Homeಮುಖಪುಟಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ; ಮೃತನ ಪತ್ನಿ, ನ್ಯಾಯಾಧೀಶರ ವಿರುದ್ಧ ಕಿರುಕುಳ ದೂರು ದಾಖಲಿಸಿದ ಕುಟುಂಬ

ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ; ಮೃತನ ಪತ್ನಿ, ನ್ಯಾಯಾಧೀಶರ ವಿರುದ್ಧ ಕಿರುಕುಳ ದೂರು ದಾಖಲಿಸಿದ ಕುಟುಂಬ

- Advertisement -
- Advertisement -

ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ಅತುಲ್ ಸುಭಾಷ್ (34) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ಕುಟುಂಬವು ಸದಸ್ಯರು ಪತ್ನಿ, ಅವರ ಕುಟುಂಬ ಸದಸ್ಯರು ಮತ್ತು ನ್ಯಾಯಾಧೀಶರ ವಿರುದ್ಧ ಕಿರುಕುಳ, ಸುಲಿಗೆ ಮತ್ತು ಭ್ರಷ್ಟಾಚಾರದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಸುಭಾಷ್ ಅವರ ಸಹೋದರ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಮತ್ತು ಸೆಕ್ಷನ್ 3 (5) (ಇಬ್ಬರು ಅಥವಾ ಹೆಚ್ಚಿನ ಜನರು ಸಾಮಾನ್ಯ ಉದ್ದೇಶದಿಂದ ವರ್ತಿಸಿದಾಗ ಜಂಟಿ ಕ್ರಿಮಿನಲ್ ಹೊಣೆಗಾರಿಕೆಯನ್ನು ಸ್ಥಾಪಿಸುತ್ತದೆ) ಅಡಿಯಲ್ಲಿ ದೂರು ದಾಖಲಿಸಿದ್ದಾರೆ.

ಸುಭಾಷ್ ಅವರ ಪತ್ನಿ ನಿಕಿತಾ ಸಿಂಘಾನಿಯಾ, ಅವರ ಅತ್ತೆ ನಿಶಾ ಸಿಂಘಾನಿಯಾ, ಅವರ ಪತ್ನಿಯ ಸಹೋದರ ಅನುರಾಗ್ ಸಿಂಘಾನಿಯಾ ಮತ್ತು ಅವರ ಪತ್ನಿಯ ಚಿಕ್ಕಪ್ಪ ಸುಶೀಲ್ ಸಿಂಘಾನಿಯಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಅತುಲ್ ಸುಭಾಷ್ 2019 ರಲ್ಲಿ ನಿಕಿತಾ ಸಿಂಘಾನಿಯಾ ಅವರನ್ನು ವಿವಾಹವಾದರು. ಒಂದು ಮಗುವನ್ನು ಹೊಂದಿದ್ದರು ಎಂದು ಎಫ್ಐಆರ್ ಉಲ್ಲೇಖಿಸಿದೆ. ನಾಲ್ವರು ಆರೋಪಿಗಳು ವಿಚ್ಛೇದನದ ನಂತರ ಅತುಲ್ ಸುಭಾಷ್ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದು, ಪ್ರಕರಣ ಇತ್ಯರ್ಥಕ್ಕೆ ₹3 ಕೋಟಿ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದೀಗ ನಾಲ್ಕು ವರ್ಷದ ಮಗನನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ಅತುಲ್ ಸುಭಾಷ್ ಅವರ ಪತ್ನಿ ₹30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಾನಸಿಕ ಮತ್ತು ದೈಹಿಕ ಕಿರುಕುಳದಿಂದ ಅತುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತೆ.

ಘಟನೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಂತ್ರಸ್ತೆಯ ಸಹೋದರ ಬಿಕಾಸ್ ಕುಮಾರ್, ತನ್ನ ಸಹೋದರ ತನ್ನ ಹೆಂಡತಿಗಾಗಿ ಎಲ್ಲವನ್ನೂ ಮಾಡಿದ್ದಾನೆ; ಈಗ ನಡೆದಿರುವುದು ದುರದೃಷ್ಟಕರ ಎಂದು ಹೇಳಿದರು.

“ನನ್ನ ಸಹೋದರ ಪತ್ನಿಗಾಗಿ ಎಲ್ಲವನ್ನೂ ಮಾಡಿದ್ದಾನೆ, ಏನಾಗಿದ್ದರೂ ಅದು ದುರದೃಷ್ಟಕರವಾಗಿದೆ, ಅವನು ಎಂದಾದರೂ ನನ್ನೊಂದಿಗೆ ಅಥವಾ ನಮ್ಮ ತಂದೆಯೊಂದಿಗೆ ಚರ್ಚಿಸಿದ್ದರೆ, ನಾವು ಅವನನ್ನು ಈ ಪರಿಸ್ಥಿತಿಯಿಂದ ಹೊರಬರಲು ಸಹಾಯ ಮಾಡುತ್ತಿದ್ದೆವು.. ನಾನು ಭಾರತ ಸರ್ಕಾರ ಮತ್ತು ರಾಷ್ಟ್ರಪತಿಗಳನ್ನು ವಿನಂತಿಸಲು ಬಯಸುತ್ತೇನೆ. ನನ್ನ ಸಹೋದರನಿಗೆ ನ್ಯಾಯ ದೊರಕಿಸಿಕೊಡಬೇಕು, ಇಲ್ಲವಾದಲ್ಲಿ ನನ್ನ ಸಹೋದರನ ಆತ್ಮಹತ್ಯೆ ಪ್ರಕರಣದಲ್ಲಿ ಹೆಸರಿಸಿರುವ ನ್ಯಾಯಾಧೀಶರ ವಿರುದ್ಧ ಸೂಕ್ತ ತನಿಖೆಯಾಗಬೇಕು, ಇಲ್ಲವಾದಲ್ಲಿ ಅವರು ಸಹೋದರನ ತಪ್ಪು ಎಂದು ಸಾಬೀತುಪಡಿಸಬೇಕು” ಎಂದು ಮನವಿ ಮಾಡಿದ್ದಾರೆ.

‘ನಾನು ವ್ಯವಸ್ಥೆ ವಿರುದ್ಧ ಗೆದ್ದರೆ, ನನ್ನ ಪಾರ್ಥಿವ ಶರೀರವನ್ನು ಗಂಗೆಯಲ್ಲಿ ಅರ್ಪಿಸಿ; ಇಲ್ಲದಿದ್ದರೆ ನ್ಯಾಯಾಲಯದ ಹೊರಗಿನ ಗಟಾರದಲ್ಲಿಹಾಕಿ’ ಎಂದು ಆತ್ಮಹತ್ಯೆ ಪತ್ರದಲ್ಲಿ ಅತುಲ್ ಸುಭಾಷ್ ಬರೆದಿದ್ದಾರೆ ಎಂದು ಕುಮಾರ್ ಹೇಳಿದರು.

ಪೊಲೀಸರ ಪ್ರಕಾರ, ಬಲಿಪಶು ಉತ್ತರ ಪ್ರದೇಶದ ನಿವಾಸಿಯಾಗಿದ್ದು, ಅವರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಸೋಮವಾರ ಬೆಳಗ್ಗೆ 6:00 ಗಂಟೆಗೆ ಹೊಯ್ಸಳ ಪೊಲೀಸ್ ನಿಯಂತ್ರಣ ಕೊಠಡಿಗೆ ಫ್ಲಾಟ್‌ನಲ್ಲಿ ಆತ್ಮಹತ್ಯೆ ಕುರಿತು ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ಫ್ಲಾಟ್‌ಗೆ ಒಳಗಿನಿಂದ ಬೀಗ ಹಾಕಲಾಗಿತ್ತು. ಬೀಗ ಒಡೆದು ನೋಡಿದಾಗ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ.

ಸುಭಾಷ್ ಅವರು ತಮ್ಮ ಆತ್ಮಹತ್ಯೆ ಪತ್ರದಲ್ಲಿ ನ್ಯಾಯಕ್ಕಾಗಿ ಮನವಿ ಮಾಡಿದ್ದು, 24 ಪುಟಗಳ ಟಿಪ್ಪಣಿಯ ಪ್ರತಿಯೊಂದು ಪುಟದಲ್ಲೂ “ನ್ಯಾಯವು ಬಾಕಿಯಿದೆ” ಎಂದು ನಮೂದಿಸಿದ್ದಾರೆ. ಉತ್ತರ ಪ್ರದೇಶದ ಜೌನ್‌ಪುರದ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರು ತಮ್ಮ ಮಾತನ್ನು ಕೇಳಲಿಲ್ಲ ಎಂದು, ಅವರ ಪತ್ನಿ ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಸುಭಾಷ್, ನ್ಯಾಯಾಲಯದಲ್ಲಿ ಅಧಿಕಾರಿಯೊಬ್ಬರು ನ್ಯಾಯಾಧೀಶರ ಮುಂದೆ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದರು.

ಸುಭಾಷ್ ಅವರು ಅಂತಹ ಹೆಜ್ಜೆ ಇಡಲು ಪ್ರೇರೇಪಿಸಿದ ನಿದರ್ಶನಗಳನ್ನು ವಿವರಿಸಿದರು. ಸುಭಾಷ್ ತನ್ನ ಕಿರುಕುಳವನ್ನು ವಿವರಿಸುವ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾನೆ. ತನಗೆ ನ್ಯಾಯ ಸಿಗುವವರೆಗೆ ತನ್ನ ಚಿತಾಭಸ್ಮವನ್ನು ಮುಳುಗಿಸದಂತೆ ತನ್ನ ಕುಟುಂಬ ಸದಸ್ಯರನ್ನು ಕೇಳಿಕೊಂಡಿದ್ದಾನೆ. ಅವರ ಆತ್ಮಹತ್ಯೆ ಪತ್ರದಲ್ಲಿ ಅವರ ನಾಲ್ಕು ವರ್ಷದ ಮಗನ ಸಂದೇಶವೂ ಇತ್ತು, ಅವನು ತನ್ನಿಂದ ದೂರವಾಗಿದ್ದಾನೆ ಎಂದು ಹೇಳಿಕೊಂಡಿದ್ದಾನೆ. ತನ್ನ ಮಗುವಿನ ಪೋಷಣೆಯನ್ನು ತನ್ನ ಹೆತ್ತವರಿಗೆ ನೀಡಬೇಕೆಂದು ಟಿಪ್ಪಣಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ; ಪ್ಯಾಲೆಸ್ತೀನ್ ಪರ ಪ್ರಬಂಧ ಬರೆದಿದ್ದಕ್ಕೆ ಭಾರತೀಯ ವಿದ್ಯಾರ್ಥಿಯನ್ನು ಅಮಾನತು ಮಾಡಿದ ಎಂಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...