Homeಕರೋನಾ ತಲ್ಲಣ‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್

‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್

ಜನರು ಸಾಂಕ್ರಮಿಕದಿಂದ ಸಾಯುತ್ತಿರಬೇಕಾದರೆ ಕೇಂದ್ರ ಸರ್ಕಾರವು ತನ್ನ ‘ಇಮೇಜ್‌’ ಸರಿಪಡಿಸುವ ಕೆಲಸದಲ್ಲಿ ನಿರತವಾಗಿದೆ.

- Advertisement -
- Advertisement -

ಕೊರೊನಾ ವೈರಸ್‌‌ನ “ಭಾರತೀಯ ರೂಪಾಂತರ”( ಇಂಡಿಯನ್ ವೇರಿಯಂಟ್) ವನ್ನು ಸೂಚಿಸುವ ಅಥವಾ ಬಳಸಿರುವ ಯಾವುದೇ ವಿಷಯವನ್ನು ತೆಗೆದುಹಾಕುವಂತೆ ಕೇಂದ್ರದ ಮಾಹಿತಿ ತಂತ್ರಜ್ಞಾನ (ಐಟಿ) ಸಚಿವಾಲಯವು ಎಲ್ಲಾ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಪತ್ರ ಬರೆದಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಕಳೆದ ವರ್ಷ ಭಾರತದಲ್ಲಿ ಮೊದಲು ಗುರುತಿಸಲ್ಪಟ್ಟ ರೂಪಾಂತರ ಕೊರೊನಾ ವೈರಸ್ ಅನ್ನು ಮೇ 11 ರಂದು ವಿಶ್ವ ಆರೋಗ್ಯ ಸಂಸ್ಥೆಯು ‘ಬಿ .1.617’ ಎಂದು ವರ್ಗೀಕರಿಸಿತ್ತು. ಇದರ ಮರುದಿನ “ಇಂಡಿಯನ್ ವೇರಿಯಂಟ್” ಎಂಬ ಪದವನ್ನು ಮಾಧ್ಯಮಗಳು ಯಾವುದೇ ಆಧಾರವಿಲ್ಲದೆ ಬಳಸುತ್ತಿದೆ ಎಂದು ಕೇಂದ್ರ ಸರ್ಕಾರವು ಆರೋಪಿಸಿತ್ತು.

ಈ ಬಗ್ಗೆ ಶುಕ್ರವಾರ ಕೇಂದ್ರ ಸರ್ಕಾರವು ಸಾಮಾಜಿಕ ಜಾಲತಾಣ ಕಂಪೆನಿಗಳಿಗೆ ಪತ್ರ ಬರೆದಿದ್ದು, “ಕೊರೊನಾ ವೈರಸ್‌ ‘ಇಂಡಿಯನ್ ವೇರಿಯಂಟ್’ ಎಂದು ಹೆಸರಿಸುವ ಅಥವಾ ಸೂಚಿಸುವ ಎಲ್ಲಾ ವಿಷಯವನ್ನು ತೆಗೆದುಹಾಕಿ” ಎಂದು ತಿಳಿಸಿದೆ.

ಇದನ್ನೂ ಓದಿ: ಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

“ಇಂಡಿಯನ್ ವೇರಿಯೆಂಟ್‌ ಎಂಬ ಹೆಸರು ಸಂಪೂರ್ಣವಾಗಿ ತಪ್ಪಾಗಿದೆ. ಈ ಮಾದರಿಯ ಯಾವುದೆ ಕೊರೊನಾ ವೈರಸ್‌ ‘ರೂಪಾಂತರ’ವನ್ನು ವಿಶ್ವ ಆರೋಗ್ಯ ಸಂಸ್ಥೆ ಉಲ್ಲೇಖಿಸಿಲ್ಲ. ಆರೋಗ್ಯ ಸಂಸ್ಥೆಯ ಯಾವುದೆ ವರದಿಗಳೂ ಕೊರೊನಾ ವೈರಸ್‌ನ ಬಿ .1.617 ರೂಪಾಂತರವನ್ನು ಇಂಡಿಯನ್ ವೇರಿಯೆಂಟ್‌ ಎಂದು ಹೇಳಿಲ್ಲ” ಎಂದು ಪತ್ರವು ಹೇಳಿದೆ.

‘ಇಂಡಿಯನ್ ವೇರಿಯೆಂಟ್‌’ ಉಲ್ಲೇಖವು ದೇಶದ ಚಿತ್ರಣವನ್ನು ಹಾಳುಗೆಡವುತ್ತದೆ ಮತ್ತು ತಪ್ಪು ಸಂದೇಶವನ್ನು ಹರಡುತ್ತದೆ ಎಂಬ ಬಗ್ಗೆ ‘ಗಟ್ಟಿಯಾದ ಮತ್ತು ಸ್ಪಷ್ಟವಾದ’ ಸಂದೇಶ ರವಾನಿಸಲು ಈ ನೋಟಿಸ್ ನೀಡಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆಗೆ ಐಟಿ ಸಚಿವಾಲಯವು ಸಂಪರ್ಕಕ್ಕೆ ಸಿಗಲಿಲ್ಲ ಎಂದು ಅದು ಹೇಳಿದೆ.

ಪ್ರಪಂಚದಾದ್ಯಂತ ವೈದ್ಯರು ಮತ್ತು ಆರೋಗ್ಯ ತಜ್ಞರು ಸಾಮಾನ್ಯವಾಗಿ ಕೊರೊನಾ ವೈರಸ್ ರೂಪಾಂತರಗಳು ಎಲ್ಲಿ ಪತ್ತೆಯಾಗಿದೆಯೊ ಅದರ ಆಧಾರದ ಮೇಲೆಯೆ ಹೆಸರನ್ನು ಉಲ್ಲೇಖಿಸುತ್ತಾರೆ. ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ ರೂಪಾಂತರಗಳನ್ನು ಹಾಗೆಯೆ ಉಲ್ಲೇಖಿಸುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ದೇಶ ಚಿತ್ರಣದ ಹಾಳಾಗುತ್ತಿದೆ ಎಂಬ ಹೆಸರಲ್ಲಿ ಕೇಂದ್ರ ಸರ್ಕಾರವು ತನ್ನ ವೈಫಲ್ಯವನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ. ಕನಿಷ್ಠ ಆರೋಗ್ಯ ಸೌಲಭ್ಯಗಳಿಲ್ಲದೆ ಸಾಂಕ್ರಮಿಕದಿಂದಾಗಿ ಜನರು ಸಾಯುತ್ತಿರುವ ಸಮಯದಲ್ಲಿ ಕೇಂದ್ರ ಸರ್ಕಾರವು ತನ್ನ ಇಮೇಜ್‌ ಸರಿಪಡಿಸಲು ಹೋಗಿ ಅಂತರಾಷ್ಟ್ರೀಯವಾಗಿ ದೇಶದ ಮಾನವನ್ನು ಹರಾಜಾಕುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನರ ಜೀವಕ್ಕಿಂತಲೂ ತನ್ನ ‘ಇಮೇಜ್‌’ ರಕ್ಷಿಸುವುದು ಮುಖ್ಯವಾಗಿದೆ. ಅದಕ್ಕೆ ಈ ರೀತಿಯ ಕಸರತ್ತುಗಳನ್ನು ಮಾಡುತ್ತಿದೆ ಎಂದು ಹಲವಾರು ಜನರು ಕಿಡಿ ಕಾರಿದ್ದಾರೆ.

ಭಾರತವು ಕೊರೊನಾ ಪ್ರಕರಣಗಳಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ಪ್ರತಿದಿನ ಸುಮಾರು 2.5 ಲಕ್ಷ ಸೋಂಕುಗಳು ಮತ್ತು 4,000 ಸಾವುಗಳನ್ನು ವರದಿಯಾಗುತ್ತಿದೆ.

ಕೊರೊನಾ ವೈರಸ್ ಸಾಂಕ್ರಾಮಿಕವನ್ನು ನಿಭಾಯಿಸಲು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ವಿಫಲವಾದ ಹಿನ್ನಲೆಯಲ್ಲಿ ಭಾರಿ ಟೀಕೆಗಳನ್ನು ಎದುರಿಸುತ್ತಿದೆ. ಕೊರೊನಾ ಎರಡನೆ ಅಲೆ ಬರಲಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದರೂ ಮೋದಿ ಸರ್ಕಾರವು ಅದನ್ನು ಸಮರ್ಪಕವಾಗಿ ನಿಭಾಯಿಸಲು ಯೋಜನೆ ರೂಪಿಸದ ಕಾರಣಕ್ಕಾಗಿ ದೇಶದಾದ್ಯಂತ ಅಸಮಾಧಾನಗಳು ಎದ್ದಿದೆ.

ಇದನ್ನೂ ಓದಿ: ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳ ಮತ್ತು ಕೆಲವು ಮುಖಂಡರ ನಡೆ ಕೇಡುಗಾಲಕ್ಕೆ ಕುದುರೆ ಮೊಟ್ಟೆ ಇಟ್ಟಂತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...