Homeಮುಖಪುಟಬೆಂಗಳೂರಿನ ಟ್ರಾಫಿಕ್ ಜಾಮ್‌ಗೆ ಬೇಸತ್ತ ಟೆಕ್ಕಿಗಳು; ಫ್ಲೈಓವರ್ ಮೇಲೆ ವಾಹನಬಿಟ್ಟು ಮನೆಗೆ ತೆರಳಿದ ಜನರು

ಬೆಂಗಳೂರಿನ ಟ್ರಾಫಿಕ್ ಜಾಮ್‌ಗೆ ಬೇಸತ್ತ ಟೆಕ್ಕಿಗಳು; ಫ್ಲೈಓವರ್ ಮೇಲೆ ವಾಹನಬಿಟ್ಟು ಮನೆಗೆ ತೆರಳಿದ ಜನರು

- Advertisement -
- Advertisement -

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಭಾರಿ ಮಳೆಯಿಂದಾಗಿ ಬುಧವಾರ ರಾತ್ರಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ಅನೇಕ ಟೆಕ್ ವೃತ್ತಿಪರರು ಸೇರಿದಂತೆ ಸಾವಿರಾರು ಪ್ರಯಾಣಿಕರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಮೇಲ್ಸೇತುವೆ ಮೇಲೆ ಸಿಲುಕಿಕೊಂಡಿದ್ದಾರೆ. ಇದರಿಂದ ಬೇಸತ್ತ ಕೆಲವರು ತಮ್ಮ ವಾಹನಗಳನ್ನು ಅಲ್ಲಿಯೇ ಬಿಟ್ಟು ಮನೆಗೆ ತೆರಳಿದ್ದಾರೆ.

ಜನರು ತಮ್ಮ ವಾಹನಗಳನ್ನು ಬಿಟ್ಟು ಕಾಲ್ನಡಿಗೆಯಲ್ಲಿ ತೆರಳುತ್ತಿರು ವಿಡಿಯೊಗಳು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಭಾರಿ ಮಳೆಯಿಂದಾಗಿ ಮೇಲ್ಸೇತುವೆಯ ರೂಪೇನಾ ಅಗ್ರಹಾರದಲ್ಲಿ ಗ್ರಿಡ್ಲಾಕ್ ಹದಗೆಟ್ಟಿದೆ, ತಮಿಳುನಾಡಿನಿಂದ ಬೆಂಗಳೂರಿನ ನಗರ ಕೇಂದ್ರಕ್ಕೆ ಟೆಕ್ ಕಾರಿಡಾರ್ ಅನ್ನು ಸಂಪರ್ಕಿಸುವ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ರಸ್ತೆಗಳಲ್ಲಿ ಮಳೆ ನೀರು ಸಂಗ್ರಹಗೊಂಡಿದ್ದರಿಂದ, ಹೆಚ್ಚಿನ ದಟ್ಟಣೆಯನ್ನು ತಡೆಯಲು ಸಂಚಾರ ಪೊಲೀಸರು ಮೇಲ್ಸೇತುವೆಯ ಒಂದು ಬದಿಯನ್ನು ಅನಿವಾರ್ಯವಾಗಿ ಮುಚ್ಚಿದರು.

ಬೆಂಗಳೂರಿನಲ್ಲಿ ಇಂದು ಮುಂಜಾನೆಯ ವೇಳೆಗೆ ಬಹುತೇಕ ಪ್ರದೇಶಗಳಲ್ಲಿ ನೀರು ಕಡಿಮೆಯಾದರೂ ಜಲಾವೃತಗೊಂಡ ಜಾಗಗಳಲ್ಲಿ ಪರಿಸ್ಥಿತಿಯನ್ನು ಇನ್ನಷ್ಟು ಸಂಕೀರ್ಣಗೊಳಿಸಿದವು. ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ಸೇರಿದಂತೆ ಕೆಲವು ಭಾಗಗಳಲ್ಲಿ ಈಗಲೂ ನೀರು ನಿಂತಿದೆ.

ಫ್ಲೈಓವರ್‌ ಮೇಲೆ ಸಿಲುಕಿ ಹತಾಶೆಗೊಂಡ ಪ್ರಯಾಣಿಕರಿಂದ ಸಾಮಾಜಿಕ ಮಾಧ್ಯಮಗಳು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಮನೆಯಿಂದ ಕೆಲಸ ಮಾಡುವ ಸರ್ಕಾರದ ಸಲಹೆಯನ್ನು ಕಂಪನಿಗಳು ಏಕೆ ಅನುಸರಿಸುತ್ತಿಲ್ಲ ಎಂದು ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ. ಅಕ್ಟೋಬರ್ 23 ರಂದು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಕರ್ನಾಟಕ ಸರ್ಕಾರ ಈಗಾಗಲೇ ಖಾಸಗಿ ಕಂಪನಿಗಳಿಗೆ ಸಲಹೆ ನೀಡಿತ್ತು.

1.5 ಗಂಟೆಗಳ ಕಾಲ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಸಿಲುಕಿಕೊಂಡಿದ್ದಾಗಿ ಎಕ್ಸ್‌ನಲ್ಲಿ ಒಬ್ಬರು ಪೋಸ್ಟ್ ಮಾಡಿದ್ದಾರೆ. ಇಷ್ಟೊತ್ತಿಗೆ ನಾನು 30 ಕಿಮೀ ದೂರದಲ್ಲಿರುವ ನನ್ನ ಮನೆಗೆ ತಲುಪಿರಬೇಕಿತ್ತು ಎಂದು ಹೇಳಿದ್ದಾರೆ. ಸಂಜೆ 5:20 ಕ್ಕೆ ಲಾಗ್ ಔಟ್ ಮಾಡಿದರೂ, ನಾನು ಇನ್ನೂ ಸಿಕ್ಕಿಬಿದ್ದಿದ್ದೇನೆ. ದೀರ್ಘ ಕಾಳದ ಕಾಯುವಿಕೆಯಿಂದ ಬೇಸತ್ತ ಹಲವರು ಅನಿವಾರ್ಯವಾಗಿ ವಾಹನ ಬಿಟ್ಟು ನಡೆಯಲು ಪ್ರಾರಂಭಿಸಿದರು ಎಂದು ಹೇಳಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿಯಿಂದ ತಮ್ಮ ಪ್ರಯಾಣ ತಪ್ಪಿಸುವಂತೆ ಮತ್ತೊಬ್ಬ ಎಕ್ಸ್‌ ಬಳಕೆದಾರರು ಇತರರಿಗೆ ಎಚ್ಚರಿಕೆ ನೀಡಿದರು. “ಟ್ರಾಫಿಕ್‌ ಜಾಮ್‌ನಿಂದ ಸಂಪೂರ್ಣ ನರಕ. ಯಾರಾದರೂ ಈಗ ಎಲೆಕ್ಟ್ರಾನಿಕ್ ಸಿಟಿಗೆ ಪ್ರಯಾಣಿಸಲು ಯೋಜಿಸುತ್ತಿದ್ದರೆ, ಅದನ್ನು ಮಾಡಬೇಡಿ. ನನಗೆ ದ್ವಿಚಕ್ರ ವಾಹನದಲ್ಲಿ ಸಾಮಾನ್ಯ ಸಮಯಕ್ಕಿಂತ 4 ಪಟ್ಟು ಹೆಚ್ಚು ತೆಗೆದುಕೊಂಡಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ; ಪ್ರವಾಹದ ಭೀತಿ | ಭಾರೀ ಮಳೆಗೆ ಬೆಂಗಳೂರಿನ 100 ಕೆರೆಗಳು ಭರ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...