Homeಮುಖಪುಟ32,000 ಮಹಿಳೆಯರು ಐಎಸ್‌ಐಎಸ್ ಸೇರಿದ್ದಾರೆಂಬ ಟೀಸರ್‌ ತೆರವು ಮಾಡಲಾಗುವುದು: ‘ದಿ ಕೇರಳ ಸ್ಟೋರಿ’ ನಿರ್ಮಾಪಕ

32,000 ಮಹಿಳೆಯರು ಐಎಸ್‌ಐಎಸ್ ಸೇರಿದ್ದಾರೆಂಬ ಟೀಸರ್‌ ತೆರವು ಮಾಡಲಾಗುವುದು: ‘ದಿ ಕೇರಳ ಸ್ಟೋರಿ’ ನಿರ್ಮಾಪಕ

- Advertisement -
- Advertisement -

ಕೇರಳದಲ್ಲಿ 32,000ಕ್ಕೂ ಹೆಚ್ಚು ಮಹಿಳೆಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗಿದೆ ಮತ್ತು ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್‌ಗೆ (ಐಎಸ್‌ಐಎಸ್‌) ಸೇರಿಸಿಕೊಳ್ಳಲಾಗಿದೆ ಎಂದು ಪ್ರತಿಪಾದಿಸಿರುವ ಟೀಸರ್ ಅನ್ನು ತೆಗೆದುಹಾಕುವುದಾಗಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿರ್ಮಾಕರು ಶುಕ್ರವಾರ ಕೇರಳ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

ನವೆಂಬರ್‌ನಲ್ಲಿ ಟೀಸರ್‌ ಬಿಡುಗಡೆಯಾಗಿತ್ತು. ಸುಮಾರು 32,000 ಮಹಿಳೆಯರನ್ನು ಮತಾಂತರಿಸಿ, ಇಸ್ಲಾಮಿಕ್ ಸ್ಟೇಟ್‌ಗೆ ಸೇರಿಸಲಾಗಿದೆ ಎಂದು ಟೀಸರ್‌ನಲ್ಲಿ ಪ್ರತಿಪಾದಿಸಲಾಯಿತು. ಆದರೆ ಸಾಕ್ಷ್ಯವನ್ನು ನೀಡಲು ಚಿತ್ರತಂಡ ವಿಫಲವಾಗಿದೆ. “ಮೂವರು ಯುವತಿಯರ ನೈಜ ಕಥೆ ಇದಾಗಿದೆ” ಎಂದು ಚಿತ್ರದ ಟ್ರೈಲರ್‌ನಲ್ಲಿ ಬಿಂಬಿಸಲಾಗಿದೆ.

ಸುದೀಪ್ತೋ ಸೇನ್ ನಿರ್ದೇಶನದ ‘ಕೇರಳ ಸ್ಟೋರಿ’ ಶುಕ್ರವಾರ ಬಿಡುಗಡೆಯಾಗಿದೆ.

ಈ ಸಿನಿಮಾ ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಶುಕ್ರವಾರ ಹೈಕೋರ್ಟ್‌ನಲ್ಲಿ ನಡೆಯಿತು. ಚಿತ್ರದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಮಾತುಗಳನ್ನು ಪ್ರಚಾರ ಮಾಡಲಾಗಿದೆ ಎಂದು ಅರ್ಜಿದಾರರು ವಾದಿಸಿದರು. ಆದರೆ “ಈ ಸಿನಿಮಾ ನಿಜವಾದ ಘಟನೆಗಳಿಂದ ಪ್ರೇರಿತವಾಗಿದೆ” ಎಂದು ಮಾತ್ರ ಚಿತ್ರತಂಡ ಹೇಳಿರುವುದನ್ನು ಗಮನಿಸಿದ ನ್ಯಾಯಾಲಯವು ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು.

ನ್ಯಾಯಮೂರ್ತಿ ಎನ್ ನಾಗರೇಶ್ ಮತ್ತು ನ್ಯಾಯಮೂರ್ತಿ ಸೋಫಿ ಥಾಮಸ್ ಅವರನ್ನೊಳಗೊಂಡ ವಿಭಾಗೀಯ ಪೀಠವು, “ಹಿಂದೂ ಪಾತ್ರಗಳನ್ನು ನಕಾರಾತ್ಮಕವಾಗಿ ಚಿತ್ರಿಸಿದ ಇತರ ಹಲವಾರು ಚಲನಚಿತ್ರಗಳಿವೆ” ಎಂದು ಹೇಳಿದೆ.

“ಹಿಂದೂ ಸನ್ಯಾಸಿಗಳನ್ನು ಕಳ್ಳಸಾಗಾಣಿಕೆದಾರರು ಮತ್ತು ಅತ್ಯಾಚಾರಿಗಳನ್ನಾಗಿ ತೋರಿಸಿರುವ ಅನೇಕ ಚಲನಚಿತ್ರಗಳಿವೆ” ಎಂದು ನ್ಯಾಯಮೂರ್ತಿ ನಾಗರೇಶ್ ಮೌಖಿಕವಾಗಿ ತಿಳಿಸಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ. “ಯಾರೂ ಏನನ್ನೂ ಹೇಳುವುದಿಲ್ಲ. ಇಂತಹ ಸಿನಿಮಾಗಳನ್ನು ನೀವು ಹಿಂದಿ ಮತ್ತು ಮಲಯಾಳಂನಲ್ಲಿ ನೋಡಿರಬಹುದು. ಕೇರಳದಲ್ಲಿ ನಾವು ಜಾತ್ಯತೀತರು” ಎಂದಿದ್ದಾರೆ.

ಆದಾಗ್ಯೂ, 32,000 ಮಹಿಳೆಯರ ಮತಾಂತರದ ವಿಷಯ ಹೇಗೆ ಬಂದಿದೆ ಎಂದು ನ್ಯಾಯಮೂರ್ತಿ ನಾಗರೇಶ್ ಚಿತ್ರದ ನಿರ್ಮಾಪಕರ ವಕೀಲರನ್ನು ಪ್ರಶ್ನಿಸಿದರು. “ಸಿನಿಮಾ ನಿರ್ಮಾಪಕರು ಪಡೆದಿರುವ ಮಾಹಿತಿಯನ್ನು ಇದು ಆಧರಿಸಿದೆ” ಎಂದು ಪ್ರತಿಕ್ರಿಯಿಸಿರುವ ವಕೀಲರು, “ಟ್ರೇಲರ್‌ನಲ್ಲಿ ಇದನ್ನು ತೆಗೆದುಹಾಕಲಾವುದು” ಎಂದು ಒಪ್ಪಿಕೊಂಡರು.

ಸಿನಿಮಾ ಬಿಡುಗಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಲು ನಿರಾಕರಿಸಿತು. “ಚಲನಚಿತ್ರದ ನಿರ್ಮಾಪಕರು ಈ ಸಿನಿಮಾಕ್ಕೆ ಹಣವನ್ನು ಸುರಿದಿದ್ದಾರೆ, ನಟರ ಪರಿಶ್ರಮದ ಬಗ್ಗೆಯೂ ಅರ್ಜಿದಾರರು ಯೋಚಿಸಬೇಕು” ಎಂದಿತು.

ಇದರ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಈ ಸಿನಿಮಾವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣಾ ನಿಮಿತ್ತ ಬಳ್ಳಾರಿಯಲ್ಲಿ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ದಕ್ಷಿಣ ರಾಜ್ಯದಲ್ಲಿ ಭಯೋತ್ಪಾದಕ ಪಿತೂರಿಗಳು ಇರುವುದನ್ನು ಕೇರಳ ಸ್ಟೋರಿ ಬಹಿರಂಗಪಡಿಸಿದೆ. ಭಯೋತ್ಪಾದಕ ಮನಸ್ಥಿತಿ ಹೊಂದಿರುವ ಜನರೊಂದಿಗೆ ಕಾಂಗ್ರೆಸ್ ರಹಸ್ಯವಾಗಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದರು.

‘ದಿ ಕೇರಳ ಸ್ಟೋರಿ’ಯನ್ನು ಮಧ್ಯಪ್ರದೇಶದಲ್ಲಿ ತೆರಿಗೆ ಮುಕ್ತಗೊಳಿಸಲಾಗಿದೆ. ಮೋದಿಯವರ ಹೇಳಿಕೆಗಳ ನಂತರ, ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಶನಿವಾರ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ಘೋಷಿಸಿತು ಎಂದು ಪಿಟಿಐ ವರದಿ ಮಾಡಿದೆ.

ಒಂದು ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಿದಾಗ, ಅದರ ಮೇಲೆ ಮನರಂಜನಾ ತೆರಿಗೆಯನ್ನು ವಿಧಿಸಲಾಗುವುದಿಲ್ಲ, ಹೀಗಾಗಿ ಟಿಕೆಟ್ ದರ ಕಡಿಮೆಯಾಗುತ್ತದೆ. ಐತಿಹಾಸಿಕ ವಿಷಯಗಳನ್ನು ಒಳಗೊಂಡ ಅಥವಾ ಸಾಮಾಜಿಕ ಕಾರಣಗಳನ್ನು ಒಳಗೊಂಡ ಸಿನಿಮಾಗಳಿಗೆ ಮಾತ್ರ ತೆರಿಗೆ ವಿನಾಯಿತಿಯನ್ನು ಸರ್ಕಾರಗಳು ಸಾಮಾನ್ಯವಾಗಿ ನೀಡುತ್ತವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರೊಪೊಗಾಂಡ ಸಿನಿಮಾಗಳಿಗೆ ತೆರಿಗೆ ವಿನಾಯಿತಿ ನೀಡಿರುವ ಉದಾಹರಣೆಗಳಿವೆ.

ಇದನ್ನೂ ಓದಿರಿ: ಚುನಾವಣಾ ಪ್ರಚಾರದಲ್ಲಿ ಕೋಮುದ್ವೇಷ ಭಾಷಣ: ಅಡ್ಡಂಡ ಕಾರ್ಯಪ್ಪ ವಿರುದ್ಧ ಎಫ್‌ಐಆರ್‌

“ನಾವು ಈಗಾಗಲೇ ಮಧ್ಯಪ್ರದೇಶದಲ್ಲಿ ಧಾರ್ಮಿಕ ಮತಾಂತರದ ವಿರುದ್ಧ ಕಾನೂನನ್ನು ಮಾಡಿದ್ದೇವೆ” ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪಿಟಿಐಗೆ ತಿಳಿಸಿದ್ದಾರೆ. “ಈ ಚಿತ್ರವು ಜಾಗೃತಿ ಮೂಡಿಸುತ್ತದೆ, ಪ್ರತಿಯೊಬ್ಬರೂ ಈ ಚಿತ್ರವನ್ನು ನೋಡಬೇಕು. ಪೋಷಕರು, ಮಕ್ಕಳು ಮತ್ತು ಹೆಣ್ಣುಮಕ್ಕಳು ಇದನ್ನು ವೀಕ್ಷಿಸಬೇಕು” ಎಂದು ಮನವಿ ಮಾಡಿದ್ದಾರೆ.

‘ಲವ್ ಜಿಹಾದ್’, ಧಾರ್ಮಿಕ ಮತಾಂತರ ಮತ್ತು ಭಯೋತ್ಪಾದನೆಯ ಪಿತೂರಿಗಳನ್ನು ಸಿನಿಮಾ ಬಯಲಿಗೆಳೆಯುತ್ತದೆ ಎಂದು ಚೌಹಾಣ್ ಹೇಳಿದ್ದಾರೆ.

‘ಲವ್ ಜಿಹಾದ್’ ಎಂಬುದು ಹಿಂದುತ್ವವಾದಿಗಳು ಸೃಷ್ಟಿಸಿರುವ ಪಿತೂರಿ ಸಿದ್ಧಾಂತವಾಗಿದೆ. ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮುಸ್ಲಿಂ ಪುರುಷರು ಪ್ರೇಮದೊಳಗೆ ಸಿಲುಕಿಸುತ್ತಾರೆಂಬುದು ಈ ಪಿತೂರಿ ಸಿದ್ಧಾಂತದ ಸಾರಾಂಶವಾಗಿದೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಏಪ್ರಿಲ್ 30 ರಂದು ಪ್ರತಿಕ್ರಿಯಿಸಿ, ಈ ಸಿನಿಮಾದ ಮೂಲಕ ಕೇರಳ ರಾಜ್ಯವನ್ನು ಧಾರ್ಮಿಕ ಉಗ್ರವಾದದ ಕೇಂದ್ರವೆಂದು ಬಿಂಬಿಸಲು ಆರ್‌ಎಸ್‌ಎಸ್ ಯತ್ನಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...