Homeಮುಖಪುಟತೇಜ್ ಬಹದೂರ್ ಯಾದವ್ ಮೋದಿಯ ಕಟ್ಟಾ ಅಭಿಮಾನಿಯಾಗಿದ್ದರು ಗೊತ್ತೇ?

ತೇಜ್ ಬಹದೂರ್ ಯಾದವ್ ಮೋದಿಯ ಕಟ್ಟಾ ಅಭಿಮಾನಿಯಾಗಿದ್ದರು ಗೊತ್ತೇ?

- Advertisement -
- Advertisement -

ನಾನುಗೌರಿ ಡೆಸ್ಕ್

ವಿಶಿಷ್ಟವಾದ ಸ್ವತಂತ್ರ ಮಾಧ್ಯಮ ಸಂಸ್ಥೆಯನ್ನು ಕಟ್ಟಲು ಶ್ರಮಿಸುತ್ತಿರುವ ಹಿರಿಯ ಪತ್ರಕರ್ತ ವಿನೋದ್ ಚಂದ್ ಅವರು ಸ್ವಲ್ಪ ‘ತನಿಖೆ’ ನಡೆಸಿ ತೇಜ್ ಬಹಾದೂರ್ ಯಾದವ್‍ರ ಹಿನ್ನೆಲೆಯನ್ನು ಪತ್ತೆ ಹಚ್ಚಿದ್ದಾರೆ. ಅವರು ಫೇಸ್‍ಬುಕ್‍ನಲ್ಲಿ ಹಾಕಿರುವ ಪೋಸ್ಟ್‍ನ ಸಾರಾಂಶ ಕೆಳಗಿದೆ. ಎಲ್ಲರೂ ಅಚ್ಚರಿ ಪಡುವಂತಹ ಹಲವು ಸಂಗತಿಗಳು ಇದರಲ್ಲಿವೆ.

ವಿನೋದ್ ಚಂದ್

‘ತೇಜ್ ಬಹಾದೂರ್ ಯಾದವ್ ಮೋದಿಯವರ ತೀವ್ರ ಬೆಂಬಲಿಗನಾಗಿದ್ದರು. ಅವರ ಫೇಸ್‍ಬುಕ್ ಟೈಂಲೈನ್‍ನಲ್ಲಿ ಮೋದಿಯವರಿಗೆ ಬಹಿರಂಗ ಬೆಂಬಲ ಸೂಚಿಸುವ ಮತ್ತು ದ್ವೇಷಪೂರಿತ ಪೋಸ್ಟ್‍ಗಳು ತುಂಬಿ ಹೋಗಿವೆ. ಬೇರಾವುದೇ ಮೋದಿ ಬೆಂಬಲಿಗನಂತೆ ಈತನೂ, ಮೋದಿ ದೊಡ್ಡ ಬದಲಾವಣೆ ತರುತ್ತಾರೆಂದು ಬಲವಾಗಿ ನಂಬಿದ್ದರು.

ಇದೇ ಭರವಸೆಯೊಂದಿಗೇನೇ, ತನಗೂ ಸಮಸ್ಯೆಯಾಗಿದ್ದ, ತನ್ನ ಸೈನಿಕ ಪಡೆಯಲ್ಲಿದ್ದ ಭ್ರಷ್ಟಾಚಾರವನ್ನು ಹೊರಗೆಳೆಯಲು ನಿರ್ಧರಿಸಿದ್ದರು. ಅದರ ಭಾಗವಾಗಿಯೇ ಈಗ ಪ್ರಸಿದ್ಧವಾಗಿರುವ ವಿಡಿಯೋವನ್ನು ಶೂಟ್ ಮಾಡಿದ್ದರು. ಅದರಲ್ಲಿ ಆತನಂತೆಯೇ ಕೊರೆಯುವ ಛಳಿಯಲ್ಲಿ ಗಡಿ ಕಾಯುತ್ತಿದ್ದ ಸೈನಿಕರಿಗೆ ಕೊಳೆತ ಆಹಾರವನ್ನು ನೀಡುವುದರ ಬಗ್ಗೆ ಯಾದವ್ ಮಾತಾಡಿದ್ದರು.

ಸಾಮಾಜಿಕ ಜಾಲತಾಣಗಳನ್ನು ಗಮನಿಸುವ ಮತ್ತು ಭ್ರಷ್ಟಾಚಾರ ವಿರೋಧಿ ನಾಯಕ, ದೇವದೂತ ಮೋದಿಯವರು ತನ್ನ ವಿಡಿಯೋವನ್ನು ನೋಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ ಮತ್ತು ವ್ಯವಸ್ಥೆಯನ್ನು ಬದಲಿಸುತ್ತಾರೆಂದು ಆತನಿಗೆ ಅಪಾರವಾದ ವಿಶ್ವಾಸವಿತ್ತು.
ಆದರೆ, ಅಂಥದ್ದೇನೂ ಆಗಲಿಲ್ಲ. ಅದೇ ವ್ಯವಸ್ಥೆಯೇ ಆತನ ಮೇಲೆ ದಾಳಿ ಮಾಡಿತು, ತೇಜ್ ಬಹಾದೂರ್‍ರನ್ನು ಹುಚ್ಚನೆಂದು ಕರೆದು, ಕೆಲಸದಿಂದ ಹೊರದಬ್ಬಿತು. ಸೈನಿಕರಿಗಾಗಿ ಕಣ್ಣೀರು ಸುರಿಸುವ ಮತ್ತು ಭ್ರಷ್ಟಾಚಾರವನ್ನು ಬುಡಸಮೇತ ನಿರ್ಮೂಲನೆ ಮಾಡಲು ಬಯಸುವ ದೇವದೂತ ಮೋದಿಯವರು ಆತನ ಸಹಾಯಕ್ಕೆ ಬರಲಿಲ್ಲ.

ಅದೇ ಸಂದರ್ಭದಲ್ಲಿ ತೇಜ್ ಬಹಾದೂರ್ ಯಾದವ್‍ರು ಮಾಡಿದ್ದನ್ನು ಸೈನ್ಯದಲ್ಲಿ ಸಹಿಸುವುದು ಸಾಧ್ಯವೇ ಇರಲಿಲ್ಲ. ಸೈನಿಕ ಸೈನಿಕನಾಗಿರಬೇಕಷ್ಟೇ, ಬರುವ ತೊಂದರೆ ಅನುಭವಿಸಬೇಕು, ಇಲ್ಲವೇ ಹೊರನಡೆಯಬೇಕು. ಆತ ಹೊರಜಗತ್ತಿಗೆ ದೂರುವಂತಿಲ್ಲ. ಅಲ್ಲಿನ ನಿಯಮಗಳು ಏನು ಹೇಳುತ್ತವೋ ಅದಕ್ಕೆ ಬದ್ಧನಾಗಿರಬೇಕು.

ಆದರೆ, ತೇಜ್ ಬಹಾದೂರ್‍ರ ಭಿನ್ನಮತದ ಕಥೆ ಇಲ್ಲಿಗೇ ಮುಗಿಯುವುದಿಲ್ಲ. ಆತನಿಗೆ, ಬಹುಶಃ, ಯಾವ ನಿವೃತ್ತಿಯ ಸೌಲಭ್ಯಗಳನ್ನೂ ನೀಡದೇ ಮನೆಗೆ ಕಳಿಸಲಾಯಿತು. ಈಗ ಆತ ಸಾಮಾನ್ಯ ನಾಗರಿಕ. ಯಾವುದನ್ನು ಸೈನಿಕನಾಗಿ ಮಾಡಲಾಗಲಿಲ್ಲವೋ, ಅದನ್ನೀಗ ಮಾಡುವುದು ಸುಲಭವಾಗಿದೆ. ತಾನು ಯಾರ ಮೇಲೆ ಭರವಸೆಯಿಟ್ಟಿದ್ದರೋ, ಆ ವ್ಯಕ್ತಿಯೆದುರಿಗೇ ಸೆಣಿಸಿ ಕೊಡಬೇಕಾದ ಸಂದೇಶವನ್ನು ಕೊಡಲು ಹೊರಟಿದ್ದಾರೆ.

ಹಾಗೆ ನೋಡಿದರೆ, ಮೋದಿಯವರಿಗೆ ತೇಜ್ ಬಹಾದೂರ್ ಅವರು ಮಾಡಿದ ವಿಡಿಯೋ ಒಂದು ಸುವರ್ಣ ಅವಕಾಶವಾಗಿತ್ತು. ಅದರ ಮೂಲಕ ಬಿಎಸ್‍ಎಫ್‍ನಲ್ಲಿನ ಭ್ರಷ್ಟಾಚಾರ ಹಾಗೂ ಸೈನಿಕರ ದುಸ್ಥಿತಿಯನ್ನು ಸರಿಪಡಿಸಬಹುದಿತ್ತು. ಸೈನ್ಯ ಮತ್ತು ಅರೆಸೇನಾಪಡೆಗಳಲ್ಲಿನ ಎಲ್ಲರಿಗೂ ಕಠಿಣ ಸಂದೇಶ ರವಾನಿಸುವ ಸಾಧ್ಯತೆಯಿತ್ತು. ನನಗೆ ಕೆಲವೊಮ್ಮೆ ಆಶ್ಚರ್ಯವಾಗುವುದೆಂದರೆ, ತೇಜ್ ಬಹಾದೂರ್‍ರ ಪರ ನಿಲ್ಲದಿರಲು ಮೋದಿಯವರಿಗೆ ಸಲಹೆ ನೀಡಿದವರು ಯಾರು ಎಂದು. ಏಕೆಂದರೆ, ಆ ಸೈನಿಕನ ದೂರನ್ನು ಆಲಿಸಿ ಕ್ರಮಗಳನ್ನು ತೆಗೆದುಕೊಂಡು ತಪ್ಪಿತಸ್ಥರನ್ನು ಶಿಕ್ಷಿಸಿದ್ದರೆ ಮೋದಿಯವರ ಕೀರ್ತಿಪತಾಕೆ ಹಾರುತ್ತಿತ್ತು.

ಹಾಗಾಗಿಯೇ ತೇಜ್ ಬಹಾದೂರ್ ಯಾದವ್, ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಸರಿಪಡಿಸುವಲ್ಲಿ ಮತ್ತು ಬದುಕಿನ ಎಲ್ಲಾ ಆಯಾಮಗಳಲ್ಲೂ ಮೋದಿಯವರ ವೈಫಲ್ಯದ ಪ್ರತೀಕವಾಗಿದ್ದಾರೆ. ಮೋದಿಯವರ ವ್ಯಕ್ತಿತ್ವದಲ್ಲಿನ ದ್ವಂದ್ವವನ್ನು ಬಯಲುಗೊಳಿಸಲು ಬಯಸುವ ಎಲ್ಲರೂ ತೇಜ್ ಯಾದವ್‍ರನ್ನು ಬೆಂಬಲಿಸಬೇಕು’ ಎಂದು ಹೇಳುವ ವಿನೋದ್ ಚಂದ್, ಅವರ ಪ್ರಚಾರಕ್ಕಾಗಿ ಮೇ 10ರಿಂದ 17ರವರೆಗೆ ವಾರಣಾಸಿಗೆ ಹೋಗುತ್ತಿದ್ದಾರೆ. ತೇಜ್ ಬಹಾದೂರ್‍ರ ಸಿದ್ಧಾಂತವನ್ನಾಗಲೀ, ಆತನ ವಿಧಾನವನ್ನಾಗಲೀ ತಾನು ಒಪ್ಪುವುದಿಲ್ಲವಾದರೂ ದೇಶದ ಬಹುದೊಡ್ಡ ಸಮಸ್ಯೆಯನ್ನು ಎದುರಿಸುವುದು ಬಹಳ ಮುಖ್ಯ ಎನ್ನುತ್ತಾರೆ. ಜೊತೆಗೆ ಇದನ್ನು ಒಬ್ಬ ಅಸಲೀ ಸೈನಿಕ ಮತ್ತು ನಕಲಿ ರಾಷ್ಟ್ರವಾದಿಯ ನಡುವಿನ ನೇರ ಸಮರವನ್ನಾಗಿಸಲು ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಳ್ಳಬೇಕೆಂದೂ ಅವರ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...