Homeಮುಖಪುಟ32,000 ಮಹಿಳೆಯರು ಐಎಸ್‌ಐಎಸ್ ಸೇರಿದ್ದಾರೆಂಬ ಟೀಸರ್‌ ತೆರವು ಮಾಡಲಾಗುವುದು: ‘ದಿ ಕೇರಳ ಸ್ಟೋರಿ’ ನಿರ್ಮಾಪಕ

32,000 ಮಹಿಳೆಯರು ಐಎಸ್‌ಐಎಸ್ ಸೇರಿದ್ದಾರೆಂಬ ಟೀಸರ್‌ ತೆರವು ಮಾಡಲಾಗುವುದು: ‘ದಿ ಕೇರಳ ಸ್ಟೋರಿ’ ನಿರ್ಮಾಪಕ

- Advertisement -
- Advertisement -

ಕೇರಳದಲ್ಲಿ 32,000ಕ್ಕೂ ಹೆಚ್ಚು ಮಹಿಳೆಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗಿದೆ ಮತ್ತು ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್‌ಗೆ (ಐಎಸ್‌ಐಎಸ್‌) ಸೇರಿಸಿಕೊಳ್ಳಲಾಗಿದೆ ಎಂದು ಪ್ರತಿಪಾದಿಸಿರುವ ಟೀಸರ್ ಅನ್ನು ತೆಗೆದುಹಾಕುವುದಾಗಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿರ್ಮಾಕರು ಶುಕ್ರವಾರ ಕೇರಳ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

ನವೆಂಬರ್‌ನಲ್ಲಿ ಟೀಸರ್‌ ಬಿಡುಗಡೆಯಾಗಿತ್ತು. ಸುಮಾರು 32,000 ಮಹಿಳೆಯರನ್ನು ಮತಾಂತರಿಸಿ, ಇಸ್ಲಾಮಿಕ್ ಸ್ಟೇಟ್‌ಗೆ ಸೇರಿಸಲಾಗಿದೆ ಎಂದು ಟೀಸರ್‌ನಲ್ಲಿ ಪ್ರತಿಪಾದಿಸಲಾಯಿತು. ಆದರೆ ಸಾಕ್ಷ್ಯವನ್ನು ನೀಡಲು ಚಿತ್ರತಂಡ ವಿಫಲವಾಗಿದೆ. “ಮೂವರು ಯುವತಿಯರ ನೈಜ ಕಥೆ ಇದಾಗಿದೆ” ಎಂದು ಚಿತ್ರದ ಟ್ರೈಲರ್‌ನಲ್ಲಿ ಬಿಂಬಿಸಲಾಗಿದೆ.

ಸುದೀಪ್ತೋ ಸೇನ್ ನಿರ್ದೇಶನದ ‘ಕೇರಳ ಸ್ಟೋರಿ’ ಶುಕ್ರವಾರ ಬಿಡುಗಡೆಯಾಗಿದೆ.

ಈ ಸಿನಿಮಾ ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಶುಕ್ರವಾರ ಹೈಕೋರ್ಟ್‌ನಲ್ಲಿ ನಡೆಯಿತು. ಚಿತ್ರದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಮಾತುಗಳನ್ನು ಪ್ರಚಾರ ಮಾಡಲಾಗಿದೆ ಎಂದು ಅರ್ಜಿದಾರರು ವಾದಿಸಿದರು. ಆದರೆ “ಈ ಸಿನಿಮಾ ನಿಜವಾದ ಘಟನೆಗಳಿಂದ ಪ್ರೇರಿತವಾಗಿದೆ” ಎಂದು ಮಾತ್ರ ಚಿತ್ರತಂಡ ಹೇಳಿರುವುದನ್ನು ಗಮನಿಸಿದ ನ್ಯಾಯಾಲಯವು ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು.

ನ್ಯಾಯಮೂರ್ತಿ ಎನ್ ನಾಗರೇಶ್ ಮತ್ತು ನ್ಯಾಯಮೂರ್ತಿ ಸೋಫಿ ಥಾಮಸ್ ಅವರನ್ನೊಳಗೊಂಡ ವಿಭಾಗೀಯ ಪೀಠವು, “ಹಿಂದೂ ಪಾತ್ರಗಳನ್ನು ನಕಾರಾತ್ಮಕವಾಗಿ ಚಿತ್ರಿಸಿದ ಇತರ ಹಲವಾರು ಚಲನಚಿತ್ರಗಳಿವೆ” ಎಂದು ಹೇಳಿದೆ.

“ಹಿಂದೂ ಸನ್ಯಾಸಿಗಳನ್ನು ಕಳ್ಳಸಾಗಾಣಿಕೆದಾರರು ಮತ್ತು ಅತ್ಯಾಚಾರಿಗಳನ್ನಾಗಿ ತೋರಿಸಿರುವ ಅನೇಕ ಚಲನಚಿತ್ರಗಳಿವೆ” ಎಂದು ನ್ಯಾಯಮೂರ್ತಿ ನಾಗರೇಶ್ ಮೌಖಿಕವಾಗಿ ತಿಳಿಸಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ. “ಯಾರೂ ಏನನ್ನೂ ಹೇಳುವುದಿಲ್ಲ. ಇಂತಹ ಸಿನಿಮಾಗಳನ್ನು ನೀವು ಹಿಂದಿ ಮತ್ತು ಮಲಯಾಳಂನಲ್ಲಿ ನೋಡಿರಬಹುದು. ಕೇರಳದಲ್ಲಿ ನಾವು ಜಾತ್ಯತೀತರು” ಎಂದಿದ್ದಾರೆ.

ಆದಾಗ್ಯೂ, 32,000 ಮಹಿಳೆಯರ ಮತಾಂತರದ ವಿಷಯ ಹೇಗೆ ಬಂದಿದೆ ಎಂದು ನ್ಯಾಯಮೂರ್ತಿ ನಾಗರೇಶ್ ಚಿತ್ರದ ನಿರ್ಮಾಪಕರ ವಕೀಲರನ್ನು ಪ್ರಶ್ನಿಸಿದರು. “ಸಿನಿಮಾ ನಿರ್ಮಾಪಕರು ಪಡೆದಿರುವ ಮಾಹಿತಿಯನ್ನು ಇದು ಆಧರಿಸಿದೆ” ಎಂದು ಪ್ರತಿಕ್ರಿಯಿಸಿರುವ ವಕೀಲರು, “ಟ್ರೇಲರ್‌ನಲ್ಲಿ ಇದನ್ನು ತೆಗೆದುಹಾಕಲಾವುದು” ಎಂದು ಒಪ್ಪಿಕೊಂಡರು.

ಸಿನಿಮಾ ಬಿಡುಗಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಲು ನಿರಾಕರಿಸಿತು. “ಚಲನಚಿತ್ರದ ನಿರ್ಮಾಪಕರು ಈ ಸಿನಿಮಾಕ್ಕೆ ಹಣವನ್ನು ಸುರಿದಿದ್ದಾರೆ, ನಟರ ಪರಿಶ್ರಮದ ಬಗ್ಗೆಯೂ ಅರ್ಜಿದಾರರು ಯೋಚಿಸಬೇಕು” ಎಂದಿತು.

ಇದರ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಈ ಸಿನಿಮಾವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣಾ ನಿಮಿತ್ತ ಬಳ್ಳಾರಿಯಲ್ಲಿ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ದಕ್ಷಿಣ ರಾಜ್ಯದಲ್ಲಿ ಭಯೋತ್ಪಾದಕ ಪಿತೂರಿಗಳು ಇರುವುದನ್ನು ಕೇರಳ ಸ್ಟೋರಿ ಬಹಿರಂಗಪಡಿಸಿದೆ. ಭಯೋತ್ಪಾದಕ ಮನಸ್ಥಿತಿ ಹೊಂದಿರುವ ಜನರೊಂದಿಗೆ ಕಾಂಗ್ರೆಸ್ ರಹಸ್ಯವಾಗಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದರು.

‘ದಿ ಕೇರಳ ಸ್ಟೋರಿ’ಯನ್ನು ಮಧ್ಯಪ್ರದೇಶದಲ್ಲಿ ತೆರಿಗೆ ಮುಕ್ತಗೊಳಿಸಲಾಗಿದೆ. ಮೋದಿಯವರ ಹೇಳಿಕೆಗಳ ನಂತರ, ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಶನಿವಾರ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ಘೋಷಿಸಿತು ಎಂದು ಪಿಟಿಐ ವರದಿ ಮಾಡಿದೆ.

ಒಂದು ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಿದಾಗ, ಅದರ ಮೇಲೆ ಮನರಂಜನಾ ತೆರಿಗೆಯನ್ನು ವಿಧಿಸಲಾಗುವುದಿಲ್ಲ, ಹೀಗಾಗಿ ಟಿಕೆಟ್ ದರ ಕಡಿಮೆಯಾಗುತ್ತದೆ. ಐತಿಹಾಸಿಕ ವಿಷಯಗಳನ್ನು ಒಳಗೊಂಡ ಅಥವಾ ಸಾಮಾಜಿಕ ಕಾರಣಗಳನ್ನು ಒಳಗೊಂಡ ಸಿನಿಮಾಗಳಿಗೆ ಮಾತ್ರ ತೆರಿಗೆ ವಿನಾಯಿತಿಯನ್ನು ಸರ್ಕಾರಗಳು ಸಾಮಾನ್ಯವಾಗಿ ನೀಡುತ್ತವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರೊಪೊಗಾಂಡ ಸಿನಿಮಾಗಳಿಗೆ ತೆರಿಗೆ ವಿನಾಯಿತಿ ನೀಡಿರುವ ಉದಾಹರಣೆಗಳಿವೆ.

ಇದನ್ನೂ ಓದಿರಿ: ಚುನಾವಣಾ ಪ್ರಚಾರದಲ್ಲಿ ಕೋಮುದ್ವೇಷ ಭಾಷಣ: ಅಡ್ಡಂಡ ಕಾರ್ಯಪ್ಪ ವಿರುದ್ಧ ಎಫ್‌ಐಆರ್‌

“ನಾವು ಈಗಾಗಲೇ ಮಧ್ಯಪ್ರದೇಶದಲ್ಲಿ ಧಾರ್ಮಿಕ ಮತಾಂತರದ ವಿರುದ್ಧ ಕಾನೂನನ್ನು ಮಾಡಿದ್ದೇವೆ” ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪಿಟಿಐಗೆ ತಿಳಿಸಿದ್ದಾರೆ. “ಈ ಚಿತ್ರವು ಜಾಗೃತಿ ಮೂಡಿಸುತ್ತದೆ, ಪ್ರತಿಯೊಬ್ಬರೂ ಈ ಚಿತ್ರವನ್ನು ನೋಡಬೇಕು. ಪೋಷಕರು, ಮಕ್ಕಳು ಮತ್ತು ಹೆಣ್ಣುಮಕ್ಕಳು ಇದನ್ನು ವೀಕ್ಷಿಸಬೇಕು” ಎಂದು ಮನವಿ ಮಾಡಿದ್ದಾರೆ.

‘ಲವ್ ಜಿಹಾದ್’, ಧಾರ್ಮಿಕ ಮತಾಂತರ ಮತ್ತು ಭಯೋತ್ಪಾದನೆಯ ಪಿತೂರಿಗಳನ್ನು ಸಿನಿಮಾ ಬಯಲಿಗೆಳೆಯುತ್ತದೆ ಎಂದು ಚೌಹಾಣ್ ಹೇಳಿದ್ದಾರೆ.

‘ಲವ್ ಜಿಹಾದ್’ ಎಂಬುದು ಹಿಂದುತ್ವವಾದಿಗಳು ಸೃಷ್ಟಿಸಿರುವ ಪಿತೂರಿ ಸಿದ್ಧಾಂತವಾಗಿದೆ. ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮುಸ್ಲಿಂ ಪುರುಷರು ಪ್ರೇಮದೊಳಗೆ ಸಿಲುಕಿಸುತ್ತಾರೆಂಬುದು ಈ ಪಿತೂರಿ ಸಿದ್ಧಾಂತದ ಸಾರಾಂಶವಾಗಿದೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಏಪ್ರಿಲ್ 30 ರಂದು ಪ್ರತಿಕ್ರಿಯಿಸಿ, ಈ ಸಿನಿಮಾದ ಮೂಲಕ ಕೇರಳ ರಾಜ್ಯವನ್ನು ಧಾರ್ಮಿಕ ಉಗ್ರವಾದದ ಕೇಂದ್ರವೆಂದು ಬಿಂಬಿಸಲು ಆರ್‌ಎಸ್‌ಎಸ್ ಯತ್ನಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...