Homeಮುಖಪುಟಟ್ರಾಫಿಕ್ ಪೊಲೀಸ್ ಜೊತೆ ವಾಗ್ವಾದದ ನಂತರ ಸಾಫ್ಟ್ ವೇರ್ ಉದ್ಯೋಗಿಯ ಮರಣ.. ಹೊಸ ಮೋಟಾರು ವಾಹನ...

ಟ್ರಾಫಿಕ್ ಪೊಲೀಸ್ ಜೊತೆ ವಾಗ್ವಾದದ ನಂತರ ಸಾಫ್ಟ್ ವೇರ್ ಉದ್ಯೋಗಿಯ ಮರಣ.. ಹೊಸ ಮೋಟಾರು ವಾಹನ ತಿದ್ದುಪಡಿ ಕಾಯ್ದೆಗೆ ಮೊದಲ ಬಲಿ??

- Advertisement -
- Advertisement -

ನೋಯ್ಡಾದ ಗಾಜಿಯಾಬಾದ್‌ನಲ್ಲಿ ರಸ್ತೆ ಸಂಚಾರ ಉಲ್ಲಂಘನೆಯ ವಿಚಾರಕ್ಕೆ ಸಂಚಾರ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ನಂತರ 35 ವರ್ಷದ ಸಾಫ್ಟ್ ವೇರ್ ಉದ್ಯೋಗಿಯಾದ ತನ್ನ ಮಗ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ನಗರದ ನಿವಾಸಿಯೊಬ್ಬರು ಆರೋಪಿಸಿದ್ದಾರೆ.

ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ವಾಗ್ವಾದ ನಡೆಸಿದ ಸಂಚಾರ ಪೊಲೀಸ್ ಸಿಬ್ಬಂದಿ ಕೂಡ ಅದೇ ಜಿಲ್ಲೆಯವರು ಎಂದು ನೋಯ್ಡಾ ಪೊಲೀಸರು ತಿಳಿಸಿದ್ದಾರೆ.

“ಈ ಕುರಿತು ವಿಚಾರಣೆ ನಡೆಸುತ್ತಿದ್ದೇವೆ. ಆ ವ್ಯಕ್ತಿಯು ಮಧುಮೇಹ ಮತ್ತು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಬೆಳಕಿಗೆ ಬಂದಿದೆ. ಸಂಜೆ 6 ಗಂಟೆ ಸುಮಾರಿಗೆ ಗಾಜಿಯಾಬಾದ್ ಜಿಲ್ಲೆಯ ಸಿಐಎಸ್ಎಫ್ ಕಟ್ ಬಳಿ ಘಟನೆ ಸಂಭವಿಸಿದೆ. ಮಾಹಿತಿಯನ್ನು ಗಾಜಿಯಾಬಾದ್ ಪೊಲೀಸರಿಗೆ ತಲುಪಿಸಲಾಗಿದೆ” ಎಂದು ಗೌತಮ್ ಬುದ್ಧ ನಗರ ಎಸ್‌ಎಸ್‌ಪಿ ವೈಭವ್ ಕೃಷ್ಣ ಹೇಳಿದ್ದಾರೆ.

ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ ತನ್ನ ವಯಸ್ಸಾದ ಹೆತ್ತವರೊಂದಿಗೆ ತನ್ನ ಕಾರಿನಲ್ಲಿದ್ದಾಗ ಸಿಐಎಸ್ಎಫ್ ಕಟ್ ಬಳಿ ತಪಾಸಣೆ ನಡೆಸಲು ಟ್ರಾಫಿಕ್ ಪೊಲೀಸರು ತಡೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ವ್ಯಕ್ತಿಯ 65 ವರ್ಷದ ತಂದೆ ‘ಕಟ್ಟುನಿಟ್ಟಾದ ಹೊಸ ಮೋಟಾರು ವಾಹನ ಕಾಯ್ದೆ’ ಅಡಿಯಲ್ಲಿ ಪರಿಶೀಲಿಸುವ ಹೆಸರಿನಲ್ಲಿ ‘ಸಂಚಾರ ಪೊಲೀಸರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಆರೋಪಿಸಿದ್ದಾರೆ. “ಯಾವುದಕ್ಕೂ ಒಂದು ರೀತಿ-ನೀತಿ ಇರಬೇಕು. ಸಂಚಾರ ನಿಯಮಗಳನ್ನು ಬದಲಾಯಿಸಲಾಗಿದೆ ಸರಿ. ಆದರೆ ಪೊಲೀಸರು ಸಭ್ಯರಾಗಿ ತಪಾಸಣೆ ನಡೆಸಬೇಕು. ಅದು ಬಿಟ್ಟು ಅಮಾನವೀಯವಾಗಿ ವರ್ತಿಸಬಾರದು. ನಾವು ಯಾವುದೇ ತಪ್ಪು ಮಾಡಿಲ್ಲ. ಆದರೂ ಕಾರಿನೊಳಗೆ ಇಬ್ಬರು ವೃದ್ಧರು ಕುಳಿತಿದ್ದರೂ ಸಹ ಪೊಲೀಸರು ಲಾಠಿಗಳಿಂದ ಕಾರಿಗೆ ಹೊಡೆದು ಭಯ ಹುಟ್ಟಿಸಿದರು. ಇದನ್ನು ಪ್ರಶ್ನಿಸಿದ್ದಕ್ಕೆ ಮತ್ತಷ್ಟು ಜೋರಾಗಿ ಬೈಯ್ದರು … ಇದು ಪರೀಕ್ಷಿಸುವ ವಿಧಾನವಲ್ಲ. ಈ ರೀತಿ ಮಾಡಲು ಅನುಮತಿಸುವ ಯಾವುದೇ ನಿಯಮವಿದೆ ಎಂದು ನಾನು ಭಾವಿಸುವುದಿಲ್ಲ” ಎಂದು ಮೃತ ವ್ಯಕ್ತಿಯ ತಂದೆ ಹೇಳಿದ್ದಾರೆ.

ಸೆಪ್ಟಂಬರ್ ನಿಂದ ಜಾರಿಗೆ ಬಂದಿರುವ ಹೊಸ ಮೋಟಾರು ವಾಹನ ತಿದ್ದುಪಡಿ ಕಾಯ್ದೆಗೆ ದೇಶದೆಲ್ಲೆಡೆ ತೀವ್ರ ವಿರೋಧ ಬಂದಿದೆ. ಈಗಾಗಲೇ ದಿನವೊಂದಕ್ಕೆ ಲಕ್ಷಾಂತರ ರೂ ದಂಡ ವಸೂಲಿಯಾಗುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಇದನ್ನು ಹಿಂಪಡೆಯಬೇಕು, ಇಲ್ಲದಿದ್ದಲ್ಲಿ ತೈಲ ಸರಬರಾಜು ನಿಲ್ಲಿಸಿ ಪ್ರತಿಭಟಿಸಬೇಕಾಗುತ್ತದೆ ಎಂದು ಲಾರಿ ಮಾಲೀಕರ ಸಂಘ ಎಚ್ಚರಿಕೆ ಸಹ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...