Homeಮುಖಪುಟಯೋಧನ ನಾಮಪತ್ರ ತಿರಸ್ಕೃತ: ಸೋಲಿನ ಭಯದಿಂದ ಮೋದಿಯ ದುಷ್ಕೃತ್ಯವೆಂದ ಟ್ರೋಲಿಗರು

ಯೋಧನ ನಾಮಪತ್ರ ತಿರಸ್ಕೃತ: ಸೋಲಿನ ಭಯದಿಂದ ಮೋದಿಯ ದುಷ್ಕೃತ್ಯವೆಂದ ಟ್ರೋಲಿಗರು

- Advertisement -
- Advertisement -

ತೇಜ್ ಬಹದ್ದೂರ್ ಯಾದವ್ ನಾಮಪತ್ರ ತಿರಸ್ಕೃತ: ಮೋದಿ ವಿರುದ್ಧ ಟ್ರೋಲ್‍ಗಳ ಆರಂಭ

ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿ ರಾಷ್ಟ್ರದ ಗಮನ ಸೆಳೆದಿದ್ದ ವಾರಣಾಸಿ ಲೋಕಸಭಾ ಕ್ಷೇತ್ರದ ಎಸ್ಪಿ ಬಿಎಸ್ಪಿ ಮೈತ್ರಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್‍ರವರ ನಾಮಪತ್ರವನ್ನು ಚುನಾವನಾ ಆಯೋಗ ತಿರಸ್ಕರಿಸಿದೆ. ಹಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ನೋಟಿಸ್ ನೀಡಿದ್ದ ಚುನಾವಣಾ ಆಯೋಗ ಇಂದು ನಾಮಪತ್ರ ತಿರಸ್ಕರಿಸುವ ಮೂಲಕ ದೊಡ್ಡ ಅಚ್ಚರಿ ನೀಡಿದೆ. ಇದರಿಂದ ಕುಪಿತನಾಗಿರುವ ಮಾಜಿ ಯೋಧ ತೇಜ್ ಬಹದ್ದೂರ್ ಸುಪ್ರೀಂ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ.

ಕೇಂದ್ರ ಅಥವಾ ರಾಜ್ಯ ಸರ್ಕಾರದ ಉದ್ಯೋಗಿಯೊಬ್ಬ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹದ ಆರೋಪದಡಿಯಲ್ಲಿ ಸೇವೆಯಿಂದ ವಜಾಗೊಂಡಿದ್ದರೆ ಐದು ವರ್ಷಗಳ ಕಾಲ ಆತ ಚುನಾವಣಾ ಪ್ರಚಾರದಿಂದ ದೂರ ಉಳಿಯಬೇಕು ಎಂದು ಆಯೋಗ ನಿನ್ನೆ ನೋಟಿಸ್ ನೀಡಿತ್ತು. ಜೊತೆಗೆ ಮೇ1ರ ಬೆಳಿಗ್ಗೆ 11 ಗಂಟೆಯೊಳಗೆ ನೋಟಿಸ್‍ಗೆ ಉತ್ತರಿಸಬೇಕೆಂಬ ಗಡುವು ವಿಧಿಸಿತ್ತು.

ಇದರೊಂದಿಗೆ ತೇಜ್ ಬಹದ್ದೂರ್‍ರವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾಗ ಬಿಎಸ್‍ಎಫ್‍ನಿಂದ ವಜಾಗೊಂಡಿರುವುದಾಗಿ ಉಲ್ಲೇಖಿಸಿದ್ದರು ಆದರೆ ನಂತರ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಈ ಮಾಹಿತಿ ಉಲ್ಲೇಖಿಸಿರಲಿಲ್ಲ ಹಾಗಾಗಿ ಇದಕ್ಕೂ ಕೂಡ ಉತ್ತರಿಸಬೇಕೆಂದು ಆಯೋಗ ಸೂಚಿಸಿತ್ತು.

ಎಎನ್‍ಐ ವರದಿ ಮಾಡಿರುವ ಪ್ರಕಾರ ‘ನಿನ್ನೆ ಸಂಜೆ 6.15 ಗಂಟೆಗೆ ಕೆಲವು ದಾಖಲೆಗಳನ್ನು ಸಲ್ಲಿಸಲು ಸೂಚಿಸಲಾಗಿತ್ತು. ಅದರಂತೆ ಸರಿಯಾದ ಸಮಯಕ್ಕೆ ದಾಖಲೆಗಳನ್ನು ಸಲ್ಲಿಸಿದರೂ ಕೂಡ ವಿನಾಕಾರಣ ನಾಮಪತ್ರ ತಿರಸ್ಕರಿಸಲಾಗಿದೆ, ಇದರ ವಿರುದ್ಧ ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸುತ್ತೇನೆ, ಎಂದು ತೇಜ್ ಬಹದ್ದೂರ್ ಯಾದವ್ ತಿಳಿಸಿದ್ದಾರೆ.

ಸಾಮಾಜಿಕ ತಾಲತಾಣದಲ್ಲಿ ಮೋದಿ ವಿರುದ್ಧ ಟ್ರೋಲ್‍ಗಳ ಆರಂಭ
ನಾಮಪತ್ರ ತಿರಸ್ಕøತವಾದ ಸುದ್ದಿ ತಲುಪುತ್ತಲೇ ಮಾಜಿ ಯೋಧನನ್ನು ಬೆಂಬಲಿಸಿದ್ದ ಹಲವಾರು ಜಾಲತಾಣಿಗರು ಮೋದಿ ಸರ್ಕಾರದ ವಿರುದ್ದದ ಟ್ರೋಲ್ ಆರಂಭಿಸಿದ್ದಾರೆ. ಅಸಲಿ ಚೌಕಿದಾರನಿಗೆ ಹೆದರಿಕೊಂಡು ನಕಲಿ ಚೌಕಿದಾರ ಈ ರೀತಿ ಮಾಡಿಸಲಾಗಿದೆ, ಚುನಾವಣಾ ಆಯೋಗ ಮೋದಿಯ ಸೇವಕನಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಸೋಲಿನ ಭಯದಿಂದ ಮೋದಿ ಈ ಕೃತ್ಯ ಮಾಡಿಸಿರಬಹುದು ಎಂತಲೂ ಹಲವರು ಬರೆದಿದ್ದಾರೆ. ತೇಜ್ ಬಹದ್ದೂರ್ ನಾಮಪತ್ರ ಸಲ್ಲಿಸಿದಾಗಿನಿಂದ ಸಾವಿರಾರು ಜನ ಇವರನ್ನು ಬೆಂಬಲಿಸಿದ್ದರು. ಸಮಾಜವಾದಿ ಪಕ್ಷ ಟಿಕೇಟ್ ನೀಡಿದಾಗಲಂತೂ ಗೆಲುವಿನ ಸಾಧ್ಯತೆಯಿದ್ದು ಕಾಂಗ್ರೆಸ್ ಪಕ್ಷ ಕೂಡ ತನ್ನ ಅಭ್ಯರ್ಥಿಯನ್ನು ಹಿಂದಕ್ಕೆ ತೆಗೆದುಕೊಂಡು ಈ ಮಾಜಿ ಯೋಧನಿಗೆ ಬೆಂಬಲ ನೀಡಬೇಕೆಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...