Homeಕರ್ನಾಟಕಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

ಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

- Advertisement -
- Advertisement -

ರಾಜ್ಯದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲವು ಗ್ರಾಮಗಳಲ್ಲಿ ಬಲವಂತದ ಮತಾಂತರ ನಡೆದಿದೆ ಎಂದ ಬಿಜೆಪಿ ಶಾಸಕರ ಹೇಳಿಕೆಗೆ ವ್ಯತಿರಿಕ್ತ ವರದಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ತಹಸೀಲ್ದಾರ್ ತಿಪ್ಪೇಸ್ವಾಮಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಮುಂದಿನ ಹುದ್ದೆಗಾಗಿ ತಿಪ್ಪೇಸ್ವಾಮಿ ಕಾಯುವಂತಾಗಿದೆ.

ಹೊಸದುರ್ಗದಲ್ಲಿ ಹೊಸ ತಹಸೀಲ್ದಾರ್ ಅಧಿಕಾರ ವಹಿಸಿಕೊಂಡಿದ್ದಾರೆ. “ಹಲವು ಮಾಧ್ಯಮಗಳು ಬಲವಂತದ ಮತಾಂತರದ ಬಗ್ಗೆ ವರದಿ ಮಾಡಿದ ನಂತರ ನಾನು ಸಮೀಕ್ಷೆ ನಡೆಸಿದೆ. ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿತ್ತು. ಜನರು ಹೇಳಿದ್ದನ್ನು ನನ್ನ ವರದಿಯಲ್ಲಿ ನಾನು ಹೈಲೈಟ್ ಮಾಡಿದ್ದೇನೆ” ಎಂದು ತಿಪ್ಪೇಸ್ವಾಮಿ ತಿಳಿಸಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜೊತೆಗೆ “ವರ್ಗಾವಣೆಗೂ ಹಾಗೂ ವರದಿಗೂ ಯಾವುದೇ ಸಂಬಂಧವಿಲ್ಲ” ಎಂದೂ ತಿಳಿಸಿದ್ದಾರೆ.

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ತಮ್ಮ ಕ್ಷೇತ್ರದಲ್ಲಿ ಬಲವಂತದ ಮತಾಂತರಗಳು ಹೆಚ್ಚಾಗಿವೆ ಎಂದು ರಾಜ್ಯದ ವಿಧಾನಸಭೆಯಲ್ಲಿ ಸೆಪ್ಪೆಂಬರ್‌‌ನಲ್ಲಿ ಆರೋಪಿಸಿದ್ದರು. ಹೊಸದುರ್ಗ ತಾಲೂಕು ಆಡಳಿತ ಕೆಲ ಗ್ರಾಮಗಳಲ್ಲಿ ಮತಾಂತರ ಸಂಬಂಧ ಸಮೀಕ್ಷೆ ನಡೆಸಿತ್ತು.

ಆದರೆ, ಕುಟುಂಬಗಳು ಸ್ವಇಚ್ಛೆಯಿಂದ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವುದನ್ನು ತಹಸೀಲ್ದಾರ್‌‌ ತಿಪ್ಪೇಸ್ವಾಮಿ ನೇತೃತ್ವದ ತಂಡ ವರದಿ ಸಲ್ಲಿಸಿತ್ತು. ತಾಲೂಕಿನ ಎರಡು ಗ್ರಾಮಗಳಲ್ಲಿ 46 ಕುಟುಂಬಗಳು ತಾವಾಗಿಯೇ ಕ್ರೈಸ್ತ ಧರ್ಮ ಸ್ವೀಕರಿಸಿದ್ದು, ಯಾರೂ ಕೂಡ ಬಲವಂತ ಮಾಡಿಲ್ಲ ಎಂಬುದು ಬಯಲಾಗಿತ್ತು. ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಲು ಯಾರೂ ಒತ್ತಾಯಿಸಲಿಲ್ಲ ಎಂದು ಕುಟುಂಬಗಳು ಅಧಿಕೃತ ಹೇಳಿಕೆ ನೀಡಿದ್ದವು.

“ಯಾರೂ ಬಲವಂತಪಡಿಸಿಲ್ಲ ಎಂದು ಕುಟುಂಬಗಳು ನಮಗೆ ತಿಳಿಸಿದವು. ಅಲ್ಲದೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಾಗಿನಿಂದ ಈ ಕುಟುಂಬಗಳು ಸಂತೋಷವಾಗಿವೆ, ಮಾನಸಿಕ ಶಾಂತಿಯನ್ನೂ ಹೊಂದಿವೆ. ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಲು ಕೆಲವರು ಆಮಿಷ ಒಡ್ಡುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ನಾವು ಕೇಳಿದಾಗ, ಕುಟುಂಬಗಳು ಆ ವರದಿಗಳನ್ನು ತಳ್ಳಿಹಾಕಿದವು” ಎಂದು ತಿಪ್ಪೇಸ್ವಾಮಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು.

ಮತಾಂತರ ಹೆಸರಲ್ಲಿ ಕ್ರಿಶ್ಚಿಯನ್ನರ ಮೇಲೆ ದ್ವೇಷ ರಾಜಕಾರಣ

ಧರ್ಮಾಚರಣೆಯ ಅಪರಾಧೀಕರಣ, ಕರ್ನಾಟಕದಲ್ಲಿ ಕ್ರಿಶ್ಚಿಯನ್ನರ ಮೇಲಿನ ದ್ವೇಷದ ಅಪರಾಧಗಳ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕದ (ಪಿಯುಸಿಎಲ್‌) ವರದಿಯು ಆತಂಕವನ್ನು ವ್ಯಕ್ತಪಡಿಸಿದೆ. ಜನವರಿಯಿಂದ ನವೆಂಬರ್‌‌ವರೆಗೆ ಒಟ್ಟು 39 ಕ್ರಿಶ್ಚಿಯನ್ನರ ಮೇಲಿನ ದ್ವೇಷ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ ಎಂದು ವರದಿ ಹೇಳಿದೆ.

ಬಹುತೇಕ ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ತಮ್ಮ ಪೂಜಾ ಸ್ಥಳಗಳನ್ನು ಮುಚ್ಚುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಅವರ ಭಾನುವಾರದ ಪ್ರಾರ್ಥನೆಗಾಗಿ ಒಟ್ಟುಗೂಡುವುದನ್ನು ನಿಲ್ಲಿಸಲಾಗುತ್ತಿದೆ. ಹಿಂದುತ್ವ ಗುಂಪುಗಳು ರಾಜ್ಯದ ಸಹಭಾಗಿತ್ವದೊಂದಿಗೆ ಸಾಮೂಹಿಕವಾಗಿ ಧಾರ್ಮಿಕ ಸಮುದಾಯವಾಗಿ ಪ್ರಾರ್ಥಿಸುವುದರ ಮೇಲಿನ ಈ ದಾಳಿಗಳು ಧರ್ಮವನ್ನು ಆಚರಿಸುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿ ಕಾರ್ಯನಿರ್ವಹಿಸುತ್ತವೆ. ಇಂದು ಕರ್ನಾಟಕದಲ್ಲಿ ನಡೆಯುತ್ತಿರುವ ದಾಳಿಗಳು ಧರ್ಮವನ್ನು ಪ್ರಚಾರಮಾಡುವ ಪ್ರಚಾರದ ಹಕ್ಕಿಗೆ ಸಂಬಂಧಿಸಿರುವುದಿಲ್ಲ. ಬದಲಿಗೆ, ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ ಮತ್ತು ಆಚರಣೆ ಮಾಡುವ ಹಕ್ಕಿನ ಮೇಲಿನ ದಾಳಿಗಳಾಗಿವೆ ಎಂದು ವರದಿ ಹೇಳುತ್ತದೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

’ಆದಿವಾಸಿಗಳ ಅಭಿವೃದ್ಧಿ’ ಪುಸ್ತಕದಿಂದ ಆಯ್ದ ಅಧ್ಯಾಯ; ಆದಿವಾಸಿಗಳೊಡನೆ ಅನುಸಂಧಾನ ವಿಧಾನ ಯಾವುದಾಗಿರಬೇಕು?

0
ಶ್ರೀಮತಿ ಖೋಂಗಮೆನ್ (1) ಅವರು, ಈಗ್ಗೆ ಮೂರು ದಿನಗಳ ಹಿಂದೆ ಈ ಸಮ್ಮೇಳನದ ಕುರಿತು ನನಗೆ ವಿವರಗಳನ್ನು ನೀಡಿದರು. ಈ ಕಾರ್ಯಕ್ರಮದ ಆಯೋಜನೆ ಮತ್ತು ವಿವರಗಳನ್ನು ನೋಡಿ ನನಗೆ ಸಂತೋಷವಾಯಿತು. ಈ ತರಹದ...