Homeಮುಖಪುಟತೇಜ್ ಬಹದೂರ್ ಯಾದವ್ ಮೋದಿಯ ಕಟ್ಟಾ ಅಭಿಮಾನಿಯಾಗಿದ್ದರು ಗೊತ್ತೇ?

ತೇಜ್ ಬಹದೂರ್ ಯಾದವ್ ಮೋದಿಯ ಕಟ್ಟಾ ಅಭಿಮಾನಿಯಾಗಿದ್ದರು ಗೊತ್ತೇ?

- Advertisement -
- Advertisement -

ನಾನುಗೌರಿ ಡೆಸ್ಕ್

ವಿಶಿಷ್ಟವಾದ ಸ್ವತಂತ್ರ ಮಾಧ್ಯಮ ಸಂಸ್ಥೆಯನ್ನು ಕಟ್ಟಲು ಶ್ರಮಿಸುತ್ತಿರುವ ಹಿರಿಯ ಪತ್ರಕರ್ತ ವಿನೋದ್ ಚಂದ್ ಅವರು ಸ್ವಲ್ಪ ‘ತನಿಖೆ’ ನಡೆಸಿ ತೇಜ್ ಬಹಾದೂರ್ ಯಾದವ್‍ರ ಹಿನ್ನೆಲೆಯನ್ನು ಪತ್ತೆ ಹಚ್ಚಿದ್ದಾರೆ. ಅವರು ಫೇಸ್‍ಬುಕ್‍ನಲ್ಲಿ ಹಾಕಿರುವ ಪೋಸ್ಟ್‍ನ ಸಾರಾಂಶ ಕೆಳಗಿದೆ. ಎಲ್ಲರೂ ಅಚ್ಚರಿ ಪಡುವಂತಹ ಹಲವು ಸಂಗತಿಗಳು ಇದರಲ್ಲಿವೆ.

ವಿನೋದ್ ಚಂದ್

‘ತೇಜ್ ಬಹಾದೂರ್ ಯಾದವ್ ಮೋದಿಯವರ ತೀವ್ರ ಬೆಂಬಲಿಗನಾಗಿದ್ದರು. ಅವರ ಫೇಸ್‍ಬುಕ್ ಟೈಂಲೈನ್‍ನಲ್ಲಿ ಮೋದಿಯವರಿಗೆ ಬಹಿರಂಗ ಬೆಂಬಲ ಸೂಚಿಸುವ ಮತ್ತು ದ್ವೇಷಪೂರಿತ ಪೋಸ್ಟ್‍ಗಳು ತುಂಬಿ ಹೋಗಿವೆ. ಬೇರಾವುದೇ ಮೋದಿ ಬೆಂಬಲಿಗನಂತೆ ಈತನೂ, ಮೋದಿ ದೊಡ್ಡ ಬದಲಾವಣೆ ತರುತ್ತಾರೆಂದು ಬಲವಾಗಿ ನಂಬಿದ್ದರು.

ಇದೇ ಭರವಸೆಯೊಂದಿಗೇನೇ, ತನಗೂ ಸಮಸ್ಯೆಯಾಗಿದ್ದ, ತನ್ನ ಸೈನಿಕ ಪಡೆಯಲ್ಲಿದ್ದ ಭ್ರಷ್ಟಾಚಾರವನ್ನು ಹೊರಗೆಳೆಯಲು ನಿರ್ಧರಿಸಿದ್ದರು. ಅದರ ಭಾಗವಾಗಿಯೇ ಈಗ ಪ್ರಸಿದ್ಧವಾಗಿರುವ ವಿಡಿಯೋವನ್ನು ಶೂಟ್ ಮಾಡಿದ್ದರು. ಅದರಲ್ಲಿ ಆತನಂತೆಯೇ ಕೊರೆಯುವ ಛಳಿಯಲ್ಲಿ ಗಡಿ ಕಾಯುತ್ತಿದ್ದ ಸೈನಿಕರಿಗೆ ಕೊಳೆತ ಆಹಾರವನ್ನು ನೀಡುವುದರ ಬಗ್ಗೆ ಯಾದವ್ ಮಾತಾಡಿದ್ದರು.

ಸಾಮಾಜಿಕ ಜಾಲತಾಣಗಳನ್ನು ಗಮನಿಸುವ ಮತ್ತು ಭ್ರಷ್ಟಾಚಾರ ವಿರೋಧಿ ನಾಯಕ, ದೇವದೂತ ಮೋದಿಯವರು ತನ್ನ ವಿಡಿಯೋವನ್ನು ನೋಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ ಮತ್ತು ವ್ಯವಸ್ಥೆಯನ್ನು ಬದಲಿಸುತ್ತಾರೆಂದು ಆತನಿಗೆ ಅಪಾರವಾದ ವಿಶ್ವಾಸವಿತ್ತು.
ಆದರೆ, ಅಂಥದ್ದೇನೂ ಆಗಲಿಲ್ಲ. ಅದೇ ವ್ಯವಸ್ಥೆಯೇ ಆತನ ಮೇಲೆ ದಾಳಿ ಮಾಡಿತು, ತೇಜ್ ಬಹಾದೂರ್‍ರನ್ನು ಹುಚ್ಚನೆಂದು ಕರೆದು, ಕೆಲಸದಿಂದ ಹೊರದಬ್ಬಿತು. ಸೈನಿಕರಿಗಾಗಿ ಕಣ್ಣೀರು ಸುರಿಸುವ ಮತ್ತು ಭ್ರಷ್ಟಾಚಾರವನ್ನು ಬುಡಸಮೇತ ನಿರ್ಮೂಲನೆ ಮಾಡಲು ಬಯಸುವ ದೇವದೂತ ಮೋದಿಯವರು ಆತನ ಸಹಾಯಕ್ಕೆ ಬರಲಿಲ್ಲ.

ಅದೇ ಸಂದರ್ಭದಲ್ಲಿ ತೇಜ್ ಬಹಾದೂರ್ ಯಾದವ್‍ರು ಮಾಡಿದ್ದನ್ನು ಸೈನ್ಯದಲ್ಲಿ ಸಹಿಸುವುದು ಸಾಧ್ಯವೇ ಇರಲಿಲ್ಲ. ಸೈನಿಕ ಸೈನಿಕನಾಗಿರಬೇಕಷ್ಟೇ, ಬರುವ ತೊಂದರೆ ಅನುಭವಿಸಬೇಕು, ಇಲ್ಲವೇ ಹೊರನಡೆಯಬೇಕು. ಆತ ಹೊರಜಗತ್ತಿಗೆ ದೂರುವಂತಿಲ್ಲ. ಅಲ್ಲಿನ ನಿಯಮಗಳು ಏನು ಹೇಳುತ್ತವೋ ಅದಕ್ಕೆ ಬದ್ಧನಾಗಿರಬೇಕು.

ಆದರೆ, ತೇಜ್ ಬಹಾದೂರ್‍ರ ಭಿನ್ನಮತದ ಕಥೆ ಇಲ್ಲಿಗೇ ಮುಗಿಯುವುದಿಲ್ಲ. ಆತನಿಗೆ, ಬಹುಶಃ, ಯಾವ ನಿವೃತ್ತಿಯ ಸೌಲಭ್ಯಗಳನ್ನೂ ನೀಡದೇ ಮನೆಗೆ ಕಳಿಸಲಾಯಿತು. ಈಗ ಆತ ಸಾಮಾನ್ಯ ನಾಗರಿಕ. ಯಾವುದನ್ನು ಸೈನಿಕನಾಗಿ ಮಾಡಲಾಗಲಿಲ್ಲವೋ, ಅದನ್ನೀಗ ಮಾಡುವುದು ಸುಲಭವಾಗಿದೆ. ತಾನು ಯಾರ ಮೇಲೆ ಭರವಸೆಯಿಟ್ಟಿದ್ದರೋ, ಆ ವ್ಯಕ್ತಿಯೆದುರಿಗೇ ಸೆಣಿಸಿ ಕೊಡಬೇಕಾದ ಸಂದೇಶವನ್ನು ಕೊಡಲು ಹೊರಟಿದ್ದಾರೆ.

ಹಾಗೆ ನೋಡಿದರೆ, ಮೋದಿಯವರಿಗೆ ತೇಜ್ ಬಹಾದೂರ್ ಅವರು ಮಾಡಿದ ವಿಡಿಯೋ ಒಂದು ಸುವರ್ಣ ಅವಕಾಶವಾಗಿತ್ತು. ಅದರ ಮೂಲಕ ಬಿಎಸ್‍ಎಫ್‍ನಲ್ಲಿನ ಭ್ರಷ್ಟಾಚಾರ ಹಾಗೂ ಸೈನಿಕರ ದುಸ್ಥಿತಿಯನ್ನು ಸರಿಪಡಿಸಬಹುದಿತ್ತು. ಸೈನ್ಯ ಮತ್ತು ಅರೆಸೇನಾಪಡೆಗಳಲ್ಲಿನ ಎಲ್ಲರಿಗೂ ಕಠಿಣ ಸಂದೇಶ ರವಾನಿಸುವ ಸಾಧ್ಯತೆಯಿತ್ತು. ನನಗೆ ಕೆಲವೊಮ್ಮೆ ಆಶ್ಚರ್ಯವಾಗುವುದೆಂದರೆ, ತೇಜ್ ಬಹಾದೂರ್‍ರ ಪರ ನಿಲ್ಲದಿರಲು ಮೋದಿಯವರಿಗೆ ಸಲಹೆ ನೀಡಿದವರು ಯಾರು ಎಂದು. ಏಕೆಂದರೆ, ಆ ಸೈನಿಕನ ದೂರನ್ನು ಆಲಿಸಿ ಕ್ರಮಗಳನ್ನು ತೆಗೆದುಕೊಂಡು ತಪ್ಪಿತಸ್ಥರನ್ನು ಶಿಕ್ಷಿಸಿದ್ದರೆ ಮೋದಿಯವರ ಕೀರ್ತಿಪತಾಕೆ ಹಾರುತ್ತಿತ್ತು.

ಹಾಗಾಗಿಯೇ ತೇಜ್ ಬಹಾದೂರ್ ಯಾದವ್, ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಸರಿಪಡಿಸುವಲ್ಲಿ ಮತ್ತು ಬದುಕಿನ ಎಲ್ಲಾ ಆಯಾಮಗಳಲ್ಲೂ ಮೋದಿಯವರ ವೈಫಲ್ಯದ ಪ್ರತೀಕವಾಗಿದ್ದಾರೆ. ಮೋದಿಯವರ ವ್ಯಕ್ತಿತ್ವದಲ್ಲಿನ ದ್ವಂದ್ವವನ್ನು ಬಯಲುಗೊಳಿಸಲು ಬಯಸುವ ಎಲ್ಲರೂ ತೇಜ್ ಯಾದವ್‍ರನ್ನು ಬೆಂಬಲಿಸಬೇಕು’ ಎಂದು ಹೇಳುವ ವಿನೋದ್ ಚಂದ್, ಅವರ ಪ್ರಚಾರಕ್ಕಾಗಿ ಮೇ 10ರಿಂದ 17ರವರೆಗೆ ವಾರಣಾಸಿಗೆ ಹೋಗುತ್ತಿದ್ದಾರೆ. ತೇಜ್ ಬಹಾದೂರ್‍ರ ಸಿದ್ಧಾಂತವನ್ನಾಗಲೀ, ಆತನ ವಿಧಾನವನ್ನಾಗಲೀ ತಾನು ಒಪ್ಪುವುದಿಲ್ಲವಾದರೂ ದೇಶದ ಬಹುದೊಡ್ಡ ಸಮಸ್ಯೆಯನ್ನು ಎದುರಿಸುವುದು ಬಹಳ ಮುಖ್ಯ ಎನ್ನುತ್ತಾರೆ. ಜೊತೆಗೆ ಇದನ್ನು ಒಬ್ಬ ಅಸಲೀ ಸೈನಿಕ ಮತ್ತು ನಕಲಿ ರಾಷ್ಟ್ರವಾದಿಯ ನಡುವಿನ ನೇರ ಸಮರವನ್ನಾಗಿಸಲು ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಹಿಂತೆಗೆದುಕೊಳ್ಳಬೇಕೆಂದೂ ಅವರ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...