Homeರಾಷ್ಟ್ರೀಯತೀಸ್ತಾ ಬಂಧನ: ಜಾಗರೂಕತೆಯಿಂದ ಪ್ರತಿಕ್ರಿಯಿಸಿದ ಕಾಂಗ್ರೆಸ್; ಬಂಧನವನ್ನು ಪ್ರಶ್ನಿಸಿ, ಬಿಡುಗಡೆಗೆ ಆಗ್ರಹಿಸಿದ ಎಡಪಕ್ಷಗಳು

ತೀಸ್ತಾ ಬಂಧನ: ಜಾಗರೂಕತೆಯಿಂದ ಪ್ರತಿಕ್ರಿಯಿಸಿದ ಕಾಂಗ್ರೆಸ್; ಬಂಧನವನ್ನು ಪ್ರಶ್ನಿಸಿ, ಬಿಡುಗಡೆಗೆ ಆಗ್ರಹಿಸಿದ ಎಡಪಕ್ಷಗಳು

- Advertisement -
- Advertisement -

ದೇಶದ ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್‌ವಾಡ್‌ ಅವರನ್ನು ಗುಜರಾತ್‌ ಪೊಲೀಸರು ಬಂಧಿಸಿರುವ ಕುರಿತು ಕಾಂಗ್ರೆಸ್‌ ಶನಿವಾರ ಜಾಗರೂಕತೆಯಿಂದ ಪ್ರತಿಕ್ರಿಯಿಸಿದ್ದು, ಸೂಕ್ತ ಪ್ರಕ್ರಿಯೆಯನ್ನು ಅನುಸರಿಸಲಾಗುವುದು ಎಂಬ ಭರವಸೆ ಮತ್ತು ನಂಬಿಕೆಯನ್ನು ವ್ಯಕ್ತಪಡಿಸಿದೆ. ಮತ್ತೊಂದೆಡೆ ಎಡಪಕ್ಷಗಳು ಅವರ ಬಂಧನಗಳನ್ನು ಪ್ರಶ್ನಿಸಿದ್ದು, ಬಿಡುಗಡೆಗಾಗಿ ಆಗ್ರಹಿಸಿವೆ.

ತೀಸ್ತಾ ಅವರ ಜೊತೆಗೆ ಗುಜರಾತ್‌ನ ನಿವೃತ್ತ ಡಿಜಿಪಿ ಆರ್‌ಬಿ ಶ್ರೀಕುಮಾರ್‌ ಅವರನ್ನೂ ಪೊಲೀಸರು ಬಂಧಿಸಿದ್ದಾರೆ. 2002ರ ಗುಜರಾತ್ ಗಲಭೆಯಲ್ಲಿ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಎಸ್‌ಐಟಿ ನೀಡಿದ ಕ್ಲೀನ್ ಚಿಟ್ ಅನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಒಂದು ದಿನದ ನಂತರ ಈ ಬಂಧನಗಳು ನಡೆದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣದಲ್ಲಿ ಅರ್ಜಿದಾರರಾದ ಜಾಕಿಯಾ ಜಾಫ್ರಿ ಅವರನ್ನು ತೀಸ್ತಾ ಅವರು ಬೆಂಬಲಿಸಿದ್ದರು. ಇದರಲ್ಲಿ ಶ್ರೀಕುಮಾರ್ ಪಾತ್ರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು. ಕ್ರಿಮಿನಲ್ ಪಿತೂರಿ, ಫೋರ್ಜರಿ ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್‌ಗಳ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಗುಜರಾತ್ ಪೊಲೀಸರ ವಶಕ್ಕೆ

“ನಾವು ಬಂಧನದ ಬಗ್ಗೆ ಕೇಳಿದ್ದೇವೆ. ಎಫ್‌ಐಆರ್ ದಾಖಲಾದದ್ದು ಜೂನ್ 25, 2022 ಎಂದು ತೋರುತ್ತಿದ್ದರೂ ಸಹ, 2002 ರ ನಂತರದ ವರ್ಷಗಳ ನಡುವೆ ಸಂಭವಿಸಿದ ಘಟನೆಗಳಿಂದ ಉಂಟಾದ ನಕಲಿ ಮತ್ತು ಕಟ್ಟುಕಥೆಯ ಆಪಾದಿತ ಅಪರಾಧಗಳಿಗೆ ಸಂಬಂಧಿಸಿದಂತೆ ಇದು ತೋರುತ್ತಿದೆ. ಕಾನೂನಿನ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ಅನುಸರಿಸಲಾಗುವುದು” ಎಂದು ಹಿರಿಯ ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ

“ಇದಲ್ಲದೆ, ಒಂದು ರಾಜಕೀಯ ಪಕ್ಷವಾಗಿ ಕಾಂಗ್ರೆಸ್ ತನಗೆ ಯಾವುದೇ ಸಂಬಂಧವಿಲ್ಲದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಆದರೆ ಭಾರತೀಯ ಕಮ್ಯೂನಿಷ್ಟ್‌ ಪಕ್ಷ(ಮಾರ್ಕ್ಸ್‌ವಾದಿ) ತೀಸ್ತಾ ಅವರ ಬಂಧನವನ್ನು ಬಲವಾಗಿ ಖಂಡಿಸಿದ್ದು, ಅವರನ್ನು “ಮಾನವ ಹಕ್ಕುಗಳ ಅವಿಶ್ರಾಂತ ರಕ್ಷಕಿ” ಎಂದು ಕರೆದಿದೆ. ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ಉಲ್ಲೇಖಿಸಿ ಸಂಶಯಾಸ್ಪದ ಆಧಾರದ ಮೇಲೆ ಅವರನ್ನು  ಗುಜರಾತ್ ಪೊಲೀಸರು ಬಂಧಿಸಿದ್ದು, ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಮತ್ತು ಅವರ ವಿರುದ್ಧದ ‘‘ಸುಳ್ಳು ಆರೋಪಗಳನ್ನು’’ ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಭಾರತದ ಪ್ರಜಾಪ್ರಭುತ್ವವನ್ನು ತಲೆಕೆಳಗಾಗಿಸುತ್ತಿರುವುದು ಹೇಗೆ?: ತೀಸ್ತಾ ಸೆಟ್ಲ್‍ವಾಡ್

“ನಾಗರಿಕ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳ ಪಟ್ಟುಬಿಡದ ಹೋರಾಟಗಾರ್ತಿಯ ಕಿರುಕುಳ ಮತ್ತು ಕಾನೂನು ಕ್ರಮವನ್ನು ನಿಲ್ಲಿಸಿ. ಸುಳ್ಳು ಆರೋಪಗಳನ್ನು ಹಿಂಪಡೆದು ಬಿಡುಗಡೆ ಮಾಡಿ” ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಟ್ವೀಟ್ ಮಾಡಿದ್ದಾರೆ.

ಗುಜರಾತ್ ದಂಗೆಯ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ತೀಸ್ತಾ ಅವರು ನಿರಂತರ ಹೋರಾಟ ನಡೆಸುತ್ತಿದ್ದಾರೆ ಎಂದು ಅವರ ಭಾರತೀಯ ಕಮ್ಯುನಿಷ್ಟ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಹೇಳಿದ್ದಾರೆ.

“ಗೃಹ ಸಚಿವ (ಅಮಿತ್ ಶಾ) ತೀಸ್ತಾ ಅವರ ಕೆಲಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗಂಟೆಗಳ ನಂತರ ಎಟಿಎಸ್ ಅವರ ಬಂಧನ ನಡೆದಿದೆ. ಇದು ಪ್ರಶ್ನಾರ್ಹವಾಗಿದೆ. ಅವರನ್ನು ಬಿಡುಗಡೆ ಮಾಡಬೇಕು. ಮಾನವ ಹಕ್ಕುಗಳ ಹೋರಾಟಗಾರರ ಮೇಲೆ ನಡೆಯುತ್ತಿರುವ ಕಿರುಕುಳ ನಿಲ್ಲಬೇಕು” ಎಂದು ಹೇಳಿದ್ದಾರೆ.

ತೀಸ್ತಾ ಅವರ ಬಂಧನದ ಬಗ್ಗೆ ಕಾಂಗ್ರೆಸ್ ಜಾಗರೂಕತೆಯಿಂದ ಮಾತನಾಡಿದ್ದರೂ, ತೀರ್ಪನ್ನು ಸಂಭ್ರಮಿಸುತ್ತಿರುವ ಬಿಜೆಪಿಯನ್ನು ತರಾಟೆಗೆ ಪಡೆದಿದೆ. ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಎಂದಿಗೂ ರಾಜಕೀಯಗೊಳಿಸಬಾರದು ಎಂದು ಸಿಂಘ್ವಿ ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನದ ಕಾಲಾಳು : ತೀಸ್ತಾ ಸೆತಲ್ವಾಡ್ ನೆನಪುಗಳು

“ಯಾವುದೇ ಪಿತೂರಿಯಿಂದ ಹಿಂಸಾಚಾರ ನಡೆದಿಲ್ಲ, ಅದು ಸ್ವಯಂಪ್ರೇರಿತವಾಗಿ ನಡೆದಿದೆ ಎಂದು ಸುಪ್ರೀಂ ಕೋರ್ಟ್ ಎಸ್‌ಐಟಿ ನಿರ್ಧಾರವನ್ನು ಎತ್ತಿಹಿಡಿದಿದೆ. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ರಾಜಕೀಯ ಜುಮ್ಲಾಗಳು ಮತ್ತು ಸಂಬಂಧವಿಲ್ಲದೆ ಕ್ಲೀನ್ ಚಿಟ್‌ಗಳನ್ನು ಉಲ್ಲೇಖಿಸುತ್ತಿರುವುದು ತಪ್ಪುದಾರಿಗೆಳೆಯುವಂತಿದೆ. ಗೋಧ್ರಾ ನಂತರದ ಗಲಭೆಯಲ್ಲಿ ಅನೇಕರ ಕೊಲೆ ಅಪರಾಧಗಳನ್ನು ನಿರೂಪಿಸಲಾಗಿದೆ. ವೈಯಕ್ತಿಕ ಅಪರಾಧವನ್ನೂ ನಿರೂಪಿಸಲಾಗಿದೆ. ಪಿತೂರಿ ಅಥವಾ ಗೈರುಹಾಜರಾಗಿರುವ ಕೆಲವು ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಧಾನ ಮಂತ್ರಿ ನೀಡಿದ ಹೇಳಿಕೆಗಳನ್ನು ಮಾತ್ರ ಸುಪ್ರೀಂಕೋರ್ಟ್‌ ತಳ್ಳಿಹಾಕಿದೆ. ಅದನ್ನು ಸುಪ್ರೀಂ ಕೋರ್ಟ್‌ನ ಆದೇಶದಂತೆ ಗೌರವಿಸಬೇಕು. ಹೆಚ್ಚೂ ಇಲ್ಲ, ಕಡಿಮೆಯೂ ಇಲ್ಲ” ಎಂದು ಸಿಂಘ್ವಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...