Homeಮುಖಪುಟತೇಜ್ ಬಹದ್ದೂರ್ ಯಾರು? ಹಿನ್ನೆಲೆಯೇನು? ಪೂರ್ಣ ವಿವರ ತಿಳಿಯಿರಿ

ತೇಜ್ ಬಹದ್ದೂರ್ ಯಾರು? ಹಿನ್ನೆಲೆಯೇನು? ಪೂರ್ಣ ವಿವರ ತಿಳಿಯಿರಿ

- Advertisement -
ತೇಜ್ ಬಹದ್ದೂರ್ ಹರಿಯಾಣದ ರಿಹಾರ್ ನಿವಾಸಿ. ಸೀಮಾ ಸುರಕ್ಷ ಪಡೆಯ(ಬಿ.ಎಸ್.ಎಫ್) ಸೈನಿಕನಾಗಿ ಕಳೆದ 21 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. 2017ರವರೆಗೂ ಅವರು ಸರಿಯಾಗಿಯೇ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಆಗ ಅವರು ಮಾಡಿದ ಒಂದು ವಿಡಿಯೋ ಅವರನ್ನು ಇಲ್ಲಿಯವರೆಗೂ ಕರೆತಂದಿತ್ತು.
‘ತೇಜ್ ಬಹಾದೂರ್ ಯಾದವ್ ಮೋದಿಯವರ ತೀವ್ರ ಬೆಂಬಲಿಗನಾಗಿದ್ದರು. ಅವರ ಫೇಸ್‍ಬುಕ್ ಟೈಂಲೈನ್‍ನಲ್ಲಿ ಮೋದಿಯವರಿಗೆ ಬಹಿರಂಗ ಬೆಂಬಲ ಸೂಚಿಸುವ ಮತ್ತು ದ್ವೇಷಪೂರಿತ ಪೋಸ್ಟ್‍ಗಳು ತುಂಬಿ ಹೋಗಿವೆ. ಬೇರಾವುದೇ ಮೋದಿ ಬೆಂಬಲಿಗನಂತೆ ಈತನೂ, ಮೋದಿ ದೊಡ್ಡ ಬದಲಾವಣೆ ತರುತ್ತಾರೆಂದು ಬಲವಾಗಿ ನಂಬಿದ್ದರು.
ಇದೇ ಭರವಸೆಯೊಂದಿಗೇನೇ, ತನಗೂ ಸಮಸ್ಯೆಯಾಗಿದ್ದ, ತನ್ನ ಸೈನಿಕ ಪಡೆಯಲ್ಲಿದ್ದ ಭ್ರಷ್ಟಾಚಾರವನ್ನು ಹೊರಗೆಳೆಯಲು ನಿರ್ಧರಿಸಿದ್ದರು. ಸೈನ್ಯದಲ್ಲಿ ನೀಡುವ ಕಳಪೆ ಆಹಾರ ಮತ್ತು ಮೇಲಾಧಿಕಾರಿಗಳ ಭ್ರಷ್ಟಚಾರದು ವಿಡಿಯೋ ಒಂದನ್ನು ಮಾಡಿ ಫೇಸ್ ಬುಕ್‍ನಲ್ಲಿ ಅಪ್‍ಲೋಡ್ ಮಾಡಿದ್ದರು. ಲಕ್ಷಾಂತರ ಜನ ಆ ವಿಡಿಯೋವನ್ನು ಮೆಚ್ಚಿಕೊಂಡು ಷೇರ್ ಮಾಡಿದ್ದರು. ಅದರಲ್ಲಿ ಆತನಂತೆಯೇ ಕೊರೆಯುವ ಛಳಿಯಲ್ಲಿ ಗಡಿ ಕಾಯುತ್ತಿದ್ದ ಸೈನಿಕರಿಗೆ ಕೊಳೆತ ಆಹಾರವನ್ನು ನೀಡುವುದರ ಬಗ್ಗೆ ಯಾದವ್ ಮಾತಾಡಿದ್ದರು.
ಸಾಮಾಜಿಕ ಜಾಲತಾಣಗಳನ್ನು ಗಮನಿಸುವ ಮತ್ತು ಭ್ರಷ್ಟಾಚಾರ ವಿರೋಧಿ ನಾಯಕ, ದೇವದೂತ ಮೋದಿಯವರು ತನ್ನ ವಿಡಿಯೋವನ್ನು ನೋಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ ಮತ್ತು ವ್ಯವಸ್ಥೆಯನ್ನು ಬದಲಿಸುತ್ತಾರೆಂದು ಆತನಿಗೆ ಅಪಾರವಾದ ವಿಶ್ವಾಸವಿತ್ತು.
ಆದರೆ, ಅಂಥದ್ದೇನೂ ಆಗಲಿಲ್ಲ. ಅದೇ ವ್ಯವಸ್ಥೆಯೇ ಆತನ ಮೇಲೆ ದಾಳಿ ಮಾಡಿತು, ತೇಜ್ ಬಹಾದೂರ್‍ರನ್ನು ಹುಚ್ಚನೆಂದು ಕರೆದು, ಕೆಲಸದಿಂದ ಹೊರದಬ್ಬಿತು. ಸೈನಿಕರಿಗಾಗಿ ಕಣ್ಣೀರು ಸುರಿಸುವ ಮತ್ತು ಭ್ರಷ್ಟಾಚಾರವನ್ನು ಬುಡಸಮೇತ ನಿರ್ಮೂಲನೆ ಮಾಡಲು ಬಯಸುವ ದೇವದೂತ ಮೋದಿಯವರು ಆತನ ಸಹಾಯಕ್ಕೆ ಬರಲಿಲ್ಲ.
ಅದೇ ಸಂದರ್ಭದಲ್ಲಿ ತೇಜ್ ಬಹಾದೂರ್ ಯಾದವ್‍ರು ಮಾಡಿದ್ದನ್ನು ಸೈನ್ಯದಲ್ಲಿ ಸಹಿಸುವುದು ಸಾಧ್ಯವೇ ಇರಲಿಲ್ಲ. ಸೈನಿಕ ಸೈನಿಕನಾಗಿರಬೇಕಷ್ಟೇ, ಬರುವ ತೊಂದರೆ ಅನುಭವಿಸಬೇಕು, ಇಲ್ಲವೇ ಹೊರನಡೆಯಬೇಕು. ಆತ ಹೊರಜಗತ್ತಿಗೆ ದೂರುವಂತಿಲ್ಲ. ಅಲ್ಲಿನ ನಿಯಮಗಳು ಏನು ಹೇಳುತ್ತವೋ ಅದಕ್ಕೆ ಬದ್ಧನಾಗಿರಬೇಕು.
ಆದರೆ, ತೇಜ್ ಬಹಾದೂರ್‍ರ ಭಿನ್ನಮತದ ಕಥೆ ಇಲ್ಲಿಗೇ ಮುಗಿಯುವುದಿಲ್ಲ. ಆತನಿಗೆ, ಬಹುಶಃ, ಯಾವ ನಿವೃತ್ತಿಯ ಸೌಲಭ್ಯಗಳನ್ನೂ ನೀಡದೇ ಮನೆಗೆ ಕಳಿಸಲಾಯಿತು.
ಇದನ್ನು ತೇಜ್ ಬಹದ್ದೂರ್ ತನಗಾದ ದೊಡ್ಡ ಅವಮಾನವೆಂದು ಬಗೆದರು. ಈಗ ಆತ ಸಾಮಾನ್ಯ ನಾಗರಿಕ. ಯಾವುದನ್ನು ಸೈನಿಕನಾಗಿ ಮಾಡಲಾಗಲಿಲ್ಲವೋ, ಅದನ್ನೀಗ ಮಾಡುವುದು ಸುಲಭವಾಗಿದೆ. ತಾನು ಯಾರ ಮೇಲೆ ಭರವಸೆಯಿಟ್ಟಿದ್ದರೋ, ಆ ವ್ಯಕ್ತಿಯೆದುರಿಗೇ ಸೆಣಿಸಿ ಕೊಡಬೇಕಾದ ಸಂದೇಶವನ್ನು ಕೊಡಲು ನಿರ್ಧರಿಸಿದರು. 2019ರ ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಮಾರ್ಚ್ 30ರಂದು ಪ್ರಧಾನಿ ನರೇಂದ್ರ ಮೋದಿಯವರು ವಿರುದ್ಧ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಣಕ್ಕಿಳಯಲು ನಿರ್ಧರಿಸಿದರು.
ಹಲವು ಪಕ್ಷಗಳು ತಮ್ಮ ಪಕ್ಷದಿಂದ ಟಿಕೇಟ್ ನೀಡುವುದಾಗಿಯೂ, ತಮ್ಮ ಪಕ್ಷಕ್ಕೆ ಬರಬೇಕೆಂಬ ಮನವಿಯನ್ನು ತೇಜ್ ಬಹದ್ದೂರ್ ಒಪ್ಪಲಿಲ್ಲ. ಹಲವು ಮಾಜಿ ಸೈನಿಕರು, ಕೆಲವು ರೈತರ ಬೆಂಬಲದೊಂದಿಗೆ ವಾರಣಾಸಿಯಲ್ಲಿ ಪ್ರಚಾರ ಆರಂಭಿಸಿದರು. ಇದು ರಾಷ್ಟ್ರವ್ಯಾಪಿ ಸುದ್ದಿಯಾಯಿತು ಮಾತ್ರವಲ್ಲ ಈ ಮಾಜಿ ಯೋಧನಿಗೆ ಬೆಂಬಲದ ಮಹಾಪೂರವೇ ಹರಿದುಬಂದಿತು. ಏಪ್ರಿಲ್ 24ರಂದು ಇವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ತದನಂತರ ಸಮಾಜವಾದಿ ಪಕ್ಷವೂ ಇವರಿಗೆ ಬಿ ಫಾರಂ ನೀಡಿತು. ಅಲ್ಲಿಗೆ ಸಮಾಜವಾದಿ ಪಕ್ಷದ ಅಧಿಕೃತ ಅಭ್ಯರ್ಥಿಯಾದರು.
ಏಪ್ರಿಲ್ 30ರಂದು ಚುನಾವಣಾ ಆಯೋಗ ತೇಜ್ ಬಹದ್ದುರ್‍ರವರಿಗೆ ಸಂಜೆ ಆರು ಗಂಟೆಯ ಒಳಗೆ ಕೆಲವು ದಾಖಲೆಗಳನ್ನು ಸಲ್ಲಿಸಬೇಕೆಂದು ನೋಟಿಸ್ ನೀಡಿತು. ಕೇಂದ್ರ ಅಥವಾ ರಾಜ್ಯ ಸರ್ಕಾರದ ಉದ್ಯೋಗಿಯೊಬ್ಬ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹದ ಆರೋಪದಡಿಯಲ್ಲಿ ಸೇವೆಯಿಂದ ವಜಾಗೊಂಡಿದ್ದರೆ ಐದು ವರ್ಷಗಳ ಕಾಲ ಆತ ಚುನಾವಣಾ ಪ್ರಚಾರದಿಂದ ದೂರ ಉಳಿಯಬೇಕು ಎಂದು ಆಯೋಗ ನಿನ್ನೆ ನೋಟಿಸ್ ನೀಡಿತ್ತು ಜೊತೆಗೆ ಈ ವಿಚಾರವಾಗಿ ಮೂರು ಗಂಟೆಯೊಳಗೆ ಬಿಎಸ್‍ಎಫ್‍ನಿಂದ ಕ್ಲಿಯರೆನ್ಸ್ ಲೆಟರ್ ತರುವಂತೆ ಸೂಚಿಸಿತ್ತು. ನಂತರ ಅವರ ನಾಮಪತ್ರವನ್ನು ತಿರಸ್ಕರಿಸಿತು.
ತೇಜ್ ಬಹದ್ದೂರ್ ನಾಮಪತ್ರ ತಿರಸ್ಕೃತಗೊಂಡಕೂಡಲೇ ಫೇಸ್‍ಬುಕ್ ಲೈವ್ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.
ದೇಶದ ನಾಗರಿಕರೆ, ತಾವು ನನಗೆ ಇದನ್ನು ತಿಳಿಸಿ. ಕಾನೂನು ಪ್ರಕಾರ ನಾನು ಪ್ರಮಾಣ ಪತ್ರವನ್ನು ಸಲ್ಲಿಸಿದ್ದೇನೆ, ಎಲ್ಲಾ ದಾಖಲೆಗಳನ್ನು ನೀಡಲಾಗಿದೆ. 24 ಎಪ್ರಿಲ್ ರಂದು ನಾಮಪತ್ರ ಸಲ್ಲಿಸಿದ್ದೇನೆ, ಅಂದು ನನ್ನ ಎಲ್ಲಾ ದಾಖಲೆ ಸರಿಯಿದೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿರುತ್ತಾರೆ. ಮತ್ತೆ 29 ನೇ ಎಪ್ರಿಲ್ ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದಾಗ ಅಂದು ಸಹ ನನಗೆ ಚುನಾವಣಾ ಆಯೋಗದಿಂದ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ.
30ನೇ ಎಪ್ರಿಲ್ ರಂದು ನರೇಂದ್ರ ಮೋದಿಯವರ ಚಮಚಾಗಳು ವಿಶೇಷ ವಿಮಾನದಲ್ಲಿ ವಾರಣಾಸಿಗೆ ಬಂದು ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರಿ ತೇಜ್ ಬಹುದ್ದೂರು ಅವರ ನಾಮಪತ್ರ ಯಾವುದೇ ಕಾರಣಕ್ಕೂ ಅಂಗೀಕಾರವಾಗಬಾರದು ಬದಲಿಗೆ ತಿರಸ್ಕಾರವಾಗಬೇಕೆಂದು ಹೇಳುತ್ತಾರೆ. ಜಿಲ್ಲಾ ಚುನಾವಣಾ ಅಧಿಕಾರಿ ಒತ್ತಡಕ್ಕೆ ಒಳಗಾಗಿ ಈ ರೀತಿ ನಡೆದುಕೊಂಡಿದ್ದಾರೆ.
ದೇಶದ ನಾಗರೀಕರಲ್ಲಿ ನನ್ನ ವಿನಂತಿ ಇದೆ, ಈಗ ತಾವು ಧ್ವನಿ ಎತ್ತದೆ ಇದ್ದರೆ ಪ್ರಜಾಪ್ರಭುತ್ವದ ಹತ್ಯೆಯಾಗುತ್ತದೆ. ಇವತ್ತು ಒಂದು ಅವಕಾಶವಿದೆ, ತಾವೆಲ್ಲರೂ ರಸ್ತೆಯ ಮೇಲೆ ಬನ್ನಿ ನನ್ನ ಪರವಾಗಿ ಪ್ರತಿಭಟನೆ ಮಾಡಿ. ಯಾಕೆಂದರೆ ಇದು ಸತ್ಯ ಮತ್ತು ಸುಳ್ಳಿನ ಹೋರಾಟವಾಗಿದೆ, ಇದೊಂದು ಷಡ್ಯಂತ್ರ ರಚಿಸಲಾಗಿದೆ. ದೇಶದ ನಿವಾಸಿಗಳೇ, ನೀವು ಎಲ್ಲೆ ಇರಿ, ಪ್ರತಿಭಟನೆ ದಾಖಲು ಮಾಡಿ, ಫೇಸ್‍ಬುಕ್, ವಾಟ್ಸ್‍ಆಪ್, ಟ್ವಿಟರ್ ಮೂಲಕ ಬರೆಯಿರಿ. ಪ್ರಶ್ನೆ ಮಾಡಿ, ತೇಜ ಬಹುದ್ದೂರ ಅವರ ನಾಮಪತ್ರ ತಿರಸ್ಕರಿಸುವ ಅಧಿಕಾರ ನಿಮಗೆ ಯಾರು ನೀಡಿದ್ದಾರೆ ಎಂದು ಕೇಳಿ, ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು ಮತ್ತು ಸುಪ್ರೀಂ ಕೋರ್ಟ್‍ನಲ್ಲಿ ಇದನ್ನು ಪ್ರಶ್ನಿಸಲಾಗುವುದು ಎಂದು ತಿಳಿಸಿದರು.
ಇದಾದ ನಂತರ ಬಿಜೆಪಿ ಕಾರ್ಯಕರ್ತರು ತೇಜ್ ಬಹದ್ದೂರ್ ಮೇಲೆ ಆರೋಪಗಳ ಸುರಿಮಳೆ ಸುರಿಸಿದರು. ಆತನನ್ನು ಐದಾರು ಬಾರಿ ಡಿಸ್‍ಮಿಸ್ ಮಾಡಲಾಗಿತ್ತು, ಆತ ಮದ್ಯಪಾನಿಯಾಗಿದ್ದ, ಆತನಿಗೆ ಫೇಸ್‍ಬುಕ್‍ನಲ್ಲಿ 500 ಜನ ಸ್ನೇಹಿತರಿದ್ದರು ಎಂದೆಲ್ಲಾ ಫೇಕ್ ನ್ಯೂಸ್‍ಗಳನ್ನು ಹರಡಲಾಯಿತು.
ತೇಜ್ ಬಹದ್ದೂರ್‍ರವರು ಮೇ 06ರಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ತನ್ನ ನಾಮಪತ್ರ ಅಸಿಂಧುಗೊಳಿಸಿದ ಚುನಾವನಾ ಆಯೋಗದ ಕ್ರಮವನ್ನು ಪ್ರಶ್ನಿಸಿದ್ದಾರೆ. ಮುಂದೆ ಏನಾಗುತ್ತದೆ ಎಂದು ಕಾದುನೋಡಬೇಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...