Homeಮುಖಪುಟತೇಜ್ ಬಹದೂರ್ ಯಾದವ್ ಮೋದಿಯ ಕಟ್ಟಾ ಅಭಿಮಾನಿಯಾಗಿದ್ದರು ಗೊತ್ತೇ?

ತೇಜ್ ಬಹದೂರ್ ಯಾದವ್ ಮೋದಿಯ ಕಟ್ಟಾ ಅಭಿಮಾನಿಯಾಗಿದ್ದರು ಗೊತ್ತೇ?

- Advertisement -
- Advertisement -

ನಾನುಗೌರಿ ಡೆಸ್ಕ್

ವಿಶಿಷ್ಟವಾದ ಸ್ವತಂತ್ರ ಮಾಧ್ಯಮ ಸಂಸ್ಥೆಯನ್ನು ಕಟ್ಟಲು ಶ್ರಮಿಸುತ್ತಿರುವ ಹಿರಿಯ ಪತ್ರಕರ್ತ ವಿನೋದ್ ಚಂದ್ ಅವರು ಸ್ವಲ್ಪ ‘ತನಿಖೆ’ ನಡೆಸಿ ತೇಜ್ ಬಹಾದೂರ್ ಯಾದವ್‍ರ ಹಿನ್ನೆಲೆಯನ್ನು ಪತ್ತೆ ಹಚ್ಚಿದ್ದಾರೆ. ಅವರು ಫೇಸ್‍ಬುಕ್‍ನಲ್ಲಿ ಹಾಕಿರುವ ಪೋಸ್ಟ್‍ನ ಸಾರಾಂಶ ಕೆಳಗಿದೆ. ಎಲ್ಲರೂ ಅಚ್ಚರಿ ಪಡುವಂತಹ ಹಲವು ಸಂಗತಿಗಳು ಇದರಲ್ಲಿವೆ.

ವಿನೋದ್ ಚಂದ್

‘ತೇಜ್ ಬಹಾದೂರ್ ಯಾದವ್ ಮೋದಿಯವರ ತೀವ್ರ ಬೆಂಬಲಿಗನಾಗಿದ್ದರು. ಅವರ ಫೇಸ್‍ಬುಕ್ ಟೈಂಲೈನ್‍ನಲ್ಲಿ ಮೋದಿಯವರಿಗೆ ಬಹಿರಂಗ ಬೆಂಬಲ ಸೂಚಿಸುವ ಮತ್ತು ದ್ವೇಷಪೂರಿತ ಪೋಸ್ಟ್‍ಗಳು ತುಂಬಿ ಹೋಗಿವೆ. ಬೇರಾವುದೇ ಮೋದಿ ಬೆಂಬಲಿಗನಂತೆ ಈತನೂ, ಮೋದಿ ದೊಡ್ಡ ಬದಲಾವಣೆ ತರುತ್ತಾರೆಂದು ಬಲವಾಗಿ ನಂಬಿದ್ದರು.

ಇದೇ ಭರವಸೆಯೊಂದಿಗೇನೇ, ತನಗೂ ಸಮಸ್ಯೆಯಾಗಿದ್ದ, ತನ್ನ ಸೈನಿಕ ಪಡೆಯಲ್ಲಿದ್ದ ಭ್ರಷ್ಟಾಚಾರವನ್ನು ಹೊರಗೆಳೆಯಲು ನಿರ್ಧರಿಸಿದ್ದರು. ಅದರ ಭಾಗವಾಗಿಯೇ ಈಗ ಪ್ರಸಿದ್ಧವಾಗಿರುವ ವಿಡಿಯೋವನ್ನು ಶೂಟ್ ಮಾಡಿದ್ದರು. ಅದರಲ್ಲಿ ಆತನಂತೆಯೇ ಕೊರೆಯುವ ಛಳಿಯಲ್ಲಿ ಗಡಿ ಕಾಯುತ್ತಿದ್ದ ಸೈನಿಕರಿಗೆ ಕೊಳೆತ ಆಹಾರವನ್ನು ನೀಡುವುದರ ಬಗ್ಗೆ ಯಾದವ್ ಮಾತಾಡಿದ್ದರು.

ಸಾಮಾಜಿಕ ಜಾಲತಾಣಗಳನ್ನು ಗಮನಿಸುವ ಮತ್ತು ಭ್ರಷ್ಟಾಚಾರ ವಿರೋಧಿ ನಾಯಕ, ದೇವದೂತ ಮೋದಿಯವರು ತನ್ನ ವಿಡಿಯೋವನ್ನು ನೋಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ ಮತ್ತು ವ್ಯವಸ್ಥೆಯನ್ನು ಬದಲಿಸುತ್ತಾರೆಂದು ಆತನಿಗೆ ಅಪಾರವಾದ ವಿಶ್ವಾಸವಿತ್ತು.
ಆದರೆ, ಅಂಥದ್ದೇನೂ ಆಗಲಿಲ್ಲ. ಅದೇ ವ್ಯವಸ್ಥೆಯೇ ಆತನ ಮೇಲೆ ದಾಳಿ ಮಾಡಿತು, ತೇಜ್ ಬಹಾದೂರ್‍ರನ್ನು ಹುಚ್ಚನೆಂದು ಕರೆದು, ಕೆಲಸದಿಂದ ಹೊರದಬ್ಬಿತು. ಸೈನಿಕರಿಗಾಗಿ ಕಣ್ಣೀರು ಸುರಿಸುವ ಮತ್ತು ಭ್ರಷ್ಟಾಚಾರವನ್ನು ಬುಡಸಮೇತ ನಿರ್ಮೂಲನೆ ಮಾಡಲು ಬಯಸುವ ದೇವದೂತ ಮೋದಿಯವರು ಆತನ ಸಹಾಯಕ್ಕೆ ಬರಲಿಲ್ಲ.

ಅದೇ ಸಂದರ್ಭದಲ್ಲಿ ತೇಜ್ ಬಹಾದೂರ್ ಯಾದವ್‍ರು ಮಾಡಿದ್ದನ್ನು ಸೈನ್ಯದಲ್ಲಿ ಸಹಿಸುವುದು ಸಾಧ್ಯವೇ ಇರಲಿಲ್ಲ. ಸೈನಿಕ ಸೈನಿಕನಾಗಿರಬೇಕಷ್ಟೇ, ಬರುವ ತೊಂದರೆ ಅನುಭವಿಸಬೇಕು, ಇಲ್ಲವೇ ಹೊರನಡೆಯಬೇಕು. ಆತ ಹೊರಜಗತ್ತಿಗೆ ದೂರುವಂತಿಲ್ಲ. ಅಲ್ಲಿನ ನಿಯಮಗಳು ಏನು ಹೇಳುತ್ತವೋ ಅದಕ್ಕೆ ಬದ್ಧನಾಗಿರಬೇಕು.

ಆದರೆ, ತೇಜ್ ಬಹಾದೂರ್‍ರ ಭಿನ್ನಮತದ ಕಥೆ ಇಲ್ಲಿಗೇ ಮುಗಿಯುವುದಿಲ್ಲ. ಆತನಿಗೆ, ಬಹುಶಃ, ಯಾವ ನಿವೃತ್ತಿಯ ಸೌಲಭ್ಯಗಳನ್ನೂ ನೀಡದೇ ಮನೆಗೆ ಕಳಿಸಲಾಯಿತು. ಈಗ ಆತ ಸಾಮಾನ್ಯ ನಾಗರಿಕ. ಯಾವುದನ್ನು ಸೈನಿಕನಾಗಿ ಮಾಡಲಾಗಲಿಲ್ಲವೋ, ಅದನ್ನೀಗ ಮಾಡುವುದು ಸುಲಭವಾಗಿದೆ. ತಾನು ಯಾರ ಮೇಲೆ ಭರವಸೆಯಿಟ್ಟಿದ್ದರೋ, ಆ ವ್ಯಕ್ತಿಯೆದುರಿಗೇ ಸೆಣಿಸಿ ಕೊಡಬೇಕಾದ ಸಂದೇಶವನ್ನು ಕೊಡಲು ಹೊರಟಿದ್ದಾರೆ.

ಹಾಗೆ ನೋಡಿದರೆ, ಮೋದಿಯವರಿಗೆ ತೇಜ್ ಬಹಾದೂರ್ ಅವರು ಮಾಡಿದ ವಿಡಿಯೋ ಒಂದು ಸುವರ್ಣ ಅವಕಾಶವಾಗಿತ್ತು. ಅದರ ಮೂಲಕ ಬಿಎಸ್‍ಎಫ್‍ನಲ್ಲಿನ ಭ್ರಷ್ಟಾಚಾರ ಹಾಗೂ ಸೈನಿಕರ ದುಸ್ಥಿತಿಯನ್ನು ಸರಿಪಡಿಸಬಹುದಿತ್ತು. ಸೈನ್ಯ ಮತ್ತು ಅರೆಸೇನಾಪಡೆಗಳಲ್ಲಿನ ಎಲ್ಲರಿಗೂ ಕಠಿಣ ಸಂದೇಶ ರವಾನಿಸುವ ಸಾಧ್ಯತೆಯಿತ್ತು. ನನಗೆ ಕೆಲವೊಮ್ಮೆ ಆಶ್ಚರ್ಯವಾಗುವುದೆಂದರೆ, ತೇಜ್ ಬಹಾದೂರ್‍ರ ಪರ ನಿಲ್ಲದಿರಲು ಮೋದಿಯವರಿಗೆ ಸಲಹೆ ನೀಡಿದವರು ಯಾರು ಎಂದು. ಏಕೆಂದರೆ, ಆ ಸೈನಿಕನ ದೂರನ್ನು ಆಲಿಸಿ ಕ್ರಮಗಳನ್ನು ತೆಗೆದುಕೊಂಡು ತಪ್ಪಿತಸ್ಥರನ್ನು ಶಿಕ್ಷಿಸಿದ್ದರೆ ಮೋದಿಯವರ ಕೀರ್ತಿಪತಾಕೆ ಹಾರುತ್ತಿತ್ತು.

ಹಾಗಾಗಿಯೇ ತೇಜ್ ಬಹಾದೂರ್ ಯಾದವ್, ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಸರಿಪಡಿಸುವಲ್ಲಿ ಮತ್ತು ಬದುಕಿನ ಎಲ್ಲಾ ಆಯಾಮಗಳಲ್ಲೂ ಮೋದಿಯವರ ವೈಫಲ್ಯದ ಪ್ರತೀಕವಾಗಿದ್ದಾರೆ. ಮೋದಿಯವರ ವ್ಯಕ್ತಿತ್ವದಲ್ಲಿನ ದ್ವಂದ್ವವನ್ನು ಬಯಲುಗೊಳಿಸಲು ಬಯಸುವ ಎಲ್ಲರೂ ತೇಜ್ ಯಾದವ್‍ರನ್ನು ಬೆಂಬಲಿಸಬೇಕು’ ಎಂದು ಹೇಳುವ ವಿನೋದ್ ಚಂದ್, ಅವರ ಪ್ರಚಾರಕ್ಕಾಗಿ ಮೇ 10ರಿಂದ 17ರವರೆಗೆ ವಾರಣಾಸಿಗೆ ಹೋಗುತ್ತಿದ್ದಾರೆ. ತೇಜ್ ಬಹಾದೂರ್‍ರ ಸಿದ್ಧಾಂತವನ್ನಾಗಲೀ, ಆತನ ವಿಧಾನವನ್ನಾಗಲೀ ತಾನು ಒಪ್ಪುವುದಿಲ್ಲವಾದರೂ ದೇಶದ ಬಹುದೊಡ್ಡ ಸಮಸ್ಯೆಯನ್ನು ಎದುರಿಸುವುದು ಬಹಳ ಮುಖ್ಯ ಎನ್ನುತ್ತಾರೆ. ಜೊತೆಗೆ ಇದನ್ನು ಒಬ್ಬ ಅಸಲೀ ಸೈನಿಕ ಮತ್ತು ನಕಲಿ ರಾಷ್ಟ್ರವಾದಿಯ ನಡುವಿನ ನೇರ ಸಮರವನ್ನಾಗಿಸಲು ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಳ್ಳಬೇಕೆಂದೂ ಅವರ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...