Homeಮುಖಪುಟ'ತಾಂತ್ರಿಕ ಸಮಸ್ಯೆ': ಮಹಿಳೆಯರನ್ನು ಪತ್ರಿಕಾಗೋಷ್ಠಿಯಿಂದ ಹೊರಗಿಟ್ಟ ಬಗ್ಗೆ ತಾಲಿಬಾನ್ ಸಚಿವ ಪ್ರತಿಕ್ರಿಯೆ

‘ತಾಂತ್ರಿಕ ಸಮಸ್ಯೆ’: ಮಹಿಳೆಯರನ್ನು ಪತ್ರಿಕಾಗೋಷ್ಠಿಯಿಂದ ಹೊರಗಿಟ್ಟ ಬಗ್ಗೆ ತಾಲಿಬಾನ್ ಸಚಿವ ಪ್ರತಿಕ್ರಿಯೆ

- Advertisement -
- Advertisement -

ನವದೆಹಲಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ಹೊರಗಿಟ್ಟಿರುವುದು ಉದ್ದೇಶಪೂರ್ವಕವಾಗಿರಲಿಲ್ಲ, ಅದು ತಾಂತ್ರಿಕ ಸಮಸ್ಯೆ ಎಂದು ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಹೇಳಿದ್ದಾರೆ.

ಭಾನುವಾರ (ಅ.12) ಎರಡನೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುತ್ತಕಿ, “ಶುಕ್ರವಾರದ ಪತ್ರಿಕಾಗೋಷ್ಠಿಯನ್ನು ಕಡಿಮೆ ಅವಧಿಯಲ್ಲಿ ಆಯೋಜಿಸಲಾಗಿತ್ತು. ಭಾಗವಹಿಸುವವರ ಪಟ್ಟಿಯನ್ನೂ ನಿರ್ದಿಷ್ಟ ಪತ್ರಕರ್ತರೊಂದಿಗೆ ಸೇರಿ ಸಿದ್ಧಪಡಿಸಲಾಗಿತ್ತು. ಹಾಗಾಗಿ, ಇದು ಹೆಚ್ಚಾಗಿ ತಾಂತ್ರಿಕ ಸಮಸ್ಯೆಯಾಗಿದೆ. ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಹೊರಗಿಟ್ಟಿಲ್ಲ ಎಂದಿದ್ದಾರೆ. ಎರಡನೇ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರು ಭಾಗವಹಿಸಿದ್ದರು.

ಮುತ್ತಕಿ ಆರು ದಿನಗಳ ಭಾರತ ಭೇಟಿಯಲ್ಲಿದ್ದಾರೆ. ಅಕ್ಟೋಬರ್ 10 (ಶುಕ್ರವಾರ) ರಂದು ನವದೆಹಲಿಯಲ್ಲಿ ನಡೆದ ಅವರ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ಭಾಗವಹಿಸಲು ಅವಕಾಶವಿರಲಿಲ್ಲ.

ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದು ಮಹಿಳೆಯರು ಶಿಕ್ಷಣ ಮತ್ತು ಹೆಚ್ಚಿನ ಕೆಲಸದ ಸ್ಥಳಗಳನ್ನು ಪ್ರವೇಶಿಸುವುದನ್ನು ತಡೆಯುವುದರಲ್ಲಿ ಕುಖ್ಯಾತಿ ಪಡೆದಿರುವ ತಾಲಿಬಾನ್‌ನ ಸ್ತ್ರೀದ್ವೇಷದ ಪ್ರತಿಬಿಂಬ ಎಂದು ಹಲವರು ಟೀಕಿಸಿದ್ದರು. ಭಾರತದಲ್ಲಿ ಇಂತದಕ್ಕೆ ಅವಕಾಶ ನೀಡಿದ ಪತ್ರಕರ್ತರು ಮತ್ತು ಕೇಂದ್ರ ಸರ್ಕಾರವನ್ನು ಜನರು ತರಾಟೆಗೆ ತೆಗೆದುಕೊಂಡಿದ್ದರು.

ಪಾಕಿಸ್ತಾನದೊಂದಿಗಿನ ಅಫ್ಘಾನಿಸ್ತಾನದ ಸಂಘರ್ಷದ ಕುರಿತು ಮಾತನಾಡಿದ ಮುತ್ತಕಿ, “ನಾವು ಪರಿಸ್ಥಿತಿಗೆ ಶಾಂತಿಯುತ ಪರಿಹಾರವನ್ನು ಬಯಸುತ್ತೇವೆ. ಆದರೆ ಶಾಂತಿ ಪ್ರಯತ್ನಗಳು ಯಶಸ್ವಿಯಾಗದಿದ್ದರೆ ನಮಗೆ ಇತರ ಆಯ್ಕೆಗಳಿವೆ” ಎಂದಿದ್ದಾರೆ.

ಗುರುವಾರ ಪಾಕಿಸ್ತಾನ ಕಾಬೂಲ್‌ನಲ್ಲಿ ವಾಯುದಾಳಿ ನಡೆಸಿದ ನಂತರ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆ ಭಾರತದಲ್ಲಿ ಕುಳಿತು ಮುತ್ತಕಿ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.

“ನಾವು ಪಾಕಿಸ್ತಾನದ ಜನರು ಮತ್ತು ಸರ್ಕಾರದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇವೆ. ಆದರೆ ಆ ದೇಶದ ಕೆಲವು ಅಂಶಗಳನ್ನು ಮುಂದಿಟ್ಟು ಸಮಸ್ಯೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಮುತ್ತಕಿ ಪಾಕಿಸ್ತಾನವನ್ನು ಟೀಕಿಸಿದ್ದಾರೆ.

ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ: ಆರ್‌ಎಸ್‌ಎಸ್‌ ಶಿಬಿರಗಳಲ್ಲಿ ಲೈಂಗಿಕ ದೌರ್ಜನ್ಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...