Homeರಾಷ್ಟ್ರೀಯತೀಸ್ತಾ ಬಂಧನ: ಜಾಗರೂಕತೆಯಿಂದ ಪ್ರತಿಕ್ರಿಯಿಸಿದ ಕಾಂಗ್ರೆಸ್; ಬಂಧನವನ್ನು ಪ್ರಶ್ನಿಸಿ, ಬಿಡುಗಡೆಗೆ ಆಗ್ರಹಿಸಿದ ಎಡಪಕ್ಷಗಳು

ತೀಸ್ತಾ ಬಂಧನ: ಜಾಗರೂಕತೆಯಿಂದ ಪ್ರತಿಕ್ರಿಯಿಸಿದ ಕಾಂಗ್ರೆಸ್; ಬಂಧನವನ್ನು ಪ್ರಶ್ನಿಸಿ, ಬಿಡುಗಡೆಗೆ ಆಗ್ರಹಿಸಿದ ಎಡಪಕ್ಷಗಳು

- Advertisement -
- Advertisement -

ದೇಶದ ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್‌ವಾಡ್‌ ಅವರನ್ನು ಗುಜರಾತ್‌ ಪೊಲೀಸರು ಬಂಧಿಸಿರುವ ಕುರಿತು ಕಾಂಗ್ರೆಸ್‌ ಶನಿವಾರ ಜಾಗರೂಕತೆಯಿಂದ ಪ್ರತಿಕ್ರಿಯಿಸಿದ್ದು, ಸೂಕ್ತ ಪ್ರಕ್ರಿಯೆಯನ್ನು ಅನುಸರಿಸಲಾಗುವುದು ಎಂಬ ಭರವಸೆ ಮತ್ತು ನಂಬಿಕೆಯನ್ನು ವ್ಯಕ್ತಪಡಿಸಿದೆ. ಮತ್ತೊಂದೆಡೆ ಎಡಪಕ್ಷಗಳು ಅವರ ಬಂಧನಗಳನ್ನು ಪ್ರಶ್ನಿಸಿದ್ದು, ಬಿಡುಗಡೆಗಾಗಿ ಆಗ್ರಹಿಸಿವೆ.

ತೀಸ್ತಾ ಅವರ ಜೊತೆಗೆ ಗುಜರಾತ್‌ನ ನಿವೃತ್ತ ಡಿಜಿಪಿ ಆರ್‌ಬಿ ಶ್ರೀಕುಮಾರ್‌ ಅವರನ್ನೂ ಪೊಲೀಸರು ಬಂಧಿಸಿದ್ದಾರೆ. 2002ರ ಗುಜರಾತ್ ಗಲಭೆಯಲ್ಲಿ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಎಸ್‌ಐಟಿ ನೀಡಿದ ಕ್ಲೀನ್ ಚಿಟ್ ಅನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದ ಒಂದು ದಿನದ ನಂತರ ಈ ಬಂಧನಗಳು ನಡೆದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣದಲ್ಲಿ ಅರ್ಜಿದಾರರಾದ ಜಾಕಿಯಾ ಜಾಫ್ರಿ ಅವರನ್ನು ತೀಸ್ತಾ ಅವರು ಬೆಂಬಲಿಸಿದ್ದರು. ಇದರಲ್ಲಿ ಶ್ರೀಕುಮಾರ್ ಪಾತ್ರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು. ಕ್ರಿಮಿನಲ್ ಪಿತೂರಿ, ಫೋರ್ಜರಿ ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್‌ಗಳ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಗುಜರಾತ್ ಪೊಲೀಸರ ವಶಕ್ಕೆ

“ನಾವು ಬಂಧನದ ಬಗ್ಗೆ ಕೇಳಿದ್ದೇವೆ. ಎಫ್‌ಐಆರ್ ದಾಖಲಾದದ್ದು ಜೂನ್ 25, 2022 ಎಂದು ತೋರುತ್ತಿದ್ದರೂ ಸಹ, 2002 ರ ನಂತರದ ವರ್ಷಗಳ ನಡುವೆ ಸಂಭವಿಸಿದ ಘಟನೆಗಳಿಂದ ಉಂಟಾದ ನಕಲಿ ಮತ್ತು ಕಟ್ಟುಕಥೆಯ ಆಪಾದಿತ ಅಪರಾಧಗಳಿಗೆ ಸಂಬಂಧಿಸಿದಂತೆ ಇದು ತೋರುತ್ತಿದೆ. ಕಾನೂನಿನ ಪ್ರಕ್ರಿಯೆಯನ್ನು ಸೂಕ್ಷ್ಮವಾಗಿ ಅನುಸರಿಸಲಾಗುವುದು” ಎಂದು ಹಿರಿಯ ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ

“ಇದಲ್ಲದೆ, ಒಂದು ರಾಜಕೀಯ ಪಕ್ಷವಾಗಿ ಕಾಂಗ್ರೆಸ್ ತನಗೆ ಯಾವುದೇ ಸಂಬಂಧವಿಲ್ಲದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಆದರೆ ಭಾರತೀಯ ಕಮ್ಯೂನಿಷ್ಟ್‌ ಪಕ್ಷ(ಮಾರ್ಕ್ಸ್‌ವಾದಿ) ತೀಸ್ತಾ ಅವರ ಬಂಧನವನ್ನು ಬಲವಾಗಿ ಖಂಡಿಸಿದ್ದು, ಅವರನ್ನು “ಮಾನವ ಹಕ್ಕುಗಳ ಅವಿಶ್ರಾಂತ ರಕ್ಷಕಿ” ಎಂದು ಕರೆದಿದೆ. ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ಉಲ್ಲೇಖಿಸಿ ಸಂಶಯಾಸ್ಪದ ಆಧಾರದ ಮೇಲೆ ಅವರನ್ನು  ಗುಜರಾತ್ ಪೊಲೀಸರು ಬಂಧಿಸಿದ್ದು, ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಮತ್ತು ಅವರ ವಿರುದ್ಧದ ‘‘ಸುಳ್ಳು ಆರೋಪಗಳನ್ನು’’ ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಭಾರತದ ಪ್ರಜಾಪ್ರಭುತ್ವವನ್ನು ತಲೆಕೆಳಗಾಗಿಸುತ್ತಿರುವುದು ಹೇಗೆ?: ತೀಸ್ತಾ ಸೆಟ್ಲ್‍ವಾಡ್

“ನಾಗರಿಕ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳ ಪಟ್ಟುಬಿಡದ ಹೋರಾಟಗಾರ್ತಿಯ ಕಿರುಕುಳ ಮತ್ತು ಕಾನೂನು ಕ್ರಮವನ್ನು ನಿಲ್ಲಿಸಿ. ಸುಳ್ಳು ಆರೋಪಗಳನ್ನು ಹಿಂಪಡೆದು ಬಿಡುಗಡೆ ಮಾಡಿ” ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಟ್ವೀಟ್ ಮಾಡಿದ್ದಾರೆ.

ಗುಜರಾತ್ ದಂಗೆಯ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲು ತೀಸ್ತಾ ಅವರು ನಿರಂತರ ಹೋರಾಟ ನಡೆಸುತ್ತಿದ್ದಾರೆ ಎಂದು ಅವರ ಭಾರತೀಯ ಕಮ್ಯುನಿಷ್ಟ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಹೇಳಿದ್ದಾರೆ.

“ಗೃಹ ಸಚಿವ (ಅಮಿತ್ ಶಾ) ತೀಸ್ತಾ ಅವರ ಕೆಲಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗಂಟೆಗಳ ನಂತರ ಎಟಿಎಸ್ ಅವರ ಬಂಧನ ನಡೆದಿದೆ. ಇದು ಪ್ರಶ್ನಾರ್ಹವಾಗಿದೆ. ಅವರನ್ನು ಬಿಡುಗಡೆ ಮಾಡಬೇಕು. ಮಾನವ ಹಕ್ಕುಗಳ ಹೋರಾಟಗಾರರ ಮೇಲೆ ನಡೆಯುತ್ತಿರುವ ಕಿರುಕುಳ ನಿಲ್ಲಬೇಕು” ಎಂದು ಹೇಳಿದ್ದಾರೆ.

ತೀಸ್ತಾ ಅವರ ಬಂಧನದ ಬಗ್ಗೆ ಕಾಂಗ್ರೆಸ್ ಜಾಗರೂಕತೆಯಿಂದ ಮಾತನಾಡಿದ್ದರೂ, ತೀರ್ಪನ್ನು ಸಂಭ್ರಮಿಸುತ್ತಿರುವ ಬಿಜೆಪಿಯನ್ನು ತರಾಟೆಗೆ ಪಡೆದಿದೆ. ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಎಂದಿಗೂ ರಾಜಕೀಯಗೊಳಿಸಬಾರದು ಎಂದು ಸಿಂಘ್ವಿ ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನದ ಕಾಲಾಳು : ತೀಸ್ತಾ ಸೆತಲ್ವಾಡ್ ನೆನಪುಗಳು

“ಯಾವುದೇ ಪಿತೂರಿಯಿಂದ ಹಿಂಸಾಚಾರ ನಡೆದಿಲ್ಲ, ಅದು ಸ್ವಯಂಪ್ರೇರಿತವಾಗಿ ನಡೆದಿದೆ ಎಂದು ಸುಪ್ರೀಂ ಕೋರ್ಟ್ ಎಸ್‌ಐಟಿ ನಿರ್ಧಾರವನ್ನು ಎತ್ತಿಹಿಡಿದಿದೆ. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ರಾಜಕೀಯ ಜುಮ್ಲಾಗಳು ಮತ್ತು ಸಂಬಂಧವಿಲ್ಲದೆ ಕ್ಲೀನ್ ಚಿಟ್‌ಗಳನ್ನು ಉಲ್ಲೇಖಿಸುತ್ತಿರುವುದು ತಪ್ಪುದಾರಿಗೆಳೆಯುವಂತಿದೆ. ಗೋಧ್ರಾ ನಂತರದ ಗಲಭೆಯಲ್ಲಿ ಅನೇಕರ ಕೊಲೆ ಅಪರಾಧಗಳನ್ನು ನಿರೂಪಿಸಲಾಗಿದೆ. ವೈಯಕ್ತಿಕ ಅಪರಾಧವನ್ನೂ ನಿರೂಪಿಸಲಾಗಿದೆ. ಪಿತೂರಿ ಅಥವಾ ಗೈರುಹಾಜರಾಗಿರುವ ಕೆಲವು ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಧಾನ ಮಂತ್ರಿ ನೀಡಿದ ಹೇಳಿಕೆಗಳನ್ನು ಮಾತ್ರ ಸುಪ್ರೀಂಕೋರ್ಟ್‌ ತಳ್ಳಿಹಾಕಿದೆ. ಅದನ್ನು ಸುಪ್ರೀಂ ಕೋರ್ಟ್‌ನ ಆದೇಶದಂತೆ ಗೌರವಿಸಬೇಕು. ಹೆಚ್ಚೂ ಇಲ್ಲ, ಕಡಿಮೆಯೂ ಇಲ್ಲ” ಎಂದು ಸಿಂಘ್ವಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...