Homeಕರೋನಾ ತಲ್ಲಣ‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್

‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್

ಜನರು ಸಾಂಕ್ರಮಿಕದಿಂದ ಸಾಯುತ್ತಿರಬೇಕಾದರೆ ಕೇಂದ್ರ ಸರ್ಕಾರವು ತನ್ನ ‘ಇಮೇಜ್‌’ ಸರಿಪಡಿಸುವ ಕೆಲಸದಲ್ಲಿ ನಿರತವಾಗಿದೆ.

- Advertisement -
- Advertisement -

ಕೊರೊನಾ ವೈರಸ್‌‌ನ “ಭಾರತೀಯ ರೂಪಾಂತರ”( ಇಂಡಿಯನ್ ವೇರಿಯಂಟ್) ವನ್ನು ಸೂಚಿಸುವ ಅಥವಾ ಬಳಸಿರುವ ಯಾವುದೇ ವಿಷಯವನ್ನು ತೆಗೆದುಹಾಕುವಂತೆ ಕೇಂದ್ರದ ಮಾಹಿತಿ ತಂತ್ರಜ್ಞಾನ (ಐಟಿ) ಸಚಿವಾಲಯವು ಎಲ್ಲಾ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಪತ್ರ ಬರೆದಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಕಳೆದ ವರ್ಷ ಭಾರತದಲ್ಲಿ ಮೊದಲು ಗುರುತಿಸಲ್ಪಟ್ಟ ರೂಪಾಂತರ ಕೊರೊನಾ ವೈರಸ್ ಅನ್ನು ಮೇ 11 ರಂದು ವಿಶ್ವ ಆರೋಗ್ಯ ಸಂಸ್ಥೆಯು ‘ಬಿ .1.617’ ಎಂದು ವರ್ಗೀಕರಿಸಿತ್ತು. ಇದರ ಮರುದಿನ “ಇಂಡಿಯನ್ ವೇರಿಯಂಟ್” ಎಂಬ ಪದವನ್ನು ಮಾಧ್ಯಮಗಳು ಯಾವುದೇ ಆಧಾರವಿಲ್ಲದೆ ಬಳಸುತ್ತಿದೆ ಎಂದು ಕೇಂದ್ರ ಸರ್ಕಾರವು ಆರೋಪಿಸಿತ್ತು.

ಈ ಬಗ್ಗೆ ಶುಕ್ರವಾರ ಕೇಂದ್ರ ಸರ್ಕಾರವು ಸಾಮಾಜಿಕ ಜಾಲತಾಣ ಕಂಪೆನಿಗಳಿಗೆ ಪತ್ರ ಬರೆದಿದ್ದು, “ಕೊರೊನಾ ವೈರಸ್‌ ‘ಇಂಡಿಯನ್ ವೇರಿಯಂಟ್’ ಎಂದು ಹೆಸರಿಸುವ ಅಥವಾ ಸೂಚಿಸುವ ಎಲ್ಲಾ ವಿಷಯವನ್ನು ತೆಗೆದುಹಾಕಿ” ಎಂದು ತಿಳಿಸಿದೆ.

ಇದನ್ನೂ ಓದಿ: ಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

“ಇಂಡಿಯನ್ ವೇರಿಯೆಂಟ್‌ ಎಂಬ ಹೆಸರು ಸಂಪೂರ್ಣವಾಗಿ ತಪ್ಪಾಗಿದೆ. ಈ ಮಾದರಿಯ ಯಾವುದೆ ಕೊರೊನಾ ವೈರಸ್‌ ‘ರೂಪಾಂತರ’ವನ್ನು ವಿಶ್ವ ಆರೋಗ್ಯ ಸಂಸ್ಥೆ ಉಲ್ಲೇಖಿಸಿಲ್ಲ. ಆರೋಗ್ಯ ಸಂಸ್ಥೆಯ ಯಾವುದೆ ವರದಿಗಳೂ ಕೊರೊನಾ ವೈರಸ್‌ನ ಬಿ .1.617 ರೂಪಾಂತರವನ್ನು ಇಂಡಿಯನ್ ವೇರಿಯೆಂಟ್‌ ಎಂದು ಹೇಳಿಲ್ಲ” ಎಂದು ಪತ್ರವು ಹೇಳಿದೆ.

‘ಇಂಡಿಯನ್ ವೇರಿಯೆಂಟ್‌’ ಉಲ್ಲೇಖವು ದೇಶದ ಚಿತ್ರಣವನ್ನು ಹಾಳುಗೆಡವುತ್ತದೆ ಮತ್ತು ತಪ್ಪು ಸಂದೇಶವನ್ನು ಹರಡುತ್ತದೆ ಎಂಬ ಬಗ್ಗೆ ‘ಗಟ್ಟಿಯಾದ ಮತ್ತು ಸ್ಪಷ್ಟವಾದ’ ಸಂದೇಶ ರವಾನಿಸಲು ಈ ನೋಟಿಸ್ ನೀಡಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆಗೆ ಐಟಿ ಸಚಿವಾಲಯವು ಸಂಪರ್ಕಕ್ಕೆ ಸಿಗಲಿಲ್ಲ ಎಂದು ಅದು ಹೇಳಿದೆ.

ಪ್ರಪಂಚದಾದ್ಯಂತ ವೈದ್ಯರು ಮತ್ತು ಆರೋಗ್ಯ ತಜ್ಞರು ಸಾಮಾನ್ಯವಾಗಿ ಕೊರೊನಾ ವೈರಸ್ ರೂಪಾಂತರಗಳು ಎಲ್ಲಿ ಪತ್ತೆಯಾಗಿದೆಯೊ ಅದರ ಆಧಾರದ ಮೇಲೆಯೆ ಹೆಸರನ್ನು ಉಲ್ಲೇಖಿಸುತ್ತಾರೆ. ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ ರೂಪಾಂತರಗಳನ್ನು ಹಾಗೆಯೆ ಉಲ್ಲೇಖಿಸುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ದೇಶ ಚಿತ್ರಣದ ಹಾಳಾಗುತ್ತಿದೆ ಎಂಬ ಹೆಸರಲ್ಲಿ ಕೇಂದ್ರ ಸರ್ಕಾರವು ತನ್ನ ವೈಫಲ್ಯವನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ. ಕನಿಷ್ಠ ಆರೋಗ್ಯ ಸೌಲಭ್ಯಗಳಿಲ್ಲದೆ ಸಾಂಕ್ರಮಿಕದಿಂದಾಗಿ ಜನರು ಸಾಯುತ್ತಿರುವ ಸಮಯದಲ್ಲಿ ಕೇಂದ್ರ ಸರ್ಕಾರವು ತನ್ನ ಇಮೇಜ್‌ ಸರಿಪಡಿಸಲು ಹೋಗಿ ಅಂತರಾಷ್ಟ್ರೀಯವಾಗಿ ದೇಶದ ಮಾನವನ್ನು ಹರಾಜಾಕುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನರ ಜೀವಕ್ಕಿಂತಲೂ ತನ್ನ ‘ಇಮೇಜ್‌’ ರಕ್ಷಿಸುವುದು ಮುಖ್ಯವಾಗಿದೆ. ಅದಕ್ಕೆ ಈ ರೀತಿಯ ಕಸರತ್ತುಗಳನ್ನು ಮಾಡುತ್ತಿದೆ ಎಂದು ಹಲವಾರು ಜನರು ಕಿಡಿ ಕಾರಿದ್ದಾರೆ.

ಭಾರತವು ಕೊರೊನಾ ಪ್ರಕರಣಗಳಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ಪ್ರತಿದಿನ ಸುಮಾರು 2.5 ಲಕ್ಷ ಸೋಂಕುಗಳು ಮತ್ತು 4,000 ಸಾವುಗಳನ್ನು ವರದಿಯಾಗುತ್ತಿದೆ.

ಕೊರೊನಾ ವೈರಸ್ ಸಾಂಕ್ರಾಮಿಕವನ್ನು ನಿಭಾಯಿಸಲು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ವಿಫಲವಾದ ಹಿನ್ನಲೆಯಲ್ಲಿ ಭಾರಿ ಟೀಕೆಗಳನ್ನು ಎದುರಿಸುತ್ತಿದೆ. ಕೊರೊನಾ ಎರಡನೆ ಅಲೆ ಬರಲಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದರೂ ಮೋದಿ ಸರ್ಕಾರವು ಅದನ್ನು ಸಮರ್ಪಕವಾಗಿ ನಿಭಾಯಿಸಲು ಯೋಜನೆ ರೂಪಿಸದ ಕಾರಣಕ್ಕಾಗಿ ದೇಶದಾದ್ಯಂತ ಅಸಮಾಧಾನಗಳು ಎದ್ದಿದೆ.

ಇದನ್ನೂ ಓದಿ: ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳ ಮತ್ತು ಕೆಲವು ಮುಖಂಡರ ನಡೆ ಕೇಡುಗಾಲಕ್ಕೆ ಕುದುರೆ ಮೊಟ್ಟೆ ಇಟ್ಟಂತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...