Homeಕರ್ನಾಟಕಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

ಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

- Advertisement -
- Advertisement -

ರಾಜ್ಯದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲವು ಗ್ರಾಮಗಳಲ್ಲಿ ಬಲವಂತದ ಮತಾಂತರ ನಡೆದಿದೆ ಎಂದ ಬಿಜೆಪಿ ಶಾಸಕರ ಹೇಳಿಕೆಗೆ ವ್ಯತಿರಿಕ್ತ ವರದಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ತಹಸೀಲ್ದಾರ್ ತಿಪ್ಪೇಸ್ವಾಮಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಮುಂದಿನ ಹುದ್ದೆಗಾಗಿ ತಿಪ್ಪೇಸ್ವಾಮಿ ಕಾಯುವಂತಾಗಿದೆ.

ಹೊಸದುರ್ಗದಲ್ಲಿ ಹೊಸ ತಹಸೀಲ್ದಾರ್ ಅಧಿಕಾರ ವಹಿಸಿಕೊಂಡಿದ್ದಾರೆ. “ಹಲವು ಮಾಧ್ಯಮಗಳು ಬಲವಂತದ ಮತಾಂತರದ ಬಗ್ಗೆ ವರದಿ ಮಾಡಿದ ನಂತರ ನಾನು ಸಮೀಕ್ಷೆ ನಡೆಸಿದೆ. ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿತ್ತು. ಜನರು ಹೇಳಿದ್ದನ್ನು ನನ್ನ ವರದಿಯಲ್ಲಿ ನಾನು ಹೈಲೈಟ್ ಮಾಡಿದ್ದೇನೆ” ಎಂದು ತಿಪ್ಪೇಸ್ವಾಮಿ ತಿಳಿಸಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜೊತೆಗೆ “ವರ್ಗಾವಣೆಗೂ ಹಾಗೂ ವರದಿಗೂ ಯಾವುದೇ ಸಂಬಂಧವಿಲ್ಲ” ಎಂದೂ ತಿಳಿಸಿದ್ದಾರೆ.

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ತಮ್ಮ ಕ್ಷೇತ್ರದಲ್ಲಿ ಬಲವಂತದ ಮತಾಂತರಗಳು ಹೆಚ್ಚಾಗಿವೆ ಎಂದು ರಾಜ್ಯದ ವಿಧಾನಸಭೆಯಲ್ಲಿ ಸೆಪ್ಪೆಂಬರ್‌‌ನಲ್ಲಿ ಆರೋಪಿಸಿದ್ದರು. ಹೊಸದುರ್ಗ ತಾಲೂಕು ಆಡಳಿತ ಕೆಲ ಗ್ರಾಮಗಳಲ್ಲಿ ಮತಾಂತರ ಸಂಬಂಧ ಸಮೀಕ್ಷೆ ನಡೆಸಿತ್ತು.

ಆದರೆ, ಕುಟುಂಬಗಳು ಸ್ವಇಚ್ಛೆಯಿಂದ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವುದನ್ನು ತಹಸೀಲ್ದಾರ್‌‌ ತಿಪ್ಪೇಸ್ವಾಮಿ ನೇತೃತ್ವದ ತಂಡ ವರದಿ ಸಲ್ಲಿಸಿತ್ತು. ತಾಲೂಕಿನ ಎರಡು ಗ್ರಾಮಗಳಲ್ಲಿ 46 ಕುಟುಂಬಗಳು ತಾವಾಗಿಯೇ ಕ್ರೈಸ್ತ ಧರ್ಮ ಸ್ವೀಕರಿಸಿದ್ದು, ಯಾರೂ ಕೂಡ ಬಲವಂತ ಮಾಡಿಲ್ಲ ಎಂಬುದು ಬಯಲಾಗಿತ್ತು. ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಲು ಯಾರೂ ಒತ್ತಾಯಿಸಲಿಲ್ಲ ಎಂದು ಕುಟುಂಬಗಳು ಅಧಿಕೃತ ಹೇಳಿಕೆ ನೀಡಿದ್ದವು.

“ಯಾರೂ ಬಲವಂತಪಡಿಸಿಲ್ಲ ಎಂದು ಕುಟುಂಬಗಳು ನಮಗೆ ತಿಳಿಸಿದವು. ಅಲ್ಲದೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಾಗಿನಿಂದ ಈ ಕುಟುಂಬಗಳು ಸಂತೋಷವಾಗಿವೆ, ಮಾನಸಿಕ ಶಾಂತಿಯನ್ನೂ ಹೊಂದಿವೆ. ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಲು ಕೆಲವರು ಆಮಿಷ ಒಡ್ಡುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ನಾವು ಕೇಳಿದಾಗ, ಕುಟುಂಬಗಳು ಆ ವರದಿಗಳನ್ನು ತಳ್ಳಿಹಾಕಿದವು” ಎಂದು ತಿಪ್ಪೇಸ್ವಾಮಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು.

ಮತಾಂತರ ಹೆಸರಲ್ಲಿ ಕ್ರಿಶ್ಚಿಯನ್ನರ ಮೇಲೆ ದ್ವೇಷ ರಾಜಕಾರಣ

ಧರ್ಮಾಚರಣೆಯ ಅಪರಾಧೀಕರಣ, ಕರ್ನಾಟಕದಲ್ಲಿ ಕ್ರಿಶ್ಚಿಯನ್ನರ ಮೇಲಿನ ದ್ವೇಷದ ಅಪರಾಧಗಳ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕದ (ಪಿಯುಸಿಎಲ್‌) ವರದಿಯು ಆತಂಕವನ್ನು ವ್ಯಕ್ತಪಡಿಸಿದೆ. ಜನವರಿಯಿಂದ ನವೆಂಬರ್‌‌ವರೆಗೆ ಒಟ್ಟು 39 ಕ್ರಿಶ್ಚಿಯನ್ನರ ಮೇಲಿನ ದ್ವೇಷ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ ಎಂದು ವರದಿ ಹೇಳಿದೆ.

ಬಹುತೇಕ ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ತಮ್ಮ ಪೂಜಾ ಸ್ಥಳಗಳನ್ನು ಮುಚ್ಚುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಅವರ ಭಾನುವಾರದ ಪ್ರಾರ್ಥನೆಗಾಗಿ ಒಟ್ಟುಗೂಡುವುದನ್ನು ನಿಲ್ಲಿಸಲಾಗುತ್ತಿದೆ. ಹಿಂದುತ್ವ ಗುಂಪುಗಳು ರಾಜ್ಯದ ಸಹಭಾಗಿತ್ವದೊಂದಿಗೆ ಸಾಮೂಹಿಕವಾಗಿ ಧಾರ್ಮಿಕ ಸಮುದಾಯವಾಗಿ ಪ್ರಾರ್ಥಿಸುವುದರ ಮೇಲಿನ ಈ ದಾಳಿಗಳು ಧರ್ಮವನ್ನು ಆಚರಿಸುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿ ಕಾರ್ಯನಿರ್ವಹಿಸುತ್ತವೆ. ಇಂದು ಕರ್ನಾಟಕದಲ್ಲಿ ನಡೆಯುತ್ತಿರುವ ದಾಳಿಗಳು ಧರ್ಮವನ್ನು ಪ್ರಚಾರಮಾಡುವ ಪ್ರಚಾರದ ಹಕ್ಕಿಗೆ ಸಂಬಂಧಿಸಿರುವುದಿಲ್ಲ. ಬದಲಿಗೆ, ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ ಮತ್ತು ಆಚರಣೆ ಮಾಡುವ ಹಕ್ಕಿನ ಮೇಲಿನ ದಾಳಿಗಳಾಗಿವೆ ಎಂದು ವರದಿ ಹೇಳುತ್ತದೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...