Homeಮುಖಪುಟಇದು ಅಸಲಿ ಮತ್ತು ನಕಲಿ ಚೌಕಿದಾರರ ನಡುವಿನ ಕದನ: ಸಂದರ್ಶನದಲ್ಲಿ ತೇಜ್ ಬಹದ್ದೂರ್ ಯಾದವ್

ಇದು ಅಸಲಿ ಮತ್ತು ನಕಲಿ ಚೌಕಿದಾರರ ನಡುವಿನ ಕದನ: ಸಂದರ್ಶನದಲ್ಲಿ ತೇಜ್ ಬಹದ್ದೂರ್ ಯಾದವ್

- Advertisement -
- Advertisement -

ಸೇನೆಯಲ್ಲಿದ್ದುಕೊಂಡು ಬಂಡಾಯದ ಕಹಳೆ ಊದಿದವರು ಸೀಮಾ ಸುರಕ್ಷ ಪಡೆಯ ತೇಜ್ ಬಹಾದ್ದೂರ್ ಯಾದವ್. ಒಂದು ವರ್ಷದ ಹಿಂದೆ ಬಿಎಸ್‍ಎಫ್ ನಲ್ಲಿ ಜವಾನರೊಂದಿಗೆ ಹೇಗೆ ವರ್ತಿಸಲಾಗುತ್ತಿದೆ, ಅವರಿಗೆ ಮೂಲಸೌಕರ್ಯಗಳ ಬಗ್ಗೆ, ಅವರಿಗೆ ನೀಡುವ ಊಟ ವಸತಿಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಪ್ರಶ್ನೆ ಎತ್ತಿದ ನಂತರ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು. ಇಂದು ತೇಜ್ ಬಹಾದ್ದೂರ್ ವಾರಣಾಸಿಯ ಲೋಕಸಭೆ ಕ್ಷೇತ್ರದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ದ ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಬಿಸಿ ಹಿಂದಿ ಮಾಡಿದ ಸಂದರ್ಶನದ ಕನ್ನಡ ಅನುವಾದವನ್ನು ಇಲ್ಲಿದೆ.

ಪ್ರಶ್ನೆ – ಚುನಾವಣೆಗೆ ಏಕೆ ನಿಲ್ಲುತಿದ್ದೀರಿ? ನಿಮ್ಮ ಊರು ಹರಿಯಾಣದಲ್ಲಿದೆ, ವಾರಣಾಸಿಯಿಂದ ಏಕೆ ಸ್ಪರ್ಧಿಸುತ್ತಿದ್ದೀರಿ?
ಉತ್ತರ – ಮೊದಲನೇದಾಗಿ, ನಾನೊಬ್ಬ ಭಾರತೀಯ, ಯಾವ ಕ್ಷೇತ್ರದಿಂದಲೂ ಸ್ಪರ್ಧಿಸಬಹುದು. ಹಾಗೂ ವಾರಣಾಸಿ ಒಂದು ಪವಿತ್ರ ಕ್ಷೇತ್ರವಾಗಿದೆ. ಇದಕ್ಕೆ ಒಂದು ದೊಡ್ಡ ಇತಿಹಾಸವಿದೆ. ನಾನು ಕಾಶಿ ವಿಶ್ವನಾಥನ ಆಶಿರ್ವಾದದೊಂದಿಗೆ ಚೌಕಿದಾರ ಎಂದು ಹೇಳಿಕೊಳ್ಳುತ್ತಿರುವ ನಕಲಿ ಚೌಕಿದಾರನನ್ನು ಇಲ್ಲಿಂದ ಓಡಿಸಲು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಈ ನಕಲಿ ಚೌಕಿದಾರರು ಸೇನೆಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ನಮ್ಮ ಸೇನೆಯ ಹೆಸರನ್ನು ಮಣ್ಣುಪಾಲು ಮಾಡಿದ್ದಾರೆ ಈ ನಕಲಿ ಚೌಕಿದಾರರು. ಇಂದು ವಿದೇಶಗಳಲ್ಲೂ ನಮ್ಮ ಸೇನೆಯ ಹೆಸರು ಕೆಡುತ್ತಿದೆ ಇವರಿಂದಾಗಿ. ಎಲ್ಲಾ ಸೈನಿಕರ ನೈತಿಕ ಶಕ್ತಿ ಕುಸಿದುಹೋಗಿದೆ. ದೇಶದ ಎಲ್ಲಾ ಸೈನಿಕರು ಸಿಟ್ಟಿಗೆದ್ದಿದ್ದಾರೆ ಏಕೆಂದರೆ, ಈ ಸರ್ಜಿಕಲ್ ಸ್ಟ್ರೈಕ್, ಏರ್ಸ್ಟ್ರೈಕ್, ಇದೇನು ಮೊದಲ ಬಾರಿ ಮಾಡಿಲ್ಲ. ಇವುಗಳನ್ನು ಸೈನ್ಯ ಮುಂಚೆಯಿಂದಲೂ ಮಾಡುತ್ತಲೇ ಬಂದಿದೆ. ಆದರೆ ಇವುಗಳ ಮೇಲೆ ರಾಜಕಾರಣ ಮಾಡುತ್ತಿರುವುದು ಮೊದಲಬಾರಿ. ಹಾಗಾಗಿ ನಾವು ನಿರ್ಧರಿಸಿದ್ದೇನೆಂದರೆ, ನಮ್ಮ ದೇಶವನ್ನು ಉಳಿಸಬೇಕೆಂದರೆ, ಇಲ್ಲಿಯವರೆಗೆ ಗಡಿಗಳಲ್ಲಿ ನಿಂತು ದೇಶದ ರಕ್ಷಣೆ ಮಾಡುತ್ತ ಬಂದಿದ್ದೇವೆ, ಈಗ ಸಂಸತ್ತಿಗೆ ಹೋಗಿ ನಮ್ಮ ಮಾತುಗಳನ್ನು ಮಂಡಿಸಬೇಕಿದೆ, ಹಾಗಾಗದಿದ್ದರೆ ದೇಶ ಉಳಿಯುವುದಿಲ್ಲ.

ವರದಿಗಾರ- ಗಡಿ ರಕ್ಷಣಾ ಪಡೆಯ ತೇಜ್ ಬಹಾದ್ದೂರ್ ಯಾದವ್ ಅವರಿಗೆ ಇನ್ನಿತರ ಸೈನಿಕರ ಬೆಂಬಲ ದೊರಕಿದೆ. ಅವರೆಲ್ಲ ತೇಜ್ ಬಹಾದ್ದೂರ ಅವರ ಈ ಮಿಷನ್‍ನಲ್ಲಿ ಜೊತೆಯಾಗಿದ್ದಾರೆ; ಅವರ ಪ್ರಚಾರದಲ್ಲಿ ಸಹಕರಿಸುತ್ತಿದ್ದಾರೆ. ಈಗ ಬೆಜೆಪಿ ಮತ್ತು ಪ್ರಧಾನಮಂತ್ರಿ ಹೇಳುತ್ತಿರುವುದೇನೆಂದರೆ, ಇಂದು ಭಾರತದ ಪ್ರಧಾನಿ ಮೋದಿಯವರಿಂದಾಗಿ, ಇತರ ದೇಶಗಳು, ಶತ್ರುದೇಶಗಳು ಹೆದರುತ್ತಿವೆ, ಪ್ರಧಾನಿ ಮೋದಿಯವರಿಂದಾಗಿ ವೈರಿ ದೇಶಗಳ ಕಣ್ಣಲ್ಲಿ ಕಣ್ಣಿಟ್ಟು ನೋಡುವಂತಾಗಿದೆ. ಇದರ ಬಗ್ಗೆ ನೀವೇನು ಹೇಳುತ್ತೀರ?
ತೇಜ್ ಬಹಾದ್ದೂರ್ ಯಾದವ್- ಇಂತಹದ್ದೇನೂ ಆಗಿಲ್ಲ, ಅವರು ಹೇಳಿದ ಹಾಗಿದ್ದರೆ ಫುಲ್ವಾಮಾ ದಾಳಿ ಯಾಕೆ ಆಯಿತು? ಅವರು ಹೇಳಿದ್ದು ನಿಜವಿದ್ದರೆ ಆ ದಾಳಿ ಆಗಬಾರದಿತ್ತು. ಇಂತಹ ದೊಡ್ಡ ಹಲ್ಲೆ ಇದಕ್ಕೂ ಮುಂಚೆ ಆಗಿರಲಿಲ್ಲ. ಇವರದ್ದು ಅಷ್ಟೇ ಭಯ ಇತ್ತಾದರೆ ಫುಲ್ವಾಮಾ ದಾಳಿಯನ್ನೇಕೆ ತಡೆಯಲಿಲ್ಲ? ಒಂದು ವೇಳೆ ಇವರು ಹೇಳಿದ ಹಾಗೆಯೇ ಇದ್ದರೆ ಈ ದಾಳಿ ಒಂದು ಪಿತೂರಿ ಆಗಿರಬಹುದಲ್ಲವೇ? ಇದನ್ನೇನು ಇವರೇ ಮಾಡಿಸಿದ್ದಾ, ಹಾಗೇನಾದರೂ ಇದೆಯಾ?

ವರದಿಗಾರ- ಅಲ್ಲ, ಇಂತಹ ಆರೋಪಗಳು ಬಂದಿವೆ ಆದರೆ ಇವಕ್ಕೆ ಯಾವುದೇ ಸಾಕ್ಷಿಗಳು ಕಂಡಿಲ್ಲ.
ತೇಜ್ ಬಹಾದ್ದೂರ್ ಯಾದವ್ – ಹೌದು ಸಾಕ್ಷಾಧಾರಗಳು ಇಲ್ಲ, ಆದರೆ ಅದರ ತನಿಖೆ ಏಕೆ ಮಾಡಿಸುತ್ತಿಲ್ಲ ಇವರು? ಅಲ್ಲಿಯ ರಾಜ್ಯಪಾಲರೇ ಸ್ವತಃ ಹೇಳುತ್ತಿದ್ದಾರೆ ತಮ್ಮಿಂದ ಲೋಪವಾಗಿದೆ ಎಂದು, ಲೋಪವಾಗಿದ್ದಲ್ಲಿ ದಾಳಿಯ ಮಾಹಿತಿ ಮೊದಲೇ ಸಿಕ್ಕಿತ್ತು ಎಂದು ಹೇಳುತ್ತಾರೆ, ಮಾಹಿತಿ ಸಿಕ್ಕ ಮೇಲೂ ಏನು ಮಾಡಿದರು? ಇದಕ್ಕೆ ಜವಾಬ್ದಾರರಾದ, ಇವರಿಗೆ ತುಂಬಾ ಹತ್ತಿರದವರಾದ ಅಜಿತ್ ದೋವಾಲ್ ಅವರಗೆ ಏಕೆ
ಪ್ರಶ್ನೆ ಕೇಳುತ್ತಿಲ್ಲ? ಮಾಹಿತಿ ಸಿಕ್ಕ ಮೇಲೂ ಇಷ್ಟು ದೊಡ್ಡ ದಾಳಿ ಏಕಾಯಿತು?

ವರದಿಗಾರ- ನಿಮ್ಮ ಪ್ರಚಾರದ ಕರಪತ್ರಗಳಲ್ಲಿ ಚೌಕಿದಾರರ ಬಗ್ಗೆ ಬರೆಯಲಾಗಿದೆ; ಅಸಲಿ ಚೌಕಿದಾರ ಯಾರು, ನಕಲಿ ಚೌಕಿದಾರ್ ಯಾರು ಎನ್ನುವ ಪ್ರಶ್ನೆ ಇದೆ. ಹಾಗಾದರೆ ಅಸಲಿ ಚೌಕಿದಾರ ಯಾರು ಮತ್ತು ನಕಲಿ ಯಾರು?
ತೇಜ್ ಬಹಾದ್ದೂರ್ ಯಾದವ್ – ನೋಡಿ ಇಷ್ಟು ವರ್ಷಗಳ ತನಕ ಗಡಿಗಳ ರಕ್ಷಣೆ ಮಾಡುತ್ತ ಬಂದಿದ್ದೇವೆ, ನಾವು ನಿಜವಾದ ಚೌಕಿದಾರರು. ಅವರು ತಮ್ಮನ್ನು ತಾವು ಚೌಕಿದಾರ ಎಂದು ಕರೆದುಕೊಳ್ಳುತ್ತಿದ್ದಾರೆ ಆದರೆ, ರಾಫೇಲ್‍ನ ಕಡತಗಳ ಕಳ್ಳತನ ಆಯಿತು, ನೀರವ್ ಮೋದಿ ಓಡಿಹೋದರು, ಮತ್ತು ಅನೇಕ ಜನ ಓಡಿ ಹೋದರು. ಇವರೆಂಥ ಚೌಕಿದಾರರು, ಯಾರ ಚೌಕಿದಾರಿಕೆ ಮಾಡುತ್ತಿದ್ದಾರೆ?

ವರದಿಗಾರ- ಆದರೆ ನೀವು ಚುನಾವಣೆಯ ದಾರಿಯನ್ನೇ ಏಕೆ ಆಯ್ಕೆ ಮಾಡಿದಿರಿ?
ತೇಜ್ ಬಹಾದ್ದೂರ್ ಯಾದವ್ – ಬೇರೆ ಯಾವುದೇ ದಾರಿ ಇದ್ದೇ ಇಲ್ಲ

ವರದಿಗಾರ – ನ್ಯಾಯಾಲಯದ ದಾರಿ ಏಕೆ ಆಯ್ಕೆ ಮಾಡಲಿಲ್ಲ
ತೇಜ್ ಬಹಾದ್ದೂರ್ ಯಾದವ್ – ನ್ಯಾಯಾಂಗದ ದಾರಿಯಲ್ಲಿ ನಮಗೆ ನ್ಯಾಯ ಸಿಗಲೇ ಇಲ್ಲ. ನ್ಯಾಯಾಂಗದ ದುರ್ಭಾಗ್ಯ ನೋಡಿ, ಸುಪ್ರೀಮ್ ಕೋರ್ಟಿನ ನಾಲ್ಕು ನ್ಯಾಯಾಧೀಶರು ಪತ್ರಿಕಾಗೋಷ್ಠಿ ನಡೆಸುತ್ತಾರೆ. ಮುಂಚೆ ಯಾವಾಗಾದರೂ ಆಗಿತ್ತಾ ಹೀಗೆ? ಇವರು(ಪ್ರಧಾನಿ) ಯಾರ ಮಾತನ್ನು ಕೇಳುತ್ತಾರೆ? ಇದು ಹಿಟ್ಲರ್‍ಶಾಹಿ ಆಳ್ವಿಕೆ ಆಗಿದೆ. ಈಗ ನೋಡಿ ರಾಫೇಲ್ ವಿಷಯ ಕೋರ್ಟಿಗೆ ಬಂದೋಡನೇ ಉಚ್ಚ ನ್ಯಾಯಾಧೀಶರನ್ನು ಯಾವುದೋ ಹಗರಣದಲ್ಲಿ ಸಿಲುಕಿಸುತ್ತಿದ್ದಾರೆ.

ಇದನ್ನೂ ಓದಿ: ಮೋದಿ ವಿರುದ್ಧ ಸ್ಪರ್ಧಿಸಲು ಮಾಜಿ ಯೋಧ ತೇಜ್ ಬಹದ್ದೂರ್ ಯಾದವ್‍ಗೆ ಟಿಕೆಟ್ ನೀಡಿದ ಸಮಾಜವಾದಿ ಪಕ್ಷ.

ವರದಿಗಾರ – ಹೌದು ಈ ಆರೋಪ ಇದೆ, ಅದರ ತನಿಖೆ ಆಗುತ್ತಿದೆ, ಈಗ ಅದರ ಬಗ್ಗೆ ಹೇಳಲಾಗುವುದಿಲ್ಲ. ಆದರೆ, ಒಂದು ಪ್ರಶ್ನೆ. ಲೋಕಸಭೆಗೆ ಸ್ಪರ್ಧಿಸುವುದೆಂದರೆ, ಅಲ್ಲಿ ಸ್ಥಳೀಯ ವಿಷಯಗಳೂ ಇರುತ್ತವೆ. ನೀವು ಎತ್ತುತ್ತಿರುವ ಇಷ್ಯೂಗಳು ಯಾವು? ಬನಾರಸ್‍ನ ಜನರು ನಿಮಗೆ ಏಕೆ ಮತ ನೀಡಬೇಕು?
ತೇಜ್ ಬಹಾದ್ದೂರ್ ಯಾದವ್- ನೋಡಿ ಒಬ್ಬ ಎಮ್‍ಪಿಯ ಕರ್ತವ್ಯಗಳಲ್ಲಿ ತನ್ನ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯಗಳಿವೆಯೇ ಇಲ್ಲವೇ ಎನ್ನುವುದನ್ನು ನೋಡಿಕೊಳ್ಳುವುದು. ಆದರೆ ಇಂದಿನ ದಿನಗಳಲ್ಲಿ ಹಾಗಾಗುತ್ತಿಲ್ಲ. ಆಶ್ವಾಸನೆಗಳನ್ನು ನೀಡುತ್ತಾರೆ ಆದರೆ ನಂತರ ಮರೆತುಬಿಡುತ್ತಾರೆ. ಆದರೆ ನಾನು ಒಬ್ಬ ಎಮ್‍ಪಿ ಆಗಿ ಈ ಕ್ಷೇತ್ರದ ಸಮಸ್ಯೆಗಳೇನು ಎನ್ನುವುದರ ಬಗ್ಗೆ ಸರ್ವೇ ಮಾಡಿಸುವೆ. ನೀರು, ಶಿಕ್ಷಣ, ನಿರುದ್ಯೋಗ, ರಸ್ತೆಗಳು, ಆರೋಗ್ಯ, ಈ ಎಲ್ಲ ವಿಷಯಗಳ ಬಗ್ಗೆ ಕೆಲಸ ಮಾಡುವೆ.

ವರದಿಗಾರ- ನೀವು ಜನರಿಂದ ಹಣವನ್ನೂ ಕೇಳುತ್ತಿದ್ದೀರಿ, ನಿಮ್ಮ ಚುನಾವಣೆಯ ಪ್ರಚಾರದಲ್ಲಿ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತಿದ್ದೀರಿ. ಇದಕ್ಕೆ ಜನರ ಪ್ರತಿಕ್ರಿಯೆ ಹೇಗಿದೆ?
ತೇಜ್ ಬಹಾದ್ದೂರ್ ಯಾದವ್ – ನೋಡಿ, ನಿನ್ನೆ ನಾವೆಲ್ಲಾ ಹೋದಾಗ, ಎಲ್ಲಾ ಕಾರ್ಮಿಕಜನರು, ಬಡವರು ನಮ್ಮನ್ನು ನೋಡಿ ಸಂತೋಷಪಟ್ಟು, ಅಪ್ಪಿಕೊಂಡರು, ನಮಗೆ ಅಲ್ಲಲ್ಲಿ ಚಹಾತಿಂಡಿ ಮಾಡಿಸಿದರು, ಕೊನೆಗೂ ನಿಜವಾದ ಚೌಕಿದಾರರು ಬಂದರು ಎಂದು ಸಂತಸಪಟ್ಟರು. ಆದರೆ ದುಃಖದ ಸಂಗತಿಯೆಂದರೆ, ಏರ್‍ಕಂಡಿಷನ್ ಗಾಡಿಗಳಲ್ಲಿ ಇದ್ದವರೆಲ್ಲ ಹೇಳಿದ್ದು, ‘ಇಲ್ಲ, ನಾವು ನಿಮ್ಮ ಜೊತೆಗಿಲ್ಲ’ ಎಂದು. ದೇಶದ ಎಲ್ಲಾ ಕಾರ್ಪೋರೇಟ್ ಕುಟುಂಬಗಳು ಬಿಜೆಪಿ ಜೊತೆಗೆ ನಿಂತುಕೊಂಡಿವೆ. ಆದರೆ ದೇಶದ ರೈತರು, ಕಾರ್ಮಿಕರು ಮತ್ತು ಬಡವರೆಲ್ಲಾ ನಮ್ಮ ಜೊತೆಗಿದ್ದಾರೆ.

ವರದಿಗಾರ- ಆದರೆ ನಿಮ್ಮ ಹೋರಾಟ ಕೇವಲ ಬಿಜೆಪಿ ಜೊತೆಗಷ್ಟೇ ಇಲ್ಲ, ಒಂದು ಕಡೆ ಬಿಜೆಪಿ ಇದ್ದರೆ ಮತ್ತೊಂದು ಕಡೆ ಕಾಂಗ್ರೆಸ್ ಇದೆ, ಇನ್ನೊಂದು ಕಡೆ ಮಹಾಘಬಂಧನ್ ಇದೆ, ಅನೇಕ ಪಕ್ಷೇತರರು ಇದ್ದಾರೆ.
ತೇಜ್ ಬಹಾದ್ದೂರ್ ಯಾದವ್ – ನೋಡಿ, ಮಂಗಲ್ ಪಾಂಡೆ ಎನ್ನುವರ ಹೆಸರನ್ನು ನೀವು ಕೇಳಿರಬಹುದು. ಆಗ ಆ ಒಬ್ಬ ಸೈನಿಕ ಪ್ರಾರಂಭಿಸಿದ್ದರಿಂದ ಏನೇನಾಯಿತು ನೋಡಿ. ಅದೇ ಸ್ವಾತಂತ್ರ ಸಂಗ್ರಾಮದಿಂದ ನಮಗೆ ಸ್ವತಂತ್ರ ಸಿಕ್ಕಿತು. ಈಗ ಇಲ್ಲಿಯೂ ಒಬ್ಬ ಸೈನಿಕ ನಿಂತಿದ್ದಾನೆ, ಅದೂ ಪ್ರಧಾನಮಂತ್ರಿಯ ವಿರುದ್ದ, ಈಗ ಹತ್ತಿದ ಈ ಒಂದು ಕಿಡಿ ಹೇಗೆ ಬಿರುಗಾಳಿ ಬೀಸಲು ಕಾರಣವಾಗುವುದೆಂದು ನೀವು
ನೋಡುವಿರ. ಎಷ್ಟೇ ಜನ ವಿರುದ್ಧ ಇರಲಿ, ಆದರೆ ಮುಂದೆ ಬರುವ ಸಮಯಕ್ಕೆ ಒಂದು ರಾಜಕೀಯ ಭವಿಷ್ಯವನ್ನು ರಚಿಸುತ್ತಿದ್ದೇವೆ.

ವರದಿಗಾರ- ತೇಜ್ ಬಹಾದ್ದೂರ್ ಅವರು ಮಂಗಲ್ ಪಾಂಡೆಯನ್ನು ಆದರ್ಶವಾಗಿಟ್ಟುಕೊಂಡು ಹೋರಾಟ ಮಾಡುತ್ತಿದ್ದಾರೆ. ಯುದ್ಧಭೂಮಿಯಾಗಿರಲಿ ಚುನಾವಣಾ ಕಣವಾಗಿರಲಿ ಗೆಲವು ಸಾಧಿಸುವ ವಿಶ್ವಾಸ ಅವರಿಗಿದೆ.

ಕೃಪೆ: ಬಿಬಿಸಿ ಹಿಂದಿ

ಕನ್ನಡಕ್ಕೆ: ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...