Homeಮುಖಪುಟವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

ವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

- Advertisement -
- Advertisement -

ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ-3ರ ಮೂಲಕ ಚಂದ್ರನ ಅಂಗಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿ ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಿತ್ತು. ಆದರೆ ಆ ಬಳಿಕ ಪ್ರತಿಪಕ್ಷಗಳ ಕೆಲ ನಾಯಕರು ಚಂದ್ರಯಾನ-3ಕ್ಕೆ ಶ್ರಮಿಸಿದ್ದ ವಿಜ್ಞಾನಿಗಳಿಗೆ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿದ್ದರು. ಇದೀಗ ಆರೋಪಕ್ಕೆ  ಪುಷ್ಠಿ ನೀಡುವಂತೆ ವೇತನ ಸಿಗದೆ ಇಂಜಿನಿಯರ್‌ ಓರ್ವರು ಇಡ್ಲಿ ಮಾರಾಟಕ್ಕೆ ಇಳಿದಿರುವುದು ಬಹಿರಂಗವಾಗಿದೆ.

ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಕೆಲಸ ಮಾಡಿದ್ದ HEC (ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್)ನ ಇಂಜಿನಿಯರ್‌  ದೀಪಕ್ ಕುಮಾರ್ ಉಪ್ರಾರಿಯಾ ಅವರು ಜೀವನ ನಿರ್ವಹಣೆಗಾಗಿ ರಾಂಚಿಯ ರಸ್ತೆಬದಿಯ ಅಂಗಡಿಯಲ್ಲಿ ಇಡ್ಲಿಗಳನ್ನು ಮಾರಾಟ ಮಾಡುತ್ತಿದ್ದಾರೆ.

BBC ವರದಿಯ ಪ್ರಕಾರ, ಉಪ್ರಾರಿಯಾ ಅವರು ರಾಂಚಿಯ ಧುರ್ವಾ ಪ್ರದೇಶದಲ್ಲಿನ ಹಳೆಯ ವಿಧಾನಸಭಾ ಕಟ್ಟಡದ ಎದುರು ಅಂಗಡಿಯನ್ನು ಹೊಂದಿದ್ದಾರೆ. ಚಂದ್ರಯಾನ-3ಗಾಗಿ ಫೋಲ್ಡಿಂಗ್ ಪ್ಲಾಟ್‌ಫಾರ್ಮ್ ಮತ್ತು ಸ್ಲೈಡಿಂಗ್ ಡೋರ್‌ ತಯಾರಿಸಲು ನೆರವಾಗಿದ್ದ ಇವರು HECಯ ಉದ್ಯೋಗಿ. ಆದರೆ ಅವರಿಗೆ ಕಳೆದ 18 ತಿಂಗಳಿನಿಂದ ಸಂಬಳವನ್ನು ಪಾವತಿಸದ ಕಾರಣ ಕುಟುಂಬದ ನಿರ್ವಹಣೆಗೆ ಅವರು ರಸ್ತೆ ಬದಿಯಲ್ಲಿ ಅಂಗಡಿಯನ್ನು ತೆರೆದಿದ್ದಾರೆ.

ಚಂದ್ರಯಾನ-3 ಆಗಸ್ಟ್‌ನಲ್ಲಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈಯಲ್ಲಿ ಲ್ಯಾಂಡಿಂಗ್ ಮಾಡಿತ್ತು. ಈ ವೇಳೆ  ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು ಮತ್ತು ಚಂದ್ರಯಾನ ಮಿಷನ್‌ನ ಲಾಂಚ್‌ಪ್ಯಾಡ್ ನಿರ್ಮಿಸಿದ ವಿಜ್ಞಾನಿಗಳಿಗೆ ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದರು. ಆದರೆ BBC ವರದಿಯ ಪ್ರಕಾರ, ಉಪ್ರಾರಿಯಾ ಸೇರಿ HECಯ ಸುಮಾರು 2,800 ಉದ್ಯೋಗಿಗಳಿಗೆ ಕಳೆದ 18 ತಿಂಗಳುಗಳಿಂದ ವೇತನವನ್ನು ಪಾವತಿ ಮಾಡಲಾಗಿಲ್ಲ.

ಈ ಕುರಿತು ಮಾತನಾಡಿದ ಉಪ್ರಾರಿಯಾ ಅವರು, ಜೀವನ ನಿರ್ವಹಣೆಗೆ ಕಳೆದ ಕೆಲವು ದಿನಗಳಿಂದ ಇಡ್ಲಿಗಳನ್ನು ಮಾರುತ್ತಿದ್ದೇನೆ. ನಾನು ಅಂಗಡಿ ಜೊತೆಗೆ ಕಚೇರಿಯ ಕೆಲಸಗಳನ್ನು ಕೂಡ ಮಾಡುತ್ತೇನೆ. ಬೆಳಿಗ್ಗೆ ಇಡ್ಲಿ ಮಾರಾಟ ಮಾಡುತ್ತೇನೆ. ಮಧ್ಯಾಹ್ನ ಕಚೇರಿಗೆ ಹೋಗುತ್ತೇನೆ. ಸಂಜೆ ಕಚೇರಿಯಿಂದ ಬಂದು  ಇಡ್ಲಿ ಮಾರಾಟದ  ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದ್ದಾರೆ.

ಮೊದಲು ನಾನು  2 ಲಕ್ಷ ಲೋನ್‌ ಪಡೆದು ಮನೆಯನ್ನು ನಿರ್ವಹಿಸಿದೆ. ಬಳಿಕ ಕುಟುಂಬಸ್ಥರಿಂದ ಸಾಲ ಪಡೆಯಲು ಪ್ರಾರಂಭಿಸಿದೆ. ಇದುವರೆಗೆ ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿದ್ದೇನೆ. ಯಾರಿಗೂ ಹಣ ಹಿಂತಿರುಗಿಸದ ಕಾರಣ ಈಗ ಜನರು ಸಾಲ ನೀಡುವುದನ್ನು ನಿಲ್ಲಿಸಿದ್ದಾರೆ. ನಂತರ ನಾನು ನನ್ನ ಹೆಂಡತಿಯ ಆಭರಣಗಳನ್ನು ಅಡಮಾನವಿಟ್ಟು ಕೆಲವು ದಿನ ಮನೆ ನಡೆಸಿದ್ದೇನೆ ಎಂದು ಅವರು ಹೇಳಿದರು.

ಹಸಿವಿನ ಸಮಯ ನನಗೆ ಎದುರಾಗಿದೆ ಎಂದು ಭಾವಿಸಿದಾಗ ನಾನು ಇಡ್ಲಿಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. ನನ್ನ ಹೆಂಡತಿ ಇಡ್ಲಿಗಳನ್ನು ಮಾಡುತ್ತಾಳೆ. ಅದನ್ನು ಮಾರಾಟ ಮಾಡುವುದರಿಂದ ನನಗೆ ಪ್ರತಿದಿನ 300 ರಿಂದ 400 ರೂಪಾಯಿಗಳು ಸಿಗುತ್ತವೆ. ಅದರಲ್ಲಿ ನಾನು 50-100 ರೂಪಾಯಿ ಲಾಭ ಗಳಿಸುತ್ತೇನೆ. ಈ ಹಣದಲ್ಲಿ ನಾನು ನನ್ನ ಮನೆಯನ್ನು ಮುನ್ನೆಡೆಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಬಿಸಿ ಪ್ರಕಾರ, ಉಪ್ರಾರಿಯಾ ಅವರು ಮಧ್ಯಪ್ರದೇಶದ ಹರ್ದಾ ಜಿಲ್ಲೆಯವರು. 2012ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಬಿಟ್ಟು 8,000 ಸಂಬಳಕ್ಕೆ ಎಚ್‌ಇಸಿಗೆ ಸೇರಿದ್ದರು. ಸರ್ಕಾರಿ ಕಂಪನಿಯಾದ ಕಾರಣ ಅವರು ತಮ್ಮ ಭವಿಷ್ಯ ಉಜ್ವಲವಾಗಲಿದೆ ಎಂದು ಭಾವಿಸಿದ್ದರು. ಆದರೆ ಪರಿಸ್ಥಿತಿ ಇದೀಗ ಬೇರೆಯೇ ಆಗಿದೆ.

ನನಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇಬ್ಬರೂ ಶಾಲೆಗೆ ಹೋಗುತ್ತಾರೆ. ಈ ವರ್ಷ ನಾನು ಅವರ ಶಾಲಾ ಶುಲ್ಕವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಶಾಲೆಯಿಂದ ಪ್ರತಿದಿನ ನೋಟಿಸ್ ಕಳುಹಿಸಲಾಗುತ್ತಿದೆ. ತರಗತಿಯಲ್ಲಿಯೂ ಸಹ ಶಿಕ್ಷಕರು ಹೆಚ್ಇಸಿಯಲ್ಲಿ ಕೆಲಸ ಮಾಡುವ ಪೋಷಕರ ಮಕ್ಕಳು ಯಾರು ಎಂದು ಕೇಳುತ್ತಾರೆ. ಎದ್ದು ನಿಲ್ಲಲು ಅವರು ಹೇಳುತ್ತಾರೆ. ನನ್ನ ಮಕ್ಕಳು ಅವಮಾನಕ್ಕೊಳಗಾಗಿದ್ದಾರೆ. ನನ್ನ ಹೆಣ್ಣು ಮಕ್ಕಳು ಅಳುತ್ತಾ ಮನೆಗೆ ಬರುತ್ತಾರೆ. ಅವರು ಅಳುವುದನ್ನು ನೋಡಿ ನನ್ನ ಹೃದಯ ಒಡೆಯುತ್ತದೆ ಎಂದು ಉಪ್ರಾರಿಯಾ ಹೇಳಿದ್ದಾರೆ.

ಬಿಬಿಸಿ ಪ್ರಕಾರ, ಈ ಪರಿಸ್ಥಿತಿ ದೀಪಕ್ ಉಪ್ರಾರಿಯಾಗೆ ಮಾತ್ರವಲ್ಲ. ಅವರಂತೆಯೇ HECಯಲ್ಲಿ ಕೆಲಸ ಮಾಡುವ ಕೆಲ ಸಿಬ್ಬಂದಿಗಳು ವೇತನ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್‌ ಮಂಡನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. HEC employees ge sambla kodlilla Andre ISRO employee sambla sigde kelsa bitta anta baritira alla nimge social responsibility illva .. yen nam deshad maryadi tegiyakke anta ne hutkotiro ..fake news channel thu

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...