Homeಕರೋನಾ ತಲ್ಲಣ‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್

‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್

ಜನರು ಸಾಂಕ್ರಮಿಕದಿಂದ ಸಾಯುತ್ತಿರಬೇಕಾದರೆ ಕೇಂದ್ರ ಸರ್ಕಾರವು ತನ್ನ ‘ಇಮೇಜ್‌’ ಸರಿಪಡಿಸುವ ಕೆಲಸದಲ್ಲಿ ನಿರತವಾಗಿದೆ.

- Advertisement -
- Advertisement -

ಕೊರೊನಾ ವೈರಸ್‌‌ನ “ಭಾರತೀಯ ರೂಪಾಂತರ”( ಇಂಡಿಯನ್ ವೇರಿಯಂಟ್) ವನ್ನು ಸೂಚಿಸುವ ಅಥವಾ ಬಳಸಿರುವ ಯಾವುದೇ ವಿಷಯವನ್ನು ತೆಗೆದುಹಾಕುವಂತೆ ಕೇಂದ್ರದ ಮಾಹಿತಿ ತಂತ್ರಜ್ಞಾನ (ಐಟಿ) ಸಚಿವಾಲಯವು ಎಲ್ಲಾ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಪತ್ರ ಬರೆದಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಕಳೆದ ವರ್ಷ ಭಾರತದಲ್ಲಿ ಮೊದಲು ಗುರುತಿಸಲ್ಪಟ್ಟ ರೂಪಾಂತರ ಕೊರೊನಾ ವೈರಸ್ ಅನ್ನು ಮೇ 11 ರಂದು ವಿಶ್ವ ಆರೋಗ್ಯ ಸಂಸ್ಥೆಯು ‘ಬಿ .1.617’ ಎಂದು ವರ್ಗೀಕರಿಸಿತ್ತು. ಇದರ ಮರುದಿನ “ಇಂಡಿಯನ್ ವೇರಿಯಂಟ್” ಎಂಬ ಪದವನ್ನು ಮಾಧ್ಯಮಗಳು ಯಾವುದೇ ಆಧಾರವಿಲ್ಲದೆ ಬಳಸುತ್ತಿದೆ ಎಂದು ಕೇಂದ್ರ ಸರ್ಕಾರವು ಆರೋಪಿಸಿತ್ತು.

ಈ ಬಗ್ಗೆ ಶುಕ್ರವಾರ ಕೇಂದ್ರ ಸರ್ಕಾರವು ಸಾಮಾಜಿಕ ಜಾಲತಾಣ ಕಂಪೆನಿಗಳಿಗೆ ಪತ್ರ ಬರೆದಿದ್ದು, “ಕೊರೊನಾ ವೈರಸ್‌ ‘ಇಂಡಿಯನ್ ವೇರಿಯಂಟ್’ ಎಂದು ಹೆಸರಿಸುವ ಅಥವಾ ಸೂಚಿಸುವ ಎಲ್ಲಾ ವಿಷಯವನ್ನು ತೆಗೆದುಹಾಕಿ” ಎಂದು ತಿಳಿಸಿದೆ.

ಇದನ್ನೂ ಓದಿ: ಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

“ಇಂಡಿಯನ್ ವೇರಿಯೆಂಟ್‌ ಎಂಬ ಹೆಸರು ಸಂಪೂರ್ಣವಾಗಿ ತಪ್ಪಾಗಿದೆ. ಈ ಮಾದರಿಯ ಯಾವುದೆ ಕೊರೊನಾ ವೈರಸ್‌ ‘ರೂಪಾಂತರ’ವನ್ನು ವಿಶ್ವ ಆರೋಗ್ಯ ಸಂಸ್ಥೆ ಉಲ್ಲೇಖಿಸಿಲ್ಲ. ಆರೋಗ್ಯ ಸಂಸ್ಥೆಯ ಯಾವುದೆ ವರದಿಗಳೂ ಕೊರೊನಾ ವೈರಸ್‌ನ ಬಿ .1.617 ರೂಪಾಂತರವನ್ನು ಇಂಡಿಯನ್ ವೇರಿಯೆಂಟ್‌ ಎಂದು ಹೇಳಿಲ್ಲ” ಎಂದು ಪತ್ರವು ಹೇಳಿದೆ.

‘ಇಂಡಿಯನ್ ವೇರಿಯೆಂಟ್‌’ ಉಲ್ಲೇಖವು ದೇಶದ ಚಿತ್ರಣವನ್ನು ಹಾಳುಗೆಡವುತ್ತದೆ ಮತ್ತು ತಪ್ಪು ಸಂದೇಶವನ್ನು ಹರಡುತ್ತದೆ ಎಂಬ ಬಗ್ಗೆ ‘ಗಟ್ಟಿಯಾದ ಮತ್ತು ಸ್ಪಷ್ಟವಾದ’ ಸಂದೇಶ ರವಾನಿಸಲು ಈ ನೋಟಿಸ್ ನೀಡಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆಗೆ ಐಟಿ ಸಚಿವಾಲಯವು ಸಂಪರ್ಕಕ್ಕೆ ಸಿಗಲಿಲ್ಲ ಎಂದು ಅದು ಹೇಳಿದೆ.

ಪ್ರಪಂಚದಾದ್ಯಂತ ವೈದ್ಯರು ಮತ್ತು ಆರೋಗ್ಯ ತಜ್ಞರು ಸಾಮಾನ್ಯವಾಗಿ ಕೊರೊನಾ ವೈರಸ್ ರೂಪಾಂತರಗಳು ಎಲ್ಲಿ ಪತ್ತೆಯಾಗಿದೆಯೊ ಅದರ ಆಧಾರದ ಮೇಲೆಯೆ ಹೆಸರನ್ನು ಉಲ್ಲೇಖಿಸುತ್ತಾರೆ. ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ ರೂಪಾಂತರಗಳನ್ನು ಹಾಗೆಯೆ ಉಲ್ಲೇಖಿಸುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ದೇಶ ಚಿತ್ರಣದ ಹಾಳಾಗುತ್ತಿದೆ ಎಂಬ ಹೆಸರಲ್ಲಿ ಕೇಂದ್ರ ಸರ್ಕಾರವು ತನ್ನ ವೈಫಲ್ಯವನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ. ಕನಿಷ್ಠ ಆರೋಗ್ಯ ಸೌಲಭ್ಯಗಳಿಲ್ಲದೆ ಸಾಂಕ್ರಮಿಕದಿಂದಾಗಿ ಜನರು ಸಾಯುತ್ತಿರುವ ಸಮಯದಲ್ಲಿ ಕೇಂದ್ರ ಸರ್ಕಾರವು ತನ್ನ ಇಮೇಜ್‌ ಸರಿಪಡಿಸಲು ಹೋಗಿ ಅಂತರಾಷ್ಟ್ರೀಯವಾಗಿ ದೇಶದ ಮಾನವನ್ನು ಹರಾಜಾಕುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನರ ಜೀವಕ್ಕಿಂತಲೂ ತನ್ನ ‘ಇಮೇಜ್‌’ ರಕ್ಷಿಸುವುದು ಮುಖ್ಯವಾಗಿದೆ. ಅದಕ್ಕೆ ಈ ರೀತಿಯ ಕಸರತ್ತುಗಳನ್ನು ಮಾಡುತ್ತಿದೆ ಎಂದು ಹಲವಾರು ಜನರು ಕಿಡಿ ಕಾರಿದ್ದಾರೆ.

ಭಾರತವು ಕೊರೊನಾ ಪ್ರಕರಣಗಳಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ಪ್ರತಿದಿನ ಸುಮಾರು 2.5 ಲಕ್ಷ ಸೋಂಕುಗಳು ಮತ್ತು 4,000 ಸಾವುಗಳನ್ನು ವರದಿಯಾಗುತ್ತಿದೆ.

ಕೊರೊನಾ ವೈರಸ್ ಸಾಂಕ್ರಾಮಿಕವನ್ನು ನಿಭಾಯಿಸಲು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ವಿಫಲವಾದ ಹಿನ್ನಲೆಯಲ್ಲಿ ಭಾರಿ ಟೀಕೆಗಳನ್ನು ಎದುರಿಸುತ್ತಿದೆ. ಕೊರೊನಾ ಎರಡನೆ ಅಲೆ ಬರಲಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದರೂ ಮೋದಿ ಸರ್ಕಾರವು ಅದನ್ನು ಸಮರ್ಪಕವಾಗಿ ನಿಭಾಯಿಸಲು ಯೋಜನೆ ರೂಪಿಸದ ಕಾರಣಕ್ಕಾಗಿ ದೇಶದಾದ್ಯಂತ ಅಸಮಾಧಾನಗಳು ಎದ್ದಿದೆ.

ಇದನ್ನೂ ಓದಿ: ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳ ಮತ್ತು ಕೆಲವು ಮುಖಂಡರ ನಡೆ ಕೇಡುಗಾಲಕ್ಕೆ ಕುದುರೆ ಮೊಟ್ಟೆ ಇಟ್ಟಂತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...