Homeಮುಖಪುಟಯೋಧನ ನಾಮಪತ್ರ ತಿರಸ್ಕೃತ: ಸೋಲಿನ ಭಯದಿಂದ ಮೋದಿಯ ದುಷ್ಕೃತ್ಯವೆಂದ ಟ್ರೋಲಿಗರು

ಯೋಧನ ನಾಮಪತ್ರ ತಿರಸ್ಕೃತ: ಸೋಲಿನ ಭಯದಿಂದ ಮೋದಿಯ ದುಷ್ಕೃತ್ಯವೆಂದ ಟ್ರೋಲಿಗರು

- Advertisement -
- Advertisement -

ತೇಜ್ ಬಹದ್ದೂರ್ ಯಾದವ್ ನಾಮಪತ್ರ ತಿರಸ್ಕೃತ: ಮೋದಿ ವಿರುದ್ಧ ಟ್ರೋಲ್‍ಗಳ ಆರಂಭ

ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿ ರಾಷ್ಟ್ರದ ಗಮನ ಸೆಳೆದಿದ್ದ ವಾರಣಾಸಿ ಲೋಕಸಭಾ ಕ್ಷೇತ್ರದ ಎಸ್ಪಿ ಬಿಎಸ್ಪಿ ಮೈತ್ರಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್‍ರವರ ನಾಮಪತ್ರವನ್ನು ಚುನಾವನಾ ಆಯೋಗ ತಿರಸ್ಕರಿಸಿದೆ. ಹಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ನೋಟಿಸ್ ನೀಡಿದ್ದ ಚುನಾವಣಾ ಆಯೋಗ ಇಂದು ನಾಮಪತ್ರ ತಿರಸ್ಕರಿಸುವ ಮೂಲಕ ದೊಡ್ಡ ಅಚ್ಚರಿ ನೀಡಿದೆ. ಇದರಿಂದ ಕುಪಿತನಾಗಿರುವ ಮಾಜಿ ಯೋಧ ತೇಜ್ ಬಹದ್ದೂರ್ ಸುಪ್ರೀಂ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ.

ಕೇಂದ್ರ ಅಥವಾ ರಾಜ್ಯ ಸರ್ಕಾರದ ಉದ್ಯೋಗಿಯೊಬ್ಬ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹದ ಆರೋಪದಡಿಯಲ್ಲಿ ಸೇವೆಯಿಂದ ವಜಾಗೊಂಡಿದ್ದರೆ ಐದು ವರ್ಷಗಳ ಕಾಲ ಆತ ಚುನಾವಣಾ ಪ್ರಚಾರದಿಂದ ದೂರ ಉಳಿಯಬೇಕು ಎಂದು ಆಯೋಗ ನಿನ್ನೆ ನೋಟಿಸ್ ನೀಡಿತ್ತು. ಜೊತೆಗೆ ಮೇ1ರ ಬೆಳಿಗ್ಗೆ 11 ಗಂಟೆಯೊಳಗೆ ನೋಟಿಸ್‍ಗೆ ಉತ್ತರಿಸಬೇಕೆಂಬ ಗಡುವು ವಿಧಿಸಿತ್ತು.

ಇದರೊಂದಿಗೆ ತೇಜ್ ಬಹದ್ದೂರ್‍ರವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾಗ ಬಿಎಸ್‍ಎಫ್‍ನಿಂದ ವಜಾಗೊಂಡಿರುವುದಾಗಿ ಉಲ್ಲೇಖಿಸಿದ್ದರು ಆದರೆ ನಂತರ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಈ ಮಾಹಿತಿ ಉಲ್ಲೇಖಿಸಿರಲಿಲ್ಲ ಹಾಗಾಗಿ ಇದಕ್ಕೂ ಕೂಡ ಉತ್ತರಿಸಬೇಕೆಂದು ಆಯೋಗ ಸೂಚಿಸಿತ್ತು.

ಎಎನ್‍ಐ ವರದಿ ಮಾಡಿರುವ ಪ್ರಕಾರ ‘ನಿನ್ನೆ ಸಂಜೆ 6.15 ಗಂಟೆಗೆ ಕೆಲವು ದಾಖಲೆಗಳನ್ನು ಸಲ್ಲಿಸಲು ಸೂಚಿಸಲಾಗಿತ್ತು. ಅದರಂತೆ ಸರಿಯಾದ ಸಮಯಕ್ಕೆ ದಾಖಲೆಗಳನ್ನು ಸಲ್ಲಿಸಿದರೂ ಕೂಡ ವಿನಾಕಾರಣ ನಾಮಪತ್ರ ತಿರಸ್ಕರಿಸಲಾಗಿದೆ, ಇದರ ವಿರುದ್ಧ ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸುತ್ತೇನೆ, ಎಂದು ತೇಜ್ ಬಹದ್ದೂರ್ ಯಾದವ್ ತಿಳಿಸಿದ್ದಾರೆ.

ಸಾಮಾಜಿಕ ತಾಲತಾಣದಲ್ಲಿ ಮೋದಿ ವಿರುದ್ಧ ಟ್ರೋಲ್‍ಗಳ ಆರಂಭ
ನಾಮಪತ್ರ ತಿರಸ್ಕøತವಾದ ಸುದ್ದಿ ತಲುಪುತ್ತಲೇ ಮಾಜಿ ಯೋಧನನ್ನು ಬೆಂಬಲಿಸಿದ್ದ ಹಲವಾರು ಜಾಲತಾಣಿಗರು ಮೋದಿ ಸರ್ಕಾರದ ವಿರುದ್ದದ ಟ್ರೋಲ್ ಆರಂಭಿಸಿದ್ದಾರೆ. ಅಸಲಿ ಚೌಕಿದಾರನಿಗೆ ಹೆದರಿಕೊಂಡು ನಕಲಿ ಚೌಕಿದಾರ ಈ ರೀತಿ ಮಾಡಿಸಲಾಗಿದೆ, ಚುನಾವಣಾ ಆಯೋಗ ಮೋದಿಯ ಸೇವಕನಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಸೋಲಿನ ಭಯದಿಂದ ಮೋದಿ ಈ ಕೃತ್ಯ ಮಾಡಿಸಿರಬಹುದು ಎಂತಲೂ ಹಲವರು ಬರೆದಿದ್ದಾರೆ. ತೇಜ್ ಬಹದ್ದೂರ್ ನಾಮಪತ್ರ ಸಲ್ಲಿಸಿದಾಗಿನಿಂದ ಸಾವಿರಾರು ಜನ ಇವರನ್ನು ಬೆಂಬಲಿಸಿದ್ದರು. ಸಮಾಜವಾದಿ ಪಕ್ಷ ಟಿಕೇಟ್ ನೀಡಿದಾಗಲಂತೂ ಗೆಲುವಿನ ಸಾಧ್ಯತೆಯಿದ್ದು ಕಾಂಗ್ರೆಸ್ ಪಕ್ಷ ಕೂಡ ತನ್ನ ಅಭ್ಯರ್ಥಿಯನ್ನು ಹಿಂದಕ್ಕೆ ತೆಗೆದುಕೊಂಡು ಈ ಮಾಜಿ ಯೋಧನಿಗೆ ಬೆಂಬಲ ನೀಡಬೇಕೆಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...