Homeಮುಖಪುಟತೇಜ್ ಬಹದೂರ್ ಯಾದವ್ ಮೋದಿಯ ಕಟ್ಟಾ ಅಭಿಮಾನಿಯಾಗಿದ್ದರು ಗೊತ್ತೇ?

ತೇಜ್ ಬಹದೂರ್ ಯಾದವ್ ಮೋದಿಯ ಕಟ್ಟಾ ಅಭಿಮಾನಿಯಾಗಿದ್ದರು ಗೊತ್ತೇ?

- Advertisement -
- Advertisement -

ನಾನುಗೌರಿ ಡೆಸ್ಕ್

ವಿಶಿಷ್ಟವಾದ ಸ್ವತಂತ್ರ ಮಾಧ್ಯಮ ಸಂಸ್ಥೆಯನ್ನು ಕಟ್ಟಲು ಶ್ರಮಿಸುತ್ತಿರುವ ಹಿರಿಯ ಪತ್ರಕರ್ತ ವಿನೋದ್ ಚಂದ್ ಅವರು ಸ್ವಲ್ಪ ‘ತನಿಖೆ’ ನಡೆಸಿ ತೇಜ್ ಬಹಾದೂರ್ ಯಾದವ್‍ರ ಹಿನ್ನೆಲೆಯನ್ನು ಪತ್ತೆ ಹಚ್ಚಿದ್ದಾರೆ. ಅವರು ಫೇಸ್‍ಬುಕ್‍ನಲ್ಲಿ ಹಾಕಿರುವ ಪೋಸ್ಟ್‍ನ ಸಾರಾಂಶ ಕೆಳಗಿದೆ. ಎಲ್ಲರೂ ಅಚ್ಚರಿ ಪಡುವಂತಹ ಹಲವು ಸಂಗತಿಗಳು ಇದರಲ್ಲಿವೆ.

ವಿನೋದ್ ಚಂದ್

‘ತೇಜ್ ಬಹಾದೂರ್ ಯಾದವ್ ಮೋದಿಯವರ ತೀವ್ರ ಬೆಂಬಲಿಗನಾಗಿದ್ದರು. ಅವರ ಫೇಸ್‍ಬುಕ್ ಟೈಂಲೈನ್‍ನಲ್ಲಿ ಮೋದಿಯವರಿಗೆ ಬಹಿರಂಗ ಬೆಂಬಲ ಸೂಚಿಸುವ ಮತ್ತು ದ್ವೇಷಪೂರಿತ ಪೋಸ್ಟ್‍ಗಳು ತುಂಬಿ ಹೋಗಿವೆ. ಬೇರಾವುದೇ ಮೋದಿ ಬೆಂಬಲಿಗನಂತೆ ಈತನೂ, ಮೋದಿ ದೊಡ್ಡ ಬದಲಾವಣೆ ತರುತ್ತಾರೆಂದು ಬಲವಾಗಿ ನಂಬಿದ್ದರು.

ಇದೇ ಭರವಸೆಯೊಂದಿಗೇನೇ, ತನಗೂ ಸಮಸ್ಯೆಯಾಗಿದ್ದ, ತನ್ನ ಸೈನಿಕ ಪಡೆಯಲ್ಲಿದ್ದ ಭ್ರಷ್ಟಾಚಾರವನ್ನು ಹೊರಗೆಳೆಯಲು ನಿರ್ಧರಿಸಿದ್ದರು. ಅದರ ಭಾಗವಾಗಿಯೇ ಈಗ ಪ್ರಸಿದ್ಧವಾಗಿರುವ ವಿಡಿಯೋವನ್ನು ಶೂಟ್ ಮಾಡಿದ್ದರು. ಅದರಲ್ಲಿ ಆತನಂತೆಯೇ ಕೊರೆಯುವ ಛಳಿಯಲ್ಲಿ ಗಡಿ ಕಾಯುತ್ತಿದ್ದ ಸೈನಿಕರಿಗೆ ಕೊಳೆತ ಆಹಾರವನ್ನು ನೀಡುವುದರ ಬಗ್ಗೆ ಯಾದವ್ ಮಾತಾಡಿದ್ದರು.

ಸಾಮಾಜಿಕ ಜಾಲತಾಣಗಳನ್ನು ಗಮನಿಸುವ ಮತ್ತು ಭ್ರಷ್ಟಾಚಾರ ವಿರೋಧಿ ನಾಯಕ, ದೇವದೂತ ಮೋದಿಯವರು ತನ್ನ ವಿಡಿಯೋವನ್ನು ನೋಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ ಮತ್ತು ವ್ಯವಸ್ಥೆಯನ್ನು ಬದಲಿಸುತ್ತಾರೆಂದು ಆತನಿಗೆ ಅಪಾರವಾದ ವಿಶ್ವಾಸವಿತ್ತು.
ಆದರೆ, ಅಂಥದ್ದೇನೂ ಆಗಲಿಲ್ಲ. ಅದೇ ವ್ಯವಸ್ಥೆಯೇ ಆತನ ಮೇಲೆ ದಾಳಿ ಮಾಡಿತು, ತೇಜ್ ಬಹಾದೂರ್‍ರನ್ನು ಹುಚ್ಚನೆಂದು ಕರೆದು, ಕೆಲಸದಿಂದ ಹೊರದಬ್ಬಿತು. ಸೈನಿಕರಿಗಾಗಿ ಕಣ್ಣೀರು ಸುರಿಸುವ ಮತ್ತು ಭ್ರಷ್ಟಾಚಾರವನ್ನು ಬುಡಸಮೇತ ನಿರ್ಮೂಲನೆ ಮಾಡಲು ಬಯಸುವ ದೇವದೂತ ಮೋದಿಯವರು ಆತನ ಸಹಾಯಕ್ಕೆ ಬರಲಿಲ್ಲ.

ಅದೇ ಸಂದರ್ಭದಲ್ಲಿ ತೇಜ್ ಬಹಾದೂರ್ ಯಾದವ್‍ರು ಮಾಡಿದ್ದನ್ನು ಸೈನ್ಯದಲ್ಲಿ ಸಹಿಸುವುದು ಸಾಧ್ಯವೇ ಇರಲಿಲ್ಲ. ಸೈನಿಕ ಸೈನಿಕನಾಗಿರಬೇಕಷ್ಟೇ, ಬರುವ ತೊಂದರೆ ಅನುಭವಿಸಬೇಕು, ಇಲ್ಲವೇ ಹೊರನಡೆಯಬೇಕು. ಆತ ಹೊರಜಗತ್ತಿಗೆ ದೂರುವಂತಿಲ್ಲ. ಅಲ್ಲಿನ ನಿಯಮಗಳು ಏನು ಹೇಳುತ್ತವೋ ಅದಕ್ಕೆ ಬದ್ಧನಾಗಿರಬೇಕು.

ಆದರೆ, ತೇಜ್ ಬಹಾದೂರ್‍ರ ಭಿನ್ನಮತದ ಕಥೆ ಇಲ್ಲಿಗೇ ಮುಗಿಯುವುದಿಲ್ಲ. ಆತನಿಗೆ, ಬಹುಶಃ, ಯಾವ ನಿವೃತ್ತಿಯ ಸೌಲಭ್ಯಗಳನ್ನೂ ನೀಡದೇ ಮನೆಗೆ ಕಳಿಸಲಾಯಿತು. ಈಗ ಆತ ಸಾಮಾನ್ಯ ನಾಗರಿಕ. ಯಾವುದನ್ನು ಸೈನಿಕನಾಗಿ ಮಾಡಲಾಗಲಿಲ್ಲವೋ, ಅದನ್ನೀಗ ಮಾಡುವುದು ಸುಲಭವಾಗಿದೆ. ತಾನು ಯಾರ ಮೇಲೆ ಭರವಸೆಯಿಟ್ಟಿದ್ದರೋ, ಆ ವ್ಯಕ್ತಿಯೆದುರಿಗೇ ಸೆಣಿಸಿ ಕೊಡಬೇಕಾದ ಸಂದೇಶವನ್ನು ಕೊಡಲು ಹೊರಟಿದ್ದಾರೆ.

ಹಾಗೆ ನೋಡಿದರೆ, ಮೋದಿಯವರಿಗೆ ತೇಜ್ ಬಹಾದೂರ್ ಅವರು ಮಾಡಿದ ವಿಡಿಯೋ ಒಂದು ಸುವರ್ಣ ಅವಕಾಶವಾಗಿತ್ತು. ಅದರ ಮೂಲಕ ಬಿಎಸ್‍ಎಫ್‍ನಲ್ಲಿನ ಭ್ರಷ್ಟಾಚಾರ ಹಾಗೂ ಸೈನಿಕರ ದುಸ್ಥಿತಿಯನ್ನು ಸರಿಪಡಿಸಬಹುದಿತ್ತು. ಸೈನ್ಯ ಮತ್ತು ಅರೆಸೇನಾಪಡೆಗಳಲ್ಲಿನ ಎಲ್ಲರಿಗೂ ಕಠಿಣ ಸಂದೇಶ ರವಾನಿಸುವ ಸಾಧ್ಯತೆಯಿತ್ತು. ನನಗೆ ಕೆಲವೊಮ್ಮೆ ಆಶ್ಚರ್ಯವಾಗುವುದೆಂದರೆ, ತೇಜ್ ಬಹಾದೂರ್‍ರ ಪರ ನಿಲ್ಲದಿರಲು ಮೋದಿಯವರಿಗೆ ಸಲಹೆ ನೀಡಿದವರು ಯಾರು ಎಂದು. ಏಕೆಂದರೆ, ಆ ಸೈನಿಕನ ದೂರನ್ನು ಆಲಿಸಿ ಕ್ರಮಗಳನ್ನು ತೆಗೆದುಕೊಂಡು ತಪ್ಪಿತಸ್ಥರನ್ನು ಶಿಕ್ಷಿಸಿದ್ದರೆ ಮೋದಿಯವರ ಕೀರ್ತಿಪತಾಕೆ ಹಾರುತ್ತಿತ್ತು.

ಹಾಗಾಗಿಯೇ ತೇಜ್ ಬಹಾದೂರ್ ಯಾದವ್, ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಸರಿಪಡಿಸುವಲ್ಲಿ ಮತ್ತು ಬದುಕಿನ ಎಲ್ಲಾ ಆಯಾಮಗಳಲ್ಲೂ ಮೋದಿಯವರ ವೈಫಲ್ಯದ ಪ್ರತೀಕವಾಗಿದ್ದಾರೆ. ಮೋದಿಯವರ ವ್ಯಕ್ತಿತ್ವದಲ್ಲಿನ ದ್ವಂದ್ವವನ್ನು ಬಯಲುಗೊಳಿಸಲು ಬಯಸುವ ಎಲ್ಲರೂ ತೇಜ್ ಯಾದವ್‍ರನ್ನು ಬೆಂಬಲಿಸಬೇಕು’ ಎಂದು ಹೇಳುವ ವಿನೋದ್ ಚಂದ್, ಅವರ ಪ್ರಚಾರಕ್ಕಾಗಿ ಮೇ 10ರಿಂದ 17ರವರೆಗೆ ವಾರಣಾಸಿಗೆ ಹೋಗುತ್ತಿದ್ದಾರೆ. ತೇಜ್ ಬಹಾದೂರ್‍ರ ಸಿದ್ಧಾಂತವನ್ನಾಗಲೀ, ಆತನ ವಿಧಾನವನ್ನಾಗಲೀ ತಾನು ಒಪ್ಪುವುದಿಲ್ಲವಾದರೂ ದೇಶದ ಬಹುದೊಡ್ಡ ಸಮಸ್ಯೆಯನ್ನು ಎದುರಿಸುವುದು ಬಹಳ ಮುಖ್ಯ ಎನ್ನುತ್ತಾರೆ. ಜೊತೆಗೆ ಇದನ್ನು ಒಬ್ಬ ಅಸಲೀ ಸೈನಿಕ ಮತ್ತು ನಕಲಿ ರಾಷ್ಟ್ರವಾದಿಯ ನಡುವಿನ ನೇರ ಸಮರವನ್ನಾಗಿಸಲು ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಳ್ಳಬೇಕೆಂದೂ ಅವರ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...