Homeಮುಖಪುಟಬೆಂಗಳೂರಿನ ಟ್ರಾಫಿಕ್ ಜಾಮ್‌ಗೆ ಬೇಸತ್ತ ಟೆಕ್ಕಿಗಳು; ಫ್ಲೈಓವರ್ ಮೇಲೆ ವಾಹನಬಿಟ್ಟು ಮನೆಗೆ ತೆರಳಿದ ಜನರು

ಬೆಂಗಳೂರಿನ ಟ್ರಾಫಿಕ್ ಜಾಮ್‌ಗೆ ಬೇಸತ್ತ ಟೆಕ್ಕಿಗಳು; ಫ್ಲೈಓವರ್ ಮೇಲೆ ವಾಹನಬಿಟ್ಟು ಮನೆಗೆ ತೆರಳಿದ ಜನರು

- Advertisement -
- Advertisement -

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಅನೇಕ ಟೆಕ್ ವೃತ್ತಿಪರರು ಸೇರಿದಂತೆ ಸಾವಿರಾರು ಪ್ರಯಾಣಿಕರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಮೇಲ್ಸೇತುವೆ ಮೇಲೆ ಸಿಲುಕಿಕೊಂಡಿದ್ದಾರೆ. ಇದರಿಂದ ಬೇಸತ್ತ ಕೆಲವರು ತಮ್ಮ ವಾಹನಗಳನ್ನು ಅಲ್ಲಿಯೇ ಬಿಟ್ಟು ಮನೆಗೆ ತೆರಳಿದ್ದಾರೆ.

ಜನರು ತಮ್ಮ ವಾಹನಗಳನ್ನು ಬಿಟ್ಟು ಕಾಲ್ನಡಿಗೆಯಲ್ಲಿ ತೆರಳುತ್ತಿರು ವಿಡಿಯೊಗಳು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಭಾರಿ ಮಳೆಯಿಂದಾಗಿ ಮೇಲ್ಸೇತುವೆಯ ರೂಪೇನಾ ಅಗ್ರಹಾರದಲ್ಲಿ ಗ್ರಿಡ್ಲಾಕ್ ಹದಗೆಟ್ಟಿದೆ, ತಮಿಳುನಾಡಿನಿಂದ ಬೆಂಗಳೂರಿನ ನಗರ ಕೇಂದ್ರಕ್ಕೆ ಟೆಕ್ ಕಾರಿಡಾರ್ ಅನ್ನು ಸಂಪರ್ಕಿಸುವ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ರಸ್ತೆಗಳಲ್ಲಿ ಮಳೆ ನೀರು ಸಂಗ್ರಹಗೊಂಡಿದ್ದರಿಂದ, ಹೆಚ್ಚಿನ ದಟ್ಟಣೆಯನ್ನು ತಡೆಯಲು ಸಂಚಾರ ಪೊಲೀಸರು ಮೇಲ್ಸೇತುವೆಯ ಒಂದು ಬದಿಯನ್ನು ಅನಿವಾರ್ಯವಾಗಿ ಮುಚ್ಚಿದರು.

ಬೆಂಗಳೂರಿನಲ್ಲಿ ಇಂದು ಮುಂಜಾನೆಯ ವೇಳೆಗೆ ಬಹುತೇಕ ಪ್ರದೇಶಗಳಲ್ಲಿ ನೀರು ಕಡಿಮೆಯಾದರೂ ಜಲಾವೃತಗೊಂಡ ಜಾಗಗಳಲ್ಲಿ ಪರಿಸ್ಥಿತಿಯನ್ನು ಇನ್ನಷ್ಟು ಸಂಕೀರ್ಣಗೊಳಿಸಿದವು. ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ಸೇರಿದಂತೆ ಕೆಲವು ಭಾಗಗಳಲ್ಲಿ ಈಗಲೂ ನೀರು ನಿಂತಿದೆ.

ಫ್ಲೈಓವರ್‌ ಮೇಲೆ ಸಿಲುಕಿ ಹತಾಶೆಗೊಂಡ ಪ್ರಯಾಣಿಕರಿಂದ ಸಾಮಾಜಿಕ ಮಾಧ್ಯಮಗಳು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಮನೆಯಿಂದ ಕೆಲಸ ಮಾಡುವ ಸರ್ಕಾರದ ಸಲಹೆಯನ್ನು ಕಂಪನಿಗಳು ಏಕೆ ಅನುಸರಿಸುತ್ತಿಲ್ಲ ಎಂದು ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ. ಅಕ್ಟೋಬರ್ 23 ರಂದು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಕರ್ನಾಟಕ ಸರ್ಕಾರ ಈಗಾಗಲೇ ಖಾಸಗಿ ಕಂಪನಿಗಳಿಗೆ ಸಲಹೆ ನೀಡಿತ್ತು.

1.5 ಗಂಟೆಗಳ ಕಾಲ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಸಿಲುಕಿಕೊಂಡಿದ್ದಾಗಿ ಎಕ್ಸ್‌ನಲ್ಲಿ ಒಬ್ಬರು ಪೋಸ್ಟ್ ಮಾಡಿದ್ದಾರೆ. ಇಷ್ಟೊತ್ತಿಗೆ ನಾನು 30 ಕಿಮೀ ದೂರದಲ್ಲಿರುವ ನನ್ನ ಮನೆಗೆ ತಲುಪಿರಬೇಕಿತ್ತು ಎಂದು ಹೇಳಿದ್ದಾರೆ. ಸಂಜೆ 5:20 ಕ್ಕೆ ಲಾಗ್ ಔಟ್ ಮಾಡಿದರೂ, ನಾನು ಇನ್ನೂ ಸಿಕ್ಕಿಬಿದ್ದಿದ್ದೇನೆ. ದೀರ್ಘ ಕಾಳದ ಕಾಯುವಿಕೆಯಿಂದ ಬೇಸತ್ತ ಹಲವರು ಅನಿವಾರ್ಯವಾಗಿ ವಾಹನ ಬಿಟ್ಟು ನಡೆಯಲು ಪ್ರಾರಂಭಿಸಿದರು ಎಂದು ಹೇಳಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿಯಿಂದ ತಮ್ಮ ಪ್ರಯಾಣ ತಪ್ಪಿಸುವಂತೆ ಮತ್ತೊಬ್ಬ ಎಕ್ಸ್‌ ಬಳಕೆದಾರರು ಇತರರಿಗೆ ಎಚ್ಚರಿಕೆ ನೀಡಿದರು. “ಟ್ರಾಫಿಕ್‌ ಜಾಮ್‌ನಿಂದ ಸಂಪೂರ್ಣ ನರಕ. ಯಾರಾದರೂ ಈಗ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣಿಸಲು ಯೋಜಿಸುತ್ತಿದ್ದರೆ, ಅದನ್ನು ಮಾಡಬೇಡಿ. ನನಗೆ ದ್ವಿಚಕ್ರ ವಾಹನದಲ್ಲಿ ಸಾಮಾನ್ಯ ಸಮಯಕ್ಕಿಂತ 4 ಪಟ್ಟು ಹೆಚ್ಚು ತೆಗೆದುಕೊಂಡಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ; ಪ್ರವಾಹದ ಭೀತಿ | ಭಾರೀ ಮಳೆಗೆ ಬೆಂಗಳೂರಿನ 100 ಕೆರೆಗಳು ಭರ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...