Homeಮುಖಪುಟಶಿಕ್ಷಕರ ಹಗರಣ | ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ಸರ್ಕಾರಿ ಶಾಲೆಯ ಶಿಕ್ಷಕರು

ಶಿಕ್ಷಕರ ಹಗರಣ | ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ಸರ್ಕಾರಿ ಶಾಲೆಯ ಶಿಕ್ಷಕರು

- Advertisement -
- Advertisement -

ಸರ್ಕಾರಿ ಶಾಲೆಗಳ ಶಿಕ್ಷಕರು ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ದೊಡ್ಡ ಹಗರಣವೊಂದು ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ.

ದಾಖಲೆಗಳ ಪ್ರಕಾರ, ದಂತಾ ತಾಲೂಕಿನ ಪಂಛಾ ಗ್ರಾಮದ ನಿವಾಸಿಯಾಗಿರುವ ಭಾವನಾ ಪಟೇಲ್ ಬನಸ್ಕಾಂತ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ವಾಸ್ತವವಾಗಿ ಅವರು ಅಮೆರಿಕದಲ್ಲಿ ವಾಸವಾಗಿದ್ದಾರೆ. ಪ್ರತಿ ತಿಂಗಳ ವೇತನ ಅವರ ಖಾತೆಗೆ ಜಮೆ ಆಗುತ್ತಿದೆ. ಅವರು ವರ್ಷಕ್ಕೊಮ್ಮೆ ದೀಪಾವಳಿಗೆ ಮಾತ್ರ ಗ್ರಾಮಕ್ಕೆ ಆಗಮಿಸುತ್ತಾರೆ ಎಂದು newindianexpress.com ವರದಿ ಮಾಡಿದೆ.

ಶಾಲೆಯ ಪ್ರಾಂಶುಪಾಲರು, ಜಿಲ್ಲಾ ಪ್ರಾಥಮಿಕ ಶಿಕ್ಷಣಾಧಿಕಾರಿ, ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದು ಎಚ್ಚರಿಸಿದ ಬಳಿಕ ಭಾವನಾ ಪಟೇಲ್ ಅವರ ಕಳ್ಳಾಟ ಬೆಳಕಿಗೆ ಬಂದಿದೆ. ಬಳಿಕ ಶಿಕ್ಷಣ ಇಲಾಖೆ ತನಿಖೆಗೆ ಆದೇಶಿಸಿದೆ ಎಂದು ವರದಿ ಹೇಳಿದೆ.

ಕಪಡ್‌ವಂಜ್ ಮತ್ತು ವಾವ್ ತಾಲೂಕುಗಳಲ್ಲಿ ಇದೇ ರೀತಿಯ ಮತ್ತೆರಡು ಪ್ರಕರಣಗಳು ಬೆಳಕಿಗೆ ಬಂದಿವೆ. ಕಪಡ್‌ವಂಜ್‌ನ ವಾಟಾ ಶಿವಪುರ ಪ್ರಾಥಮಿಕ ಶಾಲೆಯ ಶಿಕ್ಷಕ ಆಶಿಶ್ ಪಟೇಲ್ ಹಾಗೂ ವಾವ್‌ನ ಉಚ್ಚಾ ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಪಟೇಲ್ ಕಳೆದ ಕೆಲ ತಿಂಗಳಿನಿಂದ ನಿರಂತರ ಕೆಲಸಕ್ಕೆ ಗೈರಾಗುತ್ತಿರುವುದು ಪತ್ತೆಯಾಗಿದೆ. ಆದರೆ, ಇಬ್ಬರೂ ತಿಂಗಳ ವೇತನ ಪಡೆಯುತ್ತಿದ್ದಾರೆ. ಆಶಿಶ್ ಪಟೇಲ್ ಅವರ ಬದಲಿಗೆ ವಿಜಯ್ ಎಂಬ ಹೆಸರಿನ ನಕಲಿ ಶಿಕ್ಷಕನೋರ್ವ ವಿದ್ಯಾರ್ಥಿಗಳಿಗೆ ಬೋಧಿಸುತ್ತಿರುವುದು ಗೊತ್ತಾಗಿದೆ.

ಮಾಧ್ಯಮದವರು ಶಾಲೆಗೆ ಭೇಟಿ ನೀಡಿದಾಗ ವಿಜಯ್ ಅಲ್ಲಿಂದ ಪರಾರಿಯಾದ್ದಾನೆ. ಶಾಲೆಯ ಪ್ರಾಂಶುಪಾಲ ಅರ್ಜನ್ ರಾಥೋಡ್ ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ವಿಷಯ ತಿಳಿದ ಬಳಿಕ ಕಪಡ್‌ವಂಜ್ ತಾಲೂಕು ಅಭಿವೃದ್ದಿ ಅಧಿಕಾರಿ ಮಹಿಪತ್ ಚೌಹಾನ್ ತನಿಖೆಗೆ ಆದೇಶಿಸಿದ್ದಾರೆ ಎಂದು newindianexpress.com ವರದಿ ತಿಳಿಸಿದೆ.

ವಾವ್ ತಾಲೂಕಿನ ಉಚ್ಚಾ ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಪಟೇಲ್ ಕಳೆದ ಎರಡು ವರ್ಷಗಳಿಂದ ಕೆನಡಾದಲ್ಲಿ ವಾಸಿಸುತ್ತಿದ್ದಾರೆ. ಆದರೆ, ವೇತನ ಪಟ್ಟಿಯಲ್ಲಿ ಅವರ ಹೆಸರು ಈಗಲೂ ಇದೆ. ಶಿಕ್ಷಣ ಇಲಾಖೆಯಲ್ಲಿರುವ ಅಧಿಕಾರಿಗಳು ಅವರಿಗೆ ಬೆಂಬಲ ನೀಡುತ್ತಿರುವುದರಿಂದ ದರ್ಶನ್ ವಿರುದ್ದ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಧಿಕೃತ ರಜೆ ಇಲ್ಲದಿದ್ದರೂ, ಪುನರಾವರ್ತಿತ ಸೂಚನೆ ನೀಡಿದ ಹೊರತಾಗಿಯೂ ಪಟೇಲ್ 2022ರ ನವೆಂಬರ್ 10ರಿಂದ ಗೈರು ಹಾಜರಾಗಿದ್ದಾರೆ ಎಂದು ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರಾಂಶುಪಾಲ ಬಿಬಿ ಬರೋಟ್ ಹೇಳಿದ್ದಾರೆ.

ಇನ್ನು ಮೆಹ್ಸಾನ ಜಿಲ್ಲೆಯ ಕಾಡಿ ತಾಲೂಕಿನ ರಾಂಚೋಡ್ಪುರ ಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕ ಕವಿತಾ ದಾಸ್ ಕಳೆದ 9 ತಿಂಗಳಿನಿಂದ ಶಾಲೆಗೆ ಬಂದಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಹ್ಸಾನ ಜಿಲ್ಲೆಯ ಪ್ರಾಥಮಿಕ ಶಿಕ್ಷಣ ಅಧಿಕಾರಿ ಡಾ. ಶರದ್ ತ್ರಿವೇದಿ “ರಾಂಚೋಡ್ಪುರ ಪ್ರಾಥಮಿಕ ಶಾಲೆಯ ಶಿಕ್ಷಕಿ ಕವಿತಾ ದಾಸ್ ಅವರು ಶಿಕ್ಷಣ ಇಲಾಖೆಯ ಅನುಮತಿ ಪಡೆದುಕೊಂಡು ವಿದೇಶಕ್ಕೆ ತೆರಳಿದ್ದಾರೆ. ಅವರಿಗೆ ಎರಡು ಬಾರಿ ನೋಟಿಸ್ ನೀಡಲಾಗಿದೆ. ಅವರು ಈ ನೋಟಿಸ್‌ಗೆ ಪ್ರತಿಕ್ರಿಯೆ ನೀಡದಿದ್ದರೆ, ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾಗಿ ವರದಿ ಹೇಳಿದೆ.

ಈ ಕುರಿತು ಮಾತನಾಡುವಾಗ ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಪ್ರಫುಲ್ಲ ಪನ್ಸೇರಿಯಾ ಅವರು ರಕ್ಷಣಾತ್ಮಕ ಮಾತುಗಳನ್ನಾಡಿದ್ದಾರೆ. “ವಿದೇಶದಲ್ಲಿ ನೆಲೆಸಿರುವ ಶಿಕ್ಷಕರಿಗೆ 2024ರ ಜನವರಿ 1ರಿಂದ ವೇತನ ಪಾವತಿಯಾಗಿಲ್ಲ. ಶಿಕ್ಷಕರು ಮಧ್ಯಂತರ ರಜೆಯಲ್ಲಿದ್ದಾರೆ. ಪರಿಸ್ಥಿತಿ ಅವಲೋಕಿಸಿ ಸೂಕ್ತ ಕ್ರಮಕೈಗೊಳ್ಳಲು ವಿಚಾರಣೆ ನಡೆಸಲಾಗುವುದು” ಎಂದಿದ್ದಾರೆ.

ರಾಜ್ಯ ಸರ್ಕಾರದ ವಕ್ತಾರ ಸಚಿವ ರಿಷಿಕೇಶ್ ಪಟೇಲ್ ಮಾತನಾಡಿ “ಈ ಬಗ್ಗೆ ನಾವು ಸಂಪೂರ್ಣ ತನಿಖೆ ನಡೆಸುತ್ತೇವೆ. ಪಾಸ್‌ಪೋರ್ಟ್ ಕಚೇರಿ ದಾಖಲೆಗಳಿಂದ ಹಿಡಿದು ಹಾಜರಾತಿ ಶೀಟ್‌ಗಳವರೆಗೆ ಎಲ್ಲವನ್ನೂ ಪರಿಶೀಲಿಸುತ್ತೇವೆ. ಈ ವಿಷಯವು ಸಂಪೂರ್ಣ ಪಾರದರ್ಶಕವಾಗಿರುತ್ತದೆ ಮತ್ತು ಸಮಗ್ರ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ : ಕಾಂಗ್ರೆಸ್ ಕಿಡಿ

”ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ದೊಡ್ಡ ಹಗರಣದ ಬಗ್ಗೆ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ವಿದೇಶದಲ್ಲಿ ನೆಲೆಸಿರುವ (ಯುಎಸ್ ಮತ್ತು ಕೆನಡಾ) ಶಾಲಾ ಶಿಕ್ಷಕರು ವೇತನ ಪಡೆಯುತ್ತಲೇ ಇದ್ದಾರೆ” ಎಂದು ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ ಹೇಳಿದ್ದಾರೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾದ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...