Homeಮುಖಪುಟವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

ವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

- Advertisement -
- Advertisement -

ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ-3ರ ಮೂಲಕ ಚಂದ್ರನ ಅಂಗಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿ ವಿಶ್ವವೇ ಬೆರಗಾಗುವಂತೆ ಸಾಧನೆ ಮಾಡಿತ್ತು. ಆದರೆ ಆ ಬಳಿಕ ಪ್ರತಿಪಕ್ಷಗಳ ಕೆಲ ನಾಯಕರು ಚಂದ್ರಯಾನ-3ಕ್ಕೆ ಶ್ರಮಿಸಿದ್ದ ವಿಜ್ಞಾನಿಗಳಿಗೆ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿದ್ದರು. ಇದೀಗ ಆರೋಪಕ್ಕೆ  ಪುಷ್ಠಿ ನೀಡುವಂತೆ ವೇತನ ಸಿಗದೆ ಇಂಜಿನಿಯರ್‌ ಓರ್ವರು ಇಡ್ಲಿ ಮಾರಾಟಕ್ಕೆ ಇಳಿದಿರುವುದು ಬಹಿರಂಗವಾಗಿದೆ.

ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಕೆಲಸ ಮಾಡಿದ್ದ HEC (ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್)ನ ಇಂಜಿನಿಯರ್‌  ದೀಪಕ್ ಕುಮಾರ್ ಉಪ್ರಾರಿಯಾ ಅವರು ಜೀವನ ನಿರ್ವಹಣೆಗಾಗಿ ರಾಂಚಿಯ ರಸ್ತೆಬದಿಯ ಅಂಗಡಿಯಲ್ಲಿ ಇಡ್ಲಿಗಳನ್ನು ಮಾರಾಟ ಮಾಡುತ್ತಿದ್ದಾರೆ.

BBC ವರದಿಯ ಪ್ರಕಾರ, ಉಪ್ರಾರಿಯಾ ಅವರು ರಾಂಚಿಯ ಧುರ್ವಾ ಪ್ರದೇಶದಲ್ಲಿನ ಹಳೆಯ ವಿಧಾನಸಭಾ ಕಟ್ಟಡದ ಎದುರು ಅಂಗಡಿಯನ್ನು ಹೊಂದಿದ್ದಾರೆ. ಚಂದ್ರಯಾನ-3ಗಾಗಿ ಫೋಲ್ಡಿಂಗ್ ಪ್ಲಾಟ್‌ಫಾರ್ಮ್ ಮತ್ತು ಸ್ಲೈಡಿಂಗ್ ಡೋರ್‌ ತಯಾರಿಸಲು ನೆರವಾಗಿದ್ದ ಇವರು HECಯ ಉದ್ಯೋಗಿ. ಆದರೆ ಅವರಿಗೆ ಕಳೆದ 18 ತಿಂಗಳಿನಿಂದ ಸಂಬಳವನ್ನು ಪಾವತಿಸದ ಕಾರಣ ಕುಟುಂಬದ ನಿರ್ವಹಣೆಗೆ ಅವರು ರಸ್ತೆ ಬದಿಯಲ್ಲಿ ಅಂಗಡಿಯನ್ನು ತೆರೆದಿದ್ದಾರೆ.

ಚಂದ್ರಯಾನ-3 ಆಗಸ್ಟ್‌ನಲ್ಲಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈಯಲ್ಲಿ ಲ್ಯಾಂಡಿಂಗ್ ಮಾಡಿತ್ತು. ಈ ವೇಳೆ  ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು ಮತ್ತು ಚಂದ್ರಯಾನ ಮಿಷನ್‌ನ ಲಾಂಚ್‌ಪ್ಯಾಡ್ ನಿರ್ಮಿಸಿದ ವಿಜ್ಞಾನಿಗಳಿಗೆ ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದರು. ಆದರೆ BBC ವರದಿಯ ಪ್ರಕಾರ, ಉಪ್ರಾರಿಯಾ ಸೇರಿ HECಯ ಸುಮಾರು 2,800 ಉದ್ಯೋಗಿಗಳಿಗೆ ಕಳೆದ 18 ತಿಂಗಳುಗಳಿಂದ ವೇತನವನ್ನು ಪಾವತಿ ಮಾಡಲಾಗಿಲ್ಲ.

ಈ ಕುರಿತು ಮಾತನಾಡಿದ ಉಪ್ರಾರಿಯಾ ಅವರು, ಜೀವನ ನಿರ್ವಹಣೆಗೆ ಕಳೆದ ಕೆಲವು ದಿನಗಳಿಂದ ಇಡ್ಲಿಗಳನ್ನು ಮಾರುತ್ತಿದ್ದೇನೆ. ನಾನು ಅಂಗಡಿ ಜೊತೆಗೆ ಕಚೇರಿಯ ಕೆಲಸಗಳನ್ನು ಕೂಡ ಮಾಡುತ್ತೇನೆ. ಬೆಳಿಗ್ಗೆ ಇಡ್ಲಿ ಮಾರಾಟ ಮಾಡುತ್ತೇನೆ. ಮಧ್ಯಾಹ್ನ ಕಚೇರಿಗೆ ಹೋಗುತ್ತೇನೆ. ಸಂಜೆ ಕಚೇರಿಯಿಂದ ಬಂದು  ಇಡ್ಲಿ ಮಾರಾಟದ  ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದ್ದಾರೆ.

ಮೊದಲು ನಾನು  2 ಲಕ್ಷ ಲೋನ್‌ ಪಡೆದು ಮನೆಯನ್ನು ನಿರ್ವಹಿಸಿದೆ. ಬಳಿಕ ಕುಟುಂಬಸ್ಥರಿಂದ ಸಾಲ ಪಡೆಯಲು ಪ್ರಾರಂಭಿಸಿದೆ. ಇದುವರೆಗೆ ನಾಲ್ಕು ಲಕ್ಷ ರೂಪಾಯಿ ಸಾಲ ಮಾಡಿದ್ದೇನೆ. ಯಾರಿಗೂ ಹಣ ಹಿಂತಿರುಗಿಸದ ಕಾರಣ ಈಗ ಜನರು ಸಾಲ ನೀಡುವುದನ್ನು ನಿಲ್ಲಿಸಿದ್ದಾರೆ. ನಂತರ ನಾನು ನನ್ನ ಹೆಂಡತಿಯ ಆಭರಣಗಳನ್ನು ಅಡಮಾನವಿಟ್ಟು ಕೆಲವು ದಿನ ಮನೆ ನಡೆಸಿದ್ದೇನೆ ಎಂದು ಅವರು ಹೇಳಿದರು.

ಹಸಿವಿನ ಸಮಯ ನನಗೆ ಎದುರಾಗಿದೆ ಎಂದು ಭಾವಿಸಿದಾಗ ನಾನು ಇಡ್ಲಿಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ. ನನ್ನ ಹೆಂಡತಿ ಇಡ್ಲಿಗಳನ್ನು ಮಾಡುತ್ತಾಳೆ. ಅದನ್ನು ಮಾರಾಟ ಮಾಡುವುದರಿಂದ ನನಗೆ ಪ್ರತಿದಿನ 300 ರಿಂದ 400 ರೂಪಾಯಿಗಳು ಸಿಗುತ್ತವೆ. ಅದರಲ್ಲಿ ನಾನು 50-100 ರೂಪಾಯಿ ಲಾಭ ಗಳಿಸುತ್ತೇನೆ. ಈ ಹಣದಲ್ಲಿ ನಾನು ನನ್ನ ಮನೆಯನ್ನು ಮುನ್ನೆಡೆಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಬಿಬಿಸಿ ಪ್ರಕಾರ, ಉಪ್ರಾರಿಯಾ ಅವರು ಮಧ್ಯಪ್ರದೇಶದ ಹರ್ದಾ ಜಿಲ್ಲೆಯವರು. 2012ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಬಿಟ್ಟು 8,000 ಸಂಬಳಕ್ಕೆ ಎಚ್‌ಇಸಿಗೆ ಸೇರಿದ್ದರು. ಸರ್ಕಾರಿ ಕಂಪನಿಯಾದ ಕಾರಣ ಅವರು ತಮ್ಮ ಭವಿಷ್ಯ ಉಜ್ವಲವಾಗಲಿದೆ ಎಂದು ಭಾವಿಸಿದ್ದರು. ಆದರೆ ಪರಿಸ್ಥಿತಿ ಇದೀಗ ಬೇರೆಯೇ ಆಗಿದೆ.

ನನಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇಬ್ಬರೂ ಶಾಲೆಗೆ ಹೋಗುತ್ತಾರೆ. ಈ ವರ್ಷ ನಾನು ಅವರ ಶಾಲಾ ಶುಲ್ಕವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಶಾಲೆಯಿಂದ ಪ್ರತಿದಿನ ನೋಟಿಸ್ ಕಳುಹಿಸಲಾಗುತ್ತಿದೆ. ತರಗತಿಯಲ್ಲಿಯೂ ಸಹ ಶಿಕ್ಷಕರು ಹೆಚ್ಇಸಿಯಲ್ಲಿ ಕೆಲಸ ಮಾಡುವ ಪೋಷಕರ ಮಕ್ಕಳು ಯಾರು ಎಂದು ಕೇಳುತ್ತಾರೆ. ಎದ್ದು ನಿಲ್ಲಲು ಅವರು ಹೇಳುತ್ತಾರೆ. ನನ್ನ ಮಕ್ಕಳು ಅವಮಾನಕ್ಕೊಳಗಾಗಿದ್ದಾರೆ. ನನ್ನ ಹೆಣ್ಣು ಮಕ್ಕಳು ಅಳುತ್ತಾ ಮನೆಗೆ ಬರುತ್ತಾರೆ. ಅವರು ಅಳುವುದನ್ನು ನೋಡಿ ನನ್ನ ಹೃದಯ ಒಡೆಯುತ್ತದೆ ಎಂದು ಉಪ್ರಾರಿಯಾ ಹೇಳಿದ್ದಾರೆ.

ಬಿಬಿಸಿ ಪ್ರಕಾರ, ಈ ಪರಿಸ್ಥಿತಿ ದೀಪಕ್ ಉಪ್ರಾರಿಯಾಗೆ ಮಾತ್ರವಲ್ಲ. ಅವರಂತೆಯೇ HECಯಲ್ಲಿ ಕೆಲಸ ಮಾಡುವ ಕೆಲ ಸಿಬ್ಬಂದಿಗಳು ವೇತನ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದೆ.

ಇದನ್ನು ಓದಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್‌ ಮಂಡನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. HEC employees ge sambla kodlilla Andre ISRO employee sambla sigde kelsa bitta anta baritira alla nimge social responsibility illva .. yen nam deshad maryadi tegiyakke anta ne hutkotiro ..fake news channel thu

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...