Homeಮುಖಪುಟ32,000 ಮಹಿಳೆಯರು ಐಎಸ್‌ಐಎಸ್ ಸೇರಿದ್ದಾರೆಂಬ ಟೀಸರ್‌ ತೆರವು ಮಾಡಲಾಗುವುದು: ‘ದಿ ಕೇರಳ ಸ್ಟೋರಿ’ ನಿರ್ಮಾಪಕ

32,000 ಮಹಿಳೆಯರು ಐಎಸ್‌ಐಎಸ್ ಸೇರಿದ್ದಾರೆಂಬ ಟೀಸರ್‌ ತೆರವು ಮಾಡಲಾಗುವುದು: ‘ದಿ ಕೇರಳ ಸ್ಟೋರಿ’ ನಿರ್ಮಾಪಕ

- Advertisement -
- Advertisement -

ಕೇರಳದಲ್ಲಿ 32,000ಕ್ಕೂ ಹೆಚ್ಚು ಮಹಿಳೆಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗಿದೆ ಮತ್ತು ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್‌ಗೆ (ಐಎಸ್‌ಐಎಸ್‌) ಸೇರಿಸಿಕೊಳ್ಳಲಾಗಿದೆ ಎಂದು ಪ್ರತಿಪಾದಿಸಿರುವ ಟೀಸರ್ ಅನ್ನು ತೆಗೆದುಹಾಕುವುದಾಗಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿರ್ಮಾಕರು ಶುಕ್ರವಾರ ಕೇರಳ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

ನವೆಂಬರ್‌ನಲ್ಲಿ ಟೀಸರ್‌ ಬಿಡುಗಡೆಯಾಗಿತ್ತು. ಸುಮಾರು 32,000 ಮಹಿಳೆಯರನ್ನು ಮತಾಂತರಿಸಿ, ಇಸ್ಲಾಮಿಕ್ ಸ್ಟೇಟ್‌ಗೆ ಸೇರಿಸಲಾಗಿದೆ ಎಂದು ಟೀಸರ್‌ನಲ್ಲಿ ಪ್ರತಿಪಾದಿಸಲಾಯಿತು. ಆದರೆ ಸಾಕ್ಷ್ಯವನ್ನು ನೀಡಲು ಚಿತ್ರತಂಡ ವಿಫಲವಾಗಿದೆ. “ಮೂವರು ಯುವತಿಯರ ನೈಜ ಕಥೆ ಇದಾಗಿದೆ” ಎಂದು ಚಿತ್ರದ ಟ್ರೈಲರ್‌ನಲ್ಲಿ ಬಿಂಬಿಸಲಾಗಿದೆ.

ಸುದೀಪ್ತೋ ಸೇನ್ ನಿರ್ದೇಶನದ ‘ಕೇರಳ ಸ್ಟೋರಿ’ ಶುಕ್ರವಾರ ಬಿಡುಗಡೆಯಾಗಿದೆ.

ಈ ಸಿನಿಮಾ ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಶುಕ್ರವಾರ ಹೈಕೋರ್ಟ್‌ನಲ್ಲಿ ನಡೆಯಿತು. ಚಿತ್ರದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಮಾತುಗಳನ್ನು ಪ್ರಚಾರ ಮಾಡಲಾಗಿದೆ ಎಂದು ಅರ್ಜಿದಾರರು ವಾದಿಸಿದರು. ಆದರೆ “ಈ ಸಿನಿಮಾ ನಿಜವಾದ ಘಟನೆಗಳಿಂದ ಪ್ರೇರಿತವಾಗಿದೆ” ಎಂದು ಮಾತ್ರ ಚಿತ್ರತಂಡ ಹೇಳಿರುವುದನ್ನು ಗಮನಿಸಿದ ನ್ಯಾಯಾಲಯವು ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು.

ನ್ಯಾಯಮೂರ್ತಿ ಎನ್ ನಾಗರೇಶ್ ಮತ್ತು ನ್ಯಾಯಮೂರ್ತಿ ಸೋಫಿ ಥಾಮಸ್ ಅವರನ್ನೊಳಗೊಂಡ ವಿಭಾಗೀಯ ಪೀಠವು, “ಹಿಂದೂ ಪಾತ್ರಗಳನ್ನು ನಕಾರಾತ್ಮಕವಾಗಿ ಚಿತ್ರಿಸಿದ ಇತರ ಹಲವಾರು ಚಲನಚಿತ್ರಗಳಿವೆ” ಎಂದು ಹೇಳಿದೆ.

“ಹಿಂದೂ ಸನ್ಯಾಸಿಗಳನ್ನು ಕಳ್ಳಸಾಗಾಣಿಕೆದಾರರು ಮತ್ತು ಅತ್ಯಾಚಾರಿಗಳನ್ನಾಗಿ ತೋರಿಸಿರುವ ಅನೇಕ ಚಲನಚಿತ್ರಗಳಿವೆ” ಎಂದು ನ್ಯಾಯಮೂರ್ತಿ ನಾಗರೇಶ್ ಮೌಖಿಕವಾಗಿ ತಿಳಿಸಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ. “ಯಾರೂ ಏನನ್ನೂ ಹೇಳುವುದಿಲ್ಲ. ಇಂತಹ ಸಿನಿಮಾಗಳನ್ನು ನೀವು ಹಿಂದಿ ಮತ್ತು ಮಲಯಾಳಂನಲ್ಲಿ ನೋಡಿರಬಹುದು. ಕೇರಳದಲ್ಲಿ ನಾವು ಜಾತ್ಯತೀತರು” ಎಂದಿದ್ದಾರೆ.

ಆದಾಗ್ಯೂ, 32,000 ಮಹಿಳೆಯರ ಮತಾಂತರದ ವಿಷಯ ಹೇಗೆ ಬಂದಿದೆ ಎಂದು ನ್ಯಾಯಮೂರ್ತಿ ನಾಗರೇಶ್ ಚಿತ್ರದ ನಿರ್ಮಾಪಕರ ವಕೀಲರನ್ನು ಪ್ರಶ್ನಿಸಿದರು. “ಸಿನಿಮಾ ನಿರ್ಮಾಪಕರು ಪಡೆದಿರುವ ಮಾಹಿತಿಯನ್ನು ಇದು ಆಧರಿಸಿದೆ” ಎಂದು ಪ್ರತಿಕ್ರಿಯಿಸಿರುವ ವಕೀಲರು, “ಟ್ರೇಲರ್‌ನಲ್ಲಿ ಇದನ್ನು ತೆಗೆದುಹಾಕಲಾವುದು” ಎಂದು ಒಪ್ಪಿಕೊಂಡರು.

ಸಿನಿಮಾ ಬಿಡುಗಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಲು ನಿರಾಕರಿಸಿತು. “ಚಲನಚಿತ್ರದ ನಿರ್ಮಾಪಕರು ಈ ಸಿನಿಮಾಕ್ಕೆ ಹಣವನ್ನು ಸುರಿದಿದ್ದಾರೆ, ನಟರ ಪರಿಶ್ರಮದ ಬಗ್ಗೆಯೂ ಅರ್ಜಿದಾರರು ಯೋಚಿಸಬೇಕು” ಎಂದಿತು.

ಇದರ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಈ ಸಿನಿಮಾವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣಾ ನಿಮಿತ್ತ ಬಳ್ಳಾರಿಯಲ್ಲಿ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ದಕ್ಷಿಣ ರಾಜ್ಯದಲ್ಲಿ ಭಯೋತ್ಪಾದಕ ಪಿತೂರಿಗಳು ಇರುವುದನ್ನು ಕೇರಳ ಸ್ಟೋರಿ ಬಹಿರಂಗಪಡಿಸಿದೆ. ಭಯೋತ್ಪಾದಕ ಮನಸ್ಥಿತಿ ಹೊಂದಿರುವ ಜನರೊಂದಿಗೆ ಕಾಂಗ್ರೆಸ್ ರಹಸ್ಯವಾಗಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದರು.

‘ದಿ ಕೇರಳ ಸ್ಟೋರಿ’ಯನ್ನು ಮಧ್ಯಪ್ರದೇಶದಲ್ಲಿ ತೆರಿಗೆ ಮುಕ್ತಗೊಳಿಸಲಾಗಿದೆ. ಮೋದಿಯವರ ಹೇಳಿಕೆಗಳ ನಂತರ, ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಶನಿವಾರ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ಘೋಷಿಸಿತು ಎಂದು ಪಿಟಿಐ ವರದಿ ಮಾಡಿದೆ.

ಒಂದು ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಿದಾಗ, ಅದರ ಮೇಲೆ ಮನರಂಜನಾ ತೆರಿಗೆಯನ್ನು ವಿಧಿಸಲಾಗುವುದಿಲ್ಲ, ಹೀಗಾಗಿ ಟಿಕೆಟ್ ದರ ಕಡಿಮೆಯಾಗುತ್ತದೆ. ಐತಿಹಾಸಿಕ ವಿಷಯಗಳನ್ನು ಒಳಗೊಂಡ ಅಥವಾ ಸಾಮಾಜಿಕ ಕಾರಣಗಳನ್ನು ಒಳಗೊಂಡ ಸಿನಿಮಾಗಳಿಗೆ ಮಾತ್ರ ತೆರಿಗೆ ವಿನಾಯಿತಿಯನ್ನು ಸರ್ಕಾರಗಳು ಸಾಮಾನ್ಯವಾಗಿ ನೀಡುತ್ತವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರೊಪೊಗಾಂಡ ಸಿನಿಮಾಗಳಿಗೆ ತೆರಿಗೆ ವಿನಾಯಿತಿ ನೀಡಿರುವ ಉದಾಹರಣೆಗಳಿವೆ.

ಇದನ್ನೂ ಓದಿರಿ: ಚುನಾವಣಾ ಪ್ರಚಾರದಲ್ಲಿ ಕೋಮುದ್ವೇಷ ಭಾಷಣ: ಅಡ್ಡಂಡ ಕಾರ್ಯಪ್ಪ ವಿರುದ್ಧ ಎಫ್‌ಐಆರ್‌

“ನಾವು ಈಗಾಗಲೇ ಮಧ್ಯಪ್ರದೇಶದಲ್ಲಿ ಧಾರ್ಮಿಕ ಮತಾಂತರದ ವಿರುದ್ಧ ಕಾನೂನನ್ನು ಮಾಡಿದ್ದೇವೆ” ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪಿಟಿಐಗೆ ತಿಳಿಸಿದ್ದಾರೆ. “ಈ ಚಿತ್ರವು ಜಾಗೃತಿ ಮೂಡಿಸುತ್ತದೆ, ಪ್ರತಿಯೊಬ್ಬರೂ ಈ ಚಿತ್ರವನ್ನು ನೋಡಬೇಕು. ಪೋಷಕರು, ಮಕ್ಕಳು ಮತ್ತು ಹೆಣ್ಣುಮಕ್ಕಳು ಇದನ್ನು ವೀಕ್ಷಿಸಬೇಕು” ಎಂದು ಮನವಿ ಮಾಡಿದ್ದಾರೆ.

‘ಲವ್ ಜಿಹಾದ್’, ಧಾರ್ಮಿಕ ಮತಾಂತರ ಮತ್ತು ಭಯೋತ್ಪಾದನೆಯ ಪಿತೂರಿಗಳನ್ನು ಸಿನಿಮಾ ಬಯಲಿಗೆಳೆಯುತ್ತದೆ ಎಂದು ಚೌಹಾಣ್ ಹೇಳಿದ್ದಾರೆ.

‘ಲವ್ ಜಿಹಾದ್’ ಎಂಬುದು ಹಿಂದುತ್ವವಾದಿಗಳು ಸೃಷ್ಟಿಸಿರುವ ಪಿತೂರಿ ಸಿದ್ಧಾಂತವಾಗಿದೆ. ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮುಸ್ಲಿಂ ಪುರುಷರು ಪ್ರೇಮದೊಳಗೆ ಸಿಲುಕಿಸುತ್ತಾರೆಂಬುದು ಈ ಪಿತೂರಿ ಸಿದ್ಧಾಂತದ ಸಾರಾಂಶವಾಗಿದೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಏಪ್ರಿಲ್ 30 ರಂದು ಪ್ರತಿಕ್ರಿಯಿಸಿ, ಈ ಸಿನಿಮಾದ ಮೂಲಕ ಕೇರಳ ರಾಜ್ಯವನ್ನು ಧಾರ್ಮಿಕ ಉಗ್ರವಾದದ ಕೇಂದ್ರವೆಂದು ಬಿಂಬಿಸಲು ಆರ್‌ಎಸ್‌ಎಸ್ ಯತ್ನಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...