Homeಮುಖಪುಟಟ್ರಾಫಿಕ್ ಪೊಲೀಸ್ ಜೊತೆ ವಾಗ್ವಾದದ ನಂತರ ಸಾಫ್ಟ್ ವೇರ್ ಉದ್ಯೋಗಿಯ ಮರಣ.. ಹೊಸ ಮೋಟಾರು ವಾಹನ...

ಟ್ರಾಫಿಕ್ ಪೊಲೀಸ್ ಜೊತೆ ವಾಗ್ವಾದದ ನಂತರ ಸಾಫ್ಟ್ ವೇರ್ ಉದ್ಯೋಗಿಯ ಮರಣ.. ಹೊಸ ಮೋಟಾರು ವಾಹನ ತಿದ್ದುಪಡಿ ಕಾಯ್ದೆಗೆ ಮೊದಲ ಬಲಿ??

- Advertisement -
- Advertisement -

ನೋಯ್ಡಾದ ಗಾಜಿಯಾಬಾದ್‌ನಲ್ಲಿ ರಸ್ತೆ ಸಂಚಾರ ಉಲ್ಲಂಘನೆಯ ವಿಚಾರಕ್ಕೆ ಸಂಚಾರ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ನಂತರ 35 ವರ್ಷದ ಸಾಫ್ಟ್ ವೇರ್ ಉದ್ಯೋಗಿಯಾದ ತನ್ನ ಮಗ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ನಗರದ ನಿವಾಸಿಯೊಬ್ಬರು ಆರೋಪಿಸಿದ್ದಾರೆ.

ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ವಾಗ್ವಾದ ನಡೆಸಿದ ಸಂಚಾರ ಪೊಲೀಸ್ ಸಿಬ್ಬಂದಿ ಕೂಡ ಅದೇ ಜಿಲ್ಲೆಯವರು ಎಂದು ನೋಯ್ಡಾ ಪೊಲೀಸರು ತಿಳಿಸಿದ್ದಾರೆ.

“ಈ ಕುರಿತು ವಿಚಾರಣೆ ನಡೆಸುತ್ತಿದ್ದೇವೆ. ಆ ವ್ಯಕ್ತಿಯು ಮಧುಮೇಹ ಮತ್ತು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಬೆಳಕಿಗೆ ಬಂದಿದೆ. ಸಂಜೆ 6 ಗಂಟೆ ಸುಮಾರಿಗೆ ಗಾಜಿಯಾಬಾದ್ ಜಿಲ್ಲೆಯ ಸಿಐಎಸ್ಎಫ್ ಕಟ್ ಬಳಿ ಘಟನೆ ಸಂಭವಿಸಿದೆ. ಮಾಹಿತಿಯನ್ನು ಗಾಜಿಯಾಬಾದ್ ಪೊಲೀಸರಿಗೆ ತಲುಪಿಸಲಾಗಿದೆ” ಎಂದು ಗೌತಮ್ ಬುದ್ಧ ನಗರ ಎಸ್‌ಎಸ್‌ಪಿ ವೈಭವ್ ಕೃಷ್ಣ ಹೇಳಿದ್ದಾರೆ.

ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ ತನ್ನ ವಯಸ್ಸಾದ ಹೆತ್ತವರೊಂದಿಗೆ ತನ್ನ ಕಾರಿನಲ್ಲಿದ್ದಾಗ ಸಿಐಎಸ್ಎಫ್ ಕಟ್ ಬಳಿ ತಪಾಸಣೆ ನಡೆಸಲು ಟ್ರಾಫಿಕ್ ಪೊಲೀಸರು ತಡೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ವ್ಯಕ್ತಿಯ 65 ವರ್ಷದ ತಂದೆ ‘ಕಟ್ಟುನಿಟ್ಟಾದ ಹೊಸ ಮೋಟಾರು ವಾಹನ ಕಾಯ್ದೆ’ ಅಡಿಯಲ್ಲಿ ಪರಿಶೀಲಿಸುವ ಹೆಸರಿನಲ್ಲಿ ‘ಸಂಚಾರ ಪೊಲೀಸರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಆರೋಪಿಸಿದ್ದಾರೆ. “ಯಾವುದಕ್ಕೂ ಒಂದು ರೀತಿ-ನೀತಿ ಇರಬೇಕು. ಸಂಚಾರ ನಿಯಮಗಳನ್ನು ಬದಲಾಯಿಸಲಾಗಿದೆ ಸರಿ. ಆದರೆ ಪೊಲೀಸರು ಸಭ್ಯರಾಗಿ ತಪಾಸಣೆ ನಡೆಸಬೇಕು. ಅದು ಬಿಟ್ಟು ಅಮಾನವೀಯವಾಗಿ ವರ್ತಿಸಬಾರದು. ನಾವು ಯಾವುದೇ ತಪ್ಪು ಮಾಡಿಲ್ಲ. ಆದರೂ ಕಾರಿನೊಳಗೆ ಇಬ್ಬರು ವೃದ್ಧರು ಕುಳಿತಿದ್ದರೂ ಸಹ ಪೊಲೀಸರು ಲಾಠಿಗಳಿಂದ ಕಾರಿಗೆ ಹೊಡೆದು ಭಯ ಹುಟ್ಟಿಸಿದರು. ಇದನ್ನು ಪ್ರಶ್ನಿಸಿದ್ದಕ್ಕೆ ಮತ್ತಷ್ಟು ಜೋರಾಗಿ ಬೈಯ್ದರು … ಇದು ಪರೀಕ್ಷಿಸುವ ವಿಧಾನವಲ್ಲ. ಈ ರೀತಿ ಮಾಡಲು ಅನುಮತಿಸುವ ಯಾವುದೇ ನಿಯಮವಿದೆ ಎಂದು ನಾನು ಭಾವಿಸುವುದಿಲ್ಲ” ಎಂದು ಮೃತ ವ್ಯಕ್ತಿಯ ತಂದೆ ಹೇಳಿದ್ದಾರೆ.

ಸೆಪ್ಟಂಬರ್ ನಿಂದ ಜಾರಿಗೆ ಬಂದಿರುವ ಹೊಸ ಮೋಟಾರು ವಾಹನ ತಿದ್ದುಪಡಿ ಕಾಯ್ದೆಗೆ ದೇಶದೆಲ್ಲೆಡೆ ತೀವ್ರ ವಿರೋಧ ಬಂದಿದೆ. ಈಗಾಗಲೇ ದಿನವೊಂದಕ್ಕೆ ಲಕ್ಷಾಂತರ ರೂ ದಂಡ ವಸೂಲಿಯಾಗುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಇದನ್ನು ಹಿಂಪಡೆಯಬೇಕು, ಇಲ್ಲದಿದ್ದಲ್ಲಿ ತೈಲ ಸರಬರಾಜು ನಿಲ್ಲಿಸಿ ಪ್ರತಿಭಟಿಸಬೇಕಾಗುತ್ತದೆ ಎಂದು ಲಾರಿ ಮಾಲೀಕರ ಸಂಘ ಎಚ್ಚರಿಕೆ ಸಹ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...