Homeಮುಖಪುಟಶಿಕ್ಷಕರ ಹಗರಣ | ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ಸರ್ಕಾರಿ ಶಾಲೆಯ ಶಿಕ್ಷಕರು

ಶಿಕ್ಷಕರ ಹಗರಣ | ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ಸರ್ಕಾರಿ ಶಾಲೆಯ ಶಿಕ್ಷಕರು

- Advertisement -
- Advertisement -

ಸರ್ಕಾರಿ ಶಾಲೆಗಳ ಶಿಕ್ಷಕರು ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ದೊಡ್ಡ ಹಗರಣವೊಂದು ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ.

ದಾಖಲೆಗಳ ಪ್ರಕಾರ, ದಂತಾ ತಾಲೂಕಿನ ಪಂಛಾ ಗ್ರಾಮದ ನಿವಾಸಿಯಾಗಿರುವ ಭಾವನಾ ಪಟೇಲ್ ಬನಸ್ಕಾಂತ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ವಾಸ್ತವವಾಗಿ ಅವರು ಅಮೆರಿಕದಲ್ಲಿ ವಾಸವಾಗಿದ್ದಾರೆ. ಪ್ರತಿ ತಿಂಗಳ ವೇತನ ಅವರ ಖಾತೆಗೆ ಜಮೆ ಆಗುತ್ತಿದೆ. ಅವರು ವರ್ಷಕ್ಕೊಮ್ಮೆ ದೀಪಾವಳಿಗೆ ಮಾತ್ರ ಗ್ರಾಮಕ್ಕೆ ಆಗಮಿಸುತ್ತಾರೆ ಎಂದು newindianexpress.com ವರದಿ ಮಾಡಿದೆ.

ಶಾಲೆಯ ಪ್ರಾಂಶುಪಾಲರು, ಜಿಲ್ಲಾ ಪ್ರಾಥಮಿಕ ಶಿಕ್ಷಣಾಧಿಕಾರಿ, ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದು ಎಚ್ಚರಿಸಿದ ಬಳಿಕ ಭಾವನಾ ಪಟೇಲ್ ಅವರ ಕಳ್ಳಾಟ ಬೆಳಕಿಗೆ ಬಂದಿದೆ. ಬಳಿಕ ಶಿಕ್ಷಣ ಇಲಾಖೆ ತನಿಖೆಗೆ ಆದೇಶಿಸಿದೆ ಎಂದು ವರದಿ ಹೇಳಿದೆ.

ಕಪಡ್‌ವಂಜ್ ಮತ್ತು ವಾವ್ ತಾಲೂಕುಗಳಲ್ಲಿ ಇದೇ ರೀತಿಯ ಮತ್ತೆರಡು ಪ್ರಕರಣಗಳು ಬೆಳಕಿಗೆ ಬಂದಿವೆ. ಕಪಡ್‌ವಂಜ್‌ನ ವಾಟಾ ಶಿವಪುರ ಪ್ರಾಥಮಿಕ ಶಾಲೆಯ ಶಿಕ್ಷಕ ಆಶಿಶ್ ಪಟೇಲ್ ಹಾಗೂ ವಾವ್‌ನ ಉಚ್ಚಾ ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಪಟೇಲ್ ಕಳೆದ ಕೆಲ ತಿಂಗಳಿನಿಂದ ನಿರಂತರ ಕೆಲಸಕ್ಕೆ ಗೈರಾಗುತ್ತಿರುವುದು ಪತ್ತೆಯಾಗಿದೆ. ಆದರೆ, ಇಬ್ಬರೂ ತಿಂಗಳ ವೇತನ ಪಡೆಯುತ್ತಿದ್ದಾರೆ. ಆಶಿಶ್ ಪಟೇಲ್ ಅವರ ಬದಲಿಗೆ ವಿಜಯ್ ಎಂಬ ಹೆಸರಿನ ನಕಲಿ ಶಿಕ್ಷಕನೋರ್ವ ವಿದ್ಯಾರ್ಥಿಗಳಿಗೆ ಬೋಧಿಸುತ್ತಿರುವುದು ಗೊತ್ತಾಗಿದೆ.

ಮಾಧ್ಯಮದವರು ಶಾಲೆಗೆ ಭೇಟಿ ನೀಡಿದಾಗ ವಿಜಯ್ ಅಲ್ಲಿಂದ ಪರಾರಿಯಾದ್ದಾನೆ. ಶಾಲೆಯ ಪ್ರಾಂಶುಪಾಲ ಅರ್ಜನ್ ರಾಥೋಡ್ ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ವಿಷಯ ತಿಳಿದ ಬಳಿಕ ಕಪಡ್‌ವಂಜ್ ತಾಲೂಕು ಅಭಿವೃದ್ದಿ ಅಧಿಕಾರಿ ಮಹಿಪತ್ ಚೌಹಾನ್ ತನಿಖೆಗೆ ಆದೇಶಿಸಿದ್ದಾರೆ ಎಂದು newindianexpress.com ವರದಿ ತಿಳಿಸಿದೆ.

ವಾವ್ ತಾಲೂಕಿನ ಉಚ್ಚಾ ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಪಟೇಲ್ ಕಳೆದ ಎರಡು ವರ್ಷಗಳಿಂದ ಕೆನಡಾದಲ್ಲಿ ವಾಸಿಸುತ್ತಿದ್ದಾರೆ. ಆದರೆ, ವೇತನ ಪಟ್ಟಿಯಲ್ಲಿ ಅವರ ಹೆಸರು ಈಗಲೂ ಇದೆ. ಶಿಕ್ಷಣ ಇಲಾಖೆಯಲ್ಲಿರುವ ಅಧಿಕಾರಿಗಳು ಅವರಿಗೆ ಬೆಂಬಲ ನೀಡುತ್ತಿರುವುದರಿಂದ ದರ್ಶನ್ ವಿರುದ್ದ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಧಿಕೃತ ರಜೆ ಇಲ್ಲದಿದ್ದರೂ, ಪುನರಾವರ್ತಿತ ಸೂಚನೆ ನೀಡಿದ ಹೊರತಾಗಿಯೂ ಪಟೇಲ್ 2022ರ ನವೆಂಬರ್ 10ರಿಂದ ಗೈರು ಹಾಜರಾಗಿದ್ದಾರೆ ಎಂದು ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರಾಂಶುಪಾಲ ಬಿಬಿ ಬರೋಟ್ ಹೇಳಿದ್ದಾರೆ.

ಇನ್ನು ಮೆಹ್ಸಾನ ಜಿಲ್ಲೆಯ ಕಾಡಿ ತಾಲೂಕಿನ ರಾಂಚೋಡ್ಪುರ ಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕ ಕವಿತಾ ದಾಸ್ ಕಳೆದ 9 ತಿಂಗಳಿನಿಂದ ಶಾಲೆಗೆ ಬಂದಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಹ್ಸಾನ ಜಿಲ್ಲೆಯ ಪ್ರಾಥಮಿಕ ಶಿಕ್ಷಣ ಅಧಿಕಾರಿ ಡಾ. ಶರದ್ ತ್ರಿವೇದಿ “ರಾಂಚೋಡ್ಪುರ ಪ್ರಾಥಮಿಕ ಶಾಲೆಯ ಶಿಕ್ಷಕಿ ಕವಿತಾ ದಾಸ್ ಅವರು ಶಿಕ್ಷಣ ಇಲಾಖೆಯ ಅನುಮತಿ ಪಡೆದುಕೊಂಡು ವಿದೇಶಕ್ಕೆ ತೆರಳಿದ್ದಾರೆ. ಅವರಿಗೆ ಎರಡು ಬಾರಿ ನೋಟಿಸ್ ನೀಡಲಾಗಿದೆ. ಅವರು ಈ ನೋಟಿಸ್‌ಗೆ ಪ್ರತಿಕ್ರಿಯೆ ನೀಡದಿದ್ದರೆ, ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾಗಿ ವರದಿ ಹೇಳಿದೆ.

ಈ ಕುರಿತು ಮಾತನಾಡುವಾಗ ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಪ್ರಫುಲ್ಲ ಪನ್ಸೇರಿಯಾ ಅವರು ರಕ್ಷಣಾತ್ಮಕ ಮಾತುಗಳನ್ನಾಡಿದ್ದಾರೆ. “ವಿದೇಶದಲ್ಲಿ ನೆಲೆಸಿರುವ ಶಿಕ್ಷಕರಿಗೆ 2024ರ ಜನವರಿ 1ರಿಂದ ವೇತನ ಪಾವತಿಯಾಗಿಲ್ಲ. ಶಿಕ್ಷಕರು ಮಧ್ಯಂತರ ರಜೆಯಲ್ಲಿದ್ದಾರೆ. ಪರಿಸ್ಥಿತಿ ಅವಲೋಕಿಸಿ ಸೂಕ್ತ ಕ್ರಮಕೈಗೊಳ್ಳಲು ವಿಚಾರಣೆ ನಡೆಸಲಾಗುವುದು” ಎಂದಿದ್ದಾರೆ.

ರಾಜ್ಯ ಸರ್ಕಾರದ ವಕ್ತಾರ ಸಚಿವ ರಿಷಿಕೇಶ್ ಪಟೇಲ್ ಮಾತನಾಡಿ “ಈ ಬಗ್ಗೆ ನಾವು ಸಂಪೂರ್ಣ ತನಿಖೆ ನಡೆಸುತ್ತೇವೆ. ಪಾಸ್‌ಪೋರ್ಟ್ ಕಚೇರಿ ದಾಖಲೆಗಳಿಂದ ಹಿಡಿದು ಹಾಜರಾತಿ ಶೀಟ್‌ಗಳವರೆಗೆ ಎಲ್ಲವನ್ನೂ ಪರಿಶೀಲಿಸುತ್ತೇವೆ. ಈ ವಿಷಯವು ಸಂಪೂರ್ಣ ಪಾರದರ್ಶಕವಾಗಿರುತ್ತದೆ ಮತ್ತು ಸಮಗ್ರ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ : ಕಾಂಗ್ರೆಸ್ ಕಿಡಿ

”ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ದೊಡ್ಡ ಹಗರಣದ ಬಗ್ಗೆ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ವಿದೇಶದಲ್ಲಿ ನೆಲೆಸಿರುವ (ಯುಎಸ್ ಮತ್ತು ಕೆನಡಾ) ಶಾಲಾ ಶಿಕ್ಷಕರು ವೇತನ ಪಡೆಯುತ್ತಲೇ ಇದ್ದಾರೆ” ಎಂದು ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ ಹೇಳಿದ್ದಾರೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾದ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...