Homeಕರ್ನಾಟಕಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

ಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

- Advertisement -
- Advertisement -

ರಾಜ್ಯದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲವು ಗ್ರಾಮಗಳಲ್ಲಿ ಬಲವಂತದ ಮತಾಂತರ ನಡೆದಿದೆ ಎಂದ ಬಿಜೆಪಿ ಶಾಸಕರ ಹೇಳಿಕೆಗೆ ವ್ಯತಿರಿಕ್ತ ವರದಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ತಹಸೀಲ್ದಾರ್ ತಿಪ್ಪೇಸ್ವಾಮಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಮುಂದಿನ ಹುದ್ದೆಗಾಗಿ ತಿಪ್ಪೇಸ್ವಾಮಿ ಕಾಯುವಂತಾಗಿದೆ.

ಹೊಸದುರ್ಗದಲ್ಲಿ ಹೊಸ ತಹಸೀಲ್ದಾರ್ ಅಧಿಕಾರ ವಹಿಸಿಕೊಂಡಿದ್ದಾರೆ. “ಹಲವು ಮಾಧ್ಯಮಗಳು ಬಲವಂತದ ಮತಾಂತರದ ಬಗ್ಗೆ ವರದಿ ಮಾಡಿದ ನಂತರ ನಾನು ಸಮೀಕ್ಷೆ ನಡೆಸಿದೆ. ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿತ್ತು. ಜನರು ಹೇಳಿದ್ದನ್ನು ನನ್ನ ವರದಿಯಲ್ಲಿ ನಾನು ಹೈಲೈಟ್ ಮಾಡಿದ್ದೇನೆ” ಎಂದು ತಿಪ್ಪೇಸ್ವಾಮಿ ತಿಳಿಸಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜೊತೆಗೆ “ವರ್ಗಾವಣೆಗೂ ಹಾಗೂ ವರದಿಗೂ ಯಾವುದೇ ಸಂಬಂಧವಿಲ್ಲ” ಎಂದೂ ತಿಳಿಸಿದ್ದಾರೆ.

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ತಮ್ಮ ಕ್ಷೇತ್ರದಲ್ಲಿ ಬಲವಂತದ ಮತಾಂತರಗಳು ಹೆಚ್ಚಾಗಿವೆ ಎಂದು ರಾಜ್ಯದ ವಿಧಾನಸಭೆಯಲ್ಲಿ ಸೆಪ್ಪೆಂಬರ್‌‌ನಲ್ಲಿ ಆರೋಪಿಸಿದ್ದರು. ಹೊಸದುರ್ಗ ತಾಲೂಕು ಆಡಳಿತ ಕೆಲ ಗ್ರಾಮಗಳಲ್ಲಿ ಮತಾಂತರ ಸಂಬಂಧ ಸಮೀಕ್ಷೆ ನಡೆಸಿತ್ತು.

ಆದರೆ, ಕುಟುಂಬಗಳು ಸ್ವಇಚ್ಛೆಯಿಂದ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವುದನ್ನು ತಹಸೀಲ್ದಾರ್‌‌ ತಿಪ್ಪೇಸ್ವಾಮಿ ನೇತೃತ್ವದ ತಂಡ ವರದಿ ಸಲ್ಲಿಸಿತ್ತು. ತಾಲೂಕಿನ ಎರಡು ಗ್ರಾಮಗಳಲ್ಲಿ 46 ಕುಟುಂಬಗಳು ತಾವಾಗಿಯೇ ಕ್ರೈಸ್ತ ಧರ್ಮ ಸ್ವೀಕರಿಸಿದ್ದು, ಯಾರೂ ಕೂಡ ಬಲವಂತ ಮಾಡಿಲ್ಲ ಎಂಬುದು ಬಯಲಾಗಿತ್ತು. ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಲು ಯಾರೂ ಒತ್ತಾಯಿಸಲಿಲ್ಲ ಎಂದು ಕುಟುಂಬಗಳು ಅಧಿಕೃತ ಹೇಳಿಕೆ ನೀಡಿದ್ದವು.

“ಯಾರೂ ಬಲವಂತಪಡಿಸಿಲ್ಲ ಎಂದು ಕುಟುಂಬಗಳು ನಮಗೆ ತಿಳಿಸಿದವು. ಅಲ್ಲದೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಾಗಿನಿಂದ ಈ ಕುಟುಂಬಗಳು ಸಂತೋಷವಾಗಿವೆ, ಮಾನಸಿಕ ಶಾಂತಿಯನ್ನೂ ಹೊಂದಿವೆ. ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಲು ಕೆಲವರು ಆಮಿಷ ಒಡ್ಡುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ನಾವು ಕೇಳಿದಾಗ, ಕುಟುಂಬಗಳು ಆ ವರದಿಗಳನ್ನು ತಳ್ಳಿಹಾಕಿದವು” ಎಂದು ತಿಪ್ಪೇಸ್ವಾಮಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು.

ಮತಾಂತರ ಹೆಸರಲ್ಲಿ ಕ್ರಿಶ್ಚಿಯನ್ನರ ಮೇಲೆ ದ್ವೇಷ ರಾಜಕಾರಣ

ಧರ್ಮಾಚರಣೆಯ ಅಪರಾಧೀಕರಣ, ಕರ್ನಾಟಕದಲ್ಲಿ ಕ್ರಿಶ್ಚಿಯನ್ನರ ಮೇಲಿನ ದ್ವೇಷದ ಅಪರಾಧಗಳ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕದ (ಪಿಯುಸಿಎಲ್‌) ವರದಿಯು ಆತಂಕವನ್ನು ವ್ಯಕ್ತಪಡಿಸಿದೆ. ಜನವರಿಯಿಂದ ನವೆಂಬರ್‌‌ವರೆಗೆ ಒಟ್ಟು 39 ಕ್ರಿಶ್ಚಿಯನ್ನರ ಮೇಲಿನ ದ್ವೇಷ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ ಎಂದು ವರದಿ ಹೇಳಿದೆ.

ಬಹುತೇಕ ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ತಮ್ಮ ಪೂಜಾ ಸ್ಥಳಗಳನ್ನು ಮುಚ್ಚುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಅವರ ಭಾನುವಾರದ ಪ್ರಾರ್ಥನೆಗಾಗಿ ಒಟ್ಟುಗೂಡುವುದನ್ನು ನಿಲ್ಲಿಸಲಾಗುತ್ತಿದೆ. ಹಿಂದುತ್ವ ಗುಂಪುಗಳು ರಾಜ್ಯದ ಸಹಭಾಗಿತ್ವದೊಂದಿಗೆ ಸಾಮೂಹಿಕವಾಗಿ ಧಾರ್ಮಿಕ ಸಮುದಾಯವಾಗಿ ಪ್ರಾರ್ಥಿಸುವುದರ ಮೇಲಿನ ಈ ದಾಳಿಗಳು ಧರ್ಮವನ್ನು ಆಚರಿಸುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿ ಕಾರ್ಯನಿರ್ವಹಿಸುತ್ತವೆ. ಇಂದು ಕರ್ನಾಟಕದಲ್ಲಿ ನಡೆಯುತ್ತಿರುವ ದಾಳಿಗಳು ಧರ್ಮವನ್ನು ಪ್ರಚಾರಮಾಡುವ ಪ್ರಚಾರದ ಹಕ್ಕಿಗೆ ಸಂಬಂಧಿಸಿರುವುದಿಲ್ಲ. ಬದಲಿಗೆ, ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ ಮತ್ತು ಆಚರಣೆ ಮಾಡುವ ಹಕ್ಕಿನ ಮೇಲಿನ ದಾಳಿಗಳಾಗಿವೆ ಎಂದು ವರದಿ ಹೇಳುತ್ತದೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...