Homeಮುಖಪುಟವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

ವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

- Advertisement -
- Advertisement -

ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ-3ರ ಮೂಲಕ ಚಂದ್ರನ ಅಂಗಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿ ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಿತ್ತು. ಆದರೆ ಆ ಬಳಿಕ ಪ್ರತಿಪಕ್ಷಗಳ ಕೆಲ ನಾಯಕರು ಚಂದ್ರಯಾನ-3ಕ್ಕೆ ಶ್ರಮಿಸಿದ್ದ ವಿಜ್ಞಾನಿಗಳಿಗೆ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿದ್ದರು. ಇದೀಗ ಆರೋಪಕ್ಕೆ  ಪುಷ್ಠಿ ನೀಡುವಂತೆ ವೇತನ ಸಿಗದೆ ಇಂಜಿನಿಯರ್‌ ಓರ್ವರು ಇಡ್ಲಿ ಮಾರಾಟಕ್ಕೆ ಇಳಿದಿರುವುದು ಬಹಿರಂಗವಾಗಿದೆ.

ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಕೆಲಸ ಮಾಡಿದ್ದ HEC (ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್)ನ ಇಂಜಿನಿಯರ್‌  ದೀಪಕ್ ಕುಮಾರ್ ಉಪ್ರಾರಿಯಾ ಅವರು ಜೀವನ ನಿರ್ವಹಣೆಗಾಗಿ ರಾಂಚಿಯ ರಸ್ತೆಬದಿಯ ಅಂಗಡಿಯಲ್ಲಿ ಇಡ್ಲಿಗಳನ್ನು ಮಾರಾಟ ಮಾಡುತ್ತಿದ್ದಾರೆ.

BBC ವರದಿಯ ಪ್ರಕಾರ, ಉಪ್ರಾರಿಯಾ ಅವರು ರಾಂಚಿಯ ಧುರ್ವಾ ಪ್ರದೇಶದಲ್ಲಿನ ಹಳೆಯ ವಿಧಾನಸಭಾ ಕಟ್ಟಡದ ಎದುರು ಅಂಗಡಿಯನ್ನು ಹೊಂದಿದ್ದಾರೆ. ಚಂದ್ರಯಾನ-3ಗಾಗಿ ಫೋಲ್ಡಿಂಗ್ ಪ್ಲಾಟ್‌ಫಾರ್ಮ್ ಮತ್ತು ಸ್ಲೈಡಿಂಗ್ ಡೋರ್‌ ತಯಾರಿಸಲು ನೆರವಾಗಿದ್ದ ಇವರು HECಯ ಉದ್ಯೋಗಿ. ಆದರೆ ಅವರಿಗೆ ಕಳೆದ 18 ತಿಂಗಳಿನಿಂದ ಸಂಬಳವನ್ನು ಪಾವತಿಸದ ಕಾರಣ ಕುಟುಂಬದ ನಿರ್ವಹಣೆಗೆ ಅವರು ರಸ್ತೆ ಬದಿಯಲ್ಲಿ ಅಂಗಡಿಯನ್ನು ತೆರೆದಿದ್ದಾರೆ.

ಚಂದ್ರಯಾನ-3 ಆಗಸ್ಟ್‌ನಲ್ಲಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈಯಲ್ಲಿ ಲ್ಯಾಂಡಿಂಗ್ ಮಾಡಿತ್ತು. ಈ ವೇಳೆ  ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು ಮತ್ತು ಚಂದ್ರಯಾನ ಮಿಷನ್‌ನ ಲಾಂಚ್‌ಪ್ಯಾಡ್ ನಿರ್ಮಿಸಿದ ವಿಜ್ಞಾನಿಗಳಿಗೆ ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದರು. ಆದರೆ BBC ವರದಿಯ ಪ್ರಕಾರ, ಉಪ್ರಾರಿಯಾ ಸೇರಿ HECಯ ಸುಮಾರು 2,800 ಉದ್ಯೋಗಿಗಳಿಗೆ ಕಳೆದ 18 ತಿಂಗಳುಗಳಿಂದ ವೇತನವನ್ನು ಪಾವತಿ ಮಾಡಲಾಗಿಲ್ಲ.

ಈ ಕುರಿತು ಮಾತನಾಡಿದ ಉಪ್ರಾರಿಯಾ ಅವರು, ಜೀವನ ನಿರ್ವಹಣೆಗೆ ಕಳೆದ ಕೆಲವು ದಿನಗಳಿಂದ ಇಡ್ಲಿಗಳನ್ನು ಮಾರುತ್ತಿದ್ದೇನೆ. ನಾನು ಅಂಗಡಿ ಜೊತೆಗೆ ಕಚೇರಿಯ ಕೆಲಸಗಳನ್ನು ಕೂಡ ಮಾಡುತ್ತೇನೆ. ಬೆಳಿಗ್ಗೆ ಇಡ್ಲಿ ಮಾರಾಟ ಮಾಡುತ್ತೇನೆ. ಮಧ್ಯಾಹ್ನ ಕಚೇರಿಗೆ ಹೋಗುತ್ತೇನೆ. ಸಂಜೆ ಕಚೇರಿಯಿಂದ ಬಂದು  ಇಡ್ಲಿ ಮಾರಾಟದ  ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದ್ದಾರೆ.

ಮೊದಲು ನಾನು  2 ಲಕ್ಷ ಲೋನ್‌ ಪಡೆದು ಮನೆಯನ್ನು ನಿರ್ವಹಿಸಿದೆ. ಬಳಿಕ ಕುಟುಂಬಸ್ಥರಿಂದ ಸಾಲ ಪಡೆಯಲು ಪ್ರಾರಂಭಿಸಿದೆ. ಇದುವರೆಗೆ ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿದ್ದೇನೆ. ಯಾರಿಗೂ ಹಣ ಹಿಂತಿರುಗಿಸದ ಕಾರಣ ಈಗ ಜನರು ಸಾಲ ನೀಡುವುದನ್ನು ನಿಲ್ಲಿಸಿದ್ದಾರೆ. ನಂತರ ನಾನು ನನ್ನ ಹೆಂಡತಿಯ ಆಭರಣಗಳನ್ನು ಅಡಮಾನವಿಟ್ಟು ಕೆಲವು ದಿನ ಮನೆ ನಡೆಸಿದ್ದೇನೆ ಎಂದು ಅವರು ಹೇಳಿದರು.

ಹಸಿವಿನ ಸಮಯ ನನಗೆ ಎದುರಾಗಿದೆ ಎಂದು ಭಾವಿಸಿದಾಗ ನಾನು ಇಡ್ಲಿಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. ನನ್ನ ಹೆಂಡತಿ ಇಡ್ಲಿಗಳನ್ನು ಮಾಡುತ್ತಾಳೆ. ಅದನ್ನು ಮಾರಾಟ ಮಾಡುವುದರಿಂದ ನನಗೆ ಪ್ರತಿದಿನ 300 ರಿಂದ 400 ರೂಪಾಯಿಗಳು ಸಿಗುತ್ತವೆ. ಅದರಲ್ಲಿ ನಾನು 50-100 ರೂಪಾಯಿ ಲಾಭ ಗಳಿಸುತ್ತೇನೆ. ಈ ಹಣದಲ್ಲಿ ನಾನು ನನ್ನ ಮನೆಯನ್ನು ಮುನ್ನೆಡೆಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಬಿಸಿ ಪ್ರಕಾರ, ಉಪ್ರಾರಿಯಾ ಅವರು ಮಧ್ಯಪ್ರದೇಶದ ಹರ್ದಾ ಜಿಲ್ಲೆಯವರು. 2012ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಬಿಟ್ಟು 8,000 ಸಂಬಳಕ್ಕೆ ಎಚ್‌ಇಸಿಗೆ ಸೇರಿದ್ದರು. ಸರ್ಕಾರಿ ಕಂಪನಿಯಾದ ಕಾರಣ ಅವರು ತಮ್ಮ ಭವಿಷ್ಯ ಉಜ್ವಲವಾಗಲಿದೆ ಎಂದು ಭಾವಿಸಿದ್ದರು. ಆದರೆ ಪರಿಸ್ಥಿತಿ ಇದೀಗ ಬೇರೆಯೇ ಆಗಿದೆ.

ನನಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇಬ್ಬರೂ ಶಾಲೆಗೆ ಹೋಗುತ್ತಾರೆ. ಈ ವರ್ಷ ನಾನು ಅವರ ಶಾಲಾ ಶುಲ್ಕವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಶಾಲೆಯಿಂದ ಪ್ರತಿದಿನ ನೋಟಿಸ್ ಕಳುಹಿಸಲಾಗುತ್ತಿದೆ. ತರಗತಿಯಲ್ಲಿಯೂ ಸಹ ಶಿಕ್ಷಕರು ಹೆಚ್ಇಸಿಯಲ್ಲಿ ಕೆಲಸ ಮಾಡುವ ಪೋಷಕರ ಮಕ್ಕಳು ಯಾರು ಎಂದು ಕೇಳುತ್ತಾರೆ. ಎದ್ದು ನಿಲ್ಲಲು ಅವರು ಹೇಳುತ್ತಾರೆ. ನನ್ನ ಮಕ್ಕಳು ಅವಮಾನಕ್ಕೊಳಗಾಗಿದ್ದಾರೆ. ನನ್ನ ಹೆಣ್ಣು ಮಕ್ಕಳು ಅಳುತ್ತಾ ಮನೆಗೆ ಬರುತ್ತಾರೆ. ಅವರು ಅಳುವುದನ್ನು ನೋಡಿ ನನ್ನ ಹೃದಯ ಒಡೆಯುತ್ತದೆ ಎಂದು ಉಪ್ರಾರಿಯಾ ಹೇಳಿದ್ದಾರೆ.

ಬಿಬಿಸಿ ಪ್ರಕಾರ, ಈ ಪರಿಸ್ಥಿತಿ ದೀಪಕ್ ಉಪ್ರಾರಿಯಾಗೆ ಮಾತ್ರವಲ್ಲ. ಅವರಂತೆಯೇ HECಯಲ್ಲಿ ಕೆಲಸ ಮಾಡುವ ಕೆಲ ಸಿಬ್ಬಂದಿಗಳು ವೇತನ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್‌ ಮಂಡನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. HEC employees ge sambla kodlilla Andre ISRO employee sambla sigde kelsa bitta anta baritira alla nimge social responsibility illva .. yen nam deshad maryadi tegiyakke anta ne hutkotiro ..fake news channel thu

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...