ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಅನೇಕ ಟೆಕ್ ವೃತ್ತಿಪರರು ಸೇರಿದಂತೆ ಸಾವಿರಾರು ಪ್ರಯಾಣಿಕರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಮೇಲ್ಸೇತುವೆ ಮೇಲೆ ಸಿಲುಕಿಕೊಂಡಿದ್ದಾರೆ. ಇದರಿಂದ ಬೇಸತ್ತ ಕೆಲವರು ತಮ್ಮ ವಾಹನಗಳನ್ನು ಅಲ್ಲಿಯೇ ಬಿಟ್ಟು ಮನೆಗೆ ತೆರಳಿದ್ದಾರೆ.
ಜನರು ತಮ್ಮ ವಾಹನಗಳನ್ನು ಬಿಟ್ಟು ಕಾಲ್ನಡಿಗೆಯಲ್ಲಿ ತೆರಳುತ್ತಿರು ವಿಡಿಯೊಗಳು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.
ಭಾರಿ ಮಳೆಯಿಂದಾಗಿ ಮೇಲ್ಸೇತುವೆಯ ರೂಪೇನಾ ಅಗ್ರಹಾರದಲ್ಲಿ ಗ್ರಿಡ್ಲಾಕ್ ಹದಗೆಟ್ಟಿದೆ, ತಮಿಳುನಾಡಿನಿಂದ ಬೆಂಗಳೂರಿನ ನಗರ ಕೇಂದ್ರಕ್ಕೆ ಟೆಕ್ ಕಾರಿಡಾರ್ ಅನ್ನು ಸಂಪರ್ಕಿಸುವ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ರಸ್ತೆಗಳಲ್ಲಿ ಮಳೆ ನೀರು ಸಂಗ್ರಹಗೊಂಡಿದ್ದರಿಂದ, ಹೆಚ್ಚಿನ ದಟ್ಟಣೆಯನ್ನು ತಡೆಯಲು ಸಂಚಾರ ಪೊಲೀಸರು ಮೇಲ್ಸೇತುವೆಯ ಒಂದು ಬದಿಯನ್ನು ಅನಿವಾರ್ಯವಾಗಿ ಮುಚ್ಚಿದರು.
ಬೆಂಗಳೂರಿನಲ್ಲಿ ಇಂದು ಮುಂಜಾನೆಯ ವೇಳೆಗೆ ಬಹುತೇಕ ಪ್ರದೇಶಗಳಲ್ಲಿ ನೀರು ಕಡಿಮೆಯಾದರೂ ಜಲಾವೃತಗೊಂಡ ಜಾಗಗಳಲ್ಲಿ ಪರಿಸ್ಥಿತಿಯನ್ನು ಇನ್ನಷ್ಟು ಸಂಕೀರ್ಣಗೊಳಿಸಿದವು. ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಸೇರಿದಂತೆ ಕೆಲವು ಭಾಗಗಳಲ್ಲಿ ಈಗಲೂ ನೀರು ನಿಂತಿದೆ.
Completely Jammed from past 1.5 hrs in the #electroniccity flyover. I must have reached my home now which is 30kms away. Logged out at 5:20 and we are still stuck! We can see most of the employees of various companies frustrated and starting to walk. @madivalatrfps pic.twitter.com/wqvXuIArN6
— KpopStan🤍 (@PratikfamHouse) October 23, 2024
ಫ್ಲೈಓವರ್ ಮೇಲೆ ಸಿಲುಕಿ ಹತಾಶೆಗೊಂಡ ಪ್ರಯಾಣಿಕರಿಂದ ಸಾಮಾಜಿಕ ಮಾಧ್ಯಮಗಳು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಮನೆಯಿಂದ ಕೆಲಸ ಮಾಡುವ ಸರ್ಕಾರದ ಸಲಹೆಯನ್ನು ಕಂಪನಿಗಳು ಏಕೆ ಅನುಸರಿಸುತ್ತಿಲ್ಲ ಎಂದು ಎಕ್ಸ್ನಲ್ಲಿ ಪ್ರಶ್ನಿಸಿದ್ದಾರೆ. ಅಕ್ಟೋಬರ್ 23 ರಂದು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಕರ್ನಾಟಕ ಸರ್ಕಾರ ಈಗಾಗಲೇ ಖಾಸಗಿ ಕಂಪನಿಗಳಿಗೆ ಸಲಹೆ ನೀಡಿತ್ತು.
1.5 ಗಂಟೆಗಳ ಕಾಲ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಸಿಲುಕಿಕೊಂಡಿದ್ದಾಗಿ ಎಕ್ಸ್ನಲ್ಲಿ ಒಬ್ಬರು ಪೋಸ್ಟ್ ಮಾಡಿದ್ದಾರೆ. ಇಷ್ಟೊತ್ತಿಗೆ ನಾನು 30 ಕಿಮೀ ದೂರದಲ್ಲಿರುವ ನನ್ನ ಮನೆಗೆ ತಲುಪಿರಬೇಕಿತ್ತು ಎಂದು ಹೇಳಿದ್ದಾರೆ. ಸಂಜೆ 5:20 ಕ್ಕೆ ಲಾಗ್ ಔಟ್ ಮಾಡಿದರೂ, ನಾನು ಇನ್ನೂ ಸಿಕ್ಕಿಬಿದ್ದಿದ್ದೇನೆ. ದೀರ್ಘ ಕಾಳದ ಕಾಯುವಿಕೆಯಿಂದ ಬೇಸತ್ತ ಹಲವರು ಅನಿವಾರ್ಯವಾಗಿ ವಾಹನ ಬಿಟ್ಟು ನಡೆಯಲು ಪ್ರಾರಂಭಿಸಿದರು ಎಂದು ಹೇಳಿದ್ದಾರೆ.
Absolute hell with traffic rn. If anyone is planning to start in electronic city NOW, don't. Took 4 times the normal time. And on 2 wheeler no less.
— Vidhya Bharathi (@Vidya191002) October 23, 2024
ಎಲೆಕ್ಟ್ರಾನಿಕ್ ಸಿಟಿಯಿಂದ ತಮ್ಮ ಪ್ರಯಾಣ ತಪ್ಪಿಸುವಂತೆ ಮತ್ತೊಬ್ಬ ಎಕ್ಸ್ ಬಳಕೆದಾರರು ಇತರರಿಗೆ ಎಚ್ಚರಿಕೆ ನೀಡಿದರು. “ಟ್ರಾಫಿಕ್ ಜಾಮ್ನಿಂದ ಸಂಪೂರ್ಣ ನರಕ. ಯಾರಾದರೂ ಈಗ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣಿಸಲು ಯೋಜಿಸುತ್ತಿದ್ದರೆ, ಅದನ್ನು ಮಾಡಬೇಡಿ. ನನಗೆ ದ್ವಿಚಕ್ರ ವಾಹನದಲ್ಲಿ ಸಾಮಾನ್ಯ ಸಮಯಕ್ಕಿಂತ 4 ಪಟ್ಟು ಹೆಚ್ಚು ತೆಗೆದುಕೊಂಡಿತು” ಎಂದು ಹೇಳಿದ್ದಾರೆ.
ಇದನ್ನೂ ಓದಿ; ಪ್ರವಾಹದ ಭೀತಿ | ಭಾರೀ ಮಳೆಗೆ ಬೆಂಗಳೂರಿನ 100 ಕೆರೆಗಳು ಭರ್ತಿ!


