Homeಮುಖಪುಟತೇಜ್ ಬಹದ್ದೂರ್ ಯಾರು? ಹಿನ್ನೆಲೆಯೇನು? ಪೂರ್ಣ ವಿವರ ತಿಳಿಯಿರಿ

ತೇಜ್ ಬಹದ್ದೂರ್ ಯಾರು? ಹಿನ್ನೆಲೆಯೇನು? ಪೂರ್ಣ ವಿವರ ತಿಳಿಯಿರಿ

- Advertisement -
ತೇಜ್ ಬಹದ್ದೂರ್ ಹರಿಯಾಣದ ರಿಹಾರ್ ನಿವಾಸಿ. ಸೀಮಾ ಸುರಕ್ಷ ಪಡೆಯ(ಬಿ.ಎಸ್.ಎಫ್) ಸೈನಿಕನಾಗಿ ಕಳೆದ 21 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. 2017ರವರೆಗೂ ಅವರು ಸರಿಯಾಗಿಯೇ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಆಗ ಅವರು ಮಾಡಿದ ಒಂದು ವಿಡಿಯೋ ಅವರನ್ನು ಇಲ್ಲಿಯವರೆಗೂ ಕರೆತಂದಿತ್ತು.
‘ತೇಜ್ ಬಹಾದೂರ್ ಯಾದವ್ ಮೋದಿಯವರ ತೀವ್ರ ಬೆಂಬಲಿಗನಾಗಿದ್ದರು. ಅವರ ಫೇಸ್‍ಬುಕ್ ಟೈಂಲೈನ್‍ನಲ್ಲಿ ಮೋದಿಯವರಿಗೆ ಬಹಿರಂಗ ಬೆಂಬಲ ಸೂಚಿಸುವ ಮತ್ತು ದ್ವೇಷಪೂರಿತ ಪೋಸ್ಟ್‍ಗಳು ತುಂಬಿ ಹೋಗಿವೆ. ಬೇರಾವುದೇ ಮೋದಿ ಬೆಂಬಲಿಗನಂತೆ ಈತನೂ, ಮೋದಿ ದೊಡ್ಡ ಬದಲಾವಣೆ ತರುತ್ತಾರೆಂದು ಬಲವಾಗಿ ನಂಬಿದ್ದರು.
ಇದೇ ಭರವಸೆಯೊಂದಿಗೇನೇ, ತನಗೂ ಸಮಸ್ಯೆಯಾಗಿದ್ದ, ತನ್ನ ಸೈನಿಕ ಪಡೆಯಲ್ಲಿದ್ದ ಭ್ರಷ್ಟಾಚಾರವನ್ನು ಹೊರಗೆಳೆಯಲು ನಿರ್ಧರಿಸಿದ್ದರು. ಸೈನ್ಯದಲ್ಲಿ ನೀಡುವ ಕಳಪೆ ಆಹಾರ ಮತ್ತು ಮೇಲಾಧಿಕಾರಿಗಳ ಭ್ರಷ್ಟಚಾರದು ವಿಡಿಯೋ ಒಂದನ್ನು ಮಾಡಿ ಫೇಸ್ ಬುಕ್‍ನಲ್ಲಿ ಅಪ್‍ಲೋಡ್ ಮಾಡಿದ್ದರು. ಲಕ್ಷಾಂತರ ಜನ ಆ ವಿಡಿಯೋವನ್ನು ಮೆಚ್ಚಿಕೊಂಡು ಷೇರ್ ಮಾಡಿದ್ದರು. ಅದರಲ್ಲಿ ಆತನಂತೆಯೇ ಕೊರೆಯುವ ಛಳಿಯಲ್ಲಿ ಗಡಿ ಕಾಯುತ್ತಿದ್ದ ಸೈನಿಕರಿಗೆ ಕೊಳೆತ ಆಹಾರವನ್ನು ನೀಡುವುದರ ಬಗ್ಗೆ ಯಾದವ್ ಮಾತಾಡಿದ್ದರು.
ಸಾಮಾಜಿಕ ಜಾಲತಾಣಗಳನ್ನು ಗಮನಿಸುವ ಮತ್ತು ಭ್ರಷ್ಟಾಚಾರ ವಿರೋಧಿ ನಾಯಕ, ದೇವದೂತ ಮೋದಿಯವರು ತನ್ನ ವಿಡಿಯೋವನ್ನು ನೋಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆ ಮತ್ತು ವ್ಯವಸ್ಥೆಯನ್ನು ಬದಲಿಸುತ್ತಾರೆಂದು ಆತನಿಗೆ ಅಪಾರವಾದ ವಿಶ್ವಾಸವಿತ್ತು.
ಆದರೆ, ಅಂಥದ್ದೇನೂ ಆಗಲಿಲ್ಲ. ಅದೇ ವ್ಯವಸ್ಥೆಯೇ ಆತನ ಮೇಲೆ ದಾಳಿ ಮಾಡಿತು, ತೇಜ್ ಬಹಾದೂರ್‍ರನ್ನು ಹುಚ್ಚನೆಂದು ಕರೆದು, ಕೆಲಸದಿಂದ ಹೊರದಬ್ಬಿತು. ಸೈನಿಕರಿಗಾಗಿ ಕಣ್ಣೀರು ಸುರಿಸುವ ಮತ್ತು ಭ್ರಷ್ಟಾಚಾರವನ್ನು ಬುಡಸಮೇತ ನಿರ್ಮೂಲನೆ ಮಾಡಲು ಬಯಸುವ ದೇವದೂತ ಮೋದಿಯವರು ಆತನ ಸಹಾಯಕ್ಕೆ ಬರಲಿಲ್ಲ.
ಅದೇ ಸಂದರ್ಭದಲ್ಲಿ ತೇಜ್ ಬಹಾದೂರ್ ಯಾದವ್‍ರು ಮಾಡಿದ್ದನ್ನು ಸೈನ್ಯದಲ್ಲಿ ಸಹಿಸುವುದು ಸಾಧ್ಯವೇ ಇರಲಿಲ್ಲ. ಸೈನಿಕ ಸೈನಿಕನಾಗಿರಬೇಕಷ್ಟೇ, ಬರುವ ತೊಂದರೆ ಅನುಭವಿಸಬೇಕು, ಇಲ್ಲವೇ ಹೊರನಡೆಯಬೇಕು. ಆತ ಹೊರಜಗತ್ತಿಗೆ ದೂರುವಂತಿಲ್ಲ. ಅಲ್ಲಿನ ನಿಯಮಗಳು ಏನು ಹೇಳುತ್ತವೋ ಅದಕ್ಕೆ ಬದ್ಧನಾಗಿರಬೇಕು.
ಆದರೆ, ತೇಜ್ ಬಹಾದೂರ್‍ರ ಭಿನ್ನಮತದ ಕಥೆ ಇಲ್ಲಿಗೇ ಮುಗಿಯುವುದಿಲ್ಲ. ಆತನಿಗೆ, ಬಹುಶಃ, ಯಾವ ನಿವೃತ್ತಿಯ ಸೌಲಭ್ಯಗಳನ್ನೂ ನೀಡದೇ ಮನೆಗೆ ಕಳಿಸಲಾಯಿತು.
ಇದನ್ನು ತೇಜ್ ಬಹದ್ದೂರ್ ತನಗಾದ ದೊಡ್ಡ ಅವಮಾನವೆಂದು ಬಗೆದರು. ಈಗ ಆತ ಸಾಮಾನ್ಯ ನಾಗರಿಕ. ಯಾವುದನ್ನು ಸೈನಿಕನಾಗಿ ಮಾಡಲಾಗಲಿಲ್ಲವೋ, ಅದನ್ನೀಗ ಮಾಡುವುದು ಸುಲಭವಾಗಿದೆ. ತಾನು ಯಾರ ಮೇಲೆ ಭರವಸೆಯಿಟ್ಟಿದ್ದರೋ, ಆ ವ್ಯಕ್ತಿಯೆದುರಿಗೇ ಸೆಣಿಸಿ ಕೊಡಬೇಕಾದ ಸಂದೇಶವನ್ನು ಕೊಡಲು ನಿರ್ಧರಿಸಿದರು. 2019ರ ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಮಾರ್ಚ್ 30ರಂದು ಪ್ರಧಾನಿ ನರೇಂದ್ರ ಮೋದಿಯವರು ವಿರುದ್ಧ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಣಕ್ಕಿಳಯಲು ನಿರ್ಧರಿಸಿದರು.
ಹಲವು ಪಕ್ಷಗಳು ತಮ್ಮ ಪಕ್ಷದಿಂದ ಟಿಕೇಟ್ ನೀಡುವುದಾಗಿಯೂ, ತಮ್ಮ ಪಕ್ಷಕ್ಕೆ ಬರಬೇಕೆಂಬ ಮನವಿಯನ್ನು ತೇಜ್ ಬಹದ್ದೂರ್ ಒಪ್ಪಲಿಲ್ಲ. ಹಲವು ಮಾಜಿ ಸೈನಿಕರು, ಕೆಲವು ರೈತರ ಬೆಂಬಲದೊಂದಿಗೆ ವಾರಣಾಸಿಯಲ್ಲಿ ಪ್ರಚಾರ ಆರಂಭಿಸಿದರು. ಇದು ರಾಷ್ಟ್ರವ್ಯಾಪಿ ಸುದ್ದಿಯಾಯಿತು ಮಾತ್ರವಲ್ಲ ಈ ಮಾಜಿ ಯೋಧನಿಗೆ ಬೆಂಬಲದ ಮಹಾಪೂರವೇ ಹರಿದುಬಂದಿತು. ಏಪ್ರಿಲ್ 24ರಂದು ಇವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ತದನಂತರ ಸಮಾಜವಾದಿ ಪಕ್ಷವೂ ಇವರಿಗೆ ಬಿ ಫಾರಂ ನೀಡಿತು. ಅಲ್ಲಿಗೆ ಸಮಾಜವಾದಿ ಪಕ್ಷದ ಅಧಿಕೃತ ಅಭ್ಯರ್ಥಿಯಾದರು.
ಏಪ್ರಿಲ್ 30ರಂದು ಚುನಾವಣಾ ಆಯೋಗ ತೇಜ್ ಬಹದ್ದುರ್‍ರವರಿಗೆ ಸಂಜೆ ಆರು ಗಂಟೆಯ ಒಳಗೆ ಕೆಲವು ದಾಖಲೆಗಳನ್ನು ಸಲ್ಲಿಸಬೇಕೆಂದು ನೋಟಿಸ್ ನೀಡಿತು. ಕೇಂದ್ರ ಅಥವಾ ರಾಜ್ಯ ಸರ್ಕಾರದ ಉದ್ಯೋಗಿಯೊಬ್ಬ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹದ ಆರೋಪದಡಿಯಲ್ಲಿ ಸೇವೆಯಿಂದ ವಜಾಗೊಂಡಿದ್ದರೆ ಐದು ವರ್ಷಗಳ ಕಾಲ ಆತ ಚುನಾವಣಾ ಪ್ರಚಾರದಿಂದ ದೂರ ಉಳಿಯಬೇಕು ಎಂದು ಆಯೋಗ ನಿನ್ನೆ ನೋಟಿಸ್ ನೀಡಿತ್ತು ಜೊತೆಗೆ ಈ ವಿಚಾರವಾಗಿ ಮೂರು ಗಂಟೆಯೊಳಗೆ ಬಿಎಸ್‍ಎಫ್‍ನಿಂದ ಕ್ಲಿಯರೆನ್ಸ್ ಲೆಟರ್ ತರುವಂತೆ ಸೂಚಿಸಿತ್ತು. ನಂತರ ಅವರ ನಾಮಪತ್ರವನ್ನು ತಿರಸ್ಕರಿಸಿತು.
ತೇಜ್ ಬಹದ್ದೂರ್ ನಾಮಪತ್ರ ತಿರಸ್ಕೃತಗೊಂಡಕೂಡಲೇ ಫೇಸ್‍ಬುಕ್ ಲೈವ್ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.
ದೇಶದ ನಾಗರಿಕರೆ, ತಾವು ನನಗೆ ಇದನ್ನು ತಿಳಿಸಿ. ಕಾನೂನು ಪ್ರಕಾರ ನಾನು ಪ್ರಮಾಣ ಪತ್ರವನ್ನು ಸಲ್ಲಿಸಿದ್ದೇನೆ, ಎಲ್ಲಾ ದಾಖಲೆಗಳನ್ನು ನೀಡಲಾಗಿದೆ. 24 ಎಪ್ರಿಲ್ ರಂದು ನಾಮಪತ್ರ ಸಲ್ಲಿಸಿದ್ದೇನೆ, ಅಂದು ನನ್ನ ಎಲ್ಲಾ ದಾಖಲೆ ಸರಿಯಿದೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿರುತ್ತಾರೆ. ಮತ್ತೆ 29 ನೇ ಎಪ್ರಿಲ್ ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದಾಗ ಅಂದು ಸಹ ನನಗೆ ಚುನಾವಣಾ ಆಯೋಗದಿಂದ ಯಾವುದೇ ವಿರೋಧ ವ್ಯಕ್ತವಾಗಲಿಲ್ಲ.
30ನೇ ಎಪ್ರಿಲ್ ರಂದು ನರೇಂದ್ರ ಮೋದಿಯವರ ಚಮಚಾಗಳು ವಿಶೇಷ ವಿಮಾನದಲ್ಲಿ ವಾರಣಾಸಿಗೆ ಬಂದು ಅಧಿಕಾರಿಗಳ ಮೇಲೆ ಒತ್ತಡವನ್ನು ಹೇರಿ ತೇಜ್ ಬಹುದ್ದೂರು ಅವರ ನಾಮಪತ್ರ ಯಾವುದೇ ಕಾರಣಕ್ಕೂ ಅಂಗೀಕಾರವಾಗಬಾರದು ಬದಲಿಗೆ ತಿರಸ್ಕಾರವಾಗಬೇಕೆಂದು ಹೇಳುತ್ತಾರೆ. ಜಿಲ್ಲಾ ಚುನಾವಣಾ ಅಧಿಕಾರಿ ಒತ್ತಡಕ್ಕೆ ಒಳಗಾಗಿ ಈ ರೀತಿ ನಡೆದುಕೊಂಡಿದ್ದಾರೆ.
ದೇಶದ ನಾಗರೀಕರಲ್ಲಿ ನನ್ನ ವಿನಂತಿ ಇದೆ, ಈಗ ತಾವು ಧ್ವನಿ ಎತ್ತದೆ ಇದ್ದರೆ ಪ್ರಜಾಪ್ರಭುತ್ವದ ಹತ್ಯೆಯಾಗುತ್ತದೆ. ಇವತ್ತು ಒಂದು ಅವಕಾಶವಿದೆ, ತಾವೆಲ್ಲರೂ ರಸ್ತೆಯ ಮೇಲೆ ಬನ್ನಿ ನನ್ನ ಪರವಾಗಿ ಪ್ರತಿಭಟನೆ ಮಾಡಿ. ಯಾಕೆಂದರೆ ಇದು ಸತ್ಯ ಮತ್ತು ಸುಳ್ಳಿನ ಹೋರಾಟವಾಗಿದೆ, ಇದೊಂದು ಷಡ್ಯಂತ್ರ ರಚಿಸಲಾಗಿದೆ. ದೇಶದ ನಿವಾಸಿಗಳೇ, ನೀವು ಎಲ್ಲೆ ಇರಿ, ಪ್ರತಿಭಟನೆ ದಾಖಲು ಮಾಡಿ, ಫೇಸ್‍ಬುಕ್, ವಾಟ್ಸ್‍ಆಪ್, ಟ್ವಿಟರ್ ಮೂಲಕ ಬರೆಯಿರಿ. ಪ್ರಶ್ನೆ ಮಾಡಿ, ತೇಜ ಬಹುದ್ದೂರ ಅವರ ನಾಮಪತ್ರ ತಿರಸ್ಕರಿಸುವ ಅಧಿಕಾರ ನಿಮಗೆ ಯಾರು ನೀಡಿದ್ದಾರೆ ಎಂದು ಕೇಳಿ, ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು ಮತ್ತು ಸುಪ್ರೀಂ ಕೋರ್ಟ್‍ನಲ್ಲಿ ಇದನ್ನು ಪ್ರಶ್ನಿಸಲಾಗುವುದು ಎಂದು ತಿಳಿಸಿದರು.
ಇದಾದ ನಂತರ ಬಿಜೆಪಿ ಕಾರ್ಯಕರ್ತರು ತೇಜ್ ಬಹದ್ದೂರ್ ಮೇಲೆ ಆರೋಪಗಳ ಸುರಿಮಳೆ ಸುರಿಸಿದರು. ಆತನನ್ನು ಐದಾರು ಬಾರಿ ಡಿಸ್‍ಮಿಸ್ ಮಾಡಲಾಗಿತ್ತು, ಆತ ಮದ್ಯಪಾನಿಯಾಗಿದ್ದ, ಆತನಿಗೆ ಫೇಸ್‍ಬುಕ್‍ನಲ್ಲಿ 500 ಜನ ಸ್ನೇಹಿತರಿದ್ದರು ಎಂದೆಲ್ಲಾ ಫೇಕ್ ನ್ಯೂಸ್‍ಗಳನ್ನು ಹರಡಲಾಯಿತು.
ತೇಜ್ ಬಹದ್ದೂರ್‍ರವರು ಮೇ 06ರಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ತನ್ನ ನಾಮಪತ್ರ ಅಸಿಂಧುಗೊಳಿಸಿದ ಚುನಾವನಾ ಆಯೋಗದ ಕ್ರಮವನ್ನು ಪ್ರಶ್ನಿಸಿದ್ದಾರೆ. ಮುಂದೆ ಏನಾಗುತ್ತದೆ ಎಂದು ಕಾದುನೋಡಬೇಕಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...