Homeಮುಖಪುಟಟೀಸರ್ ಬಿಡುಗಡೆ: ನವೆಂಬರ್ 02 ಕ್ಕೆ ಅಮೆಜಾನ್‌ ಪ್ರೈಮ್‌ನಲ್ಲಿ ಜೈಭೀಮ್

ಟೀಸರ್ ಬಿಡುಗಡೆ: ನವೆಂಬರ್ 02 ಕ್ಕೆ ಅಮೆಜಾನ್‌ ಪ್ರೈಮ್‌ನಲ್ಲಿ ಜೈಭೀಮ್

ಕೋರ್ಟ್ ರೂಮ್‌ ಡ್ರಾಮಾ ಎಂದೇ ಗುರುತಿಸಲಾಗಿರುವ ‘ಜೈ ಭೀಮ್‌’ ಬಿಡುಗಡೆಗೂ ಮುನ್ನವೇ ಸಾಕಷ್ಟು ಗಮನ ಸೆಳೆದಿದೆ.

- Advertisement -
- Advertisement -

ತಮಿಳಿನ ಖ್ಯಾತ ನಟ ಸೂರಿಯಾ ಅಭಿನಯದ ಹಾಗೂ ಅವರ ನಿರ್ಮಾಣ ಸಂಸ್ಥೆಯಿಂದಲೇ ಚಿತ್ರೀಕರಿಸಿಲಾಗಿರುವ ಬಹುನಿರೀಕ್ಷಿತ ‘ಜೈ ಭೀಮ್‌’ ಸಿನಿಮಾ ನವೆಂಬರ್ 02 ರಂದು ಅಮೆಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ. ಜೈಭೀಮ್ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಸಾಕಷ್ಟು ಕೂತುಹಲ ಹುಟ್ಟಿಸಿದೆ.

ಸಾರ್ ಅವರ ಜಾತಿಯಲ್ಲಿ ಕಳ್ಳರು ಸಹಜ ಸಾರ್…!
ಕಳ್ಳತನನಕ್ಕೂ ಜಾತಿ ಇದೆಯಾ…? ಹಾಗೆ ಇದ್ದರೆ ಇಂದು ಅತಿದೊಡ್ಡ ಕಳ್ಳರೆಲ್ಲಾ ನಮ್ಮ ಜಾತಿಗಳಲ್ಲೆ ಇದ್ದಾರಲ್ವಾ…!”
ಒಬ್ಬ ಆದಿವಾಸಿ ಮಹಿಳೆಯನ್ನು ಹೈಕೋರ್ಟ್ ತನಕ ಬರಲು ಬಿಟ್ಟಿದ್ದಿಯಾ, ನಾಚಿಕೆ ಆಗೋಲ್ವಾ ನಿನಗೆ, ನಿನಗ್ಯಾಕಯ್ಯ ಪೋಲಿಸ್ ಉದ್ಯೋಗ…!
“ನಾವು ಮೂವರು ಪೋಲಿಸರ ವಿರುದ್ಧ ಪ್ರಕರಣ ದಾಖಲಿಸುತ್ತಿಲ್ಲ, ಪ್ರಭುತ್ವದ ವಿರುದ್ಧ ಹೋರಾಟಕ್ಕೆ ಇಳಿಯುತ್ತಿದ್ದೇವೆ…!” ಈ ರೀತಿಯ ಸಂಭಾಷಣೆಗಳಿರುವ ಟೀಸರ್ ಸಾಕಷ್ಟು ಗಮನ ಸೆಳೆದಿದೆ.

 

ಕೋರ್ಟ್ ರೂಮ್‌ ಡ್ರಾಮಾ ಎಂದೇ ಗುರುತಿಸಲಾಗಿರುವ ‘ಜೈ ಭೀಮ್‌’ ಬಿಡುಗಡೆಗೂ ಮುನ್ನವೇ ಸಾಕಷ್ಟು ಗಮನ ಸೆಳೆದಿದೆ. ಆದಿವಾಸಿ ಮಹಿಳೆಯೊಬ್ಬಳ ನ್ಯಾಯಕ್ಕಾಗಿನ ಹೋರಾಟವು ಟ್ರೇಲರ್‌ನಲ್ಲಿ ಕಂಡುಬಂದಿದೆ.

ಗರ್ಭಿಣಿ ಮಹಿಳೆಯೊಂದಿಗೆ ಮಗು ಹಾಗೂ ವಕೀಲರಾಗಿ ಸೂರ್ಯ ಕಾಣಿಸಿಕೊಂಡಿರುವ ಪೋಸ್ಟರ್‌ಅನ್ನು ಹಂಚಿಕೊಳ್ಳಲಾಗಿದೆ. ಜೈ ಭೀಮ್‌ ಸಿನಿಮಾವನ್ನು ಜ್ಞಾನವೇಲ್‌ ನಿರ್ದೇಶಿಸಿದ್ದು, 2ಡಿ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಸೂರಿಯಾ ಹಾಗೂ ಜ್ಯೋತಿಕ ನಿರ್ಮಾಣ ಮಾಡಿದ್ದಾರೆ. ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಟ ಮಾಡುವ ವಕೀಲನಾಗಿ ಸೂರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

‘ನ್ಯಾಯದ ಅನ್ವೇಷಣೆಯಲ್ಲಿನ ಧೈರ್ಯ ಮತ್ತು ನಂಬಿಕೆಯ ಈ ಕಥೆಯನ್ನು ತೆರೆಗೆ ತರಲು ಹೆಮ್ಮೆಯಾಗುತ್ತಿದೆ’ ಎಂದು ಸೂರಿಯಾ ತಮ್ಮ ಟ್ವೀಟರ್‌ ಖಾತೆಯಲ್ಲಿ ಈ ಹಿಂದೆ ಬರೆದುಕೊಂಡಿದ್ದರು. ‘ಸೂರರೈ ಪೋಟ್ರು’ ಯಶಸ್ಸಿನ ಬಳಿಕ ಬಿಡುಗಡೆಯಾಗುತ್ತಿರುವ ಸೂರಿಯಾ ಅಭಿನಯದ ಸಿನಿಮಾ ಇದಾಗಿದೆ.

‘ಕರ್ಣನ್‌’ ಖ್ಯಾತಿಯ ರಜಿಶಾ ವಿಜಯನ್‌ ಪ್ರಧಾನ ಮಹಿಳಾ ಪಾತ್ರದಲ್ಲಿ ಅಭಿನಯಿಸಿದ್ದು, ಪ್ರಕಾಶ್‌ ರಾಜ್‌, ರಾವ್‌ ರಮೇಶ್‌ ಮತ್ತು ಲಿಜೋ ಮೋಲ್‌ ಜೋಸ್‌ ಥರದ ಪ್ರಮುಖ ಕಲಾವಿದರು ಈ ಚಿತ್ರದಲ್ಲಿದ್ದಾರೆ. ‘ಜೈ ಭೀಮ್‌’ ಸಿನಿಮಾ ತಮಿಳು ಮತ್ತು ತೆಲಗು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಸೀನ್‌ ರೋಲ್ಡನ್‌ ಅವರ ಸಂಗೀತ, ಎಸ್‌.ಆರ್‌.ಖದೀರ್‌ ಅವರ ಸಿನಿಮಾಟೋಗ್ರಫಿ, ಪಿಲೋಮಿನ್‌ ರಾಜ್‌ ಅವರ ಸಂಕಲನ ಈ ಸಿನಿಮಾಕ್ಕಿದೆ.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....