Homeಮುಖಪುಟಯೋಧನ ನಾಮಪತ್ರ ತಿರಸ್ಕೃತ: ಸೋಲಿನ ಭಯದಿಂದ ಮೋದಿಯ ದುಷ್ಕೃತ್ಯವೆಂದ ಟ್ರೋಲಿಗರು

ಯೋಧನ ನಾಮಪತ್ರ ತಿರಸ್ಕೃತ: ಸೋಲಿನ ಭಯದಿಂದ ಮೋದಿಯ ದುಷ್ಕೃತ್ಯವೆಂದ ಟ್ರೋಲಿಗರು

- Advertisement -
- Advertisement -

ತೇಜ್ ಬಹದ್ದೂರ್ ಯಾದವ್ ನಾಮಪತ್ರ ತಿರಸ್ಕೃತ: ಮೋದಿ ವಿರುದ್ಧ ಟ್ರೋಲ್‍ಗಳ ಆರಂಭ

ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿ ರಾಷ್ಟ್ರದ ಗಮನ ಸೆಳೆದಿದ್ದ ವಾರಣಾಸಿ ಲೋಕಸಭಾ ಕ್ಷೇತ್ರದ ಎಸ್ಪಿ ಬಿಎಸ್ಪಿ ಮೈತ್ರಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್‍ರವರ ನಾಮಪತ್ರವನ್ನು ಚುನಾವನಾ ಆಯೋಗ ತಿರಸ್ಕರಿಸಿದೆ. ಹಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ನೋಟಿಸ್ ನೀಡಿದ್ದ ಚುನಾವಣಾ ಆಯೋಗ ಇಂದು ನಾಮಪತ್ರ ತಿರಸ್ಕರಿಸುವ ಮೂಲಕ ದೊಡ್ಡ ಅಚ್ಚರಿ ನೀಡಿದೆ. ಇದರಿಂದ ಕುಪಿತನಾಗಿರುವ ಮಾಜಿ ಯೋಧ ತೇಜ್ ಬಹದ್ದೂರ್ ಸುಪ್ರೀಂ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ.

ಕೇಂದ್ರ ಅಥವಾ ರಾಜ್ಯ ಸರ್ಕಾರದ ಉದ್ಯೋಗಿಯೊಬ್ಬ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹದ ಆರೋಪದಡಿಯಲ್ಲಿ ಸೇವೆಯಿಂದ ವಜಾಗೊಂಡಿದ್ದರೆ ಐದು ವರ್ಷಗಳ ಕಾಲ ಆತ ಚುನಾವಣಾ ಪ್ರಚಾರದಿಂದ ದೂರ ಉಳಿಯಬೇಕು ಎಂದು ಆಯೋಗ ನಿನ್ನೆ ನೋಟಿಸ್ ನೀಡಿತ್ತು. ಜೊತೆಗೆ ಮೇ1ರ ಬೆಳಿಗ್ಗೆ 11 ಗಂಟೆಯೊಳಗೆ ನೋಟಿಸ್‍ಗೆ ಉತ್ತರಿಸಬೇಕೆಂಬ ಗಡುವು ವಿಧಿಸಿತ್ತು.

ಇದರೊಂದಿಗೆ ತೇಜ್ ಬಹದ್ದೂರ್‍ರವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾಗ ಬಿಎಸ್‍ಎಫ್‍ನಿಂದ ವಜಾಗೊಂಡಿರುವುದಾಗಿ ಉಲ್ಲೇಖಿಸಿದ್ದರು ಆದರೆ ನಂತರ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಈ ಮಾಹಿತಿ ಉಲ್ಲೇಖಿಸಿರಲಿಲ್ಲ ಹಾಗಾಗಿ ಇದಕ್ಕೂ ಕೂಡ ಉತ್ತರಿಸಬೇಕೆಂದು ಆಯೋಗ ಸೂಚಿಸಿತ್ತು.

ಎಎನ್‍ಐ ವರದಿ ಮಾಡಿರುವ ಪ್ರಕಾರ ‘ನಿನ್ನೆ ಸಂಜೆ 6.15 ಗಂಟೆಗೆ ಕೆಲವು ದಾಖಲೆಗಳನ್ನು ಸಲ್ಲಿಸಲು ಸೂಚಿಸಲಾಗಿತ್ತು. ಅದರಂತೆ ಸರಿಯಾದ ಸಮಯಕ್ಕೆ ದಾಖಲೆಗಳನ್ನು ಸಲ್ಲಿಸಿದರೂ ಕೂಡ ವಿನಾಕಾರಣ ನಾಮಪತ್ರ ತಿರಸ್ಕರಿಸಲಾಗಿದೆ, ಇದರ ವಿರುದ್ಧ ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸುತ್ತೇನೆ, ಎಂದು ತೇಜ್ ಬಹದ್ದೂರ್ ಯಾದವ್ ತಿಳಿಸಿದ್ದಾರೆ.

ಸಾಮಾಜಿಕ ತಾಲತಾಣದಲ್ಲಿ ಮೋದಿ ವಿರುದ್ಧ ಟ್ರೋಲ್‍ಗಳ ಆರಂಭ
ನಾಮಪತ್ರ ತಿರಸ್ಕøತವಾದ ಸುದ್ದಿ ತಲುಪುತ್ತಲೇ ಮಾಜಿ ಯೋಧನನ್ನು ಬೆಂಬಲಿಸಿದ್ದ ಹಲವಾರು ಜಾಲತಾಣಿಗರು ಮೋದಿ ಸರ್ಕಾರದ ವಿರುದ್ದದ ಟ್ರೋಲ್ ಆರಂಭಿಸಿದ್ದಾರೆ. ಅಸಲಿ ಚೌಕಿದಾರನಿಗೆ ಹೆದರಿಕೊಂಡು ನಕಲಿ ಚೌಕಿದಾರ ಈ ರೀತಿ ಮಾಡಿಸಲಾಗಿದೆ, ಚುನಾವಣಾ ಆಯೋಗ ಮೋದಿಯ ಸೇವಕನಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಸೋಲಿನ ಭಯದಿಂದ ಮೋದಿ ಈ ಕೃತ್ಯ ಮಾಡಿಸಿರಬಹುದು ಎಂತಲೂ ಹಲವರು ಬರೆದಿದ್ದಾರೆ. ತೇಜ್ ಬಹದ್ದೂರ್ ನಾಮಪತ್ರ ಸಲ್ಲಿಸಿದಾಗಿನಿಂದ ಸಾವಿರಾರು ಜನ ಇವರನ್ನು ಬೆಂಬಲಿಸಿದ್ದರು. ಸಮಾಜವಾದಿ ಪಕ್ಷ ಟಿಕೇಟ್ ನೀಡಿದಾಗಲಂತೂ ಗೆಲುವಿನ ಸಾಧ್ಯತೆಯಿದ್ದು ಕಾಂಗ್ರೆಸ್ ಪಕ್ಷ ಕೂಡ ತನ್ನ ಅಭ್ಯರ್ಥಿಯನ್ನು ಹಿಂದಕ್ಕೆ ತೆಗೆದುಕೊಂಡು ಈ ಮಾಜಿ ಯೋಧನಿಗೆ ಬೆಂಬಲ ನೀಡಬೇಕೆಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...