Homeಮುಖಪುಟವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

ವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

- Advertisement -
- Advertisement -

ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ-3ರ ಮೂಲಕ ಚಂದ್ರನ ಅಂಗಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿ ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಿತ್ತು. ಆದರೆ ಆ ಬಳಿಕ ಪ್ರತಿಪಕ್ಷಗಳ ಕೆಲ ನಾಯಕರು ಚಂದ್ರಯಾನ-3ಕ್ಕೆ ಶ್ರಮಿಸಿದ್ದ ವಿಜ್ಞಾನಿಗಳಿಗೆ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿದ್ದರು. ಇದೀಗ ಆರೋಪಕ್ಕೆ  ಪುಷ್ಠಿ ನೀಡುವಂತೆ ವೇತನ ಸಿಗದೆ ಇಂಜಿನಿಯರ್‌ ಓರ್ವರು ಇಡ್ಲಿ ಮಾರಾಟಕ್ಕೆ ಇಳಿದಿರುವುದು ಬಹಿರಂಗವಾಗಿದೆ.

ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಕೆಲಸ ಮಾಡಿದ್ದ HEC (ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್)ನ ಇಂಜಿನಿಯರ್‌  ದೀಪಕ್ ಕುಮಾರ್ ಉಪ್ರಾರಿಯಾ ಅವರು ಜೀವನ ನಿರ್ವಹಣೆಗಾಗಿ ರಾಂಚಿಯ ರಸ್ತೆಬದಿಯ ಅಂಗಡಿಯಲ್ಲಿ ಇಡ್ಲಿಗಳನ್ನು ಮಾರಾಟ ಮಾಡುತ್ತಿದ್ದಾರೆ.

BBC ವರದಿಯ ಪ್ರಕಾರ, ಉಪ್ರಾರಿಯಾ ಅವರು ರಾಂಚಿಯ ಧುರ್ವಾ ಪ್ರದೇಶದಲ್ಲಿನ ಹಳೆಯ ವಿಧಾನಸಭಾ ಕಟ್ಟಡದ ಎದುರು ಅಂಗಡಿಯನ್ನು ಹೊಂದಿದ್ದಾರೆ. ಚಂದ್ರಯಾನ-3ಗಾಗಿ ಫೋಲ್ಡಿಂಗ್ ಪ್ಲಾಟ್‌ಫಾರ್ಮ್ ಮತ್ತು ಸ್ಲೈಡಿಂಗ್ ಡೋರ್‌ ತಯಾರಿಸಲು ನೆರವಾಗಿದ್ದ ಇವರು HECಯ ಉದ್ಯೋಗಿ. ಆದರೆ ಅವರಿಗೆ ಕಳೆದ 18 ತಿಂಗಳಿನಿಂದ ಸಂಬಳವನ್ನು ಪಾವತಿಸದ ಕಾರಣ ಕುಟುಂಬದ ನಿರ್ವಹಣೆಗೆ ಅವರು ರಸ್ತೆ ಬದಿಯಲ್ಲಿ ಅಂಗಡಿಯನ್ನು ತೆರೆದಿದ್ದಾರೆ.

ಚಂದ್ರಯಾನ-3 ಆಗಸ್ಟ್‌ನಲ್ಲಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈಯಲ್ಲಿ ಲ್ಯಾಂಡಿಂಗ್ ಮಾಡಿತ್ತು. ಈ ವೇಳೆ  ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು ಮತ್ತು ಚಂದ್ರಯಾನ ಮಿಷನ್‌ನ ಲಾಂಚ್‌ಪ್ಯಾಡ್ ನಿರ್ಮಿಸಿದ ವಿಜ್ಞಾನಿಗಳಿಗೆ ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದರು. ಆದರೆ BBC ವರದಿಯ ಪ್ರಕಾರ, ಉಪ್ರಾರಿಯಾ ಸೇರಿ HECಯ ಸುಮಾರು 2,800 ಉದ್ಯೋಗಿಗಳಿಗೆ ಕಳೆದ 18 ತಿಂಗಳುಗಳಿಂದ ವೇತನವನ್ನು ಪಾವತಿ ಮಾಡಲಾಗಿಲ್ಲ.

ಈ ಕುರಿತು ಮಾತನಾಡಿದ ಉಪ್ರಾರಿಯಾ ಅವರು, ಜೀವನ ನಿರ್ವಹಣೆಗೆ ಕಳೆದ ಕೆಲವು ದಿನಗಳಿಂದ ಇಡ್ಲಿಗಳನ್ನು ಮಾರುತ್ತಿದ್ದೇನೆ. ನಾನು ಅಂಗಡಿ ಜೊತೆಗೆ ಕಚೇರಿಯ ಕೆಲಸಗಳನ್ನು ಕೂಡ ಮಾಡುತ್ತೇನೆ. ಬೆಳಿಗ್ಗೆ ಇಡ್ಲಿ ಮಾರಾಟ ಮಾಡುತ್ತೇನೆ. ಮಧ್ಯಾಹ್ನ ಕಚೇರಿಗೆ ಹೋಗುತ್ತೇನೆ. ಸಂಜೆ ಕಚೇರಿಯಿಂದ ಬಂದು  ಇಡ್ಲಿ ಮಾರಾಟದ  ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದ್ದಾರೆ.

ಮೊದಲು ನಾನು  2 ಲಕ್ಷ ಲೋನ್‌ ಪಡೆದು ಮನೆಯನ್ನು ನಿರ್ವಹಿಸಿದೆ. ಬಳಿಕ ಕುಟುಂಬಸ್ಥರಿಂದ ಸಾಲ ಪಡೆಯಲು ಪ್ರಾರಂಭಿಸಿದೆ. ಇದುವರೆಗೆ ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿದ್ದೇನೆ. ಯಾರಿಗೂ ಹಣ ಹಿಂತಿರುಗಿಸದ ಕಾರಣ ಈಗ ಜನರು ಸಾಲ ನೀಡುವುದನ್ನು ನಿಲ್ಲಿಸಿದ್ದಾರೆ. ನಂತರ ನಾನು ನನ್ನ ಹೆಂಡತಿಯ ಆಭರಣಗಳನ್ನು ಅಡಮಾನವಿಟ್ಟು ಕೆಲವು ದಿನ ಮನೆ ನಡೆಸಿದ್ದೇನೆ ಎಂದು ಅವರು ಹೇಳಿದರು.

ಹಸಿವಿನ ಸಮಯ ನನಗೆ ಎದುರಾಗಿದೆ ಎಂದು ಭಾವಿಸಿದಾಗ ನಾನು ಇಡ್ಲಿಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. ನನ್ನ ಹೆಂಡತಿ ಇಡ್ಲಿಗಳನ್ನು ಮಾಡುತ್ತಾಳೆ. ಅದನ್ನು ಮಾರಾಟ ಮಾಡುವುದರಿಂದ ನನಗೆ ಪ್ರತಿದಿನ 300 ರಿಂದ 400 ರೂಪಾಯಿಗಳು ಸಿಗುತ್ತವೆ. ಅದರಲ್ಲಿ ನಾನು 50-100 ರೂಪಾಯಿ ಲಾಭ ಗಳಿಸುತ್ತೇನೆ. ಈ ಹಣದಲ್ಲಿ ನಾನು ನನ್ನ ಮನೆಯನ್ನು ಮುನ್ನೆಡೆಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಬಿಸಿ ಪ್ರಕಾರ, ಉಪ್ರಾರಿಯಾ ಅವರು ಮಧ್ಯಪ್ರದೇಶದ ಹರ್ದಾ ಜಿಲ್ಲೆಯವರು. 2012ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಬಿಟ್ಟು 8,000 ಸಂಬಳಕ್ಕೆ ಎಚ್‌ಇಸಿಗೆ ಸೇರಿದ್ದರು. ಸರ್ಕಾರಿ ಕಂಪನಿಯಾದ ಕಾರಣ ಅವರು ತಮ್ಮ ಭವಿಷ್ಯ ಉಜ್ವಲವಾಗಲಿದೆ ಎಂದು ಭಾವಿಸಿದ್ದರು. ಆದರೆ ಪರಿಸ್ಥಿತಿ ಇದೀಗ ಬೇರೆಯೇ ಆಗಿದೆ.

ನನಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇಬ್ಬರೂ ಶಾಲೆಗೆ ಹೋಗುತ್ತಾರೆ. ಈ ವರ್ಷ ನಾನು ಅವರ ಶಾಲಾ ಶುಲ್ಕವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಶಾಲೆಯಿಂದ ಪ್ರತಿದಿನ ನೋಟಿಸ್ ಕಳುಹಿಸಲಾಗುತ್ತಿದೆ. ತರಗತಿಯಲ್ಲಿಯೂ ಸಹ ಶಿಕ್ಷಕರು ಹೆಚ್ಇಸಿಯಲ್ಲಿ ಕೆಲಸ ಮಾಡುವ ಪೋಷಕರ ಮಕ್ಕಳು ಯಾರು ಎಂದು ಕೇಳುತ್ತಾರೆ. ಎದ್ದು ನಿಲ್ಲಲು ಅವರು ಹೇಳುತ್ತಾರೆ. ನನ್ನ ಮಕ್ಕಳು ಅವಮಾನಕ್ಕೊಳಗಾಗಿದ್ದಾರೆ. ನನ್ನ ಹೆಣ್ಣು ಮಕ್ಕಳು ಅಳುತ್ತಾ ಮನೆಗೆ ಬರುತ್ತಾರೆ. ಅವರು ಅಳುವುದನ್ನು ನೋಡಿ ನನ್ನ ಹೃದಯ ಒಡೆಯುತ್ತದೆ ಎಂದು ಉಪ್ರಾರಿಯಾ ಹೇಳಿದ್ದಾರೆ.

ಬಿಬಿಸಿ ಪ್ರಕಾರ, ಈ ಪರಿಸ್ಥಿತಿ ದೀಪಕ್ ಉಪ್ರಾರಿಯಾಗೆ ಮಾತ್ರವಲ್ಲ. ಅವರಂತೆಯೇ HECಯಲ್ಲಿ ಕೆಲಸ ಮಾಡುವ ಕೆಲ ಸಿಬ್ಬಂದಿಗಳು ವೇತನ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್‌ ಮಂಡನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. HEC employees ge sambla kodlilla Andre ISRO employee sambla sigde kelsa bitta anta baritira alla nimge social responsibility illva .. yen nam deshad maryadi tegiyakke anta ne hutkotiro ..fake news channel thu

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...