಥೋಡ್ ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ವಿಷಯ ತಿಳಿದ ಬಳಿಕ ಕಪಡ್‌ವಂಜ್ ತಾಲೂಕು ಅಭಿವೃದ್ದಿ ಅಧಿಕಾರಿ ಮಹಿಪತ್ ಚೌಹಾನ್ ತನಿಖೆಗೆ ಆದೇಶಿಸಿದ್ದಾರೆ ಎಂದು newindianexpress.com ವರದಿ ತಿಳಿಸಿದೆ.

ವಾವ್ ತಾಲೂಕಿನ ಉಚ್ಚಾ ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಪಟೇಲ್ ಕಳೆದ ಎರಡು ವರ್ಷಗಳಿಂದ ಕೆನಡಾದಲ್ಲಿ ವಾಸಿಸುತ್ತಿದ್ದಾರೆ. ಆದರೆ, ವೇತನ ಪಟ್ಟಿಯಲ್ಲಿ ಅವರ ಹೆಸರು ಈಗಲೂ ಇದೆ. ಶಿಕ್ಷಣ ಇಲಾಖೆಯಲ್ಲಿರುವ ಅಧಿಕಾರಿಗಳು ಅವರಿಗೆ ಬೆಂಬಲ ನೀಡುತ್ತಿರುವುದರಿಂದ ದರ್ಶನ್ ವಿರುದ್ದ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಧಿಕೃತ ರಜೆ ಇಲ್ಲದಿದ್ದರೂ, ಪುನರಾವರ್ತಿತ ಸೂಚನೆ ನೀಡಿದ ಹೊರತಾಗಿಯೂ ಪಟೇಲ್ 2022ರ ನವೆಂಬರ್ 10ರಿಂದ ಗೈರು ಹಾಜರಾಗಿದ್ದಾರೆ ಎಂದು ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರಾಂಶುಪಾಲ ಬಿಬಿ ಬರೋಟ್ ಹೇಳಿದ್ದಾರೆ.

ಇನ್ನು ಮೆಹ್ಸಾನ ಜಿಲ್ಲೆಯ ಕಾಡಿ ತಾಲೂಕಿನ ರಾಂಚೋಡ್ಪುರ ಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕ ಕವಿತಾ ದಾಸ್ ಕಳೆದ 9 ತಿಂಗಳಿನಿಂದ ಶಾಲೆಗೆ ಬಂದಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಹ್ಸಾನ ಜಿಲ್ಲೆಯ ಪ್ರಾಥಮಿಕ ಶಿಕ್ಷಣ ಅಧಿಕಾರಿ ಡಾ. ಶರದ್ ತ್ರಿವೇದಿ “ರಾಂಚೋಡ್ಪುರ ಪ್ರಾಥಮಿಕ ಶಾಲೆಯ ಶಿಕ್ಷಕಿ ಕವಿತಾ ದಾಸ್ ಅವರು ಶಿಕ್ಷಣ ಇಲಾಖೆಯ ಅನುಮತಿ ಪಡೆದುಕೊಂಡು ವಿದೇಶಕ್ಕೆ ತೆರಳಿದ್ದಾರೆ. ಅವರಿಗೆ ಎರಡು ಬಾರಿ ನೋಟಿಸ್ ನೀಡಲಾಗಿದೆ. ಅವರು ಈ ನೋಟಿಸ್‌ಗೆ ಪ್ರತಿಕ್ರಿಯೆ ನೀಡದಿದ್ದರೆ, ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾಗಿ ವರದಿ ಹೇಳಿದೆ.

ಈ ಕುರಿತು ಮಾತನಾಡುವಾಗ ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಪ್ರಫುಲ್ಲ ಪನ್ಸೇರಿಯಾ ಅವರು ರಕ್ಷಣಾತ್ಮಕ ಮಾತುಗಳನ್ನಾಡಿದ್ದಾರೆ. “ವಿದೇಶದಲ್ಲಿ ನೆಲೆಸಿರುವ ಶಿಕ್ಷಕರಿಗೆ 2024ರ ಜನವರಿ 1ರಿಂದ ವೇತನ ಪಾವತಿಯಾಗಿಲ್ಲ. ಶಿಕ್ಷಕರು ಮಧ್ಯಂತರ ರಜೆಯಲ್ಲಿದ್ದಾರೆ. ಪರಿಸ್ಥಿತಿ ಅವಲೋಕಿಸಿ ಸೂಕ್ತ ಕ್ರಮಕೈಗೊಳ್ಳಲು ವಿಚಾರಣೆ ನಡೆಸಲಾಗುವುದು” ಎಂದಿದ್ದಾರೆ.

ರಾಜ್ಯ ಸರ್ಕಾರದ ವಕ್ತಾರ ಸಚಿವ ರಿಷಿಕೇಶ್ ಪಟೇಲ್ ಮಾತನಾಡಿ “ಈ ಬಗ್ಗೆ ನಾವು ಸಂಪೂರ್ಣ ತನಿಖೆ ನಡೆಸುತ್ತೇವೆ. ಪಾಸ್‌ಪೋರ್ಟ್ ಕಚೇರಿ ದಾಖಲೆಗಳಿಂದ ಹಿಡಿದು ಹಾಜರಾತಿ ಶೀಟ್‌ಗಳವರೆಗೆ ಎಲ್ಲವನ್ನೂ ಪರಿಶೀಲಿಸುತ್ತೇವೆ. ಈ ವಿಷಯವು ಸಂಪೂರ್ಣ ಪಾರದರ್ಶಕವಾಗಿರುತ್ತದೆ ಮತ್ತು ಸಮಗ್ರ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ : ಕಾಂಗ್ರೆಸ್ ಕಿಡಿ

”ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ದೊಡ್ಡ ಹಗರಣದ ಬಗ್ಗೆ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ವಿದೇಶದಲ್ಲಿ ನೆಲೆಸಿರುವ (ಯುಎಸ್ ಮತ್ತು ಕೆನಡಾ) ಶಾಲಾ ಶಿಕ್ಷಕರು ವೇತನ ಪಡೆಯುತ್ತಲೇ ಇದ್ದಾರೆ” ಎಂದು ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ ಹೇಳಿದ್ದಾರೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾದ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...