Homeಮುಖಪುಟತೇಜಸ್ವಿ ಯಾದವ್ ಬಿಹಾರ ವಿರೋಧ ಪಕ್ಷದ ನಾಯಕನಾಗಬಾರದು: ಜೆಡಿಯು ಆಗ್ರಹ

ತೇಜಸ್ವಿ ಯಾದವ್ ಬಿಹಾರ ವಿರೋಧ ಪಕ್ಷದ ನಾಯಕನಾಗಬಾರದು: ಜೆಡಿಯು ಆಗ್ರಹ

ಚೌಧರಿ ಅವರು ತಮ್ಮ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಬಂಡವಾಳ ಮಾಡಿಕೊಂಡ  ಜೆಡಿಯು ನಾಯಕರು, ತಮ್ಮ ಸರ್ಕಾರ “ಅಪರಾಧ, ಭ್ರಷ್ಟಾಚಾರ ಮತ್ತು ಕೋಮುವಾದಕ್ಕೆ ವಿರೋಧವಾಗಿದೆ" ಎಂದಿದ್ದಾರೆ.

- Advertisement -
- Advertisement -

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಎನ್‌ಡಿಎ ಮೈತ್ರಿಕೂಟಕ್ಕೆ ತೀವ್ರ ಪೈಪೋಟಿ ನೀಡಿದ ಆರ್‌ಜೆಡಿ ಪಕ್ಷದ ಮುಖಂಡ ತೇಜಸ್ವಿ ಯಾದವ್ ಬಿಹಾರ ವಿರೋಧ ಪಕ್ಷದ ನಾಯಕನಾಗಬಾರದು ಎಂದು ಜೆಡಿಯು ಆಗ್ರಹಿಸಿದೆ.

ರಾಷ್ಟ್ರೀಯ ಜನತಾದಳದ ನಾಯಕ(ಆರ್‌ಜೆಡಿ) ತೇಜಶ್ವಿ ಯಾದವ್ ಅವರ ಹೆಸರು ಹಲವಾರು ಭ್ರಷ್ಟಾಚಾರ ಮತ್ತು ಕ್ರಿಮಿನಲ್ ಪ್ರಕರಣಗಳಲ್ಲಿ ಇರುವುದರಿಂದ, ಅವರು ಪ್ರತಿಪಕ್ಷದ ನಾಯಕರಾಗುವುದನ್ನು ತಡೆಯಬೇಕೆಂದು ಬಿಹಾರದಲ್ಲಿ ಆಡಳಿತಾರೂಢ ಜೆಡಿಯು ಒತ್ತಾಯಿಸಿದೆ.

ಜೆಡಿಯು ಪಕ್ಷದ ಮುಖಂಡ ಮೇವಾಲಾಲ್ ಚೌಧರಿ ಅವರು ಭ್ರಷ್ಟಾಚಾರದ ಕಳಂಕ ಸಂಬಂಧಿಸಿದಂತೆ ಮೊನ್ನೆ ತಾನೇ ತಮ್ಮ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎರಡು ದಿನಗಳ ನಂತರ ಜೆಡಿಯುನಿಂದ ಈ ಬೇಡಿಕೆ ಬಂದಿದೆ.

ಮೇವಾಲಾಲ್ ಚೌಧರಿ ಅವರನ್ನು ನಿತೀಶ್ ಕುಮಾರ್ ಸಂಪುಟದಲ್ಲಿ ಶಿಕ್ಷಣ ಸಚಿವರನ್ನಾಗಿಸಿದ್ದಕ್ಕೆ ಸರ್ಕಾರದ ವಿರುದ್ಧ ವಾಗ್ದಳಿ ನಡೆಸಿದ್ದಕ್ಕಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮೇಲೆ ಜೆಡಿಯು ರಾಜ್ಯಾಧ್ಯಕ್ಷ ವಸಿಷ್ಠ ನಾರಾಯಣ್ ಸಿಂಗ್, ಕಾರ್ಯಕಾರಿ ಅಧ್ಯಕ್ಷ ಅಶೋಕ್ ಚೌಧರಿ ಮತ್ತು ವಕ್ತಾರರಾದ ಸಂಜಯ್ ಸಿಂಗ್, ನೀರಜ್ ಕುಮಾರ್ ಮತ್ತು ಅಜಯ್ ಅಲೋಕ್ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮೂರೇ ದಿನದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಹಾರದ ಶಿಕ್ಷಣ ಸಚಿವ!

2010-15ರ ಅವಧಿಯಲ್ಲಿ ಭಾಗಲ್ಪುರ್ ಜಿಲ್ಲೆಯ ಬಿಹಾರ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಅವಧಿಯಲ್ಲಿ ನೇಮಕಾತಿಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ 67 ವರ್ಷದ ಮೇವಾಲಾಲ್ ಚೌಧರಿ ಅವರನ್ನು 2017 ರಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನಿಂದ ಅಮಾನತುಗೊಳಿಸಲಾಗಿತ್ತು. ಆದರೆ ಈ ಚುನಾವಣೆಯ ನಂತರ ಅವರಿಗೆ ಶಿಕ್ಷಣ ಖಾತೆ ನೀಡಲಾಗಿತ್ತು.

ನಿತೀಶ್ ಕುಮಾರ್‌ ತಮ್ಮ ಸಂಪುಟಕ್ಕೆ “ಭ್ರಷ್ಟ” ವ್ಯಕ್ತಿಯನ್ನು ಸೇರಿಸಿಕೊಂಡಿದ್ದಕ್ಕಾಗಿ ಮುಖ್ಯಮಂತ್ರಿಯ ಮೇಲೆ ಆರ್‌ಜೆಡಿಯ ತೇಜಸ್ವಿ ಯಾದವ್ ವಾಗ್ದಾಳಿ ಹಲ್ಲೆ ನಡೆಸಿದ್ದರು.

ಚೌಧರಿ ಅವರು ತಮ್ಮ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಬಂಡವಾಳ ಮಾಡಿಕೊಂಡ  ಜೆಡಿಯು ನಾಯಕರು, ತಮ್ಮ ಸರ್ಕಾರ “ಅಪರಾಧ, ಭ್ರಷ್ಟಾಚಾರ ಮತ್ತು ಕೋಮುವಾದಕ್ಕೆ ವಿರೋಧವಾಗಿದೆ” ಎಂದಿದ್ದಾರೆ.

ತೇಜಸ್ವಿ ಯಾದವ್ ಅವರ ವಿರುದ್ಧ “ಐಪಿಸಿಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಎಸ್‌ಸಿ / ಎಸ್‌ಟಿ ಕಾಯ್ದೆಯಡಿ ಕೂಡ ಪ್ರಕರಣ ದಾಖಲಾಗಿವೆ” ಎಂದು ಆರೋಪಿಸಿದ್ದಾರೆ.

ಆಡಳಿತ ಪಕ್ಷದ ಶಾಸಕರಾದ ಚೌಧರಿ ಅವರನ್ನು ಕೂಡ ಸರ್ಕಾರ ರಕ್ಷಿಸುತ್ತಿಲ್ಲ. ಪ್ರಕರಣದ ತನಿಖೆ ಮುಂದುವರೆಸುವಂತೆ ರಾಜ್ಯಸರ್ಕಾರ ಸಂಬಂಧಪಟ್ಟ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೇಳಿದೆ. ಈ ವಿಷಯದಲ್ಲಿ ರಾಜ್ಯಪಾಲರ ಒಪ್ಪಿಗೆಗೆ ಸರ್ಕಾರ ಕಾಯುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಜೆಡಿಯು ನಾಯಕರು ತಿಳಿಸಿದ್ದಾರೆ.

ಇನ್ನು ರಾಘೋಪುರ ವಿಧಾನಸಭಾ ಸ್ಥಾನದಿಂದ ತಮ್ಮ ನಾಮಪತ್ರಗಳನ್ನು ಸಲ್ಲಿಸುವಾಗ, ತೇಜಸ್ವಿ ಯಾದವ್ ಅವರು ತಮ್ಮ ಮೇಲೆ ದಾಖಲಾಗಿರುವ ಪ್ರಕರಣಗಳ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಿಲ್ಲ ಎಂಬುದನ್ನು “ಉದ್ದೇಶಪೂರ್ವಕ ಲೋಪ”ಎಂದು ಚುನಾವಣಾ ಆಯೋಗ ಗಮನಿಸಬೇಕು ಎಂದು ಜೆಡಿಯು ನಾಯಕರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...