Homeಮುಖಪುಟತೇಜಸ್ವಿ ಯಾದವ್ ಬಿಹಾರ ವಿರೋಧ ಪಕ್ಷದ ನಾಯಕನಾಗಬಾರದು: ಜೆಡಿಯು ಆಗ್ರಹ

ತೇಜಸ್ವಿ ಯಾದವ್ ಬಿಹಾರ ವಿರೋಧ ಪಕ್ಷದ ನಾಯಕನಾಗಬಾರದು: ಜೆಡಿಯು ಆಗ್ರಹ

ಚೌಧರಿ ಅವರು ತಮ್ಮ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಬಂಡವಾಳ ಮಾಡಿಕೊಂಡ  ಜೆಡಿಯು ನಾಯಕರು, ತಮ್ಮ ಸರ್ಕಾರ “ಅಪರಾಧ, ಭ್ರಷ್ಟಾಚಾರ ಮತ್ತು ಕೋಮುವಾದಕ್ಕೆ ವಿರೋಧವಾಗಿದೆ" ಎಂದಿದ್ದಾರೆ.

- Advertisement -
- Advertisement -

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಎನ್‌ಡಿಎ ಮೈತ್ರಿಕೂಟಕ್ಕೆ ತೀವ್ರ ಪೈಪೋಟಿ ನೀಡಿದ ಆರ್‌ಜೆಡಿ ಪಕ್ಷದ ಮುಖಂಡ ತೇಜಸ್ವಿ ಯಾದವ್ ಬಿಹಾರ ವಿರೋಧ ಪಕ್ಷದ ನಾಯಕನಾಗಬಾರದು ಎಂದು ಜೆಡಿಯು ಆಗ್ರಹಿಸಿದೆ.

ರಾಷ್ಟ್ರೀಯ ಜನತಾದಳದ ನಾಯಕ(ಆರ್‌ಜೆಡಿ) ತೇಜಶ್ವಿ ಯಾದವ್ ಅವರ ಹೆಸರು ಹಲವಾರು ಭ್ರಷ್ಟಾಚಾರ ಮತ್ತು ಕ್ರಿಮಿನಲ್ ಪ್ರಕರಣಗಳಲ್ಲಿ ಇರುವುದರಿಂದ, ಅವರು ಪ್ರತಿಪಕ್ಷದ ನಾಯಕರಾಗುವುದನ್ನು ತಡೆಯಬೇಕೆಂದು ಬಿಹಾರದಲ್ಲಿ ಆಡಳಿತಾರೂಢ ಜೆಡಿಯು ಒತ್ತಾಯಿಸಿದೆ.

ಜೆಡಿಯು ಪಕ್ಷದ ಮುಖಂಡ ಮೇವಾಲಾಲ್ ಚೌಧರಿ ಅವರು ಭ್ರಷ್ಟಾಚಾರದ ಕಳಂಕ ಸಂಬಂಧಿಸಿದಂತೆ ಮೊನ್ನೆ ತಾನೇ ತಮ್ಮ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎರಡು ದಿನಗಳ ನಂತರ ಜೆಡಿಯುನಿಂದ ಈ ಬೇಡಿಕೆ ಬಂದಿದೆ.

ಮೇವಾಲಾಲ್ ಚೌಧರಿ ಅವರನ್ನು ನಿತೀಶ್ ಕುಮಾರ್ ಸಂಪುಟದಲ್ಲಿ ಶಿಕ್ಷಣ ಸಚಿವರನ್ನಾಗಿಸಿದ್ದಕ್ಕೆ ಸರ್ಕಾರದ ವಿರುದ್ಧ ವಾಗ್ದಳಿ ನಡೆಸಿದ್ದಕ್ಕಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮೇಲೆ ಜೆಡಿಯು ರಾಜ್ಯಾಧ್ಯಕ್ಷ ವಸಿಷ್ಠ ನಾರಾಯಣ್ ಸಿಂಗ್, ಕಾರ್ಯಕಾರಿ ಅಧ್ಯಕ್ಷ ಅಶೋಕ್ ಚೌಧರಿ ಮತ್ತು ವಕ್ತಾರರಾದ ಸಂಜಯ್ ಸಿಂಗ್, ನೀರಜ್ ಕುಮಾರ್ ಮತ್ತು ಅಜಯ್ ಅಲೋಕ್ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮೂರೇ ದಿನದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಹಾರದ ಶಿಕ್ಷಣ ಸಚಿವ!

2010-15ರ ಅವಧಿಯಲ್ಲಿ ಭಾಗಲ್ಪುರ್ ಜಿಲ್ಲೆಯ ಬಿಹಾರ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಅವಧಿಯಲ್ಲಿ ನೇಮಕಾತಿಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ 67 ವರ್ಷದ ಮೇವಾಲಾಲ್ ಚೌಧರಿ ಅವರನ್ನು 2017 ರಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನಿಂದ ಅಮಾನತುಗೊಳಿಸಲಾಗಿತ್ತು. ಆದರೆ ಈ ಚುನಾವಣೆಯ ನಂತರ ಅವರಿಗೆ ಶಿಕ್ಷಣ ಖಾತೆ ನೀಡಲಾಗಿತ್ತು.

ನಿತೀಶ್ ಕುಮಾರ್‌ ತಮ್ಮ ಸಂಪುಟಕ್ಕೆ “ಭ್ರಷ್ಟ” ವ್ಯಕ್ತಿಯನ್ನು ಸೇರಿಸಿಕೊಂಡಿದ್ದಕ್ಕಾಗಿ ಮುಖ್ಯಮಂತ್ರಿಯ ಮೇಲೆ ಆರ್‌ಜೆಡಿಯ ತೇಜಸ್ವಿ ಯಾದವ್ ವಾಗ್ದಾಳಿ ಹಲ್ಲೆ ನಡೆಸಿದ್ದರು.

ಚೌಧರಿ ಅವರು ತಮ್ಮ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಬಂಡವಾಳ ಮಾಡಿಕೊಂಡ  ಜೆಡಿಯು ನಾಯಕರು, ತಮ್ಮ ಸರ್ಕಾರ “ಅಪರಾಧ, ಭ್ರಷ್ಟಾಚಾರ ಮತ್ತು ಕೋಮುವಾದಕ್ಕೆ ವಿರೋಧವಾಗಿದೆ” ಎಂದಿದ್ದಾರೆ.

ತೇಜಸ್ವಿ ಯಾದವ್ ಅವರ ವಿರುದ್ಧ “ಐಪಿಸಿಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಎಸ್‌ಸಿ / ಎಸ್‌ಟಿ ಕಾಯ್ದೆಯಡಿ ಕೂಡ ಪ್ರಕರಣ ದಾಖಲಾಗಿವೆ” ಎಂದು ಆರೋಪಿಸಿದ್ದಾರೆ.

ಆಡಳಿತ ಪಕ್ಷದ ಶಾಸಕರಾದ ಚೌಧರಿ ಅವರನ್ನು ಕೂಡ ಸರ್ಕಾರ ರಕ್ಷಿಸುತ್ತಿಲ್ಲ. ಪ್ರಕರಣದ ತನಿಖೆ ಮುಂದುವರೆಸುವಂತೆ ರಾಜ್ಯಸರ್ಕಾರ ಸಂಬಂಧಪಟ್ಟ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೇಳಿದೆ. ಈ ವಿಷಯದಲ್ಲಿ ರಾಜ್ಯಪಾಲರ ಒಪ್ಪಿಗೆಗೆ ಸರ್ಕಾರ ಕಾಯುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಜೆಡಿಯು ನಾಯಕರು ತಿಳಿಸಿದ್ದಾರೆ.

ಇನ್ನು ರಾಘೋಪುರ ವಿಧಾನಸಭಾ ಸ್ಥಾನದಿಂದ ತಮ್ಮ ನಾಮಪತ್ರಗಳನ್ನು ಸಲ್ಲಿಸುವಾಗ, ತೇಜಸ್ವಿ ಯಾದವ್ ಅವರು ತಮ್ಮ ಮೇಲೆ ದಾಖಲಾಗಿರುವ ಪ್ರಕರಣಗಳ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಿಲ್ಲ ಎಂಬುದನ್ನು “ಉದ್ದೇಶಪೂರ್ವಕ ಲೋಪ”ಎಂದು ಚುನಾವಣಾ ಆಯೋಗ ಗಮನಿಸಬೇಕು ಎಂದು ಜೆಡಿಯು ನಾಯಕರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...