Homeಕರ್ನಾಟಕಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

ಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

- Advertisement -
- Advertisement -

ರಾಜ್ಯದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲವು ಗ್ರಾಮಗಳಲ್ಲಿ ಬಲವಂತದ ಮತಾಂತರ ನಡೆದಿದೆ ಎಂದ ಬಿಜೆಪಿ ಶಾಸಕರ ಹೇಳಿಕೆಗೆ ವ್ಯತಿರಿಕ್ತ ವರದಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ತಹಸೀಲ್ದಾರ್ ತಿಪ್ಪೇಸ್ವಾಮಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಮುಂದಿನ ಹುದ್ದೆಗಾಗಿ ತಿಪ್ಪೇಸ್ವಾಮಿ ಕಾಯುವಂತಾಗಿದೆ.

ಹೊಸದುರ್ಗದಲ್ಲಿ ಹೊಸ ತಹಸೀಲ್ದಾರ್ ಅಧಿಕಾರ ವಹಿಸಿಕೊಂಡಿದ್ದಾರೆ. “ಹಲವು ಮಾಧ್ಯಮಗಳು ಬಲವಂತದ ಮತಾಂತರದ ಬಗ್ಗೆ ವರದಿ ಮಾಡಿದ ನಂತರ ನಾನು ಸಮೀಕ್ಷೆ ನಡೆಸಿದೆ. ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿತ್ತು. ಜನರು ಹೇಳಿದ್ದನ್ನು ನನ್ನ ವರದಿಯಲ್ಲಿ ನಾನು ಹೈಲೈಟ್ ಮಾಡಿದ್ದೇನೆ” ಎಂದು ತಿಪ್ಪೇಸ್ವಾಮಿ ತಿಳಿಸಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜೊತೆಗೆ “ವರ್ಗಾವಣೆಗೂ ಹಾಗೂ ವರದಿಗೂ ಯಾವುದೇ ಸಂಬಂಧವಿಲ್ಲ” ಎಂದೂ ತಿಳಿಸಿದ್ದಾರೆ.

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ತಮ್ಮ ಕ್ಷೇತ್ರದಲ್ಲಿ ಬಲವಂತದ ಮತಾಂತರಗಳು ಹೆಚ್ಚಾಗಿವೆ ಎಂದು ರಾಜ್ಯದ ವಿಧಾನಸಭೆಯಲ್ಲಿ ಸೆಪ್ಪೆಂಬರ್‌‌ನಲ್ಲಿ ಆರೋಪಿಸಿದ್ದರು. ಹೊಸದುರ್ಗ ತಾಲೂಕು ಆಡಳಿತ ಕೆಲ ಗ್ರಾಮಗಳಲ್ಲಿ ಮತಾಂತರ ಸಂಬಂಧ ಸಮೀಕ್ಷೆ ನಡೆಸಿತ್ತು.

ಆದರೆ, ಕುಟುಂಬಗಳು ಸ್ವಇಚ್ಛೆಯಿಂದ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವುದನ್ನು ತಹಸೀಲ್ದಾರ್‌‌ ತಿಪ್ಪೇಸ್ವಾಮಿ ನೇತೃತ್ವದ ತಂಡ ವರದಿ ಸಲ್ಲಿಸಿತ್ತು. ತಾಲೂಕಿನ ಎರಡು ಗ್ರಾಮಗಳಲ್ಲಿ 46 ಕುಟುಂಬಗಳು ತಾವಾಗಿಯೇ ಕ್ರೈಸ್ತ ಧರ್ಮ ಸ್ವೀಕರಿಸಿದ್ದು, ಯಾರೂ ಕೂಡ ಬಲವಂತ ಮಾಡಿಲ್ಲ ಎಂಬುದು ಬಯಲಾಗಿತ್ತು. ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಲು ಯಾರೂ ಒತ್ತಾಯಿಸಲಿಲ್ಲ ಎಂದು ಕುಟುಂಬಗಳು ಅಧಿಕೃತ ಹೇಳಿಕೆ ನೀಡಿದ್ದವು.

“ಯಾರೂ ಬಲವಂತಪಡಿಸಿಲ್ಲ ಎಂದು ಕುಟುಂಬಗಳು ನಮಗೆ ತಿಳಿಸಿದವು. ಅಲ್ಲದೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಾಗಿನಿಂದ ಈ ಕುಟುಂಬಗಳು ಸಂತೋಷವಾಗಿವೆ, ಮಾನಸಿಕ ಶಾಂತಿಯನ್ನೂ ಹೊಂದಿವೆ. ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಲು ಕೆಲವರು ಆಮಿಷ ಒಡ್ಡುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ನಾವು ಕೇಳಿದಾಗ, ಕುಟುಂಬಗಳು ಆ ವರದಿಗಳನ್ನು ತಳ್ಳಿಹಾಕಿದವು” ಎಂದು ತಿಪ್ಪೇಸ್ವಾಮಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು.

ಮತಾಂತರ ಹೆಸರಲ್ಲಿ ಕ್ರಿಶ್ಚಿಯನ್ನರ ಮೇಲೆ ದ್ವೇಷ ರಾಜಕಾರಣ

ಧರ್ಮಾಚರಣೆಯ ಅಪರಾಧೀಕರಣ, ಕರ್ನಾಟಕದಲ್ಲಿ ಕ್ರಿಶ್ಚಿಯನ್ನರ ಮೇಲಿನ ದ್ವೇಷದ ಅಪರಾಧಗಳ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕದ (ಪಿಯುಸಿಎಲ್‌) ವರದಿಯು ಆತಂಕವನ್ನು ವ್ಯಕ್ತಪಡಿಸಿದೆ. ಜನವರಿಯಿಂದ ನವೆಂಬರ್‌‌ವರೆಗೆ ಒಟ್ಟು 39 ಕ್ರಿಶ್ಚಿಯನ್ನರ ಮೇಲಿನ ದ್ವೇಷ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ ಎಂದು ವರದಿ ಹೇಳಿದೆ.

ಬಹುತೇಕ ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ತಮ್ಮ ಪೂಜಾ ಸ್ಥಳಗಳನ್ನು ಮುಚ್ಚುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಅವರ ಭಾನುವಾರದ ಪ್ರಾರ್ಥನೆಗಾಗಿ ಒಟ್ಟುಗೂಡುವುದನ್ನು ನಿಲ್ಲಿಸಲಾಗುತ್ತಿದೆ. ಹಿಂದುತ್ವ ಗುಂಪುಗಳು ರಾಜ್ಯದ ಸಹಭಾಗಿತ್ವದೊಂದಿಗೆ ಸಾಮೂಹಿಕವಾಗಿ ಧಾರ್ಮಿಕ ಸಮುದಾಯವಾಗಿ ಪ್ರಾರ್ಥಿಸುವುದರ ಮೇಲಿನ ಈ ದಾಳಿಗಳು ಧರ್ಮವನ್ನು ಆಚರಿಸುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿ ಕಾರ್ಯನಿರ್ವಹಿಸುತ್ತವೆ. ಇಂದು ಕರ್ನಾಟಕದಲ್ಲಿ ನಡೆಯುತ್ತಿರುವ ದಾಳಿಗಳು ಧರ್ಮವನ್ನು ಪ್ರಚಾರಮಾಡುವ ಪ್ರಚಾರದ ಹಕ್ಕಿಗೆ ಸಂಬಂಧಿಸಿರುವುದಿಲ್ಲ. ಬದಲಿಗೆ, ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ ಮತ್ತು ಆಚರಣೆ ಮಾಡುವ ಹಕ್ಕಿನ ಮೇಲಿನ ದಾಳಿಗಳಾಗಿವೆ ಎಂದು ವರದಿ ಹೇಳುತ್ತದೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...