Homeಮುಖಪುಟಟೀಸರ್ ಬಿಡುಗಡೆ: ನವೆಂಬರ್ 02 ಕ್ಕೆ ಅಮೆಜಾನ್‌ ಪ್ರೈಮ್‌ನಲ್ಲಿ ಜೈಭೀಮ್

ಟೀಸರ್ ಬಿಡುಗಡೆ: ನವೆಂಬರ್ 02 ಕ್ಕೆ ಅಮೆಜಾನ್‌ ಪ್ರೈಮ್‌ನಲ್ಲಿ ಜೈಭೀಮ್

ಕೋರ್ಟ್ ರೂಮ್‌ ಡ್ರಾಮಾ ಎಂದೇ ಗುರುತಿಸಲಾಗಿರುವ ‘ಜೈ ಭೀಮ್‌’ ಬಿಡುಗಡೆಗೂ ಮುನ್ನವೇ ಸಾಕಷ್ಟು ಗಮನ ಸೆಳೆದಿದೆ.

- Advertisement -
- Advertisement -

ತಮಿಳಿನ ಖ್ಯಾತ ನಟ ಸೂರಿಯಾ ಅಭಿನಯದ ಹಾಗೂ ಅವರ ನಿರ್ಮಾಣ ಸಂಸ್ಥೆಯಿಂದಲೇ ಚಿತ್ರೀಕರಿಸಿಲಾಗಿರುವ ಬಹುನಿರೀಕ್ಷಿತ ‘ಜೈ ಭೀಮ್‌’ ಸಿನಿಮಾ ನವೆಂಬರ್ 02 ರಂದು ಅಮೆಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಯಾಗಲಿದೆ. ಜೈಭೀಮ್ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಸಾಕಷ್ಟು ಕೂತುಹಲ ಹುಟ್ಟಿಸಿದೆ.

ಸಾರ್ ಅವರ ಜಾತಿಯಲ್ಲಿ ಕಳ್ಳರು ಸಹಜ ಸಾರ್…!
ಕಳ್ಳತನನಕ್ಕೂ ಜಾತಿ ಇದೆಯಾ…? ಹಾಗೆ ಇದ್ದರೆ ಇಂದು ಅತಿದೊಡ್ಡ ಕಳ್ಳರೆಲ್ಲಾ ನಮ್ಮ ಜಾತಿಗಳಲ್ಲೆ ಇದ್ದಾರಲ್ವಾ…!”
ಒಬ್ಬ ಆದಿವಾಸಿ ಮಹಿಳೆಯನ್ನು ಹೈಕೋರ್ಟ್ ತನಕ ಬರಲು ಬಿಟ್ಟಿದ್ದಿಯಾ, ನಾಚಿಕೆ ಆಗೋಲ್ವಾ ನಿನಗೆ, ನಿನಗ್ಯಾಕಯ್ಯ ಪೋಲಿಸ್ ಉದ್ಯೋಗ…!
“ನಾವು ಮೂವರು ಪೋಲಿಸರ ವಿರುದ್ಧ ಪ್ರಕರಣ ದಾಖಲಿಸುತ್ತಿಲ್ಲ, ಪ್ರಭುತ್ವದ ವಿರುದ್ಧ ಹೋರಾಟಕ್ಕೆ ಇಳಿಯುತ್ತಿದ್ದೇವೆ…!” ಈ ರೀತಿಯ ಸಂಭಾಷಣೆಗಳಿರುವ ಟೀಸರ್ ಸಾಕಷ್ಟು ಗಮನ ಸೆಳೆದಿದೆ.

 

ಕೋರ್ಟ್ ರೂಮ್‌ ಡ್ರಾಮಾ ಎಂದೇ ಗುರುತಿಸಲಾಗಿರುವ ‘ಜೈ ಭೀಮ್‌’ ಬಿಡುಗಡೆಗೂ ಮುನ್ನವೇ ಸಾಕಷ್ಟು ಗಮನ ಸೆಳೆದಿದೆ. ಆದಿವಾಸಿ ಮಹಿಳೆಯೊಬ್ಬಳ ನ್ಯಾಯಕ್ಕಾಗಿನ ಹೋರಾಟವು ಟ್ರೇಲರ್‌ನಲ್ಲಿ ಕಂಡುಬಂದಿದೆ.

ಗರ್ಭಿಣಿ ಮಹಿಳೆಯೊಂದಿಗೆ ಮಗು ಹಾಗೂ ವಕೀಲರಾಗಿ ಸೂರ್ಯ ಕಾಣಿಸಿಕೊಂಡಿರುವ ಪೋಸ್ಟರ್‌ಅನ್ನು ಹಂಚಿಕೊಳ್ಳಲಾಗಿದೆ. ಜೈ ಭೀಮ್‌ ಸಿನಿಮಾವನ್ನು ಜ್ಞಾನವೇಲ್‌ ನಿರ್ದೇಶಿಸಿದ್ದು, 2ಡಿ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಸೂರಿಯಾ ಹಾಗೂ ಜ್ಯೋತಿಕ ನಿರ್ಮಾಣ ಮಾಡಿದ್ದಾರೆ. ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಟ ಮಾಡುವ ವಕೀಲನಾಗಿ ಸೂರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

‘ನ್ಯಾಯದ ಅನ್ವೇಷಣೆಯಲ್ಲಿನ ಧೈರ್ಯ ಮತ್ತು ನಂಬಿಕೆಯ ಈ ಕಥೆಯನ್ನು ತೆರೆಗೆ ತರಲು ಹೆಮ್ಮೆಯಾಗುತ್ತಿದೆ’ ಎಂದು ಸೂರಿಯಾ ತಮ್ಮ ಟ್ವೀಟರ್‌ ಖಾತೆಯಲ್ಲಿ ಈ ಹಿಂದೆ ಬರೆದುಕೊಂಡಿದ್ದರು. ‘ಸೂರರೈ ಪೋಟ್ರು’ ಯಶಸ್ಸಿನ ಬಳಿಕ ಬಿಡುಗಡೆಯಾಗುತ್ತಿರುವ ಸೂರಿಯಾ ಅಭಿನಯದ ಸಿನಿಮಾ ಇದಾಗಿದೆ.

‘ಕರ್ಣನ್‌’ ಖ್ಯಾತಿಯ ರಜಿಶಾ ವಿಜಯನ್‌ ಪ್ರಧಾನ ಮಹಿಳಾ ಪಾತ್ರದಲ್ಲಿ ಅಭಿನಯಿಸಿದ್ದು, ಪ್ರಕಾಶ್‌ ರಾಜ್‌, ರಾವ್‌ ರಮೇಶ್‌ ಮತ್ತು ಲಿಜೋ ಮೋಲ್‌ ಜೋಸ್‌ ಥರದ ಪ್ರಮುಖ ಕಲಾವಿದರು ಈ ಚಿತ್ರದಲ್ಲಿದ್ದಾರೆ. ‘ಜೈ ಭೀಮ್‌’ ಸಿನಿಮಾ ತಮಿಳು ಮತ್ತು ತೆಲಗು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಸೀನ್‌ ರೋಲ್ಡನ್‌ ಅವರ ಸಂಗೀತ, ಎಸ್‌.ಆರ್‌.ಖದೀರ್‌ ಅವರ ಸಿನಿಮಾಟೋಗ್ರಫಿ, ಪಿಲೋಮಿನ್‌ ರಾಜ್‌ ಅವರ ಸಂಕಲನ ಈ ಸಿನಿಮಾಕ್ಕಿದೆ.


ಇದನ್ನೂ ಓದಿ: ಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಹೊಸ ಚಿತ್ರಕ್ಕೆ ಕನ್ನಡಿಗರ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...