Homeಮುಖಪುಟತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

- Advertisement -
- Advertisement -

ಸೈಯದ್ ಅಲಿ ಶಾ ಗಿಲಾನಿ ಅವರ ಜಮ್ಮು-ಕಾಶ್ಮೀರದ ತೆಹ್ರೀಕ್-ಎ-ಹುರಿಯತ್ (ಟಿಇಹೆಚ್) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯವು ಇಂದು ಆದೇಶವನ್ನು ಹೊರಡಿಸಿದ್ದು, ಟಿಇಹೆಚ್ ಸಂಘಟನೆಯನ್ನು ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಿದೆ.

ಈ ಕುರಿತ ನಿರ್ಧಾರವನ್ನು ಪ್ರಕಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಗುಂಪು ಜಮ್ಮು ಮತ್ತು ಕಾಶ್ಮೀರವನ್ನು ಪ್ರತ್ಯೇಕತೆ ದೃಷ್ಟಿಯಿಂದ ಭಾರತ ವಿರೋಧಿ ಕೃತ್ಯ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ಮುಂದುವರೆಸುತ್ತಿರುವುದು ಕಂಡುಬಂದಿದೆ. ಭಯೋತ್ಪಾದನೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ ಶೂನ್ಯ ಸಹಿಷ್ಣುತೆಯ ನೀತಿಯ ಅಡಿಯಲ್ಲಿ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ತೆಹ್ರೀಕ್-ಇ-ಹುರಿಯತ್ ಜಮ್ಮು-ಕಾಶ್ಮೀರ (ಟಿಹೆಚ್)ನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. ಈ ಸಂಘಟನೆಯು ಭಾರತದಿಂದ ಜಮ್ಮು-ಕಾಶ್ಮೀರವನ್ನು ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಅಮಿತ್‌ ಶಾ ಹೇಳಿದ್ದಾರೆ.

ತೆಹ್ರೀಕ್-ಇ-ಹುರಿಯತ್  ಸಂಘಟನೆಯನ್ನು ಸೈಯದ್ ಅಲಿ ಶಾ ಗಿಲಾನಿ ಅವರು ಸ್ಥಾಪಿಸಿದ್ದರು. ಗಿಲಾನಿ ಜಮಾತ್‌-ಎ-ಇಸ್ಲಾಮಿ ಕಾಶ್ಮೀರವನ್ನು ತೊರೆದ ನಂತರ 2004ರ ಆಗಸ್ಟ್‌ 7ರಂದು ಈ ಸಂಘಟನೆಯನ್ನು ಸ್ಥಾಪಿಸಿದ್ದರು. ಅವರ ನಿಧನದ ಬಳಿಕ ಮಸರತ್ ಆಲಂ ಭಟ್ ಅವರು ಉತ್ತರಾಧಿಕಾರಿಯಾದರು. ಭಟ್ ಪ್ರಸ್ತುತ ಜೈಲಿನಲ್ಲಿದ್ದಾರೆ.

ಡಿಸೆಂಬರ್ 27 ರಂದು ಭಾರತ ಸರಕಾರ ಜಮ್ಮು ಕಾಶ್ಮೀರದ ಮುಸ್ಲಿಂ ಲೀಗ್ ಸಂಘಟನೆಯನ್ನು ನಿಷೇಧಿತ ಸಂಘಟನೆ ಎಂದು ಘೋಷಿಸಿತ್ತು. ಜಮ್ಮು ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಂ ಭಟ್ ನೇತೃತ್ವದ ಮುಸ್ಲಿಂ ಲೀಗ್ ಸಂಘಟನೆಯನ್ನು ಕೇಂದ್ರ ಸರ್ಕಾರ ದೇಶ ವಿರೋಧಿ ಸಂಘಟನೆ ಎಂದು ಘೋಷಿಸಿ 5 ವರ್ಷಗಳವರೆಗೆ ನಿಷೇಧಿಸಿ ಆದೇಶಿಸಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ಸಂಘಟನೆಯ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಘಟನೆಯನ್ನು ನಿಷೇಧಿಸಲಾಗಿದೆ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿತ್ತು. ಸೈಯದ್ ಅಲಿ ಶಾ ಗಿಲಾನಿಯವರ ಮರಣದ ನಂತರ ಮಸರತ್ ಆಲಂ ಭಟ್ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ ಮತ್ತು ತೆಹ್ರೀಕ್-ಎ-ಹುರಿಯತ್ ಸಂಘಟನೆಯ ಮುಂದಾಳತ್ವ ವಹಿಸಿದ್ದರು. ಕಾಶ್ಮೀರ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಟ್ 2010ರಿಂದ ಜೈಲಿನಲ್ಲಿದ್ದಾರೆ. 2010ರಲ್ಲಿ ಕಾಶ್ಮೀರದಲ್ಲಿ 100ಕ್ಕೂ ಹೆಚ್ಚು ಯುವಕರ ಸಾವಿಗೆ ಕಾರಣವಾದ ಹಿಂಸಾತ್ಮಕ ಪ್ರತಿಭಟನೆಗಳನ್ನು ಸಂಘಟಿಸುವಲ್ಲಿ ಭಟ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

2015ರಲ್ಲಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರು ಪ್ರಮಾಣವಚನ ಸ್ವೀಕರಿಸಿದ ತಕ್ಷಣ ಅವರನ್ನು ಬಿಡುಗಡೆ ಮಾಡಿದ್ದರು. ಇದು ಪಿಡಿಪಿ-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಬಿಜೆಪಿಯ ಒತ್ತಡದ ಮೇರೆಗೆ, ಅಂದಿನ ರಾಜ್ಯ ಸರ್ಕಾರವು ರ್ಯಾಲಿಯಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಆರೋಪದಲ್ಲಿ ದೇಶದ್ರೋಹದ ಮತ್ತು ರಾಜ್ಯದ ವಿರುದ್ಧ ಯುದ್ಧಕ್ಕೆ ಪ್ರೇರಣೆ ಆರೋಪದ ಮೇಲೆ ಅವರನ್ನು ಪುನಃಬಂಧಿಸಿತ್ತು.

ಇದನ್ನು ಓದಿ: ಗಾಝಾ- ಈಜಿಪ್ಟ್ ಗಡಿಯಲ್ಲಿ ನಿಯಂತ್ರಣ ಸಾಧಿಸುವುದು ಇಸ್ರೇಲ್‌ ಗುರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...