Homeಮುಖಪುಟಯೋಧನ ನಾಮಪತ್ರ ತಿರಸ್ಕೃತ: ಸೋಲಿನ ಭಯದಿಂದ ಮೋದಿಯ ದುಷ್ಕೃತ್ಯವೆಂದ ಟ್ರೋಲಿಗರು

ಯೋಧನ ನಾಮಪತ್ರ ತಿರಸ್ಕೃತ: ಸೋಲಿನ ಭಯದಿಂದ ಮೋದಿಯ ದುಷ್ಕೃತ್ಯವೆಂದ ಟ್ರೋಲಿಗರು

- Advertisement -
- Advertisement -

ತೇಜ್ ಬಹದ್ದೂರ್ ಯಾದವ್ ನಾಮಪತ್ರ ತಿರಸ್ಕೃತ: ಮೋದಿ ವಿರುದ್ಧ ಟ್ರೋಲ್‍ಗಳ ಆರಂಭ

ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿ ರಾಷ್ಟ್ರದ ಗಮನ ಸೆಳೆದಿದ್ದ ವಾರಣಾಸಿ ಲೋಕಸಭಾ ಕ್ಷೇತ್ರದ ಎಸ್ಪಿ ಬಿಎಸ್ಪಿ ಮೈತ್ರಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್‍ರವರ ನಾಮಪತ್ರವನ್ನು ಚುನಾವನಾ ಆಯೋಗ ತಿರಸ್ಕರಿಸಿದೆ. ಹಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ನೋಟಿಸ್ ನೀಡಿದ್ದ ಚುನಾವಣಾ ಆಯೋಗ ಇಂದು ನಾಮಪತ್ರ ತಿರಸ್ಕರಿಸುವ ಮೂಲಕ ದೊಡ್ಡ ಅಚ್ಚರಿ ನೀಡಿದೆ. ಇದರಿಂದ ಕುಪಿತನಾಗಿರುವ ಮಾಜಿ ಯೋಧ ತೇಜ್ ಬಹದ್ದೂರ್ ಸುಪ್ರೀಂ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ.

ಕೇಂದ್ರ ಅಥವಾ ರಾಜ್ಯ ಸರ್ಕಾರದ ಉದ್ಯೋಗಿಯೊಬ್ಬ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹದ ಆರೋಪದಡಿಯಲ್ಲಿ ಸೇವೆಯಿಂದ ವಜಾಗೊಂಡಿದ್ದರೆ ಐದು ವರ್ಷಗಳ ಕಾಲ ಆತ ಚುನಾವಣಾ ಪ್ರಚಾರದಿಂದ ದೂರ ಉಳಿಯಬೇಕು ಎಂದು ಆಯೋಗ ನಿನ್ನೆ ನೋಟಿಸ್ ನೀಡಿತ್ತು. ಜೊತೆಗೆ ಮೇ1ರ ಬೆಳಿಗ್ಗೆ 11 ಗಂಟೆಯೊಳಗೆ ನೋಟಿಸ್‍ಗೆ ಉತ್ತರಿಸಬೇಕೆಂಬ ಗಡುವು ವಿಧಿಸಿತ್ತು.

ಇದರೊಂದಿಗೆ ತೇಜ್ ಬಹದ್ದೂರ್‍ರವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾಗ ಬಿಎಸ್‍ಎಫ್‍ನಿಂದ ವಜಾಗೊಂಡಿರುವುದಾಗಿ ಉಲ್ಲೇಖಿಸಿದ್ದರು ಆದರೆ ನಂತರ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಈ ಮಾಹಿತಿ ಉಲ್ಲೇಖಿಸಿರಲಿಲ್ಲ ಹಾಗಾಗಿ ಇದಕ್ಕೂ ಕೂಡ ಉತ್ತರಿಸಬೇಕೆಂದು ಆಯೋಗ ಸೂಚಿಸಿತ್ತು.

ಎಎನ್‍ಐ ವರದಿ ಮಾಡಿರುವ ಪ್ರಕಾರ ‘ನಿನ್ನೆ ಸಂಜೆ 6.15 ಗಂಟೆಗೆ ಕೆಲವು ದಾಖಲೆಗಳನ್ನು ಸಲ್ಲಿಸಲು ಸೂಚಿಸಲಾಗಿತ್ತು. ಅದರಂತೆ ಸರಿಯಾದ ಸಮಯಕ್ಕೆ ದಾಖಲೆಗಳನ್ನು ಸಲ್ಲಿಸಿದರೂ ಕೂಡ ವಿನಾಕಾರಣ ನಾಮಪತ್ರ ತಿರಸ್ಕರಿಸಲಾಗಿದೆ, ಇದರ ವಿರುದ್ಧ ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸುತ್ತೇನೆ, ಎಂದು ತೇಜ್ ಬಹದ್ದೂರ್ ಯಾದವ್ ತಿಳಿಸಿದ್ದಾರೆ.

ಸಾಮಾಜಿಕ ತಾಲತಾಣದಲ್ಲಿ ಮೋದಿ ವಿರುದ್ಧ ಟ್ರೋಲ್‍ಗಳ ಆರಂಭ
ನಾಮಪತ್ರ ತಿರಸ್ಕøತವಾದ ಸುದ್ದಿ ತಲುಪುತ್ತಲೇ ಮಾಜಿ ಯೋಧನನ್ನು ಬೆಂಬಲಿಸಿದ್ದ ಹಲವಾರು ಜಾಲತಾಣಿಗರು ಮೋದಿ ಸರ್ಕಾರದ ವಿರುದ್ದದ ಟ್ರೋಲ್ ಆರಂಭಿಸಿದ್ದಾರೆ. ಅಸಲಿ ಚೌಕಿದಾರನಿಗೆ ಹೆದರಿಕೊಂಡು ನಕಲಿ ಚೌಕಿದಾರ ಈ ರೀತಿ ಮಾಡಿಸಲಾಗಿದೆ, ಚುನಾವಣಾ ಆಯೋಗ ಮೋದಿಯ ಸೇವಕನಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಸೋಲಿನ ಭಯದಿಂದ ಮೋದಿ ಈ ಕೃತ್ಯ ಮಾಡಿಸಿರಬಹುದು ಎಂತಲೂ ಹಲವರು ಬರೆದಿದ್ದಾರೆ. ತೇಜ್ ಬಹದ್ದೂರ್ ನಾಮಪತ್ರ ಸಲ್ಲಿಸಿದಾಗಿನಿಂದ ಸಾವಿರಾರು ಜನ ಇವರನ್ನು ಬೆಂಬಲಿಸಿದ್ದರು. ಸಮಾಜವಾದಿ ಪಕ್ಷ ಟಿಕೇಟ್ ನೀಡಿದಾಗಲಂತೂ ಗೆಲುವಿನ ಸಾಧ್ಯತೆಯಿದ್ದು ಕಾಂಗ್ರೆಸ್ ಪಕ್ಷ ಕೂಡ ತನ್ನ ಅಭ್ಯರ್ಥಿಯನ್ನು ಹಿಂದಕ್ಕೆ ತೆಗೆದುಕೊಂಡು ಈ ಮಾಜಿ ಯೋಧನಿಗೆ ಬೆಂಬಲ ನೀಡಬೇಕೆಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...