Homeಮುಖಪುಟಯೋಧನ ನಾಮಪತ್ರ ತಿರಸ್ಕೃತ: ಸೋಲಿನ ಭಯದಿಂದ ಮೋದಿಯ ದುಷ್ಕೃತ್ಯವೆಂದ ಟ್ರೋಲಿಗರು

ಯೋಧನ ನಾಮಪತ್ರ ತಿರಸ್ಕೃತ: ಸೋಲಿನ ಭಯದಿಂದ ಮೋದಿಯ ದುಷ್ಕೃತ್ಯವೆಂದ ಟ್ರೋಲಿಗರು

- Advertisement -
- Advertisement -

ತೇಜ್ ಬಹದ್ದೂರ್ ಯಾದವ್ ನಾಮಪತ್ರ ತಿರಸ್ಕೃತ: ಮೋದಿ ವಿರುದ್ಧ ಟ್ರೋಲ್‍ಗಳ ಆರಂಭ

ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿ ರಾಷ್ಟ್ರದ ಗಮನ ಸೆಳೆದಿದ್ದ ವಾರಣಾಸಿ ಲೋಕಸಭಾ ಕ್ಷೇತ್ರದ ಎಸ್ಪಿ ಬಿಎಸ್ಪಿ ಮೈತ್ರಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್‍ರವರ ನಾಮಪತ್ರವನ್ನು ಚುನಾವನಾ ಆಯೋಗ ತಿರಸ್ಕರಿಸಿದೆ. ಹಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ನೋಟಿಸ್ ನೀಡಿದ್ದ ಚುನಾವಣಾ ಆಯೋಗ ಇಂದು ನಾಮಪತ್ರ ತಿರಸ್ಕರಿಸುವ ಮೂಲಕ ದೊಡ್ಡ ಅಚ್ಚರಿ ನೀಡಿದೆ. ಇದರಿಂದ ಕುಪಿತನಾಗಿರುವ ಮಾಜಿ ಯೋಧ ತೇಜ್ ಬಹದ್ದೂರ್ ಸುಪ್ರೀಂ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ.

ಕೇಂದ್ರ ಅಥವಾ ರಾಜ್ಯ ಸರ್ಕಾರದ ಉದ್ಯೋಗಿಯೊಬ್ಬ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹದ ಆರೋಪದಡಿಯಲ್ಲಿ ಸೇವೆಯಿಂದ ವಜಾಗೊಂಡಿದ್ದರೆ ಐದು ವರ್ಷಗಳ ಕಾಲ ಆತ ಚುನಾವಣಾ ಪ್ರಚಾರದಿಂದ ದೂರ ಉಳಿಯಬೇಕು ಎಂದು ಆಯೋಗ ನಿನ್ನೆ ನೋಟಿಸ್ ನೀಡಿತ್ತು. ಜೊತೆಗೆ ಮೇ1ರ ಬೆಳಿಗ್ಗೆ 11 ಗಂಟೆಯೊಳಗೆ ನೋಟಿಸ್‍ಗೆ ಉತ್ತರಿಸಬೇಕೆಂಬ ಗಡುವು ವಿಧಿಸಿತ್ತು.

ಇದರೊಂದಿಗೆ ತೇಜ್ ಬಹದ್ದೂರ್‍ರವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾಗ ಬಿಎಸ್‍ಎಫ್‍ನಿಂದ ವಜಾಗೊಂಡಿರುವುದಾಗಿ ಉಲ್ಲೇಖಿಸಿದ್ದರು ಆದರೆ ನಂತರ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಘೋಷಣೆಯಾದ ನಂತರ ಈ ಮಾಹಿತಿ ಉಲ್ಲೇಖಿಸಿರಲಿಲ್ಲ ಹಾಗಾಗಿ ಇದಕ್ಕೂ ಕೂಡ ಉತ್ತರಿಸಬೇಕೆಂದು ಆಯೋಗ ಸೂಚಿಸಿತ್ತು.

ಎಎನ್‍ಐ ವರದಿ ಮಾಡಿರುವ ಪ್ರಕಾರ ‘ನಿನ್ನೆ ಸಂಜೆ 6.15 ಗಂಟೆಗೆ ಕೆಲವು ದಾಖಲೆಗಳನ್ನು ಸಲ್ಲಿಸಲು ಸೂಚಿಸಲಾಗಿತ್ತು. ಅದರಂತೆ ಸರಿಯಾದ ಸಮಯಕ್ಕೆ ದಾಖಲೆಗಳನ್ನು ಸಲ್ಲಿಸಿದರೂ ಕೂಡ ವಿನಾಕಾರಣ ನಾಮಪತ್ರ ತಿರಸ್ಕರಿಸಲಾಗಿದೆ, ಇದರ ವಿರುದ್ಧ ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸುತ್ತೇನೆ, ಎಂದು ತೇಜ್ ಬಹದ್ದೂರ್ ಯಾದವ್ ತಿಳಿಸಿದ್ದಾರೆ.

ಸಾಮಾಜಿಕ ತಾಲತಾಣದಲ್ಲಿ ಮೋದಿ ವಿರುದ್ಧ ಟ್ರೋಲ್‍ಗಳ ಆರಂಭ
ನಾಮಪತ್ರ ತಿರಸ್ಕøತವಾದ ಸುದ್ದಿ ತಲುಪುತ್ತಲೇ ಮಾಜಿ ಯೋಧನನ್ನು ಬೆಂಬಲಿಸಿದ್ದ ಹಲವಾರು ಜಾಲತಾಣಿಗರು ಮೋದಿ ಸರ್ಕಾರದ ವಿರುದ್ದದ ಟ್ರೋಲ್ ಆರಂಭಿಸಿದ್ದಾರೆ. ಅಸಲಿ ಚೌಕಿದಾರನಿಗೆ ಹೆದರಿಕೊಂಡು ನಕಲಿ ಚೌಕಿದಾರ ಈ ರೀತಿ ಮಾಡಿಸಲಾಗಿದೆ, ಚುನಾವಣಾ ಆಯೋಗ ಮೋದಿಯ ಸೇವಕನಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಸೋಲಿನ ಭಯದಿಂದ ಮೋದಿ ಈ ಕೃತ್ಯ ಮಾಡಿಸಿರಬಹುದು ಎಂತಲೂ ಹಲವರು ಬರೆದಿದ್ದಾರೆ. ತೇಜ್ ಬಹದ್ದೂರ್ ನಾಮಪತ್ರ ಸಲ್ಲಿಸಿದಾಗಿನಿಂದ ಸಾವಿರಾರು ಜನ ಇವರನ್ನು ಬೆಂಬಲಿಸಿದ್ದರು. ಸಮಾಜವಾದಿ ಪಕ್ಷ ಟಿಕೇಟ್ ನೀಡಿದಾಗಲಂತೂ ಗೆಲುವಿನ ಸಾಧ್ಯತೆಯಿದ್ದು ಕಾಂಗ್ರೆಸ್ ಪಕ್ಷ ಕೂಡ ತನ್ನ ಅಭ್ಯರ್ಥಿಯನ್ನು ಹಿಂದಕ್ಕೆ ತೆಗೆದುಕೊಂಡು ಈ ಮಾಜಿ ಯೋಧನಿಗೆ ಬೆಂಬಲ ನೀಡಬೇಕೆಂದು ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...