Homeಮುಖಪುಟ32,000 ಮಹಿಳೆಯರು ಐಎಸ್‌ಐಎಸ್ ಸೇರಿದ್ದಾರೆಂಬ ಟೀಸರ್‌ ತೆರವು ಮಾಡಲಾಗುವುದು: ‘ದಿ ಕೇರಳ ಸ್ಟೋರಿ’ ನಿರ್ಮಾಪಕ

32,000 ಮಹಿಳೆಯರು ಐಎಸ್‌ಐಎಸ್ ಸೇರಿದ್ದಾರೆಂಬ ಟೀಸರ್‌ ತೆರವು ಮಾಡಲಾಗುವುದು: ‘ದಿ ಕೇರಳ ಸ್ಟೋರಿ’ ನಿರ್ಮಾಪಕ

- Advertisement -
- Advertisement -

ಕೇರಳದಲ್ಲಿ 32,000ಕ್ಕೂ ಹೆಚ್ಚು ಮಹಿಳೆಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗಿದೆ ಮತ್ತು ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್‌ಗೆ (ಐಎಸ್‌ಐಎಸ್‌) ಸೇರಿಸಿಕೊಳ್ಳಲಾಗಿದೆ ಎಂದು ಪ್ರತಿಪಾದಿಸಿರುವ ಟೀಸರ್ ಅನ್ನು ತೆಗೆದುಹಾಕುವುದಾಗಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿರ್ಮಾಕರು ಶುಕ್ರವಾರ ಕೇರಳ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

ನವೆಂಬರ್‌ನಲ್ಲಿ ಟೀಸರ್‌ ಬಿಡುಗಡೆಯಾಗಿತ್ತು. ಸುಮಾರು 32,000 ಮಹಿಳೆಯರನ್ನು ಮತಾಂತರಿಸಿ, ಇಸ್ಲಾಮಿಕ್ ಸ್ಟೇಟ್‌ಗೆ ಸೇರಿಸಲಾಗಿದೆ ಎಂದು ಟೀಸರ್‌ನಲ್ಲಿ ಪ್ರತಿಪಾದಿಸಲಾಯಿತು. ಆದರೆ ಸಾಕ್ಷ್ಯವನ್ನು ನೀಡಲು ಚಿತ್ರತಂಡ ವಿಫಲವಾಗಿದೆ. “ಮೂವರು ಯುವತಿಯರ ನೈಜ ಕಥೆ ಇದಾಗಿದೆ” ಎಂದು ಚಿತ್ರದ ಟ್ರೈಲರ್‌ನಲ್ಲಿ ಬಿಂಬಿಸಲಾಗಿದೆ.

ಸುದೀಪ್ತೋ ಸೇನ್ ನಿರ್ದೇಶನದ ‘ಕೇರಳ ಸ್ಟೋರಿ’ ಶುಕ್ರವಾರ ಬಿಡುಗಡೆಯಾಗಿದೆ.

ಈ ಸಿನಿಮಾ ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಶುಕ್ರವಾರ ಹೈಕೋರ್ಟ್‌ನಲ್ಲಿ ನಡೆಯಿತು. ಚಿತ್ರದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಮಾತುಗಳನ್ನು ಪ್ರಚಾರ ಮಾಡಲಾಗಿದೆ ಎಂದು ಅರ್ಜಿದಾರರು ವಾದಿಸಿದರು. ಆದರೆ “ಈ ಸಿನಿಮಾ ನಿಜವಾದ ಘಟನೆಗಳಿಂದ ಪ್ರೇರಿತವಾಗಿದೆ” ಎಂದು ಮಾತ್ರ ಚಿತ್ರತಂಡ ಹೇಳಿರುವುದನ್ನು ಗಮನಿಸಿದ ನ್ಯಾಯಾಲಯವು ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು.

ನ್ಯಾಯಮೂರ್ತಿ ಎನ್ ನಾಗರೇಶ್ ಮತ್ತು ನ್ಯಾಯಮೂರ್ತಿ ಸೋಫಿ ಥಾಮಸ್ ಅವರನ್ನೊಳಗೊಂಡ ವಿಭಾಗೀಯ ಪೀಠವು, “ಹಿಂದೂ ಪಾತ್ರಗಳನ್ನು ನಕಾರಾತ್ಮಕವಾಗಿ ಚಿತ್ರಿಸಿದ ಇತರ ಹಲವಾರು ಚಲನಚಿತ್ರಗಳಿವೆ” ಎಂದು ಹೇಳಿದೆ.

“ಹಿಂದೂ ಸನ್ಯಾಸಿಗಳನ್ನು ಕಳ್ಳಸಾಗಾಣಿಕೆದಾರರು ಮತ್ತು ಅತ್ಯಾಚಾರಿಗಳನ್ನಾಗಿ ತೋರಿಸಿರುವ ಅನೇಕ ಚಲನಚಿತ್ರಗಳಿವೆ” ಎಂದು ನ್ಯಾಯಮೂರ್ತಿ ನಾಗರೇಶ್ ಮೌಖಿಕವಾಗಿ ತಿಳಿಸಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ. “ಯಾರೂ ಏನನ್ನೂ ಹೇಳುವುದಿಲ್ಲ. ಇಂತಹ ಸಿನಿಮಾಗಳನ್ನು ನೀವು ಹಿಂದಿ ಮತ್ತು ಮಲಯಾಳಂನಲ್ಲಿ ನೋಡಿರಬಹುದು. ಕೇರಳದಲ್ಲಿ ನಾವು ಜಾತ್ಯತೀತರು” ಎಂದಿದ್ದಾರೆ.

ಆದಾಗ್ಯೂ, 32,000 ಮಹಿಳೆಯರ ಮತಾಂತರದ ವಿಷಯ ಹೇಗೆ ಬಂದಿದೆ ಎಂದು ನ್ಯಾಯಮೂರ್ತಿ ನಾಗರೇಶ್ ಚಿತ್ರದ ನಿರ್ಮಾಪಕರ ವಕೀಲರನ್ನು ಪ್ರಶ್ನಿಸಿದರು. “ಸಿನಿಮಾ ನಿರ್ಮಾಪಕರು ಪಡೆದಿರುವ ಮಾಹಿತಿಯನ್ನು ಇದು ಆಧರಿಸಿದೆ” ಎಂದು ಪ್ರತಿಕ್ರಿಯಿಸಿರುವ ವಕೀಲರು, “ಟ್ರೇಲರ್‌ನಲ್ಲಿ ಇದನ್ನು ತೆಗೆದುಹಾಕಲಾವುದು” ಎಂದು ಒಪ್ಪಿಕೊಂಡರು.

ಸಿನಿಮಾ ಬಿಡುಗಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಲು ನಿರಾಕರಿಸಿತು. “ಚಲನಚಿತ್ರದ ನಿರ್ಮಾಪಕರು ಈ ಸಿನಿಮಾಕ್ಕೆ ಹಣವನ್ನು ಸುರಿದಿದ್ದಾರೆ, ನಟರ ಪರಿಶ್ರಮದ ಬಗ್ಗೆಯೂ ಅರ್ಜಿದಾರರು ಯೋಚಿಸಬೇಕು” ಎಂದಿತು.

ಇದರ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಈ ಸಿನಿಮಾವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣಾ ನಿಮಿತ್ತ ಬಳ್ಳಾರಿಯಲ್ಲಿ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ದಕ್ಷಿಣ ರಾಜ್ಯದಲ್ಲಿ ಭಯೋತ್ಪಾದಕ ಪಿತೂರಿಗಳು ಇರುವುದನ್ನು ಕೇರಳ ಸ್ಟೋರಿ ಬಹಿರಂಗಪಡಿಸಿದೆ. ಭಯೋತ್ಪಾದಕ ಮನಸ್ಥಿತಿ ಹೊಂದಿರುವ ಜನರೊಂದಿಗೆ ಕಾಂಗ್ರೆಸ್ ರಹಸ್ಯವಾಗಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದರು.

‘ದಿ ಕೇರಳ ಸ್ಟೋರಿ’ಯನ್ನು ಮಧ್ಯಪ್ರದೇಶದಲ್ಲಿ ತೆರಿಗೆ ಮುಕ್ತಗೊಳಿಸಲಾಗಿದೆ. ಮೋದಿಯವರ ಹೇಳಿಕೆಗಳ ನಂತರ, ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಶನಿವಾರ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ಘೋಷಿಸಿತು ಎಂದು ಪಿಟಿಐ ವರದಿ ಮಾಡಿದೆ.

ಒಂದು ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಿದಾಗ, ಅದರ ಮೇಲೆ ಮನರಂಜನಾ ತೆರಿಗೆಯನ್ನು ವಿಧಿಸಲಾಗುವುದಿಲ್ಲ, ಹೀಗಾಗಿ ಟಿಕೆಟ್ ದರ ಕಡಿಮೆಯಾಗುತ್ತದೆ. ಐತಿಹಾಸಿಕ ವಿಷಯಗಳನ್ನು ಒಳಗೊಂಡ ಅಥವಾ ಸಾಮಾಜಿಕ ಕಾರಣಗಳನ್ನು ಒಳಗೊಂಡ ಸಿನಿಮಾಗಳಿಗೆ ಮಾತ್ರ ತೆರಿಗೆ ವಿನಾಯಿತಿಯನ್ನು ಸರ್ಕಾರಗಳು ಸಾಮಾನ್ಯವಾಗಿ ನೀಡುತ್ತವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರೊಪೊಗಾಂಡ ಸಿನಿಮಾಗಳಿಗೆ ತೆರಿಗೆ ವಿನಾಯಿತಿ ನೀಡಿರುವ ಉದಾಹರಣೆಗಳಿವೆ.

ಇದನ್ನೂ ಓದಿರಿ: ಚುನಾವಣಾ ಪ್ರಚಾರದಲ್ಲಿ ಕೋಮುದ್ವೇಷ ಭಾಷಣ: ಅಡ್ಡಂಡ ಕಾರ್ಯಪ್ಪ ವಿರುದ್ಧ ಎಫ್‌ಐಆರ್‌

“ನಾವು ಈಗಾಗಲೇ ಮಧ್ಯಪ್ರದೇಶದಲ್ಲಿ ಧಾರ್ಮಿಕ ಮತಾಂತರದ ವಿರುದ್ಧ ಕಾನೂನನ್ನು ಮಾಡಿದ್ದೇವೆ” ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪಿಟಿಐಗೆ ತಿಳಿಸಿದ್ದಾರೆ. “ಈ ಚಿತ್ರವು ಜಾಗೃತಿ ಮೂಡಿಸುತ್ತದೆ, ಪ್ರತಿಯೊಬ್ಬರೂ ಈ ಚಿತ್ರವನ್ನು ನೋಡಬೇಕು. ಪೋಷಕರು, ಮಕ್ಕಳು ಮತ್ತು ಹೆಣ್ಣುಮಕ್ಕಳು ಇದನ್ನು ವೀಕ್ಷಿಸಬೇಕು” ಎಂದು ಮನವಿ ಮಾಡಿದ್ದಾರೆ.

‘ಲವ್ ಜಿಹಾದ್’, ಧಾರ್ಮಿಕ ಮತಾಂತರ ಮತ್ತು ಭಯೋತ್ಪಾದನೆಯ ಪಿತೂರಿಗಳನ್ನು ಸಿನಿಮಾ ಬಯಲಿಗೆಳೆಯುತ್ತದೆ ಎಂದು ಚೌಹಾಣ್ ಹೇಳಿದ್ದಾರೆ.

‘ಲವ್ ಜಿಹಾದ್’ ಎಂಬುದು ಹಿಂದುತ್ವವಾದಿಗಳು ಸೃಷ್ಟಿಸಿರುವ ಪಿತೂರಿ ಸಿದ್ಧಾಂತವಾಗಿದೆ. ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮುಸ್ಲಿಂ ಪುರುಷರು ಪ್ರೇಮದೊಳಗೆ ಸಿಲುಕಿಸುತ್ತಾರೆಂಬುದು ಈ ಪಿತೂರಿ ಸಿದ್ಧಾಂತದ ಸಾರಾಂಶವಾಗಿದೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಏಪ್ರಿಲ್ 30 ರಂದು ಪ್ರತಿಕ್ರಿಯಿಸಿ, ಈ ಸಿನಿಮಾದ ಮೂಲಕ ಕೇರಳ ರಾಜ್ಯವನ್ನು ಧಾರ್ಮಿಕ ಉಗ್ರವಾದದ ಕೇಂದ್ರವೆಂದು ಬಿಂಬಿಸಲು ಆರ್‌ಎಸ್‌ಎಸ್ ಯತ್ನಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...