Homeಮುಖಪುಟಟೀಸರ್ ಬಿಡುಗಡೆ: ನವೆಂಬರ್ 02 ಕ್ಕೆ ಅಮೆಜಾನ್‌ ಪ್ರೈಮ್‌ನಲ್ಲಿ ಜೈಭೀಮ್

ಟೀಸರ್ ಬಿಡುಗಡೆ: ನವೆಂಬರ್ 02 ಕ್ಕೆ ಅಮೆಜಾನ್‌ ಪ್ರೈಮ್‌ನಲ್ಲಿ ಜೈಭೀಮ್

ಕೋರ್ಟ್ ರೂಮ್‌ ಡ್ರಾಮಾ ಎಂದೇ ಗುರುತಿಸಲಾಗಿರುವ ‘ಜೈ ಭೀಮ್‌’ ಬಿಡುಗಡೆಗೂ ಮುನ್ನವೇ ಸಾಕಷ್ಟು ಗಮನ ಸೆಳೆದಿದೆ.

- Advertisement -
- Advertisement -

ತಮಿಳಿನ ಖ್ಯಾತ ನಟ ಸೂರಿಯಾ ಅಭಿನಯದ ಹಾಗೂ ಅವರ ನಿರ್ಮಾಣ ಸಂಸ್ಥೆಯಿಂದಲೇ ಚಿತ್ರೀಕರಿಸಿಲಾಗಿರುವ ಬಹುನಿರೀಕ್ಷಿತ ‘ಜೈ ಭೀಮ್‌’ ಸಿನಿಮಾ ನವೆಂಬರ್ 02 ರಂದು ಅಮೆಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ. ಜೈಭೀಮ್ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಸಾಕಷ್ಟು ಕೂತುಹಲ ಹುಟ್ಟಿಸಿದೆ.

ಸಾರ್ ಅವರ ಜಾತಿಯಲ್ಲಿ ಕಳ್ಳರು ಸಹಜ ಸಾರ್…!
ಕಳ್ಳತನನಕ್ಕೂ ಜಾತಿ ಇದೆಯಾ…? ಹಾಗೆ ಇದ್ದರೆ ಇಂದು ಅತಿದೊಡ್ಡ ಕಳ್ಳರೆಲ್ಲಾ ನಮ್ಮ ಜಾತಿಗಳಲ್ಲೆ ಇದ್ದಾರಲ್ವಾ…!”
ಒಬ್ಬ ಆದಿವಾಸಿ ಮಹಿಳೆಯನ್ನು ಹೈಕೋರ್ಟ್ ತನಕ ಬರಲು ಬಿಟ್ಟಿದ್ದಿಯಾ, ನಾಚಿಕೆ ಆಗೋಲ್ವಾ ನಿನಗೆ, ನಿನಗ್ಯಾಕಯ್ಯ ಪೋಲಿಸ್ ಉದ್ಯೋಗ…!
“ನಾವು ಮೂವರು ಪೋಲಿಸರ ವಿರುದ್ಧ ಪ್ರಕರಣ ದಾಖಲಿಸುತ್ತಿಲ್ಲ, ಪ್ರಭುತ್ವದ ವಿರುದ್ಧ ಹೋರಾಟಕ್ಕೆ ಇಳಿಯುತ್ತಿದ್ದೇವೆ…!” ಈ ರೀತಿಯ ಸಂಭಾಷಣೆಗಳಿರುವ ಟೀಸರ್ ಸಾಕಷ್ಟು ಗಮನ ಸೆಳೆದಿದೆ.

 

ಕೋರ್ಟ್ ರೂಮ್‌ ಡ್ರಾಮಾ ಎಂದೇ ಗುರುತಿಸಲಾಗಿರುವ ‘ಜೈ ಭೀಮ್‌’ ಬಿಡುಗಡೆಗೂ ಮುನ್ನವೇ ಸಾಕಷ್ಟು ಗಮನ ಸೆಳೆದಿದೆ. ಆದಿವಾಸಿ ಮಹಿಳೆಯೊಬ್ಬಳ ನ್ಯಾಯಕ್ಕಾಗಿನ ಹೋರಾಟವು ಟ್ರೇಲರ್‌ನಲ್ಲಿ ಕಂಡುಬಂದಿದೆ.

ಗರ್ಭಿಣಿ ಮಹಿಳೆಯೊಂದಿಗೆ ಮಗು ಹಾಗೂ ವಕೀಲರಾಗಿ ಸೂರ್ಯ ಕಾಣಿಸಿಕೊಂಡಿರುವ ಪೋಸ್ಟರ್‌ಅನ್ನು ಹಂಚಿಕೊಳ್ಳಲಾಗಿದೆ. ಜೈ ಭೀಮ್‌ ಸಿನಿಮಾವನ್ನು ಜ್ಞಾನವೇಲ್‌ ನಿರ್ದೇಶಿಸಿದ್ದು, 2ಡಿ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಸೂರಿಯಾ ಹಾಗೂ ಜ್ಯೋತಿಕ ನಿರ್ಮಾಣ ಮಾಡಿದ್ದಾರೆ. ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಟ ಮಾಡುವ ವಕೀಲನಾಗಿ ಸೂರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

‘ನ್ಯಾಯದ ಅನ್ವೇಷಣೆಯಲ್ಲಿನ ಧೈರ್ಯ ಮತ್ತು ನಂಬಿಕೆಯ ಈ ಕಥೆಯನ್ನು ತೆರೆಗೆ ತರಲು ಹೆಮ್ಮೆಯಾಗುತ್ತಿದೆ’ ಎಂದು ಸೂರಿಯಾ ತಮ್ಮ ಟ್ವೀಟರ್‌ ಖಾತೆಯಲ್ಲಿ ಈ ಹಿಂದೆ ಬರೆದುಕೊಂಡಿದ್ದರು. ‘ಸೂರರೈ ಪೋಟ್ರು’ ಯಶಸ್ಸಿನ ಬಳಿಕ ಬಿಡುಗಡೆಯಾಗುತ್ತಿರುವ ಸೂರಿಯಾ ಅಭಿನಯದ ಸಿನಿಮಾ ಇದಾಗಿದೆ.

‘ಕರ್ಣನ್‌’ ಖ್ಯಾತಿಯ ರಜಿಶಾ ವಿಜಯನ್‌ ಪ್ರಧಾನ ಮಹಿಳಾ ಪಾತ್ರದಲ್ಲಿ ಅಭಿನಯಿಸಿದ್ದು, ಪ್ರಕಾಶ್‌ ರಾಜ್‌, ರಾವ್‌ ರಮೇಶ್‌ ಮತ್ತು ಲಿಜೋ ಮೋಲ್‌ ಜೋಸ್‌ ಥರದ ಪ್ರಮುಖ ಕಲಾವಿದರು ಈ ಚಿತ್ರದಲ್ಲಿದ್ದಾರೆ. ‘ಜೈ ಭೀಮ್‌’ ಸಿನಿಮಾ ತಮಿಳು ಮತ್ತು ತೆಲಗು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಸೀನ್‌ ರೋಲ್ಡನ್‌ ಅವರ ಸಂಗೀತ, ಎಸ್‌.ಆರ್‌.ಖದೀರ್‌ ಅವರ ಸಿನಿಮಾಟೋಗ್ರಫಿ, ಪಿಲೋಮಿನ್‌ ರಾಜ್‌ ಅವರ ಸಂಕಲನ ಈ ಸಿನಿಮಾಕ್ಕಿದೆ.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...