Homeಮುಖಪುಟತೇಜಸ್ವಿ ಯಾದವ್ ಬಿಹಾರ ವಿರೋಧ ಪಕ್ಷದ ನಾಯಕನಾಗಬಾರದು: ಜೆಡಿಯು ಆಗ್ರಹ

ತೇಜಸ್ವಿ ಯಾದವ್ ಬಿಹಾರ ವಿರೋಧ ಪಕ್ಷದ ನಾಯಕನಾಗಬಾರದು: ಜೆಡಿಯು ಆಗ್ರಹ

ಚೌಧರಿ ಅವರು ತಮ್ಮ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಬಂಡವಾಳ ಮಾಡಿಕೊಂಡ  ಜೆಡಿಯು ನಾಯಕರು, ತಮ್ಮ ಸರ್ಕಾರ “ಅಪರಾಧ, ಭ್ರಷ್ಟಾಚಾರ ಮತ್ತು ಕೋಮುವಾದಕ್ಕೆ ವಿರೋಧವಾಗಿದೆ" ಎಂದಿದ್ದಾರೆ.

- Advertisement -
- Advertisement -

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಎನ್‌ಡಿಎ ಮೈತ್ರಿಕೂಟಕ್ಕೆ ತೀವ್ರ ಪೈಪೋಟಿ ನೀಡಿದ ಆರ್‌ಜೆಡಿ ಪಕ್ಷದ ಮುಖಂಡ ತೇಜಸ್ವಿ ಯಾದವ್ ಬಿಹಾರ ವಿರೋಧ ಪಕ್ಷದ ನಾಯಕನಾಗಬಾರದು ಎಂದು ಜೆಡಿಯು ಆಗ್ರಹಿಸಿದೆ.

ರಾಷ್ಟ್ರೀಯ ಜನತಾದಳದ ನಾಯಕ(ಆರ್‌ಜೆಡಿ) ತೇಜಶ್ವಿ ಯಾದವ್ ಅವರ ಹೆಸರು ಹಲವಾರು ಭ್ರಷ್ಟಾಚಾರ ಮತ್ತು ಕ್ರಿಮಿನಲ್ ಪ್ರಕರಣಗಳಲ್ಲಿ ಇರುವುದರಿಂದ, ಅವರು ಪ್ರತಿಪಕ್ಷದ ನಾಯಕರಾಗುವುದನ್ನು ತಡೆಯಬೇಕೆಂದು ಬಿಹಾರದಲ್ಲಿ ಆಡಳಿತಾರೂಢ ಜೆಡಿಯು ಒತ್ತಾಯಿಸಿದೆ.

ಜೆಡಿಯು ಪಕ್ಷದ ಮುಖಂಡ ಮೇವಾಲಾಲ್ ಚೌಧರಿ ಅವರು ಭ್ರಷ್ಟಾಚಾರದ ಕಳಂಕ ಸಂಬಂಧಿಸಿದಂತೆ ಮೊನ್ನೆ ತಾನೇ ತಮ್ಮ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎರಡು ದಿನಗಳ ನಂತರ ಜೆಡಿಯುನಿಂದ ಈ ಬೇಡಿಕೆ ಬಂದಿದೆ.

ಮೇವಾಲಾಲ್ ಚೌಧರಿ ಅವರನ್ನು ನಿತೀಶ್ ಕುಮಾರ್ ಸಂಪುಟದಲ್ಲಿ ಶಿಕ್ಷಣ ಸಚಿವರನ್ನಾಗಿಸಿದ್ದಕ್ಕೆ ಸರ್ಕಾರದ ವಿರುದ್ಧ ವಾಗ್ದಳಿ ನಡೆಸಿದ್ದಕ್ಕಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮೇಲೆ ಜೆಡಿಯು ರಾಜ್ಯಾಧ್ಯಕ್ಷ ವಸಿಷ್ಠ ನಾರಾಯಣ್ ಸಿಂಗ್, ಕಾರ್ಯಕಾರಿ ಅಧ್ಯಕ್ಷ ಅಶೋಕ್ ಚೌಧರಿ ಮತ್ತು ವಕ್ತಾರರಾದ ಸಂಜಯ್ ಸಿಂಗ್, ನೀರಜ್ ಕುಮಾರ್ ಮತ್ತು ಅಜಯ್ ಅಲೋಕ್ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮೂರೇ ದಿನದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಹಾರದ ಶಿಕ್ಷಣ ಸಚಿವ!

2010-15ರ ಅವಧಿಯಲ್ಲಿ ಭಾಗಲ್ಪುರ್ ಜಿಲ್ಲೆಯ ಬಿಹಾರ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಅವಧಿಯಲ್ಲಿ ನೇಮಕಾತಿಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ 67 ವರ್ಷದ ಮೇವಾಲಾಲ್ ಚೌಧರಿ ಅವರನ್ನು 2017 ರಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನಿಂದ ಅಮಾನತುಗೊಳಿಸಲಾಗಿತ್ತು. ಆದರೆ ಈ ಚುನಾವಣೆಯ ನಂತರ ಅವರಿಗೆ ಶಿಕ್ಷಣ ಖಾತೆ ನೀಡಲಾಗಿತ್ತು.

ನಿತೀಶ್ ಕುಮಾರ್‌ ತಮ್ಮ ಸಂಪುಟಕ್ಕೆ “ಭ್ರಷ್ಟ” ವ್ಯಕ್ತಿಯನ್ನು ಸೇರಿಸಿಕೊಂಡಿದ್ದಕ್ಕಾಗಿ ಮುಖ್ಯಮಂತ್ರಿಯ ಮೇಲೆ ಆರ್‌ಜೆಡಿಯ ತೇಜಸ್ವಿ ಯಾದವ್ ವಾಗ್ದಾಳಿ ಹಲ್ಲೆ ನಡೆಸಿದ್ದರು.

ಚೌಧರಿ ಅವರು ತಮ್ಮ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಬಂಡವಾಳ ಮಾಡಿಕೊಂಡ  ಜೆಡಿಯು ನಾಯಕರು, ತಮ್ಮ ಸರ್ಕಾರ “ಅಪರಾಧ, ಭ್ರಷ್ಟಾಚಾರ ಮತ್ತು ಕೋಮುವಾದಕ್ಕೆ ವಿರೋಧವಾಗಿದೆ” ಎಂದಿದ್ದಾರೆ.

ತೇಜಸ್ವಿ ಯಾದವ್ ಅವರ ವಿರುದ್ಧ “ಐಪಿಸಿಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಎಸ್‌ಸಿ / ಎಸ್‌ಟಿ ಕಾಯ್ದೆಯಡಿ ಕೂಡ ಪ್ರಕರಣ ದಾಖಲಾಗಿವೆ” ಎಂದು ಆರೋಪಿಸಿದ್ದಾರೆ.

ಆಡಳಿತ ಪಕ್ಷದ ಶಾಸಕರಾದ ಚೌಧರಿ ಅವರನ್ನು ಕೂಡ ಸರ್ಕಾರ ರಕ್ಷಿಸುತ್ತಿಲ್ಲ. ಪ್ರಕರಣದ ತನಿಖೆ ಮುಂದುವರೆಸುವಂತೆ ರಾಜ್ಯಸರ್ಕಾರ ಸಂಬಂಧಪಟ್ಟ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೇಳಿದೆ. ಈ ವಿಷಯದಲ್ಲಿ ರಾಜ್ಯಪಾಲರ ಒಪ್ಪಿಗೆಗೆ ಸರ್ಕಾರ ಕಾಯುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಜೆಡಿಯು ನಾಯಕರು ತಿಳಿಸಿದ್ದಾರೆ.

ಇನ್ನು ರಾಘೋಪುರ ವಿಧಾನಸಭಾ ಸ್ಥಾನದಿಂದ ತಮ್ಮ ನಾಮಪತ್ರಗಳನ್ನು ಸಲ್ಲಿಸುವಾಗ, ತೇಜಸ್ವಿ ಯಾದವ್ ಅವರು ತಮ್ಮ ಮೇಲೆ ದಾಖಲಾಗಿರುವ ಪ್ರಕರಣಗಳ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಿಲ್ಲ ಎಂಬುದನ್ನು “ಉದ್ದೇಶಪೂರ್ವಕ ಲೋಪ”ಎಂದು ಚುನಾವಣಾ ಆಯೋಗ ಗಮನಿಸಬೇಕು ಎಂದು ಜೆಡಿಯು ನಾಯಕರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...